ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ.
ಈ ಹೊಸ ಕನಿಷ್ಠ ವೇತನ ವಿಧೇಯಕದಲ್ಲಿನ ಅಧಿನಿಯಮದ ಪ್ರಕಾರ ಎಲ್ಲಾ ವಲಯಗಳಲ್ಲಿನ ಕಾರ್ಮಿಕರಿಗೆ ಪ್ರತಿ ತಿಂಗಳೂ ಕನಿಷ್ಠ ವೇತನ 18,000 ರೂ. ನೀಡಬೇಕಾಗುತ್ತದೆ. ಈ ಪ್ರಸ್ತಾವನೆಯನ್ನು ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆ ಅಂಗೀಕರಿಸಿ ಒಪ್ಪಿಗೆ ನೀಡಿದೆ.
ಮುಂಗಾರು ಅಧಿವೇಶನದಲ್ಲಿ ಈ ವಿಧೇಯಕ ಮಂಡನೆಯಾಗಲಿದ್ದು, ಅಲ್ಲಿ ಅನುಮೋದನೆ ಸಿಕ್ಕ ನಂತರ ಈ ಕಾನೂನು ಜಾರಿಗೆ ಬರಲಿದೆ.
ಕನಿಷ್ಠ ವೇತನ ಕಾಯ್ದೆ 1948, ವೇತನ ಪಾವತಿ ಕಾಯ್ದೆ 1936, ಬೋನಸ್ ಪಾವತಿ ಕಾಯ್ದೆ 1965, ಸಮಾನ ಸಂಭಾವನೆ ಕಾಯ್ದೆ 1976ನ್ನು ಈ ವಿಧೇಯಕದಲ್ಲಿ ಸೇರಿಸಲಾಗಿದೆ.
ಕನಿಷ್ಠ ವೇತನ ವಿಧೇಯಕ ಕಾನೂನು ಜಾರಿಗೆ ಬಂದರೆ, ಯಾರಿಗೆ ಸಿಹಿ ಯಾರಿಗೆ ಕಹಿ:-
ಕಾನೂನು ತಜ್ಞರ ಪ್ರಕಾರ ಈ ನೂತನ ವಿಧೇಯಕ ಸಿಹಿ ಸುದ್ದಿಯೂ ಹೌದು, ಕಹಿ ಸುದ್ದಿಯೂ ಹೌದು! ಏಕಂದರೆ ಕೇಂದ್ರ ಸರಕಾರವು ಇದುವರೆಗೂ ತನ್ನ ವ್ಯಾಪ್ತಿಗೆ ಬರುವ ಕಾರ್ಮಿಕರಿಗೆ ಮಾತ್ರ ಕನಿಷ್ಠ ವೇತನದ ನಿರ್ಧಾರ ತೆಗೆದುಕೊಳ್ಳುತಿತ್ತು. ಬೇರೆ ಬೇರೆ ರಾಜ್ಯಗಳಲ್ಲಿ ಈ ಕನಿಷ್ಠ ವೇತನದ ಬಗ್ಗೆ ಆ ರಾಜ್ಯ ಸರ್ಕಾರಗಳು ನಿರ್ಧಾರ ತೆಗೆದು ಕೊಳ್ಳುತ್ತಿದ್ದವು. ಹೀಗಾಗಿ ಭಾರತದಲ್ಲಿ ಏಕರೂಪದ ವೇತನವಿರಲಿಲ್ಲ.
ಈ ಕಾನೂನು ಬಂದ್ರೆ ಹಲವು ಸಣ್ಣ ಕಂಪನಿಗಳಿಗೆ ತೊಂದರೆಯಾಗಲಿದೆ. ಏಕೆಂದರೆ ನಮ ದೇಶದಲ್ಲಿ ಬಹುಪಾಲು ಜನ ಸಣ್ಣ ಮತ್ತು ಮಧ್ಯಮ ಕಂಪನಿಗಳನ್ನು ನಡೆಸುತ್ತಿದ್ದಾರೆ. ಈ ಕಂಪನಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ತುಂಬಾ ಕಡಿಮೆಯಲ್ಲಿದ್ದಾರೆ. 500 ಅಥವಾ ಅದಕ್ಕಿಂತ ಮೇಲ್ಪಟ್ಟ ಕಾರ್ಮಿಕರನ್ನು ಹೊಂದಿರುವ ಕಂಪನಿಗಳು ತುಂಬಾ ಕಡಿಮೆ.
ಹಾಗಾಗಿ ಈ ಕನಿಷ್ಠ ವೇತನ ಜಾರಿ ಬಂದ್ರೆ ಸಂತಸವೇನೋ ನಿಜ. ಆದ್ರೆ ಸಣ್ಣ ಮತ್ತು ಮಧ್ಯಮ ಕಂಪನಿಗಳು ಕನಿಷ್ಠ ವೇತನವನ್ನು ಕೊಡಲಾಗದೆ ಕೆಲಸದಿಂದ ಕಾರ್ಮಿಕರನ್ನು ತೆಗೆಯುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…
ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್ಗಳು. ಮತ್ತೇಕೆ ತಡ? ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ? ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ….
ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್ವುಡ್ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.
ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್ಗಳು ಉಚಿತವಲ್ಲ. ಕೆಲವೊಂದು ಆ್ಯಪ್ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್ಗಳು ಟ್ರಯಲ್ ಲಭ್ಯವಿದ್ದರೂ, ಅಚಾನಕ್…