News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಹಣ ಕಾಸು

ಈ ಕಾನೂನು ಜಾರಿಗೆ ಬಂದ್ರೆ ಎಲ್ಲ ಕಾರ್ಮಿಕರಿಗೂ ಸಿಗಲಿದೆ, ಕನಿಷ್ಟ 18,000ರೂ ಸಂಬಳ !

9909

ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ.

ಈ ಹೊಸ ಕನಿಷ್ಠ ವೇತನ ವಿಧೇಯಕದಲ್ಲಿನ ಅಧಿನಿಯಮದ ಪ್ರಕಾರ ಎಲ್ಲಾ ವಲಯಗಳಲ್ಲಿನ ಕಾರ್ಮಿಕರಿಗೆ ಪ್ರತಿ ತಿಂಗಳೂ ಕನಿಷ್ಠ ವೇತನ 18,000 ರೂ. ನೀಡಬೇಕಾಗುತ್ತದೆ. ಈ ಪ್ರಸ್ತಾವನೆಯನ್ನು ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆ ಅಂಗೀಕರಿಸಿ ಒಪ್ಪಿಗೆ ನೀಡಿದೆ.

ಮುಂಗಾರು ಅಧಿವೇಶನದಲ್ಲಿ ಈ ವಿಧೇಯಕ ಮಂಡನೆಯಾಗಲಿದ್ದು, ಅಲ್ಲಿ ಅನುಮೋದನೆ ಸಿಕ್ಕ ನಂತರ ಈ ಕಾನೂನು ಜಾರಿಗೆ ಬರಲಿದೆ.

ಕನಿಷ್ಠ ವೇತನ ಕಾಯ್ದೆ 1948, ವೇತನ ಪಾವತಿ ಕಾಯ್ದೆ 1936, ಬೋನಸ್‌ ಪಾವತಿ ಕಾಯ್ದೆ 1965, ಸಮಾನ ಸಂಭಾವನೆ ಕಾಯ್ದೆ 1976ನ್ನು ಈ ವಿಧೇಯಕದಲ್ಲಿ ಸೇರಿಸಲಾಗಿದೆ.

ಕನಿಷ್ಠ ವೇತನ ವಿಧೇಯಕ ಕಾನೂನು ಜಾರಿಗೆ ಬಂದರೆ, ಯಾರಿಗೆ ಸಿಹಿ ಯಾರಿಗೆ ಕಹಿ:-

ಕಾನೂನು ತಜ್ಞರ ಪ್ರಕಾರ ಈ ನೂತನ ವಿಧೇಯಕ ಸಿಹಿ ಸುದ್ದಿಯೂ ಹೌದು, ಕಹಿ ಸುದ್ದಿಯೂ ಹೌದು! ಏಕಂದರೆ ಕೇಂದ್ರ ಸರಕಾರವು ಇದುವರೆಗೂ ತನ್ನ ವ್ಯಾಪ್ತಿಗೆ ಬರುವ ಕಾರ್ಮಿಕರಿಗೆ ಮಾತ್ರ ಕನಿಷ್ಠ ವೇತನದ ನಿರ್ಧಾರ ತೆಗೆದುಕೊಳ್ಳುತಿತ್ತು. ಬೇರೆ ಬೇರೆ ರಾಜ್ಯಗಳಲ್ಲಿ ಈ ಕನಿಷ್ಠ ವೇತನದ ಬಗ್ಗೆ ಆ ರಾಜ್ಯ ಸರ್ಕಾರಗಳು ನಿರ್ಧಾರ ತೆಗೆದು ಕೊಳ್ಳುತ್ತಿದ್ದವು. ಹೀಗಾಗಿ ಭಾರತದಲ್ಲಿ ಏಕರೂಪದ ವೇತನವಿರಲಿಲ್ಲ.

ಈ ಕಾನೂನು ಬಂದ್ರೆ ಹಲವು ಸಣ್ಣ ಕಂಪನಿಗಳಿಗೆ ತೊಂದರೆಯಾಗಲಿದೆ. ಏಕೆಂದರೆ ನಮ ದೇಶದಲ್ಲಿ ಬಹುಪಾಲು ಜನ ಸಣ್ಣ ಮತ್ತು ಮಧ್ಯಮ ಕಂಪನಿಗಳನ್ನು ನಡೆಸುತ್ತಿದ್ದಾರೆ. ಈ ಕಂಪನಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ತುಂಬಾ ಕಡಿಮೆಯಲ್ಲಿದ್ದಾರೆ. 500 ಅಥವಾ ಅದಕ್ಕಿಂತ ಮೇಲ್ಪಟ್ಟ ಕಾರ್ಮಿಕರನ್ನು ಹೊಂದಿರುವ ಕಂಪನಿಗಳು ತುಂಬಾ ಕಡಿಮೆ.

ಹಾಗಾಗಿ ಈ ಕನಿಷ್ಠ ವೇತನ ಜಾರಿ ಬಂದ್ರೆ ಸಂತಸವೇನೋ ನಿಜ. ಆದ್ರೆ ಸಣ್ಣ ಮತ್ತು ಮಧ್ಯಮ ಕಂಪನಿಗಳು ಕನಿಷ್ಠ ವೇತನವನ್ನು ಕೊಡಲಾಗದೆ ಕೆಲಸದಿಂದ ಕಾರ್ಮಿಕರನ್ನು ತೆಗೆಯುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಜೀವನದಲ್ಲಿ ಯಶಸ್ಸು ಸಿಗಬೇಕಂದ್ರೆ,ಈ ಅಂಶಗಳನ್ನು ಅನುಸರಿಸಿ…

    ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.

  • ಉದ್ಯೋಗ

    ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ‘ಮೈಜಾಬ್’ ಆ್ಯಪ್ ಲೋಕಾರ್ಪಣೆ..!ತಿಳಿಯಲು ಈ ಲೇಖನ ಓದಿ..

    ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್‍ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.

  • ಉಪಯುಕ್ತ ಮಾಹಿತಿ

    ಸುಟ್ಟ ಗಾಯ ಮತ್ತು ಕಲೆಗಳನ್ನು ಹೋಗಲಾಡಿಸಲು ಇಲ್ಲಿದೆ ಮನೆ ಮದ್ದು…ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಸುಟ್ಟಗಾಯಗಳೇ ಇಷ್ಟು, ಗಾಯ  ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…

  • ಸುದ್ದಿ

    ಶಾಸಕರ ಮುಂದೆಯೆ ವಿದ್ಯಾರ್ಥಿನಿಯರಿಂದ ಬಿಇಓಗೆ ಸಕತ್ ಕ್ಲಾಸ್…! ಯಾಕೆ ಗೊತ್ತಾ?

    ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…

  • ಉಪಯುಕ್ತ ಮಾಹಿತಿ, ನೀತಿ ಕಥೆ

    ಕೋತಿಯಿಂದ ಶ್ರೀಮಂತನಾದ. ನಿಜಕ್ಕೂ ರೋಚಕ ಕಥೆ.!

    ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…

  • ಸುದ್ದಿ

    ಬಿಎಸ್ಎನ್ಎಲ್ ಬಳಸುತ್ತಿರುವ ಗ್ರಾಹಕರಿಗೊಂದು ಸಂತಸದ ಸುದ್ದಿ ..!ಸುಳ್ಳು ವದಂತಿಗಳಿಗೆ ಬ್ರೇಕ್….

    ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…