ಆರೋಗ್ಯ

ಈ ಕಾರಣಗಳಿಂದ ಮೈಗ್ರೇನ್‌ ತಲೆನೋವು ಬರುತ್ತದೆ..!ಇದರ ನಿವಾರಣೆ ಹೇಗೆ?ತಿಳಿಯಲು ಈ ಲೇಖನ ಓದಿ…

2871

ಮೈಗ್ರೇನ್‌ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ  ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.

ಹಾಗೆಂದು ಎಲ್ಲಾ ತಲೆನೋವುಗಳೂ ಮೈಗ್ರೇನ್ ಅಲ್ಲ. ದೃಷ್ಟಿದೋಷ, ನೆಗಡಿಗೆ ಸಂಬಂಧಿಸಿದ ತೊಂದರೆಗಳು, ಜ್ವರ ಇತ್ಯಾದಿ ಕಾರಣಗಳಿಂದಲೂ ತಲೆನೋವು ಬರುತ್ತದೆ. ಆದರೆ ಅದು ಮೈಗ್ರೇನ್ ಅಲ್ಲ. ಆದರೆ ಮೈಗ್ರೇನ್ ತಲೆನೋವು ಅತ್ಯಂತ ಸಾಮಾನ್ಯವಾದದ್ದು.

ಮೈಗ್ರೇನ್ ಎಂದರೇನು ?

ಕೆಲವು ಕಾರಣಗಳಿಂದ ಒಂದು ವ್ಯಕ್ತಿಯ ತಲೆಯೊಳಗಿನ ರಕ್ತನಾಳಗಳ ಗಾತ್ರದಲ್ಲಿ ಅಸ್ತಿರತೆಯುಂಟಾಗಿ, ಅವು ಮೊದಲು ಸಂಕುಚಿತವಾಗಿ ನಂತರ ವಿಕಸಿತವಾಗುತ್ತದೆ.ಆಗ ರಕ್ತನಾಳಗಳಿಗೆ ಸಂಬಂಧಿಸಿದ ಸೂಕ್ಷ್ಮ ನರಗಳು ಉದ್ರೇಕಗೊಂಡು ತಲೆಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ, ಅದೇ ಮೈಗ್ರೇನ್.

ಕಾರಣಗಳು, ಸಂದರ್ಭ ಮತ್ತು ಅಪಾಯಕಾರಿ ಅಂಶಗಳು:

ಸಾಮಾನ್ಯವಾಗಿ ಮೈಗ್ರೇನ್‌ ತಲೆನೋವು 10 ರಿಂದ 45 ವಯಸ್ಸಿನ ನಡುವೆ ಕಾಣಿಸಿಕೊಳ್ಳುತ್ತದೆ. ಕೆಲವು ಸಂದರ್ಭಗಳಲ್ಲಿ ಇದು ಜೀವನದ ಅಂತಿಮ ಹಂತಗಳಲ್ಲಿಯೂ ಸಹ ಕಾಣಿಸಿಕೊಳ್ಳಬಹುದು.ಮೈಗ್ರೇನ್‌ ಪುರುಷರಿಗಿಂತಲೂ ಮಹಿಳೆಯರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ. ಮೈಗ್ರೇನ್‌ ತಲೆನೋವು ವಂಶಪರಂಪರಾಗತವಾಗಿ ಬರಬಹುದು. ಕೆಲವು ಮಹಿಳೆಯರಲ್ಲಿ , ಎಲ್ಲರಲ್ಲಿಯೂ ಅಲ್ಲ , ಅವರು ಗರ್ಭಿಣಿ ಆಗಿರುವಾಗ ಮೈಗ್ರೇನ್‌ ಕಾಣಿಸಿಕೊಳ್ಳಬಹುದು.

ಇದಕ್ಕೆ ನಿರ್ಧಿಷ್ಟ ಕಾರಣವನ್ನು ಹೇಳಲಾಗದಿದ್ದರೂ ಈ ಕೆಲವು ಸಾಮಾನ್ಯ ಕಾರಣಗಳನ್ನು ಹೇಳಬಹುದು.
1  ಹೆಚ್ಚು ಕೆಲಸದಿಂದಾಗಿ ಮಾನಸಿಕ ಒತ್ತಡ ಇರುವ ಸಾಫ್ಟ್ವೇರ್ ಎಂಜಿನಿಯರುಗಳಿಗೆ ಇದು ಸಾಮಾನ್ಯ. ಅವರಿಗೆ ದಿನದ ಹೆಚ್ಚುಕಾಲ  ಒತ್ತಡದ ಕೆಲಸ ಮತ್ತು ನಿದ್ರೆ ಕಡಿಮೆ, ಅನಿಯಮಿತ ಆಹಾರದ ಸೇವನೆ ಇರುತ್ತದೆ.

2 . ಮಾನಸಿಕ ಒತ್ತಡಗಳಾದ ಕೋಪ,ಚಿಂತೆ, ಖಿನ್ನತೆ,ಗಾಬರಿಗಳಿಂದ ತಲೆನೋವು ಉದ್ರೇಕವಾಗಬಹುದು.

3 .ಆಹಾರ ಸೇವನೆಯಿಂದ ವ್ಯತ್ಯಾಸವಾದ ಹಸಿವೆ, ಮದ್ಯ ಸೇವನೆ, ಕಡಿಮೆ ನೀರು ಕುಡಿಯುವುದರಿನ್ದಲೂ ತಲೆನೋವು ಉದ್ರೇಕವಾಗುತ್ತದೆ.

4 . ನಿದ್ರೆ ಮಾತ್ರೆ ಸೇವನೆ,  ಬಿ. ಪಿ.,  ಹಲ್ಲು ನೋವು, ಕಣ್ಣಿನ ತೊಂದರೆ, ತಂಬಾಕು ಅಥವಾ ಸಿಗರೇಟು ಸೇವನೆ, ಗರ್ಭನಿರೋಧಕ ಮಾತ್ರೆ, ಮೂಗಿನ ಉಸಿರಾಟದ ತೊಂದರೆ, ಸಂಸ್ಕರಿಸದ ಆಹಾರ ಸೇವನೆ, ಅತಿ ಮುಖ್ಯವಾಗಿ ನಿದ್ರಾಹೀನತೆ ಮುಂತಾದುವುಗಳಿಂದ ಸಹ ತಲೆನೋವು ಉದ್ರೇಕಗೊಳ್ಳಬಹುದು.

5 . ಹೆಚ್ಚು ಕಾಲ ಬಿಸಿಲಿನಲ್ಲಿ ಇರುವುದು, ದೀರ್ಘಕಾಲ ಪ್ರಯಾಣ ಮಾಡುವುದು, ಮದುವೆ ಅಥವಾ ಇತರೆ ಗಲಾಟೆ ಇರುವ ಸಮಾರಂಭದಲ್ಲಿ ಹೆಚ್ಚು ಹೊತ್ತು ಭಾಗವಹಿಸುವುದು, ಕೆಲವರಿಗೆ  ಹೆಚ್ಚಾಗಿ ಓದುವುದು, ಹೆಚ್ಚು ಕಾಲ ಸಿನೆಮಾ / ಟಿ. ವಿ, ನೋಡುವುದು ಇವುಗಳಿಂದ ತಲೆನೋವು ಉದ್ರೇಕಗೊಳಬಹುದು.

6 . ಕೆಲವು ಸ್ತ್ರೀಯರಿಗೆ ಋತುಚಕ್ರದ ಏರುಪೇರುಗಳಿಂದ ತಲೆನೋವು ಉದ್ರೇಕಗೊಳ್ಳಬಹುದು.

ಮೈಗ್ರೇನ್  ರೋಗಲಕ್ಷಣಗಳು:

ದೃಷ್ಟಿ ಅಸ್ತವ್ಯಸ್ತಗೊಳ್ಳುವುದು, ಅಥವಾ ಕಣ್ಣಿನ ಬದಿಗಳಲ್ಲಿ ಬೆಳಕಿನ ಬಿಂಬಗಳು ಅಥವಾ ಪ್ರಭಾವಳಿ ಸುತ್ತುತ್ತಿರುವಂತೆ ಅನ್ನಿಸುವುದನ್ನು  ಮೈಗ್ರೇನ್‌ ಬರುತ್ತಿದೆ ಎನ್ನುವುದರ ಎಚ್ಚರಿಕೆಯ ಸೂಚನೆ ಎಂಬುದಾಗಿ ಪರಿಗಣಿಸಲಾಗುತ್ತದೆ. ಬೆಳಕಿನ ಬಿಂಬಗಳು ಒಂದು ಅಥವಾ ಎರಡೂ ಕಣ್ಣಿನ ಬದಿಗಳಲ್ಲಿ ಕಾಣಿಸಿಕೊಳ್ಳಬಹುದು ಮತ್ತು ಕೆಳಗೆ ಹೇಳುವ ಒಂದು ಅಥವಾ ಎಲ್ಲ ರೋಗಲಕ್ಷಣಗಳ ಜತೆಗೆ ಕಾಣಿಸಿಕೊಳ್ಳಬಹುದು.

ಕಣ್ಣಿನಲ್ಲಿ ತಾತ್ಕಾಲಿಕವಾಗಿ ಆಂಶಿಕ ಕುರುಡುತನ ಅಥವಾ ಕಣ್ಣಿನ ಎದುರು ಕಪ್ಪು ಚುಕ್ಕೆಗಳು ಗೋಚರಿಸುವುದು,ದೃಷ್ಟಿ  ಮಬ್ಟಾಗುವುದು,ಕಣ್ಣು ನೋವು,ಕಣ್ಣಿನ ಸುತ್ತಲೂ ನಕ್ಷತ್ರಗಳು ಅಥವಾ ಅಂಕುಡೊಂಕಾದ ಗೆರೆಗಳು ಗೋಚರಿಸುವುದು

ಕೊಳವೆಯೊಳಗಿನಿಂದ ನೋಡಿದಂತೆ ದೃಶ್ಯಗಳು ಅರೆಬರೆ ಕಾಣಿಸುವುದು (ಟನೆಲ್‌ಷನ್‌-ಕಣ್ಣಿನ ಮುಂಭಾಗದ ದೃಶ್ಯಗಳು ಮಾತ್ರವೇ ಗೋಚರಿಸಿ ಬದಿಗಳಲ್ಲಿನ ದೃಶ್ಯ ಕಾಣಿಸದೆಯೇ ಇರುವುದು)

ಮೈಗ್ರೇನ್‌ ಇರುವ ಎಲ್ಲ ವ್ಯಕ್ತಿಗಳಿಗೂ ಬೆಳಕಿನ ಪುಂಜ ಕಾಣಿಸದೆ ಇರಬಹುದು. ಇಂತಹ ಬೆಳಕಿನ ಪುಂಜ ಕಾಣಿಸಿಕೊಳ್ಳುವವರಲ್ಲಿ ತಲೆನೋವು ಕಾಣಿಸಿಕೊಳ್ಳುವುದಕ್ಕೆ ಸುಮಾರು 10-15 ನಿಮಿಷ ಮೊದಲು ಇದು ಕಾಣಿಸಿಕೊಳ್ಳಬಹುದು.  ಹಾಗಿದ್ದರೂ ಸಹ ಅದು ಕೆಲವೇ ನಿಮಿಷಗಳಿಗೆ ಮೊದಲು ಅಥವಾ 24 ಗಂಟೆಗಳಿಗೂ ಮೊದಲು ಕಾಣಿಸಿಕೊಳ್ಳಬಹುದು. ಬೆಳಕಿನ ಪುಂಜ ಕಾಣಿಸಿಕೊಂಡ ಅನಂತರ ಯಾವಾಗಲೂ ತಲೆನೋವು ಬಂದೇ ಬರುತ್ತದೆ ಎಂದು ಹೇಳುವಂತಿಲ್ಲ.

ಮೈಗ್ರೇನ್‌ ತಲೆನೋವು ಬಹಳ ಸಣ್ಣದಾಗಿ ಇರಬಹುದು ಅಥವಾ ತೀವ್ರ ರೂಪದಲ್ಲಿಯೂ ಬಾಧಿಸಬಹುದು. ನೋವು ಕಣ್ಣಿನ ಹಿಂಭಾಗದಲ್ಲಿ ಅಥವಾ ಕತ್ತು ಮತ್ತು ತಲೆಯ ಹಿಂಭಾಗದಲ್ಲಿ ಕಾಣಿಸಿಕೊಳ್ಳಬಹುದು. ಕೆಲವು ರೋಗಿಗಳಲ್ಲಿ  ಪ್ರತಿಯೊಂದು ಬಾರಿಯೂ ತಲೆನೋವು ಒಂದೇ ಭಾಗದಲ್ಲಿ ಕಾಣಿಸಿಕೊಳ್ಳಬಹುದು. ತಲೆನೋವು ಸಾಮಾನ್ಯವಾಗಿ ಈ ರೀತಿಯಲ್ಲಿ ಇರಬಹುದು.

 

ಬಹಳ ಸಣ್ಣದಾಗಿ ಆರಂಭವಾದ ನೋವು ಕೆಲವೇ ನಿಮಿಷಗಳಲ್ಲಿ ಅಥವಾ ಗಂಟೆಗಳಲ್ಲಿ ತೀವ್ರಗೊಳ್ಳಬಹುದು. 6 ರಿಂದ 48 ಗಂಟೆಗಳ ವರೆಗೂ ಇರಬಹುದು.

ಮೈಗ್ರೇನ್ ನ ನಿವಾರಣೆ :-

1 . ಮೈಗ್ರೇನ್ ತಲೆನೋವು ಬಂದಾಗ ಕೆಲವರಿಗೆ ಯಾವುದಾದರೂ ನೋವು ನಿವಾರಕ ಮಾತ್ರೆಯನ್ನು [ Pain killer ] ತೆಗೆದುಕೊಂಡರೆ ಸ್ವಲ್ಪ ಸಮಯದ ನಂತರ ನೋವು ಕಡಿಮೆಯಾಗುತ್ತದೆ.

2 . ಇನ್ನು ಕೆಲವರಿಗೆ ಏನನ್ನೂ ಉಪಯೋಗಿಸದೆ ನಿಷ್ಯಬ್ದವಾದ ಕೊಠಡಿಯಲ್ಲಿ ಕೆಲವು ಕಾಲ ವಿಶ್ರಾಂತಿ ತೆಗೆದುಕೊಳ್ಳುವುದರಿಂದಲೇ ತಲೆನೋವು ಕಡಿಮೆಯಾಗುತ್ತದೆ.

3 . ಇದಲ್ಲದೆ ಜೀವನ ಶೈಲಿಯನ್ನ್ನು ಬದಲಾಯಿಸಿಕೊಳ್ಳುವುದರಿಂದ ಈ ತೆರನ ತಲೆನೋವನ್ನು ನಿಯಂತ್ರಿಸಿಕೊಳ್ಳಬಹುದು.

  • ಸರಿಯಾದ ಸಮಯಕ್ಕೆ ನಿದ್ರೆ ಮಾಡುವುದು.
  • ನಿತ್ಯ ವ್ಯಾಯಾಮ.
  • ಸರಿಯಾದ ಊಟದ ಕ್ರಮ. ಪೌಷ್ಟಿಕ ಆಹಾರದ ಸೇವನೆ.
  • ತಂಬಾಕು, ಮದ್ಯ ಸೇವನೆಯಿಂದ ದೂರ ಇರುವುದು. ಕಾಫಿ ಕುಡಿಯುವುದನ್ನು ಕಡಿಮೆ ಮಾಡುವುದು.
  • ಜೀವನದ ಬಗ್ಯೆ ಸಕಾರಾತ್ಮಕ ಮನೋಭಾವ.

ಮುನ್ಸೂಚನೆಗಳು:
ಚಿಕಿತ್ಸೆಗೆ ಪ್ರತಿಯೊಬ್ಬನೂ ಸ್ಪಂದಿಸುವ ರೀತಿ ಹಾಗೂ ಪ್ರಮಾಣ ಭಿನ್ನ-ಭಿನ್ನವಾಗಿರುತ್ತವೆ. ಕೆಲವರಿಗೆ ಸ್ವಲ್ಪಮಟ್ಟಿನ ಚಿಕಿತ್ಸೆಯಿಂದ ಅಥವಾ ಚಿಕಿತ್ಸೆಯೇ ಇಲ್ಲದೆ ತಲೆನೋವು ಕಡಿಮೆ ಆಗಬಹುದು, ಇನ್ನು ಕೆಲವರಿಗೆ ಅನೇಕ ಔಷಧಿಗಳನ್ನು ಉಪಯೋಗಿಸಬೇಕಾಗಿ ಬರಬಹುದು ಅಥವಾ ಆಸ್ಪತ್ರೆಗೂ ಸೇರಬೇಕಾಗಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಈ ಬಾರಿ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ವಿಜಯಲಕ್ಷ್ಮಿ ಯಾರಿಗೆ..?ಈ ವರದಿಯಲ್ಲಿ ಏನಿದೆ ಗೊತ್ತಾ..?

    ಕರ್ನಾಕಟ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳ ಮುಖ್ಯ ಪಾತ್ರವಾಯಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಲಕ್ಷ್ಮಿ ಒಲಿಯುವುದು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ

  • ಸುದ್ದಿ

    ತಂದೆಯಾದ ಕುಶಿಯಲ್ಲಿ ಲೂಸ್ ಮಾದ ಯೋಗಿ…….

    ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…

  • ಆರೋಗ್ಯ

    ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಇದೆ ಕಾರಣ..!ತಿಳಿಯಲು ಈ ಲೇಖನ ಓದಿ…

    ‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್‌ಗಳಿಗೆ ತಂಬಾಕು ಬಳಕೆಯೇ ಕಾರಣ.

  • ಜೀವನಶೈಲಿ

    ಊಟದ ನಂತರ ತಾಂಬೂಲ ಸೇವನೆಯು ನಿಮ್ಮ ಆರೋಗ್ಯಕ್ಕೆ ಒಳೆಯದಾ.?. ಕೆಟ್ಟದಾ..? ತಿಳಿಯಲು ಈ ಲೇಖನ ಓದಿ …

    ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.

  • ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ಹರಿದ ಬಟ್ಟೆ, ಜೀನ್ಸ್ ತೊಡೋದರಿಂದ ಏನಾಗುತ್ತೆ ಗೊತ್ತಾ?

    ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ.  ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…

  • ಸುದ್ದಿ

    ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

    ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…