ಆರೋಗ್ಯ

ಈ ಕಾರಣಗಳಿಂದ ಮೈಗ್ರೇನ್‌ ತಲೆನೋವು ಬರುತ್ತದೆ..!ಇದರ ನಿವಾರಣೆ ಹೇಗೆ?ತಿಳಿಯಲು ಈ ಲೇಖನ ಓದಿ…

2881

ಮೈಗ್ರೇನ್‌ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ  ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.

ಹಾಗೆಂದು ಎಲ್ಲಾ ತಲೆನೋವುಗಳೂ ಮೈಗ್ರೇನ್ ಅಲ್ಲ. ದೃಷ್ಟಿದೋಷ, ನೆಗಡಿಗೆ ಸಂಬಂಧಿಸಿದ ತೊಂದರೆಗಳು, ಜ್ವರ ಇತ್ಯಾದಿ ಕಾರಣಗಳಿಂದಲೂ ತಲೆನೋವು ಬರುತ್ತದೆ. ಆದರೆ ಅದು ಮೈಗ್ರೇನ್ ಅಲ್ಲ. ಆದರೆ ಮೈಗ್ರೇನ್ ತಲೆನೋವು ಅತ್ಯಂತ ಸಾಮಾನ್ಯವಾದದ್ದು.

ಮೈಗ್ರೇನ್ ಎಂದರೇನು ?

ಕೆಲವು ಕಾರಣಗಳಿಂದ ಒಂದು ವ್ಯಕ್ತಿಯ ತಲೆಯೊಳಗಿನ ರಕ್ತನಾಳಗಳ ಗಾತ್ರದಲ್ಲಿ ಅಸ್ತಿರತೆಯುಂಟಾಗಿ, ಅವು ಮೊದಲು ಸಂಕುಚಿತವಾಗಿ ನಂತರ ವಿಕಸಿತವಾಗುತ್ತದೆ.ಆಗ ರಕ್ತನಾಳಗಳಿಗೆ ಸಂಬಂಧಿಸಿದ ಸೂಕ್ಷ್ಮ ನರಗಳು ಉದ್ರೇಕಗೊಂಡು ತಲೆಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ, ಅದೇ ಮೈಗ್ರೇನ್.

ಕಾರಣಗಳು, ಸಂದರ್ಭ ಮತ್ತು ಅಪಾಯಕಾರಿ ಅಂಶಗಳು:

ಸಾಮಾನ್ಯವಾಗಿ ಮೈಗ್ರೇನ್‌ ತಲೆನೋವು 10 ರಿಂದ 45 ವಯಸ್ಸಿನ ನಡುವೆ ಕಾಣಿಸಿಕೊಳ್ಳುತ್ತದೆ. ಕೆಲವು ಸಂದರ್ಭಗಳಲ್ಲಿ ಇದು ಜೀವನದ ಅಂತಿಮ ಹಂತಗಳಲ್ಲಿಯೂ ಸಹ ಕಾಣಿಸಿಕೊಳ್ಳಬಹುದು.ಮೈಗ್ರೇನ್‌ ಪುರುಷರಿಗಿಂತಲೂ ಮಹಿಳೆಯರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ. ಮೈಗ್ರೇನ್‌ ತಲೆನೋವು ವಂಶಪರಂಪರಾಗತವಾಗಿ ಬರಬಹುದು. ಕೆಲವು ಮಹಿಳೆಯರಲ್ಲಿ , ಎಲ್ಲರಲ್ಲಿಯೂ ಅಲ್ಲ , ಅವರು ಗರ್ಭಿಣಿ ಆಗಿರುವಾಗ ಮೈಗ್ರೇನ್‌ ಕಾಣಿಸಿಕೊಳ್ಳಬಹುದು.

ಇದಕ್ಕೆ ನಿರ್ಧಿಷ್ಟ ಕಾರಣವನ್ನು ಹೇಳಲಾಗದಿದ್ದರೂ ಈ ಕೆಲವು ಸಾಮಾನ್ಯ ಕಾರಣಗಳನ್ನು ಹೇಳಬಹುದು.
1  ಹೆಚ್ಚು ಕೆಲಸದಿಂದಾಗಿ ಮಾನಸಿಕ ಒತ್ತಡ ಇರುವ ಸಾಫ್ಟ್ವೇರ್ ಎಂಜಿನಿಯರುಗಳಿಗೆ ಇದು ಸಾಮಾನ್ಯ. ಅವರಿಗೆ ದಿನದ ಹೆಚ್ಚುಕಾಲ  ಒತ್ತಡದ ಕೆಲಸ ಮತ್ತು ನಿದ್ರೆ ಕಡಿಮೆ, ಅನಿಯಮಿತ ಆಹಾರದ ಸೇವನೆ ಇರುತ್ತದೆ.

2 . ಮಾನಸಿಕ ಒತ್ತಡಗಳಾದ ಕೋಪ,ಚಿಂತೆ, ಖಿನ್ನತೆ,ಗಾಬರಿಗಳಿಂದ ತಲೆನೋವು ಉದ್ರೇಕವಾಗಬಹುದು.

3 .ಆಹಾರ ಸೇವನೆಯಿಂದ ವ್ಯತ್ಯಾಸವಾದ ಹಸಿವೆ, ಮದ್ಯ ಸೇವನೆ, ಕಡಿಮೆ ನೀರು ಕುಡಿಯುವುದರಿನ್ದಲೂ ತಲೆನೋವು ಉದ್ರೇಕವಾಗುತ್ತದೆ.

4 . ನಿದ್ರೆ ಮಾತ್ರೆ ಸೇವನೆ,  ಬಿ. ಪಿ.,  ಹಲ್ಲು ನೋವು, ಕಣ್ಣಿನ ತೊಂದರೆ, ತಂಬಾಕು ಅಥವಾ ಸಿಗರೇಟು ಸೇವನೆ, ಗರ್ಭನಿರೋಧಕ ಮಾತ್ರೆ, ಮೂಗಿನ ಉಸಿರಾಟದ ತೊಂದರೆ, ಸಂಸ್ಕರಿಸದ ಆಹಾರ ಸೇವನೆ, ಅತಿ ಮುಖ್ಯವಾಗಿ ನಿದ್ರಾಹೀನತೆ ಮುಂತಾದುವುಗಳಿಂದ ಸಹ ತಲೆನೋವು ಉದ್ರೇಕಗೊಳ್ಳಬಹುದು.

5 . ಹೆಚ್ಚು ಕಾಲ ಬಿಸಿಲಿನಲ್ಲಿ ಇರುವುದು, ದೀರ್ಘಕಾಲ ಪ್ರಯಾಣ ಮಾಡುವುದು, ಮದುವೆ ಅಥವಾ ಇತರೆ ಗಲಾಟೆ ಇರುವ ಸಮಾರಂಭದಲ್ಲಿ ಹೆಚ್ಚು ಹೊತ್ತು ಭಾಗವಹಿಸುವುದು, ಕೆಲವರಿಗೆ  ಹೆಚ್ಚಾಗಿ ಓದುವುದು, ಹೆಚ್ಚು ಕಾಲ ಸಿನೆಮಾ / ಟಿ. ವಿ, ನೋಡುವುದು ಇವುಗಳಿಂದ ತಲೆನೋವು ಉದ್ರೇಕಗೊಳಬಹುದು.

6 . ಕೆಲವು ಸ್ತ್ರೀಯರಿಗೆ ಋತುಚಕ್ರದ ಏರುಪೇರುಗಳಿಂದ ತಲೆನೋವು ಉದ್ರೇಕಗೊಳ್ಳಬಹುದು.

ಮೈಗ್ರೇನ್  ರೋಗಲಕ್ಷಣಗಳು:

ದೃಷ್ಟಿ ಅಸ್ತವ್ಯಸ್ತಗೊಳ್ಳುವುದು, ಅಥವಾ ಕಣ್ಣಿನ ಬದಿಗಳಲ್ಲಿ ಬೆಳಕಿನ ಬಿಂಬಗಳು ಅಥವಾ ಪ್ರಭಾವಳಿ ಸುತ್ತುತ್ತಿರುವಂತೆ ಅನ್ನಿಸುವುದನ್ನು  ಮೈಗ್ರೇನ್‌ ಬರುತ್ತಿದೆ ಎನ್ನುವುದರ ಎಚ್ಚರಿಕೆಯ ಸೂಚನೆ ಎಂಬುದಾಗಿ ಪರಿಗಣಿಸಲಾಗುತ್ತದೆ. ಬೆಳಕಿನ ಬಿಂಬಗಳು ಒಂದು ಅಥವಾ ಎರಡೂ ಕಣ್ಣಿನ ಬದಿಗಳಲ್ಲಿ ಕಾಣಿಸಿಕೊಳ್ಳಬಹುದು ಮತ್ತು ಕೆಳಗೆ ಹೇಳುವ ಒಂದು ಅಥವಾ ಎಲ್ಲ ರೋಗಲಕ್ಷಣಗಳ ಜತೆಗೆ ಕಾಣಿಸಿಕೊಳ್ಳಬಹುದು.

ಕಣ್ಣಿನಲ್ಲಿ ತಾತ್ಕಾಲಿಕವಾಗಿ ಆಂಶಿಕ ಕುರುಡುತನ ಅಥವಾ ಕಣ್ಣಿನ ಎದುರು ಕಪ್ಪು ಚುಕ್ಕೆಗಳು ಗೋಚರಿಸುವುದು,ದೃಷ್ಟಿ  ಮಬ್ಟಾಗುವುದು,ಕಣ್ಣು ನೋವು,ಕಣ್ಣಿನ ಸುತ್ತಲೂ ನಕ್ಷತ್ರಗಳು ಅಥವಾ ಅಂಕುಡೊಂಕಾದ ಗೆರೆಗಳು ಗೋಚರಿಸುವುದು

ಕೊಳವೆಯೊಳಗಿನಿಂದ ನೋಡಿದಂತೆ ದೃಶ್ಯಗಳು ಅರೆಬರೆ ಕಾಣಿಸುವುದು (ಟನೆಲ್‌ಷನ್‌-ಕಣ್ಣಿನ ಮುಂಭಾಗದ ದೃಶ್ಯಗಳು ಮಾತ್ರವೇ ಗೋಚರಿಸಿ ಬದಿಗಳಲ್ಲಿನ ದೃಶ್ಯ ಕಾಣಿಸದೆಯೇ ಇರುವುದು)

ಮೈಗ್ರೇನ್‌ ಇರುವ ಎಲ್ಲ ವ್ಯಕ್ತಿಗಳಿಗೂ ಬೆಳಕಿನ ಪುಂಜ ಕಾಣಿಸದೆ ಇರಬಹುದು. ಇಂತಹ ಬೆಳಕಿನ ಪುಂಜ ಕಾಣಿಸಿಕೊಳ್ಳುವವರಲ್ಲಿ ತಲೆನೋವು ಕಾಣಿಸಿಕೊಳ್ಳುವುದಕ್ಕೆ ಸುಮಾರು 10-15 ನಿಮಿಷ ಮೊದಲು ಇದು ಕಾಣಿಸಿಕೊಳ್ಳಬಹುದು.  ಹಾಗಿದ್ದರೂ ಸಹ ಅದು ಕೆಲವೇ ನಿಮಿಷಗಳಿಗೆ ಮೊದಲು ಅಥವಾ 24 ಗಂಟೆಗಳಿಗೂ ಮೊದಲು ಕಾಣಿಸಿಕೊಳ್ಳಬಹುದು. ಬೆಳಕಿನ ಪುಂಜ ಕಾಣಿಸಿಕೊಂಡ ಅನಂತರ ಯಾವಾಗಲೂ ತಲೆನೋವು ಬಂದೇ ಬರುತ್ತದೆ ಎಂದು ಹೇಳುವಂತಿಲ್ಲ.

ಮೈಗ್ರೇನ್‌ ತಲೆನೋವು ಬಹಳ ಸಣ್ಣದಾಗಿ ಇರಬಹುದು ಅಥವಾ ತೀವ್ರ ರೂಪದಲ್ಲಿಯೂ ಬಾಧಿಸಬಹುದು. ನೋವು ಕಣ್ಣಿನ ಹಿಂಭಾಗದಲ್ಲಿ ಅಥವಾ ಕತ್ತು ಮತ್ತು ತಲೆಯ ಹಿಂಭಾಗದಲ್ಲಿ ಕಾಣಿಸಿಕೊಳ್ಳಬಹುದು. ಕೆಲವು ರೋಗಿಗಳಲ್ಲಿ  ಪ್ರತಿಯೊಂದು ಬಾರಿಯೂ ತಲೆನೋವು ಒಂದೇ ಭಾಗದಲ್ಲಿ ಕಾಣಿಸಿಕೊಳ್ಳಬಹುದು. ತಲೆನೋವು ಸಾಮಾನ್ಯವಾಗಿ ಈ ರೀತಿಯಲ್ಲಿ ಇರಬಹುದು.

 

ಬಹಳ ಸಣ್ಣದಾಗಿ ಆರಂಭವಾದ ನೋವು ಕೆಲವೇ ನಿಮಿಷಗಳಲ್ಲಿ ಅಥವಾ ಗಂಟೆಗಳಲ್ಲಿ ತೀವ್ರಗೊಳ್ಳಬಹುದು. 6 ರಿಂದ 48 ಗಂಟೆಗಳ ವರೆಗೂ ಇರಬಹುದು.

ಮೈಗ್ರೇನ್ ನ ನಿವಾರಣೆ :-

1 . ಮೈಗ್ರೇನ್ ತಲೆನೋವು ಬಂದಾಗ ಕೆಲವರಿಗೆ ಯಾವುದಾದರೂ ನೋವು ನಿವಾರಕ ಮಾತ್ರೆಯನ್ನು [ Pain killer ] ತೆಗೆದುಕೊಂಡರೆ ಸ್ವಲ್ಪ ಸಮಯದ ನಂತರ ನೋವು ಕಡಿಮೆಯಾಗುತ್ತದೆ.

2 . ಇನ್ನು ಕೆಲವರಿಗೆ ಏನನ್ನೂ ಉಪಯೋಗಿಸದೆ ನಿಷ್ಯಬ್ದವಾದ ಕೊಠಡಿಯಲ್ಲಿ ಕೆಲವು ಕಾಲ ವಿಶ್ರಾಂತಿ ತೆಗೆದುಕೊಳ್ಳುವುದರಿಂದಲೇ ತಲೆನೋವು ಕಡಿಮೆಯಾಗುತ್ತದೆ.

3 . ಇದಲ್ಲದೆ ಜೀವನ ಶೈಲಿಯನ್ನ್ನು ಬದಲಾಯಿಸಿಕೊಳ್ಳುವುದರಿಂದ ಈ ತೆರನ ತಲೆನೋವನ್ನು ನಿಯಂತ್ರಿಸಿಕೊಳ್ಳಬಹುದು.

  • ಸರಿಯಾದ ಸಮಯಕ್ಕೆ ನಿದ್ರೆ ಮಾಡುವುದು.
  • ನಿತ್ಯ ವ್ಯಾಯಾಮ.
  • ಸರಿಯಾದ ಊಟದ ಕ್ರಮ. ಪೌಷ್ಟಿಕ ಆಹಾರದ ಸೇವನೆ.
  • ತಂಬಾಕು, ಮದ್ಯ ಸೇವನೆಯಿಂದ ದೂರ ಇರುವುದು. ಕಾಫಿ ಕುಡಿಯುವುದನ್ನು ಕಡಿಮೆ ಮಾಡುವುದು.
  • ಜೀವನದ ಬಗ್ಯೆ ಸಕಾರಾತ್ಮಕ ಮನೋಭಾವ.

ಮುನ್ಸೂಚನೆಗಳು:
ಚಿಕಿತ್ಸೆಗೆ ಪ್ರತಿಯೊಬ್ಬನೂ ಸ್ಪಂದಿಸುವ ರೀತಿ ಹಾಗೂ ಪ್ರಮಾಣ ಭಿನ್ನ-ಭಿನ್ನವಾಗಿರುತ್ತವೆ. ಕೆಲವರಿಗೆ ಸ್ವಲ್ಪಮಟ್ಟಿನ ಚಿಕಿತ್ಸೆಯಿಂದ ಅಥವಾ ಚಿಕಿತ್ಸೆಯೇ ಇಲ್ಲದೆ ತಲೆನೋವು ಕಡಿಮೆ ಆಗಬಹುದು, ಇನ್ನು ಕೆಲವರಿಗೆ ಅನೇಕ ಔಷಧಿಗಳನ್ನು ಉಪಯೋಗಿಸಬೇಕಾಗಿ ಬರಬಹುದು ಅಥವಾ ಆಸ್ಪತ್ರೆಗೂ ಸೇರಬೇಕಾಗಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೊಪ್ಪು ಮಾರುವ ಹುಡುಗನನ್ನು ಲವ್ ಮಾಡಿ ಮದುವೆಯಾದ ಚೈತ್ರಾ ಕೋಟೂರ್ ;ಇವರು ಹೇಳಿದ ಈ ಕಥೆ ನಿಜಾನಾ?

    ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್‌ .ಚೈತ್ರಾ ಕೋಟೂರ್‌ಗೆ ಈ ನವೆಂಬರ್ ಬಂದರೆ  ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್‌. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್‌ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…

  • ಸುದ್ದಿ

    ಪಾನ್ ಕಾರ್ಡ್ ಇದ್ದವರಿಗೆ ಶಾಕಿಂಗ್ ಸುದ್ದಿ, ಬೇಗ ಎಚ್ಛೆತ್ತುಕ್ಕೊಳ್ಳಿ ನಿರ್ಲಕ್ಷ ಮಾಡಿದರೆ ಬಾರಿ ದಂಡ ಕಟ್ಟಬೇಕಾಗುತ್ತದೆ.

    ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • ತಂತ್ರಜ್ಞಾನ

    ಸಮುದ್ರದಲ್ಲಿ ದುಬೈಯಿಂದ ಭಾರತಕ್ಕೆ ನಿರ್ಮಿಸುತ್ತಿರುವ ರೈಲುಮಾರ್ಗ! ಎಲ್ಲಿಂದ ಎಲ್ಲಿಗೆ ಗೊತ್ತಾ?

    ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್  ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…

  • ಸಿನಿಮಾ

    ಐಟಿ ದಾಳಿ ವೇಳೆ ಪುನೀತ್ ರಾಜಕುಮಾರ್ ಮನೆ ಮುಂದೆ ಸಚಿವ ಡಿಕೆ.ಶಿವಕುಮಾರ್ ಬಂದಿದ್ದೇಕೆ ಗೊತ್ತಾ..?

    ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…