ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದು ಇಟಲಿಯ ಒಂದು ಪ್ರಾಂತ್ಯ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಕಡಿಮೆಯಾಗುತ್ತಲೇ ಇತ್ತು. ಸರ್ಕಾರಕ್ಕೂ ಇದನ್ನು ನೋಡಿ ತಲೆ ಕೆಟ್ಟು ಹೋಗಿತ್ತು. ಹಾಗಾಗಿ ಒಂದು ಭರ್ಜರಿ ಆಫರ್ ನೀಡಿದೆ.

ಈ ಪ್ರದೇಶಕ್ಕೆ ಯಾರೇ ಹೋಗಿ ನೆಲೆಸಿದರೂ ಅವರಿಗೆ 22000 ಪೌಂಡ್ ಕೊಡಲಾಗುತ್ತದೆ ಎಂದು ಘೋಷಿಸಿದೆ. ಆದರೆ ಷರತ್ತುಗಳು ಅನ್ವಯ.
ಇದು ಇಟಲಿಯ ಮೊಲೀಸ್ ಪ್ರಾಂತ್ಯ. ಸದ್ಯ ಈ ಪ್ರದೇಶದಲ್ಲಿ 2000ಕ್ಕಿಂತ ಕಡಿಮೆ ಮಂದಿ ವಾಸವಾಗಿದ್ದಾರೆ. ಕಳೆದ 5 ವರ್ಷದಲ್ಲಿ ಸುಮಾರು 9000 ದಷ್ಟು ಮಂದಿ ಈ ಪ್ರಾಂತ್ಯವನ್ನು ತೊರೆದಿದ್ದಾರೆ.

ಹಾಗಂತ ಇಲ್ಲಿ ಬಂದವರಿಗೆ ಪುಕ್ಕಟೆ ತಿಂಗಳಿಗೆ ಈ ಹಣವನ್ನು ಕೊಟ್ಟು ಕೂರಿಸುವುದಿಲ್ಲ. ಇದಕ್ಕೆ ಷರತ್ತುಗಳು ಅನ್ವಯಿಸುತ್ತವೆ. ಇಲ್ಲಿ ಬರುವವರು ಸ್ಟೇಷನರಿ ಅಂಗಡಿ, ರೆಸ್ಟೋರೆಂಟ್ ಇಲ್ಲವೇ ಇನ್ಯಾವುದೋ ತರಹದ ಉದ್ಯೋಗ ಅಥವಾ ವ್ಯಾಪಾರವನ್ನು ಇಲ್ಲಿ ಪ್ರಾರಂಭಿಸಬೇಕು. ಅಂದರೆ ವ್ಯಾಪಾರಕ್ಕೆ 22000 ಪೌಂಡ್ ಲಭ್ಯವಾಗುತ್ತದೆ.

ಇದು ಮೂರು ವರ್ಷಗಳ ಕಾಲ ನಿರಂತರವಾಗಿ ಲಭಿಸುತ್ತದೆ ಎಂದು ಅಲ್ಲಿನ ಸ್ಥಳೀಯ ಅಧ್ಯಕ್ಷರಾದ ಡೊನಾಟ ಟೋಮ ಹೇಳಿಕೆ ನೀಡಿದ್ದಾರೆ. ಕಳೆದ ವರ್ಷ ಒಂದೇ ಒಂದು ಮಗು ಇಲ್ಲಿ ಹುಟ್ಟಿರುವ ದಾಖಲೆ ಇಲ್ಲ ಎಂಬುದು ಸರ್ಕಾರವನ್ನು ಆತಂಕಕ್ಕೆ ದೂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…
ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …
![]()
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.