ಜ್ಯೋತಿಷ್ಯ

ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

749

ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ ಉಂಟಾಗಬಹುದು. ಯಾರೊಂದಿಗೂ ಈ ವಾರ ಜಗಳ ಬೇಡ. ಇದರಿಂದ ನಿಮಗೆ ಹೆಚ್ಚು ತೊಂದರೆಯಾಗಲಿದೆ. ಹಣದ ಹರಿವು ಹೆಚ್ಚಾಗುತ್ತದೆ. ನಿಮ್ಮ ಆಶಾವಾದವೂ ಹೆಚ್ಚಲಿದೆ. ವೃತ್ತಿಯಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಮಾರ್ಗಗಳು ತೆರೆದುಕೊಳ್ಳುತ್ತವೆ. ಆಭರಣ ತಯಾರಕರಿಗೆ ಬಹಳಷ್ಟು ಅವಕಾಶ ಒದಗುತ್ತವೆ. ಆಭರಣ ನವೀಕರಿಸುವವರಿಗೆ ಉತ್ತಮ ವ್ಯಾಪಾರ ಮತ್ತು ಲಾಭ. ಮಕ್ಕಳನ್ನು ಅಲಕ್ಷಿಸಲು ಮುಂದಾಗಬೇಡಿ. ಅವರೊಡನೆ ಸ್ನೇಹದಿಂದ ಮಾತನಾಡಿ ಅವರ ವಿಶ್ವಾಸವನ್ನು ಪಡೆಯಿರಿ.

 

ವೃಷಭ:-

ಸಂಹವನ ವಲಯದಲ್ಲಿ ಕೆಲಸ ಮಾಡುವವರಿಗೆ ಅಭಿವೃದ್ಧಿ. ನಿರೀಕ್ಷಿತ ಮೂಲದಿಂದ ಧನಾದಾಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಒಡಹುಟ್ಟಿದವರು ಹಾಗೂ ಬಂಧುಗಳ ನಡುವೆ ಸ್ವಲ್ಪ ಮುಸುಕಿನ ಗುದ್ದಾಟ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಈ ರಾಶಿಯ ಮಕ್ಕಳ ಅಭಿವೃದ್ಧಿ ಇದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಸಿದ್ಧ ಉಡುಪು ತಯಾರಿಸುವವರಿಗೆ ವ್ಯಾಪಾರ ವೃದ್ಧಿ.

ಮಿಥುನ:

ಈ ವಾರ ಸಜ್ಜನರ ಸಹವಾಸ ದೊರೆಯುತ್ತದೆ. ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಹೆಚ್ಚಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಧನಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ. ಶತ್ರುಗಳು ನಿಮ್ಮನ್ನು ಹೊಗಳಲಿದ್ದಾರೆ. ಎಚ್ಚರಿಕೆವಹಿಸುವುದು ಒಳಿತು.

ಕಟಕ :-

ಉನ್ನತ ವಿದ್ಯೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ. ಅವರ ವಿದ್ಯೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಜನಗಳೊಡನೆ ಹೆಚ್ಚಾಗಿ ಬೆರೆತರೆ ಗೌರವ ಹೆಚ್ಚುತ್ತದೆ. ನೊರೆಹೊರೆಯವರ ಜೊತೆಗೆ ನಿಷ್ಠುರತೆ ಬೇಡ. ಕಾರ್ಯಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಬೆಂಬಲ ದೊರೆಯುತ್ತದೆ.

 ಸಿಂಹ:

ನೀವು ಆಲೋಚಿಸಿದ ಕಾರ್ಯಗಳಲ್ಲಿ ಜಯ ಲಭಿಸಲಿದೆ. ಮುಂದಿನ ಯೋಜನೆಗಳಲ್ಲಿ ಕ್ರಿಯಾಶೀಲರಾಗಲು ಸಹಕಾರಿ. ಹಿರಿಯರೊಡನೆ ಅನಗತ್ಯ ವಾದ ಬೇಡ. ಸಂಬಂಧಿಕರೊಡನೆ ನಿಷ್ಠೂರತೆ ಬೇಡ. ಈ ರಾಶಿಯ ಹಲವರಿಗೆ ನಾಯಕತ್ವದ ಗುಣ ಒಲಿದು ಜನಗಳ ನಡುವೆ ಗುರುತಿಸಲ್ಪಡುತ್ತಾರೆ. ಕಣ್ಣಲ್ಲಿ ನೋವು ಅಥವಾ ತಲೆನೋವು ಕಾಡಬಹುದು.

ಕನ್ಯಾ :-

ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಾಗಿರಿ. ಧನದ ಒಳಹರಿವು ಹೆಚ್ಚಲಿದೆ. ಈ ವಾರ ಚುರುಕಾಗಿ ಕೆಲಸ ಮಾಡುವಿರಿ. ಈ ರಾಶಿಯ ಸ್ತ್ರೀಯರು ತಾಳ್ಮೆಯಿಂದ ಇರುವುದು ಉತ್ತಮ. ಇದರಿಂದ ನಿಮಗೆ ಬರಬೇಕಾಗಿದ್ದ ಆದಾಯ ಬರಲಿದೆ. ಒಡವೆಗಳನ್ನು ಕೊಂಡುಕೊಳ್ಳುವ ಯೋಗವಿದೆ. ಎದುರಾಳಿಗಳನ್ನು ಹಗುರವಾಗಿ ಪರಿಗಣಿಸಬೇಡಿರಿ.

ತುಲಾ:

ನಿಮಗೆ ಸಾಧನೆ ಮಾಡಲು ಮನಸ್ಸಾಗುತ್ತದೆ. ಸ್ಥಿರಾಸ್ತಿ ಖರೀದಿಸಲು ಯೋಜನೆ ರೂಪಿಸುತ್ತೀರಿ. ನಿಮ್ಮ ಹಠಮಾರಿ ಸ್ವಭಾವದಿಂದ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ. ಈ ವಾರ ನೀವು ಹೆಣೆಯುವ ತಂತ್ರಗಳು ನಿಮಗೆ ಮುಳುವಾಗಲಿವೆ.

 

ವೃಶ್ಚಿಕ :-

ಶ್ರಮಪಟ್ಟು ಕೃಷಿ ಮಾಡುವಿರಿ. ಕುಟುಂಬದ ಹಿರಿಯರ ಸಂಪರ್ಕ ಸಾಧಿಸಿ ಎಲ್ಲರನ್ನೂ ಒಟ್ಟು ಮಾಡಿ ಸೈ ಎನ್ನಿಸಿಕೊಳ್ಳುವಿರಿ. ಸ್ವಲ್ಪ ಪರಾಕ್ರಮ ಪ್ರದರ್ಶಿಸಿ ನಿಮ್ಮವರ ಸಹಾಯಕ್ಕೆ ಹೋಗುವಿರಿ. ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ನಿಮ್ಮ ಮಾತಿನಿಂದ ಎಲ್ಲರನ್ನೂ ಗೆಲ್ಲುತ್ತೀರಿ. ಆದರೆ, ಅತಿಮಾತು ಸಮಸ್ಯೆಯನ್ನು ತರಬಹುದು.

ಧನಸ್ಸು:

ನಿಮ್ಮ ಮೇಲಧಿಕಾರಿಗಳು ಬಹಳ ವಿಶ್ವಾಸವನ್ನು ಇಟ್ಟುಕೊಳ್ಳುವರು. ಮಕ್ಕಳು ಮತ್ತು ದಾಯಾದಿಗಳ ನಡುವೆ ಸಂಬಂಧ ವೃದ್ಧಿಯಾಗುತ್ತದೆ. ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ಮತ್ತೊಂದು ಗಳಿಕೆಯತ್ತ ಆಲೋಚನೆ ಮಾಡುತ್ತಾ ಅಲ್ಪಕಾಲದ ಸಂಪಾದನೆಗೆ ತೊಡಗುವಿರಿ. ಅಗತ್ಯ ವಸ್ತುಗಳ ಖರೀದಿ.

ಮಕರ :-

ದೇವರ ಕೃಪೆಯಿಂದ ನಿಮ್ಮ ಕಾರ್ಯಗಳು ಸುಗಮವಾಗುತ್ತವೆ. ಈ ವಾರ ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ. ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ. ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಲಿದೆ. ಅವರ ಸಂಭಾವನೆಯಲ್ಲಿ ಏರಿಕೆ. ಶಿಕ್ಷಕರಿಗೆ ಗೌರವ ದೊರೆಯುತ್ತದೆ.

ಕುಂಭ:-

ಯುವಕರಲ್ಲಿ ಮೂಡುವ ಅನರ್ಥ ಕೋಪದಿಂದ ಹಲವು ಸಮಸ್ಯೆಗಳಿಗೆ ದಾರಿ ಮಾಡಿಕೊಡಲಿದೆ. ಇವರ ನಡುವಳಿಕೆಯಿಂದ ಹಿರಿಯರಿಗೆ ಬೇಸರವಾಗಲಿದೆ. ಹಿರಿಯರ ದೈವ ನಂಬಿಕೆಗಳು ದೃಢವಾಗಿರುತ್ತವೆ. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ. ಹಿರಿಯರಿಗೆ ನವಚೈತನ್ಯ ಬಂದು ಚುರುಕಾಗಿ ಕೆಲಸದಲ್ಲಿ ತೊಡಗುವರು. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ.

ಮೀನ:-

ವೃತ್ತಿಯ ಬಡ್ತಿ ಪಡೆಯಲು ಹಿರಿಯ ಅಧಿಕಾರಿಗಳ ಸಹಾಯ ಪಡೆಯುವಿರಿ. ಬುದ್ಧಿವಂತಿಕೆಯಿಂದ ವ್ಯವಹಾರ ವಿಸ್ತರಣೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಕಬ್ಬಿಣದ ವ್ಯವಹಾರ ಮಾಡುವವರಿಗೆ ಅನಿರೀಕ್ಷಿತ ಲಾಭ ಬರಲಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಬೇಡಿಕೆ ಹೆಚ್ಚಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಲ್ಲಿದೆ ನೋಡಿ ಮದ್ಯ ಪ್ರಿಯರಿಗೊಂದು ಸಿಹಿಸುದ್ದಿ…!

    ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ.  ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು.  ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…

  • Cinema

    ರೂಮಿಗೆ ಬಾ ಎಂದ ನಿರ್ದೇಶಕ : ನಟಿ ಮಾಡಿದ್ದೇನು ಗೊತ್ತ..?

    ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್‍ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…

  • ಸುದ್ದಿ

    ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಪ್ರಮುಖ ಸ್ಥಾನ ಪಡೆದ ರಾಕಿಂಗ್ ಸ್ಟಾರ್ ಯಶ್,.!

    ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ  ಫಾಲೋ ವರ್ಸ್ ತುಂಬಾನೇ ಜಾಸ್ತಿ  ಈಗ ಅವರಿಗೆ  ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…

  • ಸುದ್ದಿ

    ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರ ನೂರಾರು ಎಕರೆ ಬೆಳೆ ನಾಶ…!

    ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…

  • ಕ್ರೀಡೆ

    ನಿಮ್ಮ ಬಾಲ್ಯದ ಈ ಆಟಗಳು ನೆನಪಿದೆಯಾ ???

    ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.

  • ದೇವರು, ವಿಸ್ಮಯ ಜಗತ್ತು

    ಬ್ರಹ್ಮ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಗೊತ್ತಾ, ಹೆಣ್ಣನ್ನ ಸೃಷ್ಟಿಸಲು ಬ್ರಹ್ಮ ತಗೆದುಕೊಂಡ ಸಮಯ ಎಷ್ಟು ಗೊತ್ತಾ. ನೋಡಿ ಹೆಣ್ಣಿನ ಸೃಷ್ಟಿ.

    ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್…