News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಜ್ಯೋತಿಷ್ಯ

ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

750

ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ ಉಂಟಾಗಬಹುದು. ಯಾರೊಂದಿಗೂ ಈ ವಾರ ಜಗಳ ಬೇಡ. ಇದರಿಂದ ನಿಮಗೆ ಹೆಚ್ಚು ತೊಂದರೆಯಾಗಲಿದೆ. ಹಣದ ಹರಿವು ಹೆಚ್ಚಾಗುತ್ತದೆ. ನಿಮ್ಮ ಆಶಾವಾದವೂ ಹೆಚ್ಚಲಿದೆ. ವೃತ್ತಿಯಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಮಾರ್ಗಗಳು ತೆರೆದುಕೊಳ್ಳುತ್ತವೆ. ಆಭರಣ ತಯಾರಕರಿಗೆ ಬಹಳಷ್ಟು ಅವಕಾಶ ಒದಗುತ್ತವೆ. ಆಭರಣ ನವೀಕರಿಸುವವರಿಗೆ ಉತ್ತಮ ವ್ಯಾಪಾರ ಮತ್ತು ಲಾಭ. ಮಕ್ಕಳನ್ನು ಅಲಕ್ಷಿಸಲು ಮುಂದಾಗಬೇಡಿ. ಅವರೊಡನೆ ಸ್ನೇಹದಿಂದ ಮಾತನಾಡಿ ಅವರ ವಿಶ್ವಾಸವನ್ನು ಪಡೆಯಿರಿ.

 

ವೃಷಭ:-

ಸಂಹವನ ವಲಯದಲ್ಲಿ ಕೆಲಸ ಮಾಡುವವರಿಗೆ ಅಭಿವೃದ್ಧಿ. ನಿರೀಕ್ಷಿತ ಮೂಲದಿಂದ ಧನಾದಾಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಒಡಹುಟ್ಟಿದವರು ಹಾಗೂ ಬಂಧುಗಳ ನಡುವೆ ಸ್ವಲ್ಪ ಮುಸುಕಿನ ಗುದ್ದಾಟ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಈ ರಾಶಿಯ ಮಕ್ಕಳ ಅಭಿವೃದ್ಧಿ ಇದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಸಿದ್ಧ ಉಡುಪು ತಯಾರಿಸುವವರಿಗೆ ವ್ಯಾಪಾರ ವೃದ್ಧಿ.

ಮಿಥುನ:

ಈ ವಾರ ಸಜ್ಜನರ ಸಹವಾಸ ದೊರೆಯುತ್ತದೆ. ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಹೆಚ್ಚಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಧನಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ. ಶತ್ರುಗಳು ನಿಮ್ಮನ್ನು ಹೊಗಳಲಿದ್ದಾರೆ. ಎಚ್ಚರಿಕೆವಹಿಸುವುದು ಒಳಿತು.

ಕಟಕ :-

ಉನ್ನತ ವಿದ್ಯೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ. ಅವರ ವಿದ್ಯೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಜನಗಳೊಡನೆ ಹೆಚ್ಚಾಗಿ ಬೆರೆತರೆ ಗೌರವ ಹೆಚ್ಚುತ್ತದೆ. ನೊರೆಹೊರೆಯವರ ಜೊತೆಗೆ ನಿಷ್ಠುರತೆ ಬೇಡ. ಕಾರ್ಯಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಬೆಂಬಲ ದೊರೆಯುತ್ತದೆ.

 ಸಿಂಹ:

ನೀವು ಆಲೋಚಿಸಿದ ಕಾರ್ಯಗಳಲ್ಲಿ ಜಯ ಲಭಿಸಲಿದೆ. ಮುಂದಿನ ಯೋಜನೆಗಳಲ್ಲಿ ಕ್ರಿಯಾಶೀಲರಾಗಲು ಸಹಕಾರಿ. ಹಿರಿಯರೊಡನೆ ಅನಗತ್ಯ ವಾದ ಬೇಡ. ಸಂಬಂಧಿಕರೊಡನೆ ನಿಷ್ಠೂರತೆ ಬೇಡ. ಈ ರಾಶಿಯ ಹಲವರಿಗೆ ನಾಯಕತ್ವದ ಗುಣ ಒಲಿದು ಜನಗಳ ನಡುವೆ ಗುರುತಿಸಲ್ಪಡುತ್ತಾರೆ. ಕಣ್ಣಲ್ಲಿ ನೋವು ಅಥವಾ ತಲೆನೋವು ಕಾಡಬಹುದು.

ಕನ್ಯಾ :-

ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಾಗಿರಿ. ಧನದ ಒಳಹರಿವು ಹೆಚ್ಚಲಿದೆ. ಈ ವಾರ ಚುರುಕಾಗಿ ಕೆಲಸ ಮಾಡುವಿರಿ. ಈ ರಾಶಿಯ ಸ್ತ್ರೀಯರು ತಾಳ್ಮೆಯಿಂದ ಇರುವುದು ಉತ್ತಮ. ಇದರಿಂದ ನಿಮಗೆ ಬರಬೇಕಾಗಿದ್ದ ಆದಾಯ ಬರಲಿದೆ. ಒಡವೆಗಳನ್ನು ಕೊಂಡುಕೊಳ್ಳುವ ಯೋಗವಿದೆ. ಎದುರಾಳಿಗಳನ್ನು ಹಗುರವಾಗಿ ಪರಿಗಣಿಸಬೇಡಿರಿ.

ತುಲಾ:

ನಿಮಗೆ ಸಾಧನೆ ಮಾಡಲು ಮನಸ್ಸಾಗುತ್ತದೆ. ಸ್ಥಿರಾಸ್ತಿ ಖರೀದಿಸಲು ಯೋಜನೆ ರೂಪಿಸುತ್ತೀರಿ. ನಿಮ್ಮ ಹಠಮಾರಿ ಸ್ವಭಾವದಿಂದ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ. ಈ ವಾರ ನೀವು ಹೆಣೆಯುವ ತಂತ್ರಗಳು ನಿಮಗೆ ಮುಳುವಾಗಲಿವೆ.

 

ವೃಶ್ಚಿಕ :-

ಶ್ರಮಪಟ್ಟು ಕೃಷಿ ಮಾಡುವಿರಿ. ಕುಟುಂಬದ ಹಿರಿಯರ ಸಂಪರ್ಕ ಸಾಧಿಸಿ ಎಲ್ಲರನ್ನೂ ಒಟ್ಟು ಮಾಡಿ ಸೈ ಎನ್ನಿಸಿಕೊಳ್ಳುವಿರಿ. ಸ್ವಲ್ಪ ಪರಾಕ್ರಮ ಪ್ರದರ್ಶಿಸಿ ನಿಮ್ಮವರ ಸಹಾಯಕ್ಕೆ ಹೋಗುವಿರಿ. ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ನಿಮ್ಮ ಮಾತಿನಿಂದ ಎಲ್ಲರನ್ನೂ ಗೆಲ್ಲುತ್ತೀರಿ. ಆದರೆ, ಅತಿಮಾತು ಸಮಸ್ಯೆಯನ್ನು ತರಬಹುದು.

ಧನಸ್ಸು:

ನಿಮ್ಮ ಮೇಲಧಿಕಾರಿಗಳು ಬಹಳ ವಿಶ್ವಾಸವನ್ನು ಇಟ್ಟುಕೊಳ್ಳುವರು. ಮಕ್ಕಳು ಮತ್ತು ದಾಯಾದಿಗಳ ನಡುವೆ ಸಂಬಂಧ ವೃದ್ಧಿಯಾಗುತ್ತದೆ. ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ಮತ್ತೊಂದು ಗಳಿಕೆಯತ್ತ ಆಲೋಚನೆ ಮಾಡುತ್ತಾ ಅಲ್ಪಕಾಲದ ಸಂಪಾದನೆಗೆ ತೊಡಗುವಿರಿ. ಅಗತ್ಯ ವಸ್ತುಗಳ ಖರೀದಿ.

ಮಕರ :-

ದೇವರ ಕೃಪೆಯಿಂದ ನಿಮ್ಮ ಕಾರ್ಯಗಳು ಸುಗಮವಾಗುತ್ತವೆ. ಈ ವಾರ ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ. ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ. ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಲಿದೆ. ಅವರ ಸಂಭಾವನೆಯಲ್ಲಿ ಏರಿಕೆ. ಶಿಕ್ಷಕರಿಗೆ ಗೌರವ ದೊರೆಯುತ್ತದೆ.

ಕುಂಭ:-

ಯುವಕರಲ್ಲಿ ಮೂಡುವ ಅನರ್ಥ ಕೋಪದಿಂದ ಹಲವು ಸಮಸ್ಯೆಗಳಿಗೆ ದಾರಿ ಮಾಡಿಕೊಡಲಿದೆ. ಇವರ ನಡುವಳಿಕೆಯಿಂದ ಹಿರಿಯರಿಗೆ ಬೇಸರವಾಗಲಿದೆ. ಹಿರಿಯರ ದೈವ ನಂಬಿಕೆಗಳು ದೃಢವಾಗಿರುತ್ತವೆ. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ. ಹಿರಿಯರಿಗೆ ನವಚೈತನ್ಯ ಬಂದು ಚುರುಕಾಗಿ ಕೆಲಸದಲ್ಲಿ ತೊಡಗುವರು. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ.

ಮೀನ:-

ವೃತ್ತಿಯ ಬಡ್ತಿ ಪಡೆಯಲು ಹಿರಿಯ ಅಧಿಕಾರಿಗಳ ಸಹಾಯ ಪಡೆಯುವಿರಿ. ಬುದ್ಧಿವಂತಿಕೆಯಿಂದ ವ್ಯವಹಾರ ವಿಸ್ತರಣೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಕಬ್ಬಿಣದ ವ್ಯವಹಾರ ಮಾಡುವವರಿಗೆ ಅನಿರೀಕ್ಷಿತ ಲಾಭ ಬರಲಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಬೇಡಿಕೆ ಹೆಚ್ಚಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!

    ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…

  • ಸಂಬಂಧ

    ಕಷ್ಟದಲ್ಲಿರುವಾಗ ಹುಡುಗಿಯರು ಅಳುತ್ತಾರೆ,ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?ತಿಳಿಯಲು ಇದನ್ನು ಓದಿ..

    ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?

  • inspirational

    24 ಸಾವಿರದ ವಾಚ್ ಗೆ 5 ಕೋಟಿ ಕೊಡ್ತೀವಿ ಅಂತಿದ್ದಾರೆ ಯಾಕೆ ಈ ವಾಚಿನಲ್ಲಿ ಅಂತದ್ದೇನಿದೆ? ವಾಚಿನ ರಹಸ್ಯ ಏನು ಗೊತ್ತಾ.

    ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…

  • ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರುವ ಮೆಕ್ಕೆಜೋಳದ ರೇಷ್ಮೆಯ ಉಪಯೋಗಗಳು..!ತಿಳಿಯಲು ಈ ಲೇಖನ ಓದಿ…

    ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.