ಸಿನಿಮಾ

ಈ ನಟನ ಬಳಿ ಇರುವ ಐಷಾರಾಮಿ ವ್ಯಾನಿಟಿ ವ್ಯಾನ್’ನ ವಿಶೇಷತೆಗಳು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

272

ನಟ, ನಟಿಯರು ಶೂಟಿಂಗ್‌ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್‌’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್‌ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್‌. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್‌ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್‌ ಖಾನ್‌ ಕೂಡಾ ಸೇರ್ಪಡೆಯಾಗಿದ್ದಾರೆ.

ಬಾಲಿವುಡ್ ಬಾದ್ ಶಾ ಶಾರುಕ್ ಖಾನ್ ಅವರಿಗೆ ದುಬಾರಿ ವೆಚ್ಛದ ಐಷಾರಾಮಿ ಕಾರುಗಳೆಂದರೆ ಸಖತ್ ಕ್ರೇಜ್. ಐಷಾರಾಮಿ ಕಾರುಗಳನ್ನು ಖರೀದಿಸುವುದು, ಅವುಗಳಲ್ಲಿ ಜಾಲಿ ರೈಡ್ ಹೋಗುವುದೆಂದರೆ ಖುಷಿಯೋ ಖುಷಿ. ಅವರಲ್ಲಿರುವ ದುಬಾರಿ ವಾಹನಗಳ ಸಾಲಿಗೆ ಹೊಸದರ ಸೇರ್ಪಡೆಯಾಗುತ್ತಲೇ ಇರುತ್ತದೆ.

ಶಾರುಖ್‌ ಇತ್ತೀಚಿಗೆ ವೋಲ್ವೋ ಕಂಪನಿಯ ಬಿ 9 ಆರ್‌ ವ್ಯಾನ್‌ ಖರೀದಿಸಿದ್ದು, ಬಳಿಕ ಅದನ್ನು ಭಾರತದ ಖ್ಯಾತ ವಾಹನ ವಿನ್ಯಾಸಕಾರ ದಿಲೀಪ್‌ ಛಾಬ್ರಿಯಾ ಮರು ವಿನ್ಯಾಸಗೊಳಿಸಿದ್ದಾರೆ. ಸಕಲ ಸೌಲಭ್ಯ ಒಳಗೊಂಡಿರುವ ಈ ವ್ಯಾನ್‌ನ ಬೆಲೆ 4 ಕೋಟಿ ರೂ. ಎನ್ನಲಾಗಿದೆ

ಅಂದ ಹಾಗೇ ಶೂಟಿಂಗ್ ಸ್ಥಳಕ್ಕೆ ಕೊಂಡೊಯ್ಯಲು ಅತ್ಯಾಧುನಿಕ ಸೌಲಭ್ಯವುಳ್ಳ ವ್ಯಾನಿಟಿ ವ್ಯಾನ್ ಒಂದು ಶಾರೂಕ್ ಖಾನ್ ರ ಬಳಿ ಇದೆ. ಕ್ಯಾರಾವಾನ್ ನಲ್ಲಿ ಇರುವ ಸೌಲಭ್ಯಗಳಿಗಿಂತ ಅತಿ ಹೆಚ್ಚು ಸೌಕರ್ಯ ಹಾಗೂ ಅತ್ಯಾಧುನಿಕ ಮಾದರಿಯ ವಿನ್ಯಾಸದ ವಿಶೇಷ ವ್ಯಾನಿಟಿ ವ್ಯಾನ್ ಇದಾಗಿದೆ.

ಶಾರುಕ್ ಗಾಗಿಯೇ ರೆಡಿಯಾಗಿರುವ ಈ ಅತ್ಯಾಧುನಿಕ ವ್ಯಾನ್ ಸಿದ್ಧಪಡಿಸಿದವರು ಪ್ರಖ್ಯಾತ ವಾಹನ ವಿನ್ಯಾಸಕಾರ ದಿಲೀಪ್ ಛಬ್ರಿಯಾ. ಈ ವ್ಯಾನ್ ಅನ್ನು ಶಾರುಕ್ ಅಗತ್ಯಕ್ಕೆ ತಕ್ಕಂತೆ ಮರು ವಿನ್ಯಾಸಗೊಳಿಸಿ ಸಿದ್ಧಪಡಿಸಲು 3 ತಿಂಗಳು ತೆಗೆದುಕೊಂಡಿದ್ದಾರೆ.ಇದಕ್ಕಾಗಿ ಬರೋಬ್ಬರಿ 4 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದರಲ್ಲಿ ಅತ್ಯಾಧುನಿಕ ವಿಶ್ರಾಂತಿ ಕೊಠಡಿ, ವೈಫೈ, ಟಾಯ್ಲೆಟ್, ಕಿಚನ್, ಸೆಟಲೈಟ್ ಟಿವಿ ಸೇರಿದಂತೆ ಸಕಲ ಸೌಲಭ್ಯಗಳಿವೆ. ಅಲ್ಲದೇ ಪ್ರತ್ಯೇಕ ಮೇಕಪ್ ರೂಮ್ ಕೂಡಾ ಇದರಲ್ಲಿದೆ.

ಹೊರನೋಟದಂತೆ ಒಳಗೂ ಅತ್ಯಂತ ಸುಂದರವಾಗಿರುವ ಈ ವ್ಯಾನ್‌ 280 ಚದರಅಡಿ ವಿಸ್ತೀರ್ಣ ಹೊಂದಿದ್ದು, ಒಳಗಡೆ 4 ಕೋಣೆಯನ್ನು ಹೊಂದಿದೆ. ಈ ಪೈಕಿ ಒಂದು ಮೀಟಿಂಗ್‌ ರೂಂ, ಮತ್ತೂಂದು ಬೆಡ್‌ರೂಂ ಮತ್ತೂಂದು ಶೌಚಾಲಯ ಇನ್ನೊಂದು ಮೇಕಪ್‌ ಕಮ್‌ ಬಟ್ಟೆ ಬದಲಾವಣೆ ಕೋಣೆ.

ಇದರ ಜೊತೆ ವ್ಯಾನ್‌ನಲ್ಲಿ ಹೈಡ್ರಾಲಿಕ್‌ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದರ ಮೂಲಕ ಅಗತ್ಯ ಬಿದ್ದರೆ ವಾಹನದಿಂದ ಹೊರಗೆ ಚಾಚಿಕೊಂಡಿರುವಂತೆ ಇನ್ನೊಂದು ಕೋಣೆಯನ್ನೂ ಸೃಷ್ಟಿಸ ಬಹುದಾಗಿದೆ. ಇಡೀ ವ್ಯಾನ್‌ ವೈಫೈ ವ್ಯವಸ್ಥೆ ಹೊಂದಿದ್ದು, ಎಲ್ಲಾ ನಾಲ್ಕು ಕೋಣೆಗಳಲ್ಲೂ ಆ್ಯಪಲ್‌ ಟೀವಿ ಅಳವಡಿಸಲಾಗಿದೆ. ಉಪಗ್ರಹ ಸಂಪರ್ಕ ಇರುವ 4ಕೆ ಸೀರೀಸ್‌ನ ಟೀವಿ, ಸಣ್ಣ ಕಿಚನ್‌ ಕೂಡಾ ಇದೆ. ವ್ಯಾನ್‌ಗೆ ಗ್ಲಾಸ್‌ ಫ್ಲೋರಿಂಗ್‌ ಮಾಡಲಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಪಂಚದಲ್ಲೇ ಅತಿ ದುಬಾರಿ ಚಾಕೊಲೇಟ್ ಇದರ ಬೆಲೆ ಕೇಳಿದರೆ ಶಾಕ್ ಆಗ್ತೀರಾ..!

    ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ.  ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್‌ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್‌ಚೈಲ್ಡ್…

  • ಶಿಕ್ಷಣ

    ಕೆ.ಎ.ಎಸ್. ಪರೀಕ್ಷೆಗೆ ಅಗತ್ಯವಾದ ಅತ್ಯುಪಯುಕ್ತ ಪುಸ್ತಕಗಳು ಹಾಗೂ ತಯಾರಿಯ ಬಗ್ಗೆ ಈ ಲೇಖನಿ ಓದಿ…..

    ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು

  • ಸುದ್ದಿ

    ಬೈಕ್ ಚಾಲನೆ ಮಾಡಿಕೊಂಡು ‘ಸೆಲ್ಯೂಟ್’ ಮಾಡಿದ್ರೆ ಭಾರಿ ದಂಡ ಗ್ಯಾರಂಟಿ…!

    ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…

  • ಸಿನಿಮಾ

    ರಾಜಮೌಳಿ ಮುಂದಿನ ಚಿತ್ರದಲ್ಲಿ ಕನ್ನಡದ ನಾಯಕ ನಟ! ಯಾರು ಗೊತ್ತೇ???

    ಸಾವಿರಾರು ಕೋಟಿ ಹಣ ಗಳಿಕೆಯ ಜೊತೆ ವಿಶ್ವದಾದ್ಯಂತ ಅದ್ಭುತ ಯಶಸ್ಸು ಗಳಿಸಿದ ಬಾಹುಬಲಿ-2 ಚಿತ್ರದ ನಿರ್ದೆಶಕ ಎಸ್.ಎಸ್.ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ಸ್ಯಾಂಡಲ್’ವುಡ್ ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡುತ್ತಿದೆ.

  • ಸುದ್ದಿ

    ಕಾಲ್​ ರಿಸೀವ್​ ಮಾಡಿ, ಮಾಡದೇ ಇರಿ ರಿಂಗ್ ಆಗುವುದು ಮಾತ್ರ 30 ಸೆಕೆಂಡ್ ಅಷ್ಟೇ,,.!

    ಮೊಬೈಲ್​ ಫೋನ್​ ಬಳಕೆದಾರರು ತಮ್ಮ ಮೊಬೈಲ್​ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್​ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್​ಲೈನ್​ ಫೋನ್​ಗಳು 60 ಸೆಕೆಂಡ್​ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್​ ಫೋನ್​ಗಳ ರಿಂಗಣವನ್ನು30 ಸೆಕೆಂಡ್​ಗಳಿಗೆ ಮತ್ತು ಲ್ಯಾಂಡ್​ಲೈನ್​ ಫೋನ್​ಗಳ ರಿಂಗಣವನ್ನು 60 ಸೆಕೆಂಡ್​ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್​) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್​ಫೋನ್​ ಮತ್ತು ಲ್ಯಾಂಡ್​ಲೈನ್​ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…

  • ಜ್ಯೋತಿಷ್ಯ

    ಮನಿ ಪ್ಲಾಂಟ್’ನ್ನು ಮನೆಯಲ್ಲಿ,ಎಲ್ಲಿ ಬೆಳೆಸಿದ್ರೆ ಶುಭ,ಅಶುಭಗಳು ಆಗುತ್ತವೆ ಗೊತ್ತಾ..?

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್‌.