News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಈ ಬುಧವಾರ ಯಾವ ರಾಶಿ ಭವಿಷ್ಯ ಹೇಗಿದೆ..?ನೋಡಿ ತಿಳಿಯಿರಿ…

536

ಇಂದು ಬುಧವಾರ,  14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಮಹಿಳೆಯರು ಸಾಮಾಜಿಕೆ ಗೌರವಕ್ಕೆ ಪ್ರಾಪ್ತರಾಗುವರು. ಪ್ರಾಮಾಣಿಕತೆಯಿಂದ ಹೆಜ್ಜೆ ಇರಿಸಿದ ಪರಿಣಾಮವಾಗಿ ಎಲ್ಲೆಡೆ ಯಶಸ್ಸು ನಿಮ್ಮದಾಗುವುದು.  ನೀವು ನೀಡುವ ಸಲಹೆಯು ಸೂಕ್ತ ವಾದುದೆಂದು ಪರಿಗಣಿಸಿ. ಅದನ್ನು ಕಾರ್ಯರೂಪಕ್ಕೆ ತರುವರು. ಇದರಿಂದ ಕಚೇರಿ ವಾತಾವರಣದಲ್ಲಿ ನಿಮ್ಮ ಗೌರವ ಹೆಚ್ಚಾಗುವುದು. ವೈವಾಹಿಕ ಜೀವನದಲ್ಲಿ ಸಂತೃಪ್ತಿ. ಯಂತ್ರೋಪಕರಣಗಳ ಖರೀದಿ ಸಾಧ್ಯತೆ. ಅಲಂಕಾರಿಕ ವಸ್ತುಗಳ ಖರೀದಿ ಮಾಡುವಿರಿ. ಕೆಲ ಗ್ರಹಗಳ ಶುಭ ಸಂಚಾರದಿಂದ ಹಮ್ಮಿಕೊಂಡ ಕಾರ್ಯಗಳು ಸುಲಲಿತವಾಗುವುದು.

ವೃಷಭ:-

ಬಾಕಿ ಇರುವ ಕೆಲಸ ಕಾರ್ಯಗಳನ್ನು ಬೇಗನೆ ಮುಗಿಸುವುದು ಒಳ್ಳೆಯದು ಮತ್ತು ಕಚೇರಿಗೆ ಸಂಬಂಧಪಟ್ಟ ದಾಖಲೆಗಳನ್ನು ಒಪ್ಪವಾಗಿ ಜೋಡಿಸುವುದು ಒಳ್ಳೆಯದು. ಭಿನ್ನಾಭಿಪ್ರಾಯಗಳ ಕಾರಣ ವೈಯಕ್ತಿಕ ಸಂಬಂಧದಲ್ಲಿ ಬಿರುಕು ಬಿಡಬಹುದು. ಹಣಕಾಸಿನ ಪರಿಸ್ಥಿತಿ ಸುಧಾರಣೆ ಆಗುವುದರಿಂದ ಹೆಚ್ಚು ಉತ್ಸಾಹಶಾಲಿಗಳಾಗುವಿರಿ. ನಿಮ್ಮ ಮನೆಯ ಪರಿಸ್ಥಿತಿ ಸ್ವಲ್ಪ ಅನಿರೀಕ್ಷಿತವಾಗಿರುತ್ತದೆ. ನೀವು ಕೆಲಸದಲ್ಲಿ ನಿಜವಾಗಿಯೂ ಕಷ್ಟಕರ ದಿನವನ್ನು ಹೊಂದಿರಬಹುದು. ನಿಮ್ಮ ಮನಸ್ಸಿನಲ್ಲಿರುವುದನ್ನು ಹೇಳಲು ಹಿಂಜರಿಯದಿರಿ. ಇದರಿಂದ ಅನವಶ್ಯಕ ಟೀಕೆಗಳಿಂದ ಮುಕ್ತರಾಗುವಿರಿ.

ಮಿಥುನ:

ಸ್ನೇಹಿತರಿಗಾಗಿ ಕಾರ್ಯ ನಿರ್ವಹಿಸಿದಲ್ಲಿ ಯಶಸ್ಸು ಕಾಣುವಿರಿ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಕುಟುಂಬದಲ್ಲಿ ಕೆಲವು ಸ್ತ್ರೀ ಸದಸ್ಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು. ಮಹಿಳೆಯರಿಗೆ ಮನೋಗತವು ಈಡೇರುವುದಲ್ಲದೇ ಸಂತೃಪ್ತಿ ಮೂಡುವುದು. ಮಹಿಳೆಯರಿಗೆ ರಾಜಕೀಯದಲ್ಲಿ ಯಶಸ್ಸು. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ಅದರೆ ಹಾಗೆ ಮಾಡಿದಲ್ಲಿ ನೀವು ವಿಷಾದಿಸುತ್ತೀರಿ.

ಕಟಕ :-

ಮನೆ ಬದಲಾವಣೆ ಅಥವಾ ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ. ದೂರ ಪ್ರಯಾಣದ ಸಾಧ್ಯತೆ. ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರೀತಿಪಾತ್ರ ಸಂಗಾತಿಯ ಜೊತೆಯಿರಿ. ಲೇವಾದೇವಿ ವ್ಯವಹಾರ ದಿನದ ಮಟ್ಟಿಗೆ ಮಾಡಬೇಡಿ. ಮಕ್ಕಳ ವಿದ್ಯಾಭ್ಯಾಸದ ವಿಚಾರದ ಬಗೆಗೆ ವ್ಯಾಕುಲತೆ ತಲೆದೋರುವ ಸಾಧ್ಯತೆ ಇರುವುದು. ಶತ್ರು ಬಾಧೆಯಿಂದ ಮುಕ್ತಿ. ಕೈಗೊಂಡ ಹೊಸ ಕಾರ್ಯಯೋಜನೆಗಳು ನಿಮ್ಮ ನಿರೀಕ್ಷೆಗಳನ್ನು ತಲುಪುವುದಿಲ್ಲ.

 ಸಿಂಹ:

ನ್ಯಾಯಾಲಯದ ಸಮಸ್ಯೆಗಳು ಇತ್ಯರ್ಥವಾಗುವ ಸಾಧ್ಯತೆ. ಪ್ರೇಮ ಜೀವನ ಭರವಸೆ ತರುತ್ತದೆ ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ.ದೂರದ ಊರಿನಿಂದ ಬರುವ ಅತಿಥಿಯೊಬ್ಬರು ನಿಮ್ಮ ವ್ಯಾಪಾರ, ವಹಿವಾಟಿನ ವಿಷಯದಲ್ಲಿ ಉತ್ತಮ ಸಲಹೆ ನೀಡುವರು. ಇದರಿಂದ ನಿಮಗೆ ಹೆಚ್ಚಿನ ಲಾಭವಾಗುವುದು. ಸರ್ಕಾರದಿಂದ ಆರ್ಥಿಕ ಸಹಾಯ. ಹಣಕಾಸಿನ ಸ್ಥಿತಿ ಉತ್ತಮಗೊಳ್ಳುವುದು. ಸದ್ಯದ ಪರಿಸ್ಥಿತಿ ಉತ್ತಮವಾಗಿಲ್ಲದಿರುವಾಗ ಚಿಕ್ಕಮಗುವು ಹೇಳಿದ ಮಾತನ್ನು ಕೇಳಬೇಕಾದೀತು.

ಕನ್ಯಾ :-

ಗೃಹ ನಿರ್ಮಾಣ ಕಾರ್ಯದಲ್ಲಿ ಸ್ವಲ್ಪಮಟ್ಟಿನ ಅಡೆತಡೆಗಳುಂಟಾಗಬಹುದು. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿ ಇಂದು ಪೂರ್ಣವಾದ ಶಕ್ತಿ ಹಾಗೂ ಪ್ರೇಮವನ್ನು ನೀಡುತ್ತಾರೆ. ಆಂತರಿಕ ಸಮಸ್ಯೆಗಳು ಪರಿಹಾರಕಂಡು ನೆಮ್ಮದಿ ಮೂಡುವುದು. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ.

ತುಲಾ:

ದಿನದ ಕೆಲಸಕಾರ್ಯಗಳಲ್ಲಿ ಉತ್ಸಾಹ ಯಶಸ್ಸುಗಳು ಒದಗಿಬರಲಿವೆ.ಹಠಾತ್ ಅನಿರೀಕ್ಷಿತ ವೆಚ್ಚಗಳು ಆರ್ಥಿಕ ಒತ್ತಡ ತರಬಹುದು. ನಿಮ್ಮ ಸಂಗಾತಿ ನಿಮಗೆ ಕಿರಿಕಿರುಯುಂಟುಮಾಡಬಹುದು ಹಾಗೂ ಇದು ನಿಮ್ಮನ್ನು ಘಾಸಿಗೊಳಿಸಬಹುದು. ಏಕಪಕ್ಷೀಯ ಪ್ರೇಮ ನಿಮ್ಮನ್ನು ನಿರಾಸೆಗೊಳಿಸುತ್ತದೆ. ನೌಕರರಿಗೆ ಪದೋನ್ನತಿ ಸಾಧ್ಯತೆ. ಧಾರ್ಮಿಕ ಸಮಾರಂಭಗಳಲ್ಲಿ ಭಾಗವಹಿಸುವಿರಿ. ಆರ್ಥಿಕ ಲಾಭ, ಕೀರ್ತಿಯು ನಿಮ್ಮ ಪಾಲಿಗೆ ದೊರೆಯಲಿದೆ.

ವೃಶ್ಚಿಕ :-

ಹೊಸ ಹೊಸ ಯೋಜನೆಗಳು ಕಾರ್ಯರೂಪಕ್ಕ ಬರಲಿವೆ. ಒಳಿತಿಗೆ ದಾರಿ ದೊರೆಯುವುದು. ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನ ಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಪ್ರೋತ್ಸಾಹ. ದಾಂಪತ್ಯ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಿಂದ ಅಧಿಕ ಲಾಭ. ಭಗವಂತನನ್ನು ಸ್ಮರಿಸಿ ಕಾರ್ಯೋನ್ಮುಖರಾಗಿ.

ಧನಸ್ಸು:

ಮಹಿಳೆಯರಿಗೆ ವಿದ್ಯಾಭ್ಯಾಸದಲ್ಲಿ ಮತ್ತು ವೃತ್ತಿ ನಿರತರಿಗೆ ಯಶಸ್ಸು ದೊರಕುವುದು. ನಿಮ್ಮ ಜೀವನದಲ್ಲಿ ನಂತರ ವಿಷಾದಿಸಬಹುದಾದ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ. ಇಂದು ಪರಿಸ್ಥಿತಿ ನೀವು ಬಯಸಿದಂತೆ ಇರದೇ ಇರಬಹುದು, ಆದರೆ ನೀವು ನಿಮ್ಮ ಅರ್ಧಾಂಗಿಯ ಜೊತೆ ಒಂದು ಸುಂದರ ಸಮಯ ಕಳೆಯುತ್ತೀರಿ. ಗೃಹ ಸೌಕರ್ಯಗಳ ಮೇಲೆ ಅಧಿಕವಾಗಿ ಖರ್ಚು ಮಾಡಬೇಡಿ.  ಆರ್ಥಿಕ ಸಂಪನ್ಮೂಲಗಳ ಅಭಿವೃದ್ಧಿ. ನಿಮ್ಮ ಪ್ರೀತಿಪಾತ್ರರು ಸ್ವಲ್ಪ ಕಿರಿಕಿರಿಗೊಂಡಂತೆ ತೋರುತ್ತದೆ. ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ.

ಮಕರ :-

ಸ್ನೇಹಿತರೇ ನಿಮ್ಮನ್ನು ಯಾಮಾರಿಸುವ ಸಾಧ್ಯತೆ ಇದ್ದು ಇದಕ್ಕೆ ವಿಚಲಿತರಾಗದಿರಿ. ಅದೃಷ್ಟವು ನಿಮ್ಮ ಬೆನ್ನಿಗಿದೆ. ಮಕ್ಕಳ ವಿದ್ಯಾಭ್ಯಾಸವು ಪ್ರಗತಿಯತ್ತ ಸಾಗುವುದು. ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯನ್ನು ಸಾಧಿಸಲು ಸಾಧ್ಯವಾಗದೆ ಪರದಾಟ ಉಂಟಾಗುವ ಸಾಧ್ಯತೆ ಇರುತ್ತದೆ. ನೀವು ತಪ್ಪು ದಾರಿಗೆಳೆಯಲು ಅಥವಾ ನಿಮಗೆ ಹಾನಿ ಮಾಡುವ ಮಾಹಿತಿ ನೀಡಲು ಪ್ರಯತ್ನಿಸುವ ವ್ಯಕ್ತಿಗಳ ಬಗ್ಗೆ ಎಚ್ಚರಿದಿಂದಿರಿ. ಸಂಗಾತಿಯ ಬೇಕು ಬೇಡಗಳನ್ನು ಸಕಾರಾತ್ಮಕವಾಗಿ ಸ್ಪಂದಿಸಿ ಒಳಿತಾಗುವುದು.

ಕುಂಭ:-

ಇಡೀ ದಿನ ಉಲ್ಲಾಸದಿಂದ ಇರುವಿರಿ. ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ನೀವು ಹಿಂದಿನಿಂದಲೂ ಕೆಲಸದಲ್ಲಿ ಯಾರಾದರ ಜೊತೆಗಾದರೂ ಮಾತನಾಡಲು ಪ್ರಯತ್ನಿಸುತ್ತಿದ್ದಲ್ಲಿ, ಇಂದು ನಿಮ್ಮ ಅದೃಷ್ಟ ಖುಲಾಯಿಸುತ್ತದೆ.  ಮಕ್ಕಳು ನಿಮ್ಮ ಸಂತೋಷವನ್ನು ಇಮ್ಮಡಿಗೊಳಿಸುವರು. ಏನನ್ನಾದರೂ ಅಂತಿಮಗೊಳಿಸುವ ಮೊದಲು ನಿಮ್ಮ ಕುಟುಂಬದ ಸದಸ್ಯರ ಅಭಿಪ್ರಾಯ ತೆಗೆದುಕೊಳ್ಳಿ. ನಿಮ್ಮ ಏಕಪಕ್ಷೀಯ ನಿರ್ಧಾರ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು.  ಬರಬೇಕಾಗಿದ್ದ ಬಾಕಿ ಹಣ ಕೈ ಸೇರುವುದು. ವೃತ್ತಿಯಲ್ಲಿ ಜಾಗರೂಕರಾಗಿರಿ. ಆಕಸ್ಮಿಕ ಧನಾಗಮನ. ಹೊಸ ಯೋಜನೆಗಳಲ್ಲಿ ಯಶಸ್ಸು.

ಮೀನ:-

ಮಹಿಳೆಯರ ಆಶೋತ್ತರಗಳು ಈಡೇರಲಿವೆ. ಭೂಮಿಯಿಂದ ಧನಲಾಭ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕೃಷಿಯಲ್ಲಿ ಪ್ರಗತಿ. ನಿಮ್ಮ ಭಾವನೆಗಳನ್ನು ನಿಯಂತ್ರಿಸುವಲ್ಲಿ ತೊಂದರೆ ಹೊಂದಿರುತ್ತೀರಿ,ಆದರೆ ನಿಮ್ಮ ಸುತ್ತಲಿರುವವರನ್ನು ಟೀಕಿಸಬೇಡಿ ಇಲ್ಲದಿದ್ದಲ್ಲಿ ನೀವು ಏಕಾಂಗಿಯಾಗುತ್ತೀರಿ. ಮನಸ್ಸಿನ ದುಗುಡಗಳು ಕಾಣೆ ಆಗುವುದು. ಆದಷ್ಟು ಕುಲದೇವತೆಯನ್ನು ಪ್ರಾರ್ಥಿಸಿ. ಎಲ್ಲವೂ ಒಳಿತಾಗುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ, ದೇವರು

    ಶಾರದಾ ಮಾತೆಯ ಮಹಿಮೆ. ಶೃಂಗೇರಿ ದೇಗುಲದ ಗರ್ಭಿಣಿ ಕಪ್ಪೆಯ ರಹಸ್ಯ ನಿಮಗೆ ಗೊತ್ತಾ, ನೋಡಿ.!

    ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…

  • ಸಂಬಂಧ

    ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ !!!

    ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.

  • ಸುದ್ದಿ

    ಡಾರ್ಲಿಂಗ್ ಪ್ರಭಾಸ್ ಮನ ಕದ್ದ ಚೆಲುವೆ ಇವರೇನಾ..?

    ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು.  ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…

  • ಸಿನಿಮಾ

    ಈ ನಟ ‘ಮೆಗಾ ಸ್ಟಾರ್’ ಆದ್ರೂ ಈಗಲೂ ಬೀಡಿ ಸೇದುತ್ತಾರೆ..!ಯಾರು ಗೊತ್ತಾ..?ತಿಳಿಯಲು ಈ ಲೇಖನ ಓದಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…

  • ಸುದ್ದಿ

    ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ದೃಶ್ಯ.

    ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ  ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ.  ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…

  • ಉಪಯುಕ್ತ ಮಾಹಿತಿ

    ನೀವು ರಸ್ತೆ ಪಕ್ಕದ ಈ ಕಲ್ಲುಗಳನ್ನು ದಿನಾಲು ನೋಡುತ್ತೀರಿ..!ಆದ್ರೆ ಆ ಕಲ್ಲುಗಳ ಬಣ್ಣಗಳು ಹೇಳುವ ಮಾಹಿತಿ ನಿಮ್ಗೆ ಗೊತ್ತೇ ಇರಲ್ಲ…ತಿಳಿಯಲು ಈ ಲೇಖನ ಓದಿ…

    ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.