ಜ್ಯೋತಿಷ್ಯ

ಈ ಬುಧವಾರ ಯಾವ ರಾಶಿ ಭವಿಷ್ಯ ಹೇಗಿದೆ..?ನೋಡಿ ತಿಳಿಯಿರಿ…

519

ಇಂದು ಬುಧವಾರ,  14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಮಹಿಳೆಯರು ಸಾಮಾಜಿಕೆ ಗೌರವಕ್ಕೆ ಪ್ರಾಪ್ತರಾಗುವರು. ಪ್ರಾಮಾಣಿಕತೆಯಿಂದ ಹೆಜ್ಜೆ ಇರಿಸಿದ ಪರಿಣಾಮವಾಗಿ ಎಲ್ಲೆಡೆ ಯಶಸ್ಸು ನಿಮ್ಮದಾಗುವುದು.  ನೀವು ನೀಡುವ ಸಲಹೆಯು ಸೂಕ್ತ ವಾದುದೆಂದು ಪರಿಗಣಿಸಿ. ಅದನ್ನು ಕಾರ್ಯರೂಪಕ್ಕೆ ತರುವರು. ಇದರಿಂದ ಕಚೇರಿ ವಾತಾವರಣದಲ್ಲಿ ನಿಮ್ಮ ಗೌರವ ಹೆಚ್ಚಾಗುವುದು. ವೈವಾಹಿಕ ಜೀವನದಲ್ಲಿ ಸಂತೃಪ್ತಿ. ಯಂತ್ರೋಪಕರಣಗಳ ಖರೀದಿ ಸಾಧ್ಯತೆ. ಅಲಂಕಾರಿಕ ವಸ್ತುಗಳ ಖರೀದಿ ಮಾಡುವಿರಿ. ಕೆಲ ಗ್ರಹಗಳ ಶುಭ ಸಂಚಾರದಿಂದ ಹಮ್ಮಿಕೊಂಡ ಕಾರ್ಯಗಳು ಸುಲಲಿತವಾಗುವುದು.

ವೃಷಭ:-

ಬಾಕಿ ಇರುವ ಕೆಲಸ ಕಾರ್ಯಗಳನ್ನು ಬೇಗನೆ ಮುಗಿಸುವುದು ಒಳ್ಳೆಯದು ಮತ್ತು ಕಚೇರಿಗೆ ಸಂಬಂಧಪಟ್ಟ ದಾಖಲೆಗಳನ್ನು ಒಪ್ಪವಾಗಿ ಜೋಡಿಸುವುದು ಒಳ್ಳೆಯದು. ಭಿನ್ನಾಭಿಪ್ರಾಯಗಳ ಕಾರಣ ವೈಯಕ್ತಿಕ ಸಂಬಂಧದಲ್ಲಿ ಬಿರುಕು ಬಿಡಬಹುದು. ಹಣಕಾಸಿನ ಪರಿಸ್ಥಿತಿ ಸುಧಾರಣೆ ಆಗುವುದರಿಂದ ಹೆಚ್ಚು ಉತ್ಸಾಹಶಾಲಿಗಳಾಗುವಿರಿ. ನಿಮ್ಮ ಮನೆಯ ಪರಿಸ್ಥಿತಿ ಸ್ವಲ್ಪ ಅನಿರೀಕ್ಷಿತವಾಗಿರುತ್ತದೆ. ನೀವು ಕೆಲಸದಲ್ಲಿ ನಿಜವಾಗಿಯೂ ಕಷ್ಟಕರ ದಿನವನ್ನು ಹೊಂದಿರಬಹುದು. ನಿಮ್ಮ ಮನಸ್ಸಿನಲ್ಲಿರುವುದನ್ನು ಹೇಳಲು ಹಿಂಜರಿಯದಿರಿ. ಇದರಿಂದ ಅನವಶ್ಯಕ ಟೀಕೆಗಳಿಂದ ಮುಕ್ತರಾಗುವಿರಿ.

ಮಿಥುನ:

ಸ್ನೇಹಿತರಿಗಾಗಿ ಕಾರ್ಯ ನಿರ್ವಹಿಸಿದಲ್ಲಿ ಯಶಸ್ಸು ಕಾಣುವಿರಿ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಕುಟುಂಬದಲ್ಲಿ ಕೆಲವು ಸ್ತ್ರೀ ಸದಸ್ಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು. ಮಹಿಳೆಯರಿಗೆ ಮನೋಗತವು ಈಡೇರುವುದಲ್ಲದೇ ಸಂತೃಪ್ತಿ ಮೂಡುವುದು. ಮಹಿಳೆಯರಿಗೆ ರಾಜಕೀಯದಲ್ಲಿ ಯಶಸ್ಸು. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ಅದರೆ ಹಾಗೆ ಮಾಡಿದಲ್ಲಿ ನೀವು ವಿಷಾದಿಸುತ್ತೀರಿ.

ಕಟಕ :-

ಮನೆ ಬದಲಾವಣೆ ಅಥವಾ ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ. ದೂರ ಪ್ರಯಾಣದ ಸಾಧ್ಯತೆ. ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರೀತಿಪಾತ್ರ ಸಂಗಾತಿಯ ಜೊತೆಯಿರಿ. ಲೇವಾದೇವಿ ವ್ಯವಹಾರ ದಿನದ ಮಟ್ಟಿಗೆ ಮಾಡಬೇಡಿ. ಮಕ್ಕಳ ವಿದ್ಯಾಭ್ಯಾಸದ ವಿಚಾರದ ಬಗೆಗೆ ವ್ಯಾಕುಲತೆ ತಲೆದೋರುವ ಸಾಧ್ಯತೆ ಇರುವುದು. ಶತ್ರು ಬಾಧೆಯಿಂದ ಮುಕ್ತಿ. ಕೈಗೊಂಡ ಹೊಸ ಕಾರ್ಯಯೋಜನೆಗಳು ನಿಮ್ಮ ನಿರೀಕ್ಷೆಗಳನ್ನು ತಲುಪುವುದಿಲ್ಲ.

 ಸಿಂಹ:

ನ್ಯಾಯಾಲಯದ ಸಮಸ್ಯೆಗಳು ಇತ್ಯರ್ಥವಾಗುವ ಸಾಧ್ಯತೆ. ಪ್ರೇಮ ಜೀವನ ಭರವಸೆ ತರುತ್ತದೆ ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ.ದೂರದ ಊರಿನಿಂದ ಬರುವ ಅತಿಥಿಯೊಬ್ಬರು ನಿಮ್ಮ ವ್ಯಾಪಾರ, ವಹಿವಾಟಿನ ವಿಷಯದಲ್ಲಿ ಉತ್ತಮ ಸಲಹೆ ನೀಡುವರು. ಇದರಿಂದ ನಿಮಗೆ ಹೆಚ್ಚಿನ ಲಾಭವಾಗುವುದು. ಸರ್ಕಾರದಿಂದ ಆರ್ಥಿಕ ಸಹಾಯ. ಹಣಕಾಸಿನ ಸ್ಥಿತಿ ಉತ್ತಮಗೊಳ್ಳುವುದು. ಸದ್ಯದ ಪರಿಸ್ಥಿತಿ ಉತ್ತಮವಾಗಿಲ್ಲದಿರುವಾಗ ಚಿಕ್ಕಮಗುವು ಹೇಳಿದ ಮಾತನ್ನು ಕೇಳಬೇಕಾದೀತು.

ಕನ್ಯಾ :-

ಗೃಹ ನಿರ್ಮಾಣ ಕಾರ್ಯದಲ್ಲಿ ಸ್ವಲ್ಪಮಟ್ಟಿನ ಅಡೆತಡೆಗಳುಂಟಾಗಬಹುದು. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿ ಇಂದು ಪೂರ್ಣವಾದ ಶಕ್ತಿ ಹಾಗೂ ಪ್ರೇಮವನ್ನು ನೀಡುತ್ತಾರೆ. ಆಂತರಿಕ ಸಮಸ್ಯೆಗಳು ಪರಿಹಾರಕಂಡು ನೆಮ್ಮದಿ ಮೂಡುವುದು. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ.

ತುಲಾ:

ದಿನದ ಕೆಲಸಕಾರ್ಯಗಳಲ್ಲಿ ಉತ್ಸಾಹ ಯಶಸ್ಸುಗಳು ಒದಗಿಬರಲಿವೆ.ಹಠಾತ್ ಅನಿರೀಕ್ಷಿತ ವೆಚ್ಚಗಳು ಆರ್ಥಿಕ ಒತ್ತಡ ತರಬಹುದು. ನಿಮ್ಮ ಸಂಗಾತಿ ನಿಮಗೆ ಕಿರಿಕಿರುಯುಂಟುಮಾಡಬಹುದು ಹಾಗೂ ಇದು ನಿಮ್ಮನ್ನು ಘಾಸಿಗೊಳಿಸಬಹುದು. ಏಕಪಕ್ಷೀಯ ಪ್ರೇಮ ನಿಮ್ಮನ್ನು ನಿರಾಸೆಗೊಳಿಸುತ್ತದೆ. ನೌಕರರಿಗೆ ಪದೋನ್ನತಿ ಸಾಧ್ಯತೆ. ಧಾರ್ಮಿಕ ಸಮಾರಂಭಗಳಲ್ಲಿ ಭಾಗವಹಿಸುವಿರಿ. ಆರ್ಥಿಕ ಲಾಭ, ಕೀರ್ತಿಯು ನಿಮ್ಮ ಪಾಲಿಗೆ ದೊರೆಯಲಿದೆ.

ವೃಶ್ಚಿಕ :-

ಹೊಸ ಹೊಸ ಯೋಜನೆಗಳು ಕಾರ್ಯರೂಪಕ್ಕ ಬರಲಿವೆ. ಒಳಿತಿಗೆ ದಾರಿ ದೊರೆಯುವುದು. ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನ ಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಪ್ರೋತ್ಸಾಹ. ದಾಂಪತ್ಯ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಿಂದ ಅಧಿಕ ಲಾಭ. ಭಗವಂತನನ್ನು ಸ್ಮರಿಸಿ ಕಾರ್ಯೋನ್ಮುಖರಾಗಿ.

ಧನಸ್ಸು:

ಮಹಿಳೆಯರಿಗೆ ವಿದ್ಯಾಭ್ಯಾಸದಲ್ಲಿ ಮತ್ತು ವೃತ್ತಿ ನಿರತರಿಗೆ ಯಶಸ್ಸು ದೊರಕುವುದು. ನಿಮ್ಮ ಜೀವನದಲ್ಲಿ ನಂತರ ವಿಷಾದಿಸಬಹುದಾದ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ. ಇಂದು ಪರಿಸ್ಥಿತಿ ನೀವು ಬಯಸಿದಂತೆ ಇರದೇ ಇರಬಹುದು, ಆದರೆ ನೀವು ನಿಮ್ಮ ಅರ್ಧಾಂಗಿಯ ಜೊತೆ ಒಂದು ಸುಂದರ ಸಮಯ ಕಳೆಯುತ್ತೀರಿ. ಗೃಹ ಸೌಕರ್ಯಗಳ ಮೇಲೆ ಅಧಿಕವಾಗಿ ಖರ್ಚು ಮಾಡಬೇಡಿ.  ಆರ್ಥಿಕ ಸಂಪನ್ಮೂಲಗಳ ಅಭಿವೃದ್ಧಿ. ನಿಮ್ಮ ಪ್ರೀತಿಪಾತ್ರರು ಸ್ವಲ್ಪ ಕಿರಿಕಿರಿಗೊಂಡಂತೆ ತೋರುತ್ತದೆ. ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ.

ಮಕರ :-

ಸ್ನೇಹಿತರೇ ನಿಮ್ಮನ್ನು ಯಾಮಾರಿಸುವ ಸಾಧ್ಯತೆ ಇದ್ದು ಇದಕ್ಕೆ ವಿಚಲಿತರಾಗದಿರಿ. ಅದೃಷ್ಟವು ನಿಮ್ಮ ಬೆನ್ನಿಗಿದೆ. ಮಕ್ಕಳ ವಿದ್ಯಾಭ್ಯಾಸವು ಪ್ರಗತಿಯತ್ತ ಸಾಗುವುದು. ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯನ್ನು ಸಾಧಿಸಲು ಸಾಧ್ಯವಾಗದೆ ಪರದಾಟ ಉಂಟಾಗುವ ಸಾಧ್ಯತೆ ಇರುತ್ತದೆ. ನೀವು ತಪ್ಪು ದಾರಿಗೆಳೆಯಲು ಅಥವಾ ನಿಮಗೆ ಹಾನಿ ಮಾಡುವ ಮಾಹಿತಿ ನೀಡಲು ಪ್ರಯತ್ನಿಸುವ ವ್ಯಕ್ತಿಗಳ ಬಗ್ಗೆ ಎಚ್ಚರಿದಿಂದಿರಿ. ಸಂಗಾತಿಯ ಬೇಕು ಬೇಡಗಳನ್ನು ಸಕಾರಾತ್ಮಕವಾಗಿ ಸ್ಪಂದಿಸಿ ಒಳಿತಾಗುವುದು.

ಕುಂಭ:-

ಇಡೀ ದಿನ ಉಲ್ಲಾಸದಿಂದ ಇರುವಿರಿ. ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ನೀವು ಹಿಂದಿನಿಂದಲೂ ಕೆಲಸದಲ್ಲಿ ಯಾರಾದರ ಜೊತೆಗಾದರೂ ಮಾತನಾಡಲು ಪ್ರಯತ್ನಿಸುತ್ತಿದ್ದಲ್ಲಿ, ಇಂದು ನಿಮ್ಮ ಅದೃಷ್ಟ ಖುಲಾಯಿಸುತ್ತದೆ.  ಮಕ್ಕಳು ನಿಮ್ಮ ಸಂತೋಷವನ್ನು ಇಮ್ಮಡಿಗೊಳಿಸುವರು. ಏನನ್ನಾದರೂ ಅಂತಿಮಗೊಳಿಸುವ ಮೊದಲು ನಿಮ್ಮ ಕುಟುಂಬದ ಸದಸ್ಯರ ಅಭಿಪ್ರಾಯ ತೆಗೆದುಕೊಳ್ಳಿ. ನಿಮ್ಮ ಏಕಪಕ್ಷೀಯ ನಿರ್ಧಾರ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು.  ಬರಬೇಕಾಗಿದ್ದ ಬಾಕಿ ಹಣ ಕೈ ಸೇರುವುದು. ವೃತ್ತಿಯಲ್ಲಿ ಜಾಗರೂಕರಾಗಿರಿ. ಆಕಸ್ಮಿಕ ಧನಾಗಮನ. ಹೊಸ ಯೋಜನೆಗಳಲ್ಲಿ ಯಶಸ್ಸು.

ಮೀನ:-

ಮಹಿಳೆಯರ ಆಶೋತ್ತರಗಳು ಈಡೇರಲಿವೆ. ಭೂಮಿಯಿಂದ ಧನಲಾಭ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕೃಷಿಯಲ್ಲಿ ಪ್ರಗತಿ. ನಿಮ್ಮ ಭಾವನೆಗಳನ್ನು ನಿಯಂತ್ರಿಸುವಲ್ಲಿ ತೊಂದರೆ ಹೊಂದಿರುತ್ತೀರಿ,ಆದರೆ ನಿಮ್ಮ ಸುತ್ತಲಿರುವವರನ್ನು ಟೀಕಿಸಬೇಡಿ ಇಲ್ಲದಿದ್ದಲ್ಲಿ ನೀವು ಏಕಾಂಗಿಯಾಗುತ್ತೀರಿ. ಮನಸ್ಸಿನ ದುಗುಡಗಳು ಕಾಣೆ ಆಗುವುದು. ಆದಷ್ಟು ಕುಲದೇವತೆಯನ್ನು ಪ್ರಾರ್ಥಿಸಿ. ಎಲ್ಲವೂ ಒಳಿತಾಗುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೋದಿ ಹೆಲಿಕಾಪ್ಟರ್ ಚೆಕ್ ಮಾಡಿ ಅಮಾನತು ಆಗಿದ್ದ ಚುನಾವಣಾ ಅಧಿಕಾರಿ..!ಅಮಾನತು ಆದೇಶ ಏನಾಯ್ತು..?

    ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು.  ಅಮಾನತಿನ…

  • ಉಪಯುಕ್ತ ಮಾಹಿತಿ

    ಬೆಳೆ ದರ್ಶಕ್-2020ಆಪ್

    ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…

  • ಉಪಯುಕ್ತ ಮಾಹಿತಿ

    ಜ್ವರದಿಂದ-ಹೃದಯಘಾತದವರೆಗೆ ಎಲ್ಲಾ ಕಾಯಿಲೆಗಳನ್ನು ತಡೆಯುವ ರಾಮಬಾಣ ಯಾವುದು ಗೊತ್ತಾ?

    ‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…

  • ಸುದ್ದಿ

    884 ವರ್ಷಗಳಿಂದ ರಾಮಾನುಜಾಚಾರ್ಯರ ಮೂಲ ಶರೀರವನ್ನು ಯಾವುದೇ ರಾಸಾಯನಿಕಗಳ ಪ್ರಯೋಗವಿಲ್ಲದೆ ಸಂರಕ್ಷಿಸಿ ಇಡಲಾಗಿದೆ…!

    ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…

  • ಸುದ್ದಿ

    ಜನವರಿ 8ರಿಂದ ಬ್ಯಾಂಕ್ ಗಳು ಬಂದ್ ಆಗಲಿವೆ. ಏನಾದರೂ ಬ್ಯಾಂಕ್ ವ್ಯವಹಾರಗಳು ಇದ್ದರೆ ಈಗಲೇ ಮುಗಿಸಿಕೊಳ್ಳಿ…

    ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್​ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್​ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್​​ (ಬಿಇಎಫ್​ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…

  • ಸುದ್ದಿ

    ಧರ್ಮಸ್ಥಳದ ಧರ್ಮಾದಿಕಾರಿಗಳಾದ, ಡಾ.ವೀರೇಂದ್ರ ಹೆಗಡೆರವರು ನೂತನವಾಗಿ ನಿರ್ಮಿಸಿರುವ ಮನೆ ಹೇಗಿದೆ ಗೊತ್ತಾ..?ಈ ಲೇಖನ ನೋಡಿ…

    ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…