ಉಪಯುಕ್ತ ಮಾಹಿತಿ

ಈ ಭಯಾನಕ ಕೋಳಿ ಜ್ವರದ ಬಗ್ಗೆ ನಿಮಗೆಷ್ಟು ಗೊತ್ತು?ಈ ರೋಗದ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಗೊತ್ತಾ..?ಉಪಯುಕ್ತ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

1426

ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್‌ಫ್ಲೂಯೆನ್‌ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.ಇದು ಟರ್ಕಿ ಕೋಳಿ,ಗಿಣಿ ಕೋಳಿ,ಬಾತು ಕೋಳಿ,ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ.ಇದೊಂದು ಸಾಂಕ್ರಾಮಿಕ ಖಾಯಿಲೆಯಾಗಿದ್ದು,ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ.ಕೆಲವೊಮ್ಮೆ ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು.

ಈ ರೋಗ ಹೇಗೆ ಹರಡುತ್ತದೆ…

ರೋಗ ಪೀಡಿತ ಕೋಳಿ ಅಥವಾ ಹಕ್ಕಿಗಳ ಮಾಂಸವನ್ನು ಸರಿಯಾಗಿ ಬೇಯಿಸದೇ ತಿನ್ನುವುದರಿಂದ ಸೋನ್ಕಿರುವ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು, ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಶಿತಗೊಂಡಾಗ ಈ ಖಾಯಿಲೆ ಹರಡುತ್ತದೆ ಮತ್ತು ಕೆಲವು ಸಂದರ್ಭಗಳಲ್ಲಿ ಗಾಳಿಯ ಮೂಲಕವೂ ಮನುಷ್ಯರಿಗೆ ಹರಡುತ್ತದೆ. ಸೋಂಕಿಗೆ ಒಳಗಾದ ಹಕ್ಕಿಯ ಮಲ, ಮೂತ್ರ, ಸಿಂಬಳ ಮತ್ತು ಉಸಿರು ರೋಗಾಣುಗಳಿಂದ ತುಂಬಿರುತ್ತದೆ. ಹಕ್ಕಿ ವಾಸಿಸುವ ಸ್ಥಳ, ಅಲ್ಲಿನ ಗಾಳಿ, ಸಾಕಣೆಗೆ ಬಳಸುವ ಉಪಕರಣ ಎಲ್ಲವೂ ವೈರಸ್‌ಮಯವಾಗಿರುತ್ತವೆ. ಇವುಗಳ ಸಂಪರ್ಕಕ್ಕೆ ಬರುವ ಎಲ್ಲ ಪಕ್ಷಿಗಳಿಗೂ ಸೋಂಕು ತಗುಲುತ್ತದೆ. ಕೋಳಿ ಫಾರಂನಲ್ಲಿ ಒಂದು ಕೋಳಿಗೆ ಸೋಂಕು ಉಂಟಾದರೆ ಕೆಲವೇ ಗಂಟೆಗಳಲ್ಲಿ ಎಲ್ಲ ಕೋಳಿಗಳಿಗೂ ಕಾಯಿಲೆ ಅಂಟಿಕೊಳ್ಳುತ್ತದೆ. ಪಕ್ಷಿಗಳಿಗೆ ಹಂದಿಯಿಂದ, ಹಂದಿಗಳಿಗೆ ಪಕ್ಷಿಗಳಿಂದ ಸೋಂಕು ಅಂಟುವುದೂ ಉಂಟು. ಅತಿ ಅಪರೂಪವಾಗಿ ಪಕ್ಷಿಗಳ ಕಾಯಿಲೆ ಮಾನವನಿಗೆ ಅಂಟುವುದೂ ಇದೆ. ಹೀಗಾಗಿ ಕೋಳಿ ಫಾರಂನಲ್ಲಿ ಕೆಲಸ ಮಾಡುವವರು, ಕೋಳಿ ಸಾಕಿರುವ ಮನೆಯವರು ಹಕ್ಕಿ ಜ್ವರಕ್ಕೆ ಸೆರೆಯಾಗುತ್ತಾರೆ. ಪಕ್ಷಿಗಳನ್ನು, ಮೊಟ್ಟೆಯನ್ನು ಮಾರುವವರಿಗೂ, ಕತ್ತರಿಸುವವರಿಗೂ, ಕೋಳಿ ಮಾಂಸದ ಅಡುಗೆ ಮಾಡುವವರಿಗೂ ಹಕ್ಕಿ ಜ್ವರ ಅಂಟುವ ಸಂಭವ ಇರುತ್ತದೆ. ರೋಗಾಣುಗಳು ಮುಖ್ಯವಾಗಿ ಉಸಿರಾಡುವ ಗಾಳಿಯೊಂದಿಗೆ ಮಾನವನ ದೇಹ ಸೇರುತ್ತವೆ. ಮನುಷ್ಯನಿಗೆ ಅಂಟಿದ ಸೋಂಕು ಮತ್ತೊಬ್ಬರಿಗೆ ಅಂಟುವುದಿಲ್ಲ. ಹಾಗೇನಾದರೂ ಆಗಿದ್ದರೆ ಸೋಂಕು ಅತ್ಯಂತ ತೀವ್ರಗತಿಯಲ್ಲಿ ಹರಡಿ ಮನುಷ್ಯರ ಮಾರಣಹೋಮವೇ ನಡೆದುಹೋಗುತ್ತಿತ್ತು.

ಈ ರೋಗದ ಲಕ್ಷಣಗಳು:-

ಹಕ್ಕಿ ಜ್ವರದ ಲಕ್ಷಣಗಳು ಸಾಮಾನ್ಯವಾಗಿ ಹೆಚ್1ಏನ್1 ಜ್ವರದ ಲಕ್ಷಣಗಳನ್ತಯೇ ಇರುತ್ತವೆ.

  • ಈ ರೋಗದ ಸೋಂಕಿಗೆ ಒಳಗಾದ ವ್ಯಕ್ತಿಗಳಲ್ಲಿ 2-3 ದಿನದಲ್ಲಿ ರೋಗ ಲಕ್ಷಣಗಳು ಪ್ರಕಟವಾಗುತ್ತವೆ.
  • ಜ್ವರ,ಕೆಮ್ಮು,ಶೀತ,ತಲೆನೋವು,ಗಂಟಲು ಕೆರೆತ,ನೆಗಡಿ,ಸ್ನಾಯುಗಳಲ್ಲಿ ನೋವು,ಮತ್ತು ಆಯಾಸ ಕಾಣಿಸಿಕೊಳ್ಳುತ್ತದೆ.
  • ಕೆಲವೊಮ್ಮೆ ವಾಂತಿ ಮತ್ತು ಭೇದಿ ಆಗಬಹುದು.ಉಸಿರಾಟದಲ್ಲಿ ತೊಂದರೆ ಕಾಣಿಸಬಹುದು.
  • ಹಕ್ಕಿ ಜ್ವರದಿಂದ ಉಸಿರಾಟ ಸಮಸ್ಯೆ ಎದುರಾಗಿ ಸಾವು ಸಂಭವಿಸಬಹುದು.
  • ಕಾಯಿಲೆ ಆರಂಭದ 48 ಗಂಟೆಗಳಲ್ಲಿ ಔಷಧ ತೆಗೆದುಕೊಂಡರೆ ಪರಿಣಾಮ ಹೆಚ್ಚು.

ಮುನ್ನೆಚ್ಚರಿಕೆ ಕ್ರಮಗಳು:-

ಹಕ್ಕಿ ಜ್ವರ ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಜನರು ಕೆಲವು ಮುನ್ನೆಚ್ಚರಿಕ ಕ್ರಮಗಳನ್ನು ಕೈ ಗೊಂಡರೆ ಹಕ್ಕಿ ಜ್ವರದ ಸೋಂಕು ಹರಡದಂತೆ ತಡೆಯಬಹುದು…

  • ಶಂಕಿತ ಹಕ್ಕಿ ಜ್ವರ ಪೀಡಿತ ಕೋಳಿಗಳು,ಹಕ್ಕಿಗಳು ಹಾಗೂ ಬಾತು ಕೋಳಿಗಳ ಸಂಪರ್ಕಕ್ಕೆ ಬರದಂತೆ ಎಚ್ಚರವಹಿಸಬೇಕು.
  • ಬೇರೆಯವರ ಮನೆಗೆ ಭೇಟಿ ನೀಡಿದಾಗ ಅಲ್ಲಿರುವ ಶಂಕಿತ ಹಕ್ಕಿ ಜ್ವರ ಪೀಡಿತ ಕೋಳಿ ಅಥವಾ ಹಕ್ಕಿಗಳನ್ನು ಮುಟ್ಟಬಾರದು.
  • ಕೋಳಿ ಮತ್ತು ಹಕ್ಕಿಗಳ ಮಾಂಸವನ್ನು ಹಾಗೂ ಮೊಟ್ಟೆಗಳನ್ನು ಸೂಕ್ತ ರೀತಿಯಲ್ಲಿ ಬೇಯಿಸಿ ತಿನ್ನುವುದು ಸುರಕ್ಷಿತ.
  • ಕೋಳಿ ಮತ್ತು ಹಕ್ಕಿಗಳನ್ನು ಮನೆಯಲ್ಲಿಯೇ ಕತ್ತರಿಸಬೇಡಿ. ಇವುಗಳನ್ನು ಮನೆಯಲ್ಲಿಯೇ ಕತ್ತರಿಸಿ ಕೊಲ್ಲುವುದರಿಂದ ಸೋಂಕು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ.
  • ಹಕ್ಕಿಜ್ವರದ ಚಿಕಿತ್ಸೆಯಲ್ಲಿ “ಟ್ಯಾಮಿಫ್ಲೂ’ ಮಾತ್ರೆ ಬಳಸಲಾಗುತ್ತದೆ. ಮಾತ್ರೆಗಳ ಸ೦ಗ್ರಹ ಸಾಕಷ್ಟು ಇರುವುದರಿ೦ದ ಚಿಕಿತ್ಸೆಗೂ ಯಾವುದೇ ತೊ೦ದರೆಯಾಗುವುದಿಲ್ಲ ಎ೦ದು ಆರೋಗ್ಯ ಇಲಾಖೆ ಸಹ ಮಾಹಿತಿ ನೀಡಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ನಿಮ್ಮ ಜಮೀನು ವ್ಯವಹಾರಕ್ಕೆ ಇದು ಕಡ್ಡಾಯವಲ್ಲ..?ಇದು ಕೇವಲ ವದಂತಿ ಎಂದ ಕೇಂದ್ರ ಸರ್ಕಾರ..!

    ಆಸ್ತಿ ವಹಿವಾಟಿಗೆ ಆಧಾರ್‌ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

  • ಸುದ್ದಿ

    FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

    ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…

  • ಸುದ್ದಿ

    ಅಂತರ್ಜಾತಿ ಮದುವೆ ಆದ್ರೆ ಸಿಗುತ್ತೆ ಲಕ್ಷ ಲಕ್ಷ ಹಣ…ಹೆಚ್ಚಿನ ಮಾಹಿತಿಗೆ ಈ ಸುದ್ದಿ ನೋಡಿ

    ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…

  • ಸುದ್ದಿ

    ಬಿಲ್ಡಿಂಗ್ ಕುಸಿದು 6 ಮಂದಿ ಸೇನಾ ಸಿಬ್ಬಂದಿ ಸೇರಿ ಓರ್ವ ನಾಗರೀಕ ಸಾವು ; ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ…..!

    ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್‍ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್‍ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…

  • ಸುದ್ದಿ

    ನೀರಿಗಾಗಿ ಕಾದು ಕುಳಿತಿದ್ದವರು ನಲ್ಲಿ ತಿರುವಿದ ತಕ್ಷಣ ಬಂತು ರಕ್ತ…ಕಾರಣ?

    ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…

  • ಉಪಯುಕ್ತ ಮಾಹಿತಿ, ಸೌಂದರ್ಯ

    17 ವರ್ಷಗಳ ನಂತರ ಭಾರತಕ್ಕೆ ಒಲಿದ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ..!ತಿಲಿಲಿಯಲು ಈ ಲೇಖನ ಓದಿ ..

    17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.