ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ. ಎಲ್ಲರಿಗೂ ಆಭರಣಗಳನ್ನು ಧರಿಸಿ ಓಡಾಡಬೇಕೆಂಬ ಆಸೆ ಇದ್ದೇ ಇರುತ್ತದೆ.

ಅದರಲ್ಲೂ ಮದುಮಗಳು ಇನ್ನೂ ಹೆಚ್ಚಿನ ಆಸೆ ಹೊಂದಿರುತ್ತಾಳೆ. ಆಭರಣ ಧರಿಸುವ ಸಮಯಕ್ಕಾಗಿಯೇ ಎದುರು ನೋಡುತ್ತಿರುತ್ತಾಳೆ. ಹೀಗೆ ಆಸೆ ಪಡುವುದು ಹೆಂಗಸರಲ್ಲಿ ಸರ್ವೇಸಾಮಾನ್ಯವಾದದ್ದೇ ಆದರೂ ಈ ಯುವದಿದಕ್ಕೆ ಭಿನ್ನವೆಂದೇ ಹೇಳಬಹುದು. ವರನನ್ನು ಆಕೆ ಚಿನ್ನವೇ ತನಗೆ ಬೇಡ ಎಂದು, ತಾನು ಬಯಸಿದ್ದನ್ನು ನೀಡಿದರೆ ಸಾಕೆಂದು ಹೇಳಿದ್ದಾಳೆ. ಆಕೆ ಬಯಸಿದ್ದಾದರೂ ಏನನ್ನು …?

ಆಕೆಯ ಹೆಸರು ಸಾಹ್ಲಾ ನೆಕ್ಯುಲ್. ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಪೊಲಿಟಿಕಲ್ ಸೈನ್ಸ್ ವಿದ್ಯಾಭ್ಯಾಸ ಮಾಡಿದ್ದಾಳೆ. ಮಲಯಾಳದ ಮುಸ್ಲಿಂ ಕುಟುಂಬದವರಾದರೂ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಆಕೆಯ ಮದುವೆಗೆ ನಿಶ್ಚಯವಾಗಿದೆ. ಮುಸ್ಲಿಂ ಸಂಪ್ರದಾಯದಲ್ಲಿ ಮದುಮಗನು ಮದುಮಗಳಿಗೆ ಮೊಹರ್ ರೂಪದಲ್ಲಿ ಆಕೆ ಬಯಸಿದ್ದನ್ನು ಕೊಡುವ ಆಚಾರವಿದೆ.

ಸಾಮಾನ್ಯವಾಗಿ ಯಾವುದೇ ಮುಸ್ಲಿಂ ಮದುವೆ ಸಮಾರಂಭಗಳಲ್ಲಿ ಮದುಮಗಳಿಗೆ ಚಿನ್ನದ ಆಭರಣಗಳನ್ನೇ ಮೊಹರ್ ಆಗಿ ನೀಡುತ್ತಾರೆ. ಮದುಮಗಳು ತನಗೆ ಇಂತಹದ್ದೇ ಬೇಕೆಂದು ಬಯಸಿದ ಸಂದರ್ಭಗಳು ಎಲ್ಲೂ ಕಾಣಿಸಿಕೊಂಡಿಲ್ಲವಂತೆ. ಸಾಹ್ಲಾ ಎಲ್ಲರಿಗೂ ಭಿನ್ನವಾಗಿ ತನಗೆ ಚಿನ್ನದ ಆಭರಣಗಳು ಬೇಡವೆಂದು, ಬದಲಾಗಿ ಅಮೂಲ್ಯವಾದ 50 ಪುಸ್ತಕಗಳು ಬೇಕೆಂದು ಕೋರಿದ್ದಾಳೆ. ಮೊದಲು ಈ ಮಾತಿಗೆ ಎಲ್ಲರೂ ಆಶ್ಚರ್ಯಪಟ್ಟರೂ , ಸಾಹ್ಲಾ ಬಯಸಿದ್ದನ್ನು ಮೆಚ್ಚಿಕೊಂಡಿದ್ದಾರೆ.

ಸಾಧಾರಣವಾಗಿ ಮದುಮಗಳು ಮೊಹರ್ ರೂಪದಲ್ಲಿ ಏನನ್ನೂ ಬಯಸದಿದ್ದರೂ, ಸಂಪ್ರದಾಯದಂತೆ ಆಕೆ ಬಯಸಿದ್ದನ್ನು ನೀಡಲೇಬೇಕು. ಸ್ತ್ರೀಯರಿಗೆ ಸ್ವಂತಃ ಆಲೋಚಿಸುವ, ಸ್ವತಂತ್ರವಾಗಿ ಮಾತಾಡುವ ಹಕ್ಕನ್ನು ಕೊಡದೆ, ಪೂರ್ವ ಕಾಲದಿಂದಲೂ ಕೇವಲ ಚಿನ್ನದ ಆಭರಣಗಳನ್ನು ಕೊಡುತ್ತಾ ಅವರ ಹಕ್ಕನ್ನು ಕಡೆಗೆಣಿಸುತ್ತಾ ಬಂದಿದ್ದಾರೆ. ಆದರೆ ತಾನು ಹಾಗಲ್ಲ ಎಂದು, ಆದ್ದರಿಂದಲೇ ಚಿನ್ನಕ್ಕೆ ಬದಲಾಗಿ ಪುಸ್ತಕಗಳನ್ನು ಕೇಳಿದ್ದೇನೆ ಎನ್ನುತ್ತಾಳೆ.

ಇದರಿಂದ ಚಿನ್ನ ಕೊಳ್ಳಬೇಕೆಂಬ ಆತಂಕ ವರನ ಕಡೆಯವರಿಗೆ ಇರುವುದಿಲ್ಲ ಎಂದು, ಅವರು ಒತ್ತಡಕ್ಕೆ ಗುರಿಯಾಗುವ ಅವಶ್ಯಕತೆಯೂ ಇರುವುದಿಲ್ಲ ಎಂದು ಹೇಳುತ್ತಾಳೆ. ಸಾಹ್ಲಾ ಕೋರಿಕೆಯಂತೆಯೇ ವರನು ಆಕೆ ಕೇಳಿದ 50 ಪುಸ್ತಕಗಳನ್ನು ಕೊಂಡು ತಂದು ಮೆಹರ್ ರೂಪದಲ್ಲಿ ನೀಡಿದ್ದಾನೆ.

ಚಿನ್ನದ ವಿಷಯದಲ್ಲಿ ನಿರಾಸಕ್ತಿಯನ್ನು ತೋರಿರುವುದೇ ಅಲ್ಲದೆ, ಮೊಹರ್ ವಿಷಯದಲ್ಲಿ ಪ್ರತಿಯೊಬ್ಬ ಮುಸ್ಲಿಂ ಯುವತಿ ತಪ್ಪದೆ ತನ್ನ ಹಕ್ಕನ್ನು ತಿಳಿದುಕೊಳ್ಳಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ. ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್. ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ. ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಇತ್ತೀಚೆಗೆ ಹೊರಬಂದ…
ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…
ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…