ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ. ಎಲ್ಲರಿಗೂ ಆಭರಣಗಳನ್ನು ಧರಿಸಿ ಓಡಾಡಬೇಕೆಂಬ ಆಸೆ ಇದ್ದೇ ಇರುತ್ತದೆ.

ಅದರಲ್ಲೂ ಮದುಮಗಳು ಇನ್ನೂ ಹೆಚ್ಚಿನ ಆಸೆ ಹೊಂದಿರುತ್ತಾಳೆ. ಆಭರಣ ಧರಿಸುವ ಸಮಯಕ್ಕಾಗಿಯೇ ಎದುರು ನೋಡುತ್ತಿರುತ್ತಾಳೆ. ಹೀಗೆ ಆಸೆ ಪಡುವುದು ಹೆಂಗಸರಲ್ಲಿ ಸರ್ವೇಸಾಮಾನ್ಯವಾದದ್ದೇ ಆದರೂ ಈ ಯುವದಿದಕ್ಕೆ ಭಿನ್ನವೆಂದೇ ಹೇಳಬಹುದು. ವರನನ್ನು ಆಕೆ ಚಿನ್ನವೇ ತನಗೆ ಬೇಡ ಎಂದು, ತಾನು ಬಯಸಿದ್ದನ್ನು ನೀಡಿದರೆ ಸಾಕೆಂದು ಹೇಳಿದ್ದಾಳೆ. ಆಕೆ ಬಯಸಿದ್ದಾದರೂ ಏನನ್ನು …?

ಆಕೆಯ ಹೆಸರು ಸಾಹ್ಲಾ ನೆಕ್ಯುಲ್. ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಪೊಲಿಟಿಕಲ್ ಸೈನ್ಸ್ ವಿದ್ಯಾಭ್ಯಾಸ ಮಾಡಿದ್ದಾಳೆ. ಮಲಯಾಳದ ಮುಸ್ಲಿಂ ಕುಟುಂಬದವರಾದರೂ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಆಕೆಯ ಮದುವೆಗೆ ನಿಶ್ಚಯವಾಗಿದೆ. ಮುಸ್ಲಿಂ ಸಂಪ್ರದಾಯದಲ್ಲಿ ಮದುಮಗನು ಮದುಮಗಳಿಗೆ ಮೊಹರ್ ರೂಪದಲ್ಲಿ ಆಕೆ ಬಯಸಿದ್ದನ್ನು ಕೊಡುವ ಆಚಾರವಿದೆ.

ಸಾಮಾನ್ಯವಾಗಿ ಯಾವುದೇ ಮುಸ್ಲಿಂ ಮದುವೆ ಸಮಾರಂಭಗಳಲ್ಲಿ ಮದುಮಗಳಿಗೆ ಚಿನ್ನದ ಆಭರಣಗಳನ್ನೇ ಮೊಹರ್ ಆಗಿ ನೀಡುತ್ತಾರೆ. ಮದುಮಗಳು ತನಗೆ ಇಂತಹದ್ದೇ ಬೇಕೆಂದು ಬಯಸಿದ ಸಂದರ್ಭಗಳು ಎಲ್ಲೂ ಕಾಣಿಸಿಕೊಂಡಿಲ್ಲವಂತೆ. ಸಾಹ್ಲಾ ಎಲ್ಲರಿಗೂ ಭಿನ್ನವಾಗಿ ತನಗೆ ಚಿನ್ನದ ಆಭರಣಗಳು ಬೇಡವೆಂದು, ಬದಲಾಗಿ ಅಮೂಲ್ಯವಾದ 50 ಪುಸ್ತಕಗಳು ಬೇಕೆಂದು ಕೋರಿದ್ದಾಳೆ. ಮೊದಲು ಈ ಮಾತಿಗೆ ಎಲ್ಲರೂ ಆಶ್ಚರ್ಯಪಟ್ಟರೂ , ಸಾಹ್ಲಾ ಬಯಸಿದ್ದನ್ನು ಮೆಚ್ಚಿಕೊಂಡಿದ್ದಾರೆ.

ಸಾಧಾರಣವಾಗಿ ಮದುಮಗಳು ಮೊಹರ್ ರೂಪದಲ್ಲಿ ಏನನ್ನೂ ಬಯಸದಿದ್ದರೂ, ಸಂಪ್ರದಾಯದಂತೆ ಆಕೆ ಬಯಸಿದ್ದನ್ನು ನೀಡಲೇಬೇಕು. ಸ್ತ್ರೀಯರಿಗೆ ಸ್ವಂತಃ ಆಲೋಚಿಸುವ, ಸ್ವತಂತ್ರವಾಗಿ ಮಾತಾಡುವ ಹಕ್ಕನ್ನು ಕೊಡದೆ, ಪೂರ್ವ ಕಾಲದಿಂದಲೂ ಕೇವಲ ಚಿನ್ನದ ಆಭರಣಗಳನ್ನು ಕೊಡುತ್ತಾ ಅವರ ಹಕ್ಕನ್ನು ಕಡೆಗೆಣಿಸುತ್ತಾ ಬಂದಿದ್ದಾರೆ. ಆದರೆ ತಾನು ಹಾಗಲ್ಲ ಎಂದು, ಆದ್ದರಿಂದಲೇ ಚಿನ್ನಕ್ಕೆ ಬದಲಾಗಿ ಪುಸ್ತಕಗಳನ್ನು ಕೇಳಿದ್ದೇನೆ ಎನ್ನುತ್ತಾಳೆ.

ಇದರಿಂದ ಚಿನ್ನ ಕೊಳ್ಳಬೇಕೆಂಬ ಆತಂಕ ವರನ ಕಡೆಯವರಿಗೆ ಇರುವುದಿಲ್ಲ ಎಂದು, ಅವರು ಒತ್ತಡಕ್ಕೆ ಗುರಿಯಾಗುವ ಅವಶ್ಯಕತೆಯೂ ಇರುವುದಿಲ್ಲ ಎಂದು ಹೇಳುತ್ತಾಳೆ. ಸಾಹ್ಲಾ ಕೋರಿಕೆಯಂತೆಯೇ ವರನು ಆಕೆ ಕೇಳಿದ 50 ಪುಸ್ತಕಗಳನ್ನು ಕೊಂಡು ತಂದು ಮೆಹರ್ ರೂಪದಲ್ಲಿ ನೀಡಿದ್ದಾನೆ.

ಚಿನ್ನದ ವಿಷಯದಲ್ಲಿ ನಿರಾಸಕ್ತಿಯನ್ನು ತೋರಿರುವುದೇ ಅಲ್ಲದೆ, ಮೊಹರ್ ವಿಷಯದಲ್ಲಿ ಪ್ರತಿಯೊಬ್ಬ ಮುಸ್ಲಿಂ ಯುವತಿ ತಪ್ಪದೆ ತನ್ನ ಹಕ್ಕನ್ನು ತಿಳಿದುಕೊಳ್ಳಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…
ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…
ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು.
ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…