ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ. ಎಲ್ಲರಿಗೂ ಆಭರಣಗಳನ್ನು ಧರಿಸಿ ಓಡಾಡಬೇಕೆಂಬ ಆಸೆ ಇದ್ದೇ ಇರುತ್ತದೆ.

ಅದರಲ್ಲೂ ಮದುಮಗಳು ಇನ್ನೂ ಹೆಚ್ಚಿನ ಆಸೆ ಹೊಂದಿರುತ್ತಾಳೆ. ಆಭರಣ ಧರಿಸುವ ಸಮಯಕ್ಕಾಗಿಯೇ ಎದುರು ನೋಡುತ್ತಿರುತ್ತಾಳೆ. ಹೀಗೆ ಆಸೆ ಪಡುವುದು ಹೆಂಗಸರಲ್ಲಿ ಸರ್ವೇಸಾಮಾನ್ಯವಾದದ್ದೇ ಆದರೂ ಈ ಯುವದಿದಕ್ಕೆ ಭಿನ್ನವೆಂದೇ ಹೇಳಬಹುದು. ವರನನ್ನು ಆಕೆ ಚಿನ್ನವೇ ತನಗೆ ಬೇಡ ಎಂದು, ತಾನು ಬಯಸಿದ್ದನ್ನು ನೀಡಿದರೆ ಸಾಕೆಂದು ಹೇಳಿದ್ದಾಳೆ. ಆಕೆ ಬಯಸಿದ್ದಾದರೂ ಏನನ್ನು …?

ಆಕೆಯ ಹೆಸರು ಸಾಹ್ಲಾ ನೆಕ್ಯುಲ್. ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಪೊಲಿಟಿಕಲ್ ಸೈನ್ಸ್ ವಿದ್ಯಾಭ್ಯಾಸ ಮಾಡಿದ್ದಾಳೆ. ಮಲಯಾಳದ ಮುಸ್ಲಿಂ ಕುಟುಂಬದವರಾದರೂ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಆಕೆಯ ಮದುವೆಗೆ ನಿಶ್ಚಯವಾಗಿದೆ. ಮುಸ್ಲಿಂ ಸಂಪ್ರದಾಯದಲ್ಲಿ ಮದುಮಗನು ಮದುಮಗಳಿಗೆ ಮೊಹರ್ ರೂಪದಲ್ಲಿ ಆಕೆ ಬಯಸಿದ್ದನ್ನು ಕೊಡುವ ಆಚಾರವಿದೆ.

ಸಾಮಾನ್ಯವಾಗಿ ಯಾವುದೇ ಮುಸ್ಲಿಂ ಮದುವೆ ಸಮಾರಂಭಗಳಲ್ಲಿ ಮದುಮಗಳಿಗೆ ಚಿನ್ನದ ಆಭರಣಗಳನ್ನೇ ಮೊಹರ್ ಆಗಿ ನೀಡುತ್ತಾರೆ. ಮದುಮಗಳು ತನಗೆ ಇಂತಹದ್ದೇ ಬೇಕೆಂದು ಬಯಸಿದ ಸಂದರ್ಭಗಳು ಎಲ್ಲೂ ಕಾಣಿಸಿಕೊಂಡಿಲ್ಲವಂತೆ. ಸಾಹ್ಲಾ ಎಲ್ಲರಿಗೂ ಭಿನ್ನವಾಗಿ ತನಗೆ ಚಿನ್ನದ ಆಭರಣಗಳು ಬೇಡವೆಂದು, ಬದಲಾಗಿ ಅಮೂಲ್ಯವಾದ 50 ಪುಸ್ತಕಗಳು ಬೇಕೆಂದು ಕೋರಿದ್ದಾಳೆ. ಮೊದಲು ಈ ಮಾತಿಗೆ ಎಲ್ಲರೂ ಆಶ್ಚರ್ಯಪಟ್ಟರೂ , ಸಾಹ್ಲಾ ಬಯಸಿದ್ದನ್ನು ಮೆಚ್ಚಿಕೊಂಡಿದ್ದಾರೆ.

ಸಾಧಾರಣವಾಗಿ ಮದುಮಗಳು ಮೊಹರ್ ರೂಪದಲ್ಲಿ ಏನನ್ನೂ ಬಯಸದಿದ್ದರೂ, ಸಂಪ್ರದಾಯದಂತೆ ಆಕೆ ಬಯಸಿದ್ದನ್ನು ನೀಡಲೇಬೇಕು. ಸ್ತ್ರೀಯರಿಗೆ ಸ್ವಂತಃ ಆಲೋಚಿಸುವ, ಸ್ವತಂತ್ರವಾಗಿ ಮಾತಾಡುವ ಹಕ್ಕನ್ನು ಕೊಡದೆ, ಪೂರ್ವ ಕಾಲದಿಂದಲೂ ಕೇವಲ ಚಿನ್ನದ ಆಭರಣಗಳನ್ನು ಕೊಡುತ್ತಾ ಅವರ ಹಕ್ಕನ್ನು ಕಡೆಗೆಣಿಸುತ್ತಾ ಬಂದಿದ್ದಾರೆ. ಆದರೆ ತಾನು ಹಾಗಲ್ಲ ಎಂದು, ಆದ್ದರಿಂದಲೇ ಚಿನ್ನಕ್ಕೆ ಬದಲಾಗಿ ಪುಸ್ತಕಗಳನ್ನು ಕೇಳಿದ್ದೇನೆ ಎನ್ನುತ್ತಾಳೆ.

ಇದರಿಂದ ಚಿನ್ನ ಕೊಳ್ಳಬೇಕೆಂಬ ಆತಂಕ ವರನ ಕಡೆಯವರಿಗೆ ಇರುವುದಿಲ್ಲ ಎಂದು, ಅವರು ಒತ್ತಡಕ್ಕೆ ಗುರಿಯಾಗುವ ಅವಶ್ಯಕತೆಯೂ ಇರುವುದಿಲ್ಲ ಎಂದು ಹೇಳುತ್ತಾಳೆ. ಸಾಹ್ಲಾ ಕೋರಿಕೆಯಂತೆಯೇ ವರನು ಆಕೆ ಕೇಳಿದ 50 ಪುಸ್ತಕಗಳನ್ನು ಕೊಂಡು ತಂದು ಮೆಹರ್ ರೂಪದಲ್ಲಿ ನೀಡಿದ್ದಾನೆ.

ಚಿನ್ನದ ವಿಷಯದಲ್ಲಿ ನಿರಾಸಕ್ತಿಯನ್ನು ತೋರಿರುವುದೇ ಅಲ್ಲದೆ, ಮೊಹರ್ ವಿಷಯದಲ್ಲಿ ಪ್ರತಿಯೊಬ್ಬ ಮುಸ್ಲಿಂ ಯುವತಿ ತಪ್ಪದೆ ತನ್ನ ಹಕ್ಕನ್ನು ತಿಳಿದುಕೊಳ್ಳಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್ನಗರ ಜಿಲ್ಲೆಯ ವಾಘಪುರ್ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…
ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ. ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…
ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…
ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್ಸಿ ಕಾರ್ಡ್ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್ಸಿ ಕಾರ್ಡ್ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ, ಆಗಸ್ಟ್ 1 ರಿಂದ ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್ ಪೊಲೀಸರು ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…
ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….