ವಿಚಿತ್ರ ಆದರೂ ಸತ್ಯ

ಈ ಮಹಿಳೆಯ ಕಾಲಿನಿಂದ ಸೂಜಿ, ಸಿರಿಂಜಿನ ಮುಳ್ಳು, ಪಿನ್ನುಗಳು ಹೊರಬರುತ್ತಿವೆ..!ತಿಳಿಯಲು ಈ ಲೇಖನ ಓದಿ…

642

ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.  ಆದರೆ ಕಾಲಿನಿಂದ ಸೂಜಿ ಹೊರಬರುವುದೆಂದರೆ? ಇದು ನೈಸರ್ಗಿಕವಂತೂ ಆಗಿರಲಿಕ್ಕಿಲ್ಲ.

ಆಕೆಯೇ ತಾನೇ ಚುಚ್ಚಿಕೊಂಡು ಬಳಿಕ ಇದು ದೇಹದೊಳಗಿನಿಂದ ಬರುತ್ತಿದೆ ಎನ್ನುತ್ತಿದ್ದಾಳೆಯೇ? ಈ ಪ್ರಶ್ನೆಗೆ ಆಕೆ ಸ್ಪಷ್ಟವಾಗಿ ನಿರಾಕರಿಸುತ್ತಾ ಇವೆಲ್ಲವೂ ತಾವೇ ತಾವಾಗಿ ಹೊರಬರುತ್ತಿವೆ ಎಂದು ಹೇಳುತ್ತಾಳೆ. ಇದಲ್ಲೇನೋ ಮೋಸ ಇದೆ. ಈ ಮಹಿಳೆಯೇ ಮೋಸ ಮಾಡುತ್ತಿರಬಹುದು ಅಥವಾ ಮೋಸದಿಂದ ಆಕೆಯ ದೇಹದಲ್ಲಿ ಬೇರೆ ಯಾರೋ ಸೂಜಿಗಳನ್ನು ಚುಚ್ಚಿರಬಹುದು ಎಂಬ ಅನುಮಾನ ಕಾಡುತ್ತದೆ.

ಈಕೆ ಈ ಸ್ಥಿತಿಯಿಂದ ಬಳಲಲು ತೊಡಗಿ ಬಹುಕಾಲವೇ ಆಗಿದೆ:-

ಅನುಸೂಯ್ಯಾ ದೇವಿ ಎಂಬ ಹೆಸರಿನ ಈ ಮಹಿಳೆ ಉತ್ತರಪ್ರದೇಶ ರಾಜ್ಯದ ಫತೆಹ್ ಪುರ್ ಜಿಲ್ಲೆಯ ಒಂದು ಪುಟ್ಟ ಗ್ರಾಮದ ನಿವಾಸಿಯಾಗಿದ್ದಾಳೆ. ಈಕೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜುಗಳು ಹಾಗೂ ಪಿನ್ನುಗಳು ಹೊರಬರುವುದು 2012 ರಿಂದ ಪ್ರಾರಂಭವಾಯಿತು ಎಂದು ವಿವರಿಸಿದ್ದಾಳೆ.

ಈಕೆ ವೈದ್ಯಕೀಯ ನೆರವು:-

ಸುಮಾರು ಐದು ವರ್ಷಗಳಿಂದಲೂ ಸತತವಾಗಿ ಸೂಜಿಗಳ ಯಾತನೆಯಿಂದ ಬಳಲಿದ ಈಕೆ ಮೊದಮೊದಲು ನೋವನ್ನು ಸಹಿಸಿಕೊಳ್ಳಲು ಶಕ್ತಳಿದ್ದರೂ ಈಗ ಹೆಚ್ಚೂ ಕಡಿಮೆ ಸೋತು ಹೋಗಿದ್ದಾಳೆ. ನೋವಿಲ್ಲದೇ ನಡೆಯಲು, ಕುಳಿತುಕೊಳ್ಳಲು ಅಥವಾ ನಿಲ್ಲಲೂ ಆಕೆಗೆ ಸಾಧ್ಯವಿಲ್ಲ. ಈ ನೋವನ್ನು ವಿವರಿಸಿ ಆಕೆ ಹಲವಾರು ವೈದ್ಯರ ನೆರವನ್ನೂ ಯಾಚಿಸಿದ್ದಳು.

ಈಕೆಯ ವಿವರಣೆಯ ಪ್ರಕಾರ:-

ಈ ಸ್ಥಿತಿ ಹೇಗೆ ಎದುರಾಯಿತು ಎಂಬ ಪ್ರಶ್ನೆಗೆ ಆಕೆ ಹೀಗೆ ಹೇಳುತ್ತಾಳೆ: “ನನಗೆ ಈ ತೊಂದರೆ ಕಳೆದ ಐದು ವರ್ಷಗಳಿಂದಲೂ ಇದೆ. ಸೂಜಿಗಳು ನನ್ನ ಕಾಲಿನಿಂದ ಹೊರಬರುತ್ತವೆ. ಇದು ಹೇಗೆ, ಏಕೆ ಎಂದು ನನಗೆ ವಿವರಿಸಲು ಸಾಧ್ಯವಿಲ್ಲ. ಇವು ಹೇಗೆ ಒಳಗೆ ಬಂದವು ಎಂದು ನನಗೆ ಗೊತ್ತಿಲ್ಲ. ಆದರೆ ಈ ನೋವಿನಿಂದಂತೂ ಜರ್ಝರಿತಳಾಗಿದ್ದೇನೆ, ಇನ್ನು ಸಹಿಸಲು ಸಾಧ್ಯವಿಲ್ಲ”

ವೈದ್ಯರ ವಿವರಣೆ:-

ವೈದ್ಯರು ಇದೊಂದು ಮಾನಸಿಕ ರೋಗ ಎಂದು ಊಹಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ರೋಗಿ ತನಗೆ ಅರಿವೇ ಇಲ್ಲದಂತೆ ಕೆಲವು ಮೊನಚಾದ ವಸ್ತುಗಳನ್ನು ತನ್ನ ದೇಹದೊಳಗೆ ತೂರಿಸಿಕೊಳ್ಳುವುದು ಒಂದು ಮಾನಸಿಕ ವ್ಯಾಧಿಯ ಲಕ್ಷಣವಾಗಿದೆ. ಈ ಮಹಿಳೆಯೂ ಇಂತಹ ಯಾವುದೋ ಮಾನಸಿಕ ವ್ಯಾಧಿಗೆ ತುತ್ತಾಗಿದ್ದು ತನಗರಿವಿಲ್ಲದಂತೆಯೇ ಚೂಪಾದ ವಸ್ತುಗಳನ್ನು ತನ್ನ ಕಾಲುಗಳ ಒಳಗೆ ಚುಚ್ಚಿಕೊಳ್ಳುತ್ತಿದ್ದರಬಹುದು. ಆದರೆ ಈ ಆರೋಪವನ್ನು ಅನುಸೂಯ್ಯಾ ಸ್ಪಷ್ಟವಾಗಿ ತಳ್ಳಿ ಹಾಕಿ ತನಗಾವುದೇ ರೋಗವಿಲ್ಲ ಹಾಗೂ ತಾನು ತನ್ನ ಕಾಲುಗಳಿಗೆ ಚುಚ್ಚಿಕೊಂಡಿಲ್ಲ ಎಂದೇ ವಾದಿಸುತ್ತಾಳೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಲ್‌ಪಿಜಿ ಗ್ರಾಹಕರಿಗೆ ಗುಡ್ ನ್ಯೂಸ್: ಸಬ್ಸಿಡಿ ರಹಿತ ಅಡುಗೆ ಅನಿಲ ದರ 100 ರೂ. ಇಳಿಕೆ

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್‌ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ…

  • ಆರೋಗ್ಯ

    ಎಚ್ಚರ! ಹುಟ್ಟುವ ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಕಣ್ಣಿನ ಕ್ಯಾನ್ಸರ್, ಇದರ ಲಕ್ಷಣಗಳೇನು?

    ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್‌ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…

  • ಸುದ್ದಿ

    ವೈರಲ್ ಆಯ್ತು ಧೋನಿ ತನ್ನ ಹೆಂಡತಿ ಸಾಕ್ಷಿಗೆ ಚಪ್ಪಲಿ ತೊಡಿಸುತ್ತಿರುವ ಈ ಫೋಟೋ..!

    ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…

  • ಸುದ್ದಿ, ಸ್ಪೂರ್ತಿ

    100 ರೂ.ಗೆ ರೆಡಿಯಾಗುತ್ತೆ ಶಾಲಾ ಸಮವಸ್ತ್ರ. ಟೈಲರ್ ಆದ್ರೂ ಸಮಾಜಮುಖಿ ಸೇವೆ 5 ವರ್ಷದಲ್ಲಿ 30 ಸಾವಿರಕ್ಕೂ ಹೆಚ್ಚು ಯೂನಿಫಾರ್ಮ್.

    ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ. ಬೇರೆಯವರ ಬಳಿ ಒಂದು ಜೊತೆ ಬಟ್ಟೆ…

  • ಸುದ್ದಿ, ಸ್ಪೂರ್ತಿ

    ಒಂದು ದಿನದ ಮಟ್ಟಿಗೆ DCPಯಾಗಿ, ತನ್ನ ತಂದೆಗೆ ಆದೇಶ ನೀಡಿದ ವಿಧ್ಯಾರ್ಥಿನಿ..!ಈಕೆ ಡಿಸಿಪಿ ಆಗಿದ್ದು ಹೇಗೆ ಗೊತ್ತಾ..?

    ಐಎಸ್​​ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್​ ಕಮಿಷನರ್​​ ಆಗುವ ಅವಕಾಶ ನೀಡಲಾಗಿತ್ತು.  ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್​ ಫಾರ್​ ಎಜುಕೇಷನ್​ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್​​ 2 ಪರೀಕ್ಷೆಯಲ್ಲಿ ಶೇ. 99.25…

  • ದೇವರು-ಧರ್ಮ

    ಪ್ರತಿಯೊಬ್ಬ “ಹಿಂದೂ ಧರ್ಮ”ದವರು ಕೂಡ ತಿಳಿಯಲೇಬೇಕಾದ ಈ ವಿಷಯಗಳು..!ಏನೆಂದು ತಿಳಿಯಬೇಕಾದ್ರೆ ಈ ಲೇಖನ ಓದಿ…

    ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.