ವಿಚಿತ್ರ ಆದರೂ ಸತ್ಯ

ಈ ಮಹಿಳೆಯ ಕಾಲಿನಿಂದ ಸೂಜಿ, ಸಿರಿಂಜಿನ ಮುಳ್ಳು, ಪಿನ್ನುಗಳು ಹೊರಬರುತ್ತಿವೆ..!ತಿಳಿಯಲು ಈ ಲೇಖನ ಓದಿ…

639

ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.  ಆದರೆ ಕಾಲಿನಿಂದ ಸೂಜಿ ಹೊರಬರುವುದೆಂದರೆ? ಇದು ನೈಸರ್ಗಿಕವಂತೂ ಆಗಿರಲಿಕ್ಕಿಲ್ಲ.

ಆಕೆಯೇ ತಾನೇ ಚುಚ್ಚಿಕೊಂಡು ಬಳಿಕ ಇದು ದೇಹದೊಳಗಿನಿಂದ ಬರುತ್ತಿದೆ ಎನ್ನುತ್ತಿದ್ದಾಳೆಯೇ? ಈ ಪ್ರಶ್ನೆಗೆ ಆಕೆ ಸ್ಪಷ್ಟವಾಗಿ ನಿರಾಕರಿಸುತ್ತಾ ಇವೆಲ್ಲವೂ ತಾವೇ ತಾವಾಗಿ ಹೊರಬರುತ್ತಿವೆ ಎಂದು ಹೇಳುತ್ತಾಳೆ. ಇದಲ್ಲೇನೋ ಮೋಸ ಇದೆ. ಈ ಮಹಿಳೆಯೇ ಮೋಸ ಮಾಡುತ್ತಿರಬಹುದು ಅಥವಾ ಮೋಸದಿಂದ ಆಕೆಯ ದೇಹದಲ್ಲಿ ಬೇರೆ ಯಾರೋ ಸೂಜಿಗಳನ್ನು ಚುಚ್ಚಿರಬಹುದು ಎಂಬ ಅನುಮಾನ ಕಾಡುತ್ತದೆ.

ಈಕೆ ಈ ಸ್ಥಿತಿಯಿಂದ ಬಳಲಲು ತೊಡಗಿ ಬಹುಕಾಲವೇ ಆಗಿದೆ:-

ಅನುಸೂಯ್ಯಾ ದೇವಿ ಎಂಬ ಹೆಸರಿನ ಈ ಮಹಿಳೆ ಉತ್ತರಪ್ರದೇಶ ರಾಜ್ಯದ ಫತೆಹ್ ಪುರ್ ಜಿಲ್ಲೆಯ ಒಂದು ಪುಟ್ಟ ಗ್ರಾಮದ ನಿವಾಸಿಯಾಗಿದ್ದಾಳೆ. ಈಕೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜುಗಳು ಹಾಗೂ ಪಿನ್ನುಗಳು ಹೊರಬರುವುದು 2012 ರಿಂದ ಪ್ರಾರಂಭವಾಯಿತು ಎಂದು ವಿವರಿಸಿದ್ದಾಳೆ.

ಈಕೆ ವೈದ್ಯಕೀಯ ನೆರವು:-

ಸುಮಾರು ಐದು ವರ್ಷಗಳಿಂದಲೂ ಸತತವಾಗಿ ಸೂಜಿಗಳ ಯಾತನೆಯಿಂದ ಬಳಲಿದ ಈಕೆ ಮೊದಮೊದಲು ನೋವನ್ನು ಸಹಿಸಿಕೊಳ್ಳಲು ಶಕ್ತಳಿದ್ದರೂ ಈಗ ಹೆಚ್ಚೂ ಕಡಿಮೆ ಸೋತು ಹೋಗಿದ್ದಾಳೆ. ನೋವಿಲ್ಲದೇ ನಡೆಯಲು, ಕುಳಿತುಕೊಳ್ಳಲು ಅಥವಾ ನಿಲ್ಲಲೂ ಆಕೆಗೆ ಸಾಧ್ಯವಿಲ್ಲ. ಈ ನೋವನ್ನು ವಿವರಿಸಿ ಆಕೆ ಹಲವಾರು ವೈದ್ಯರ ನೆರವನ್ನೂ ಯಾಚಿಸಿದ್ದಳು.

ಈಕೆಯ ವಿವರಣೆಯ ಪ್ರಕಾರ:-

ಈ ಸ್ಥಿತಿ ಹೇಗೆ ಎದುರಾಯಿತು ಎಂಬ ಪ್ರಶ್ನೆಗೆ ಆಕೆ ಹೀಗೆ ಹೇಳುತ್ತಾಳೆ: “ನನಗೆ ಈ ತೊಂದರೆ ಕಳೆದ ಐದು ವರ್ಷಗಳಿಂದಲೂ ಇದೆ. ಸೂಜಿಗಳು ನನ್ನ ಕಾಲಿನಿಂದ ಹೊರಬರುತ್ತವೆ. ಇದು ಹೇಗೆ, ಏಕೆ ಎಂದು ನನಗೆ ವಿವರಿಸಲು ಸಾಧ್ಯವಿಲ್ಲ. ಇವು ಹೇಗೆ ಒಳಗೆ ಬಂದವು ಎಂದು ನನಗೆ ಗೊತ್ತಿಲ್ಲ. ಆದರೆ ಈ ನೋವಿನಿಂದಂತೂ ಜರ್ಝರಿತಳಾಗಿದ್ದೇನೆ, ಇನ್ನು ಸಹಿಸಲು ಸಾಧ್ಯವಿಲ್ಲ”

ವೈದ್ಯರ ವಿವರಣೆ:-

ವೈದ್ಯರು ಇದೊಂದು ಮಾನಸಿಕ ರೋಗ ಎಂದು ಊಹಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ರೋಗಿ ತನಗೆ ಅರಿವೇ ಇಲ್ಲದಂತೆ ಕೆಲವು ಮೊನಚಾದ ವಸ್ತುಗಳನ್ನು ತನ್ನ ದೇಹದೊಳಗೆ ತೂರಿಸಿಕೊಳ್ಳುವುದು ಒಂದು ಮಾನಸಿಕ ವ್ಯಾಧಿಯ ಲಕ್ಷಣವಾಗಿದೆ. ಈ ಮಹಿಳೆಯೂ ಇಂತಹ ಯಾವುದೋ ಮಾನಸಿಕ ವ್ಯಾಧಿಗೆ ತುತ್ತಾಗಿದ್ದು ತನಗರಿವಿಲ್ಲದಂತೆಯೇ ಚೂಪಾದ ವಸ್ತುಗಳನ್ನು ತನ್ನ ಕಾಲುಗಳ ಒಳಗೆ ಚುಚ್ಚಿಕೊಳ್ಳುತ್ತಿದ್ದರಬಹುದು. ಆದರೆ ಈ ಆರೋಪವನ್ನು ಅನುಸೂಯ್ಯಾ ಸ್ಪಷ್ಟವಾಗಿ ತಳ್ಳಿ ಹಾಕಿ ತನಗಾವುದೇ ರೋಗವಿಲ್ಲ ಹಾಗೂ ತಾನು ತನ್ನ ಕಾಲುಗಳಿಗೆ ಚುಚ್ಚಿಕೊಂಡಿಲ್ಲ ಎಂದೇ ವಾದಿಸುತ್ತಾಳೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೆಕೆಯನ್ನು ತಡೆಯಲಾಗದೆ ಬೆತ್ತಲೆಯಾಗಿ Scooty ಓಡಿಸಿಕೊಂಡು ರಸ್ತೆಗಿಳಿದ…!

    ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…

  • ಮನರಂಜನೆ

    BB ಮನೆಯಲ್ಲಿ ಶುರುವಾಯ್ತು ಪ್ರೇಮ್ ಕಹಾನಿ!’ನನ್ನ ಕಂಡರೆ ನಿಮಗೆ ಏನನಿಸುತ್ತೆ?

    ಬಿಗ್‌ ಬಾಸ್‌ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್‌ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್‌ ಪಡೆದು ನಾಮಿನೇಶನ್‌ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್‌ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್‌ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್‌ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್‌ ಬಾಸ್‌ ಮನೆಗೆ ಪ್ರವೇಶಿಸಿದ ಬಳಿಕ ಶೈನ್‌ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…

  • ಸುದ್ದಿ

    ಪಿಯು ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ ಕೊಟ್ಟ ಮೋದಿ;ಏನೆಂದು ತಿಳಿಯಲು ಇದನ್ನೊಮ್ಮೆ ಓದಿ..!

    ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…

  • ಉಪಯುಕ್ತ ಮಾಹಿತಿ

    ಮಲಗುವ ರೀತಿ ನೋಡಿ ನಿಮ್ಮ ಗುಣಗಳನ್ನು ತಿಳಿಯಬಹುದು..!ಹೇಗೆ ಗೊತ್ತಾ..?

    ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….

  • ಸುದ್ದಿ

    10 ಸಾವಿರ ಅಡಿ ಎತ್ತರದಲ್ಲಿ ಇದ್ದ ವಿಮಾನದಿಂದ ಬಿದ್ದ ಈ ಹುಡುಗಿ ಅಮೆಜಾನ್ ಕಾಡಿನಲ್ಲಿ ಬದುಕಿದ್ದು ಹೇಗೆ ಗೊತ್ತಾ.

    ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…

  • ಜ್ಯೋತಿಷ್ಯ

    ರೈತರ ಗಮನಕ್ಕೆ: ‘ಕಿಸಾನ್ ಸಮ್ಮಾನ್’ ಗೆ ಅರ್ಜಿ ಸಲ್ಲಿಸಲು ಇನ್ನೆರಡೇ ದಿನ ಬಾಕಿ

    ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್’ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ರೈತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಈ ಯೋಜನೆಯನ್ವಯ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ 6000 ರೂ. ಸಹಾಯ ಧನ ನೀಡಲಾಗುತ್ತಿದ್ದು, ಫಲಾನುಭವಿಗಳು ನಾಡಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ ಸೇರಿದಂತೆ ವಿವಿಧೆಡೆ ಲಭ್ಯವಿರುವ ಅರ್ಜಿಗಳನ್ನು ಭರ್ತಿ ಮಾಡಿ ನೀಡಬೇಕಾಗುತ್ತದೆ. ರೈತರ ಖಾತೆಗೆ ನೇರವಾಗಿ ಹಣ ಬರಲಿದ್ದು,…