ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿಅವರನ್ನು ಮದುವೆಯಾಗಬೇಕು ಅಂತ 40 ವರ್ಷದ ಮಹಿಳೆಯೊಬ್ಬರು,ಸೆಪ್ಟೆಂಬರ್ 8ರಿಂದ ದೆಹಲಿಯ ಜಂತರ್ ಮಂತರ್ ಬಳಿ ಧರಣಿ ಕುಳಿತಿದ್ದಾರೆ.

ರಾಜಸ್ಥಾನದ ಜೈಪುರ ಮೂಲದವರಾದ ಓಂ ಶಾಂತಿ ಶರ್ಮಾ ಎಂಬುವರು ಧರಣಿ ನಡೆಸುತ್ತಿದ್ದು, ತನ್ನ ಮಾನಸಿಕ ಸ್ಥಿತಿ ಚೆನ್ನಾಗೇ ಇದೆ ಎಂದು ಕೂಡ ಆಕೆ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ನನಗೆ ವಿವಾಹವಾಗಿದ್ದು, ಸಂಭಂದ ಹದಗೆಟ್ಟ ಕಾರಣ, ನಾನು ಒಬ್ಬಂಟಿಗಳಾಗಿದ್ದೇನೆ ಎಂದು ಹೇಳಿದ್ದಾರೆ.. ಪ್ರಧಾನಿ ಮೋದಿ ಅವರೂ ಒಂಟಿಯಾಗಿದ್ದು,ಪ್ರಧಾನಿ ಮೋದಿಗೆ ಸೇವೆ ಸಲ್ಲಿಸಬೇಕು ಎಂದು ಆಕೆ ಹೇಳಿದ್ದಾರೆ.
ಕಳೆದ ಹಲವು ವರ್ಷಗಳಿಂದ ಒಂಟಿಯಾಗಿದ್ದು, ಸಾಕಷ್ಟು ಮದುವೆ ಪ್ರಸ್ತಾಪಗಳನ್ನ ನಿರಾಕರಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಮೊದಿಯವರನ್ನೇ ಏಕೆ ಮದುವೆಯಾಗಬೇಕೆಂದು ಕೇಳಿದಕ್ಕೆ, ಅವರು ಒಂಟಿಯಾಗಿದ್ದು, ಅವರ ಕೆಲಸಗಳಲ್ಲಿ ಸಹಾಯ ಮಾಡಲು ಅವರನ್ನು ಮದುವೆಯಾಗಬೇಕೆಂದು ಹೇಳಿದ್ದಾರೆ.
ಇವರು ಹೇಳುವ ಪ್ರಕಾರ ಮೋದಿಯವರ ಮೇಲಿರುವ ಮೋಹದಿಂದ ಮದುವೆಯಾಗುತ್ತಿಲ್ಲವಂತೆ,ಅವರನ್ನು ನಾನು ಗೌರವಿಸುತ್ತೇನೆ, ಮತ್ತು ಅವರ ಕೆಲಸ ಕಾರ್ಯಗಳಲ್ಲಿ ನನ್ನ ಕೈಲಾದಷ್ಟು ಸಹಾಯ ಮಾಡಬೇಕು ಎಂಬ ಕಾರಣದಿಂದ ಅವರನ್ನು ಮದುವೆಯಾಗಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಅವರೇ ಹೇಳುವ ಪ್ರಕಾರ, ಇವರಿಗೆ ಸಾಕಷ್ಟು ಹಣ ಮತ್ತು ಜೈಪುರದಲ್ಲಿ ಸಾಕಷ್ಟು ಜಮೀನು ಇದೆ ಎಂದು ಹೇಳಿದ್ದಾರೆ. ಇದಲ್ಲದೆ ಇವರಿಗೆ 20 ವರ್ಷದ ಮಗಳಿದ್ದು, ಆಕೆಯ ಬಗ್ಗೆ ನಾನು ಚಿಂತೆ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.ತನ್ನಲ್ಲಿರುವ ಸ್ವಲ್ಪ ಜಮೀನನ್ನು ಮಾರಿ ಮೋದಿಗೆ ಉಡುಗೊರೆ ಕೊದಬೇಕೆನ್ದುಕೊಂಡಿದ್ದಾರಂತೆ.
ಮೋದಿಯವರು ನನ್ನನ್ನು ಭೆಟಿಯಾಗುವವರೆಗೂ, ಈ ಸ್ಥಳದಿಂದ ಕದಲುವುದಿಲ್ಲ, ಎಂದು ಹೇಳಿರುವ ಶಾಂತಿಯವರು,ಅಲ್ಲಿನ ಗುರುದ್ವಾರಗಳಲ್ಲಿ ಊಟ ಮಾಡಿ, ಸಾರ್ವಜನಿಕ ಶೌಚಾಲಯ ಬಳಸಿಕೊಂಡು ಧರಣಿ ನಿರತರಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…
ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…
ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…
ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…
ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…