News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕಾನೂನು

ಈ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸುವ ಅಧಿಕಾರ ಭಾರತದ ಸಂಸತ್‌ಗಿಲ್ಲ.!ಈ ರಾಜ್ಯದವರು ತೆರಿಗೆ ಕಟ್ಟೋ ಆಗಿಲ್ಲ!ಯಾಕೆ ಗೊತ್ತಾ?ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ…

668

ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ.

ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ ರಾಜ್ಯಕ್ಕೆ ಸಂಭಂದಪಡುವುದಿಲ್ಲ.

ಅಷ್ಟಕ್ಕೂ ಈ ಕಾನೂನು ರಚನೆಯಾದದ್ದು ಏಕೆ ಗೊತ್ತಾ? ತಿಳಿಯಲು ಮುಂದೆ ಓದಿ…

ನಿಮಗೆ ಗೊತ್ತಾ 370ನೇ ವಿಧಿ ಕಾನೂನು ಏನು ಹೇಳುತ್ತೆ ಅಂತ ?

 ಯಾವುದೇ ಒಂದು ರಾಜ್ಯಕ್ಕೆ ತಾತ್ಕಾಲಿಕವಾಗಿ ವಿಶೇಷ ಸ್ಥಾನಮಾನ ಕಲ್ಪಿಸಲು ಭಾರತದ ಸಂವಿಧಾನದ 21ನೇ ಪರಿಚ್ಛೇದ ಅನ್ವಯವಾಗುತ್ತದೆ. ಪ್ರಾಂತೀಯ ಸರಕಾರಕ್ಕೆ ಸಾಕಷ್ಟು ಅಧಿಕಾರವನ್ನು ದಯಪಾಲಿಸುವ ವಿಧಿಯೇ 370. ಇದರ ಪ್ರಕಾರ ಒಂದು ಪ್ರಾಂತ್ಯಕ್ಕೆ ತಾತ್ಕಾಲಿಕವಾಗಿ (ಆ ಸಂದರ್ಭಕ್ಕೆ ಅಗತ್ಯವಿದ್ದಂತೆ) ವಿಶೇಷ ಸ್ಥಾನಮಾನವನ್ನು ಕಲ್ಪಿಸಬಹುದು. ಅಂತಹ ಸ್ಥಾನ ಪಡೆದ ರಾಜ್ಯ, ದೇಶದ ಎಲ್ಲ ರಾಜ್ಯಗಳಿಗೂ ಅನ್ವಯವಾಗುವ ಕಾನೂನಿನಿಂದ ಮುಕ್ತ. ಕೆಲವು ಕ್ಷೇತ್ರಗಳ ಹೊರತಾಗಿ ಉಳಿದೆಲ್ಲ ವಿಚಾರಗಳನ್ನು ಅಲ್ಲಿನ ವಿಧಾನಸಭೆಗೇ ಬಿಡಬೇಕು.

ಈ ಸೌಲಭ್ಯ ಜಾರಿಗೆಯಾಗಿದ್ದು ಯಾವಾಗ ?

ಈ ಸೌಲಭ್ಯ ಜಾರಿಗೆ ಬಂದಿದ್ದು, 1947ರಲ್ಲಿ. ಆಗ ಶೇಖ್ ಅಬ್ದುಲ್ಲಾ ಎಂಬುವರನ್ನು ಜಮ್ಮು ಕಾಶ್ಮೀರದ ಪ್ರಧಾನಿಯಾಗಿ ಮಹಾರಾಜಾ ಹರಿಸಿಂಗ್ ಹಾಗೂ ಜವಾಹರಲಾಲ್ ನೆಹರು ನೇಮಿಸಿದ್ದರು. ಅಂದು ರಾಜ್ಯದ ಪ್ರಧಾನಿಯಾಗಿ ಹೊಂದಿದ್ದ ಸ್ವಾಯತ್ತತೆಯನ್ನು ಎಲ್ಲ ಸಮಯಕ್ಕೂ ಉಳಿಸಿಕೊಳ್ಳುವ ಉದ್ದೇಶ ಹೊಂದಿದ್ದ ಅಬ್ದುಲ್ಲಾ 370ನೇ ವಿಧಿಯನ್ನು ಶಾಶ್ವತಗೊಳಿಸಬೇಕೆಂದು ವಾದಿಸಿದ್ದ. ಆದರೆ, ಇದಕ್ಕೆ ಕೇಂದ್ರ ಸರ್ಕಾರ ಒಪ್ಪಿಕೊಂಡಿರಲಿಲ್ಲ.

ಜಮ್ಮು ಕಾಶ್ಮೀರಕ್ಕೆ ನೀಡಲಾಯಿತು?

1947ರ ಆಗಸ್ಟ್ 14, 15ರಂದು ಕ್ರಮವಾಗಿ ಭಾರತ ಮತ್ತು ಪಾಕಿಸ್ತಾನ ಸ್ವತಂತ್ರಗೊಂಡವು. ಆ ವೇಳೆ ಕಾಶ್ಮೀರವನ್ನು ಒಂದು ಸ್ವತಂತ್ರ ರಾಜ್ಯವನ್ನಾಗಿ ಘೋಷಿಸಲಾಗಿತ್ತು. ಆ ರಾಜ್ಯದ ಮೇಲೆ ಎರಡೂ ದೇಶಗಳು ದಾಳಿ ಮಾಡಬಾರದೆಂಬ ನಿರ್ಣಯ ಕೈಗೊಳ್ಳಲಾಯಿತು. ಆದರೆ ಪಾಕಿಸ್ತಾನ ಕಾಶ್ಮೀರವನ್ನು ತನ್ನದಾಗಿಸಿಕೊಳ್ಳಬೇಕೆಂಬ ಪ್ರಯತ್ನವನ್ನು ಕೈಬಿಡಲಿಲ್ಲ.

1947 ಅ. 6ರಂದು ಪಾಕ್ ಬೆಂಬಲಿತ ‘ಆಜಾದ್ ಕಾಶ್ಮೀರ್’ ಎಂಬ ಪಡೆಯು ಪಾಕ್ ಮೇಲೆ ಮುಗಿಬಿತ್ತು. ಆಗ ಕಾಶ್ಮೀರವನ್ನು ಆಳುತ್ತಿದ್ದ ಮಹಾರಾಜ ಹರಿಸಿಂಗ್ ತಮ್ಮ ರಾಜ್ಯವನ್ನು ರಕ್ಷಿಸುವಂತೆ ಭಾರತವನ್ನು ಕೋರಿದರು. ಕಾಶ್ಮೀರವನ್ನು ಭಾರತಕ್ಕೆ ಸಂಪೂರ್ಣವಾಗಿ ಒಪ್ಪಿಸಿದರೆ ನೆರವು ನೀಡುವುದಾಗಿ ಆಗ ಭಾರತ ಸರಕಾರ ಹೇಳಿತ್ತು. ಇದಕ್ಕೆ ಹರಿಸಿಂಗ್ ಸುತರಾಂ ಒಪ್ಪಲಿಲ್ಲ.

ಈ ವಿಷಯದಲ್ಲಿ ಮಧ್ಯ ಪ್ರವೇಶಿಸಿದ ಅಂದಿನ ಪ್ರಧಾನಿ ಪಂಡಿತ್ ಜವಹರ್‌ಲಾಲ್ ನೆಹರೂ ಒಂದು ಒಪ್ಪಂದಕ್ಕೆ ಬಂದರು. ”ಭಾರತದೊಂದಿಗೆ ಜಮ್ಮು ಕಾಶ್ಮೀರ ವಿಲೀನವಾಗಬೇಕು, ಭಾರತದ ಸಂವಿಧಾನದ 370ನೇ ವಿಧಿ ಪ್ರಕಾರ ರಕ್ಷಣೆ, ವಿದೇಶಾಂಗ ಮತ್ತು ಸಂವಹನ ಕ್ಷೇತ್ರಗಳ ಹೊರತಾಗಿ ಇನ್ಯಾವುದೇ ವಿಷಯದಲ್ಲಿ ಭಾರತದ ಕಾನೂನುಗಳು ಕಾಶ್ಮೀರಕ್ಕೆ ಅನ್ವಯವಾಗುವುದಿಲ್ಲ.” ಆ ಕರಾರುಗಳಿಗೆ ಸಹಿ ಬಿದ್ದಾಗಿನಿಂದ ಜಮ್ಮು ಕಾಶ್ಮೀರಕ್ಕೆ 370ನೇ ವಿಧಿ ಅನ್ವಯವಾಗಿದೆ.

ಈ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸುವ ಅಧಿಕಾರ ಭಾರತದ ಸಂಸತ್‌ಗಿಲ್ಲ..?

ಪ್ರತಿ ವಿಷಯದಲ್ಲಿಯೂ ಪ್ರತ್ಯೇಕ ಹೆಜ್ಜೆ ತುಳಿಯಲು ಕಾನೂನುಬದ್ಧ ಅಧಿಕಾರ ಹೊಂದಿರುವ ಕಾಶ್ಮೀರ ಈಗ ಕೈಲಿದ್ದರೂ ಇಲ್ಲದ ಸ್ಥಿತಿ. ಏಕೆಂದರೆ ಸಂವಿಧಾನದ 238ನೇ ವಿಧಿ ಬೇರೆಲ್ಲಾ ರಾಜ್ಯಗಳಿಗೆ ಅನ್ವಯವಾದರೂ ಜಮ್ಮು- ಕಾಶ್ಮೀರಕ್ಕಲ್ಲ. ಆ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸುವ ಅಧಿಕಾರ ಸಂಸತ್‌ಗಿಲ್ಲ.

ಒಂದು ವೇಳೆ ಸಂಸತ್ ಈ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸಲೇಬೇಕೆಂದಿದ್ದರೆ ಅದನ್ನು ರಾಷ್ಟ್ರಪತಿ ಮೂಲಕ ರಾಜ್ಯ ಸರಕಾರಕ್ಕೆ ಮುಟ್ಟಿಸಿ ಆ ರಾಜ್ಯದ ವಿಧಾನಸಭೆಯಲ್ಲಿ ಮಂಡನೆ ಮಾಡಬೇಕು. ಜತೆಗೆ ಕೆಲವು ಕಾನೂನುಗಳನ್ನು ಅಲ್ಲಿನ ಸರಕಾರದ ಅನುಮತಿ ಪಡೆದು ಸಂಸತ್‌ನಲ್ಲಿ ಮಂಡನೆ ಮಾಡಬಹುದು.

ಭಾರತದ ಸಂವಿಧಾನವೇ ಒಂದಾದರೆ ಕಾಶ್ಮೀರಕ್ಕೇ ಪ್ರತ್ಯೇಕ ಸಂವಿಧಾನ..!

ಅಂದರೆ, ಭಾರತದ ಸಂವಿಧಾನವೇ ಒಂದಾದರೆ ಕಾಶ್ಮೀರಕ್ಕೇ ಪ್ರತ್ಯೇಕ ಸಂವಿಧಾನ. ಅದರ ತಿದ್ದುಪಡಿಯಾಗುವುದೂ ಆ ರಾಜ್ಯದ ವಿಧಾನಸಭೆಯಲ್ಲಿ. ಅಲ್ಲಿ ಕೈಗೊಳ್ಳಲಾಗವ ನಿರ್ಧಾರಗಳನ್ನು ಆ ರಾಜ್ಯ ಸರಕಾರದ ಅನುಮತಿ ಪಡೆದು ರಾಷ್ಟ್ರಪತಿ ಸಹಿ ಹಾಕಬೇಕಾಗುತ್ತದೆ. ಈ ರೀತಿ ಪ್ರತ್ಯೇಕ ಸಂವಿಧಾನ ಹೊಂದಿರುವ ಏಕೈಕ ರಾಜ್ಯ ಜಮ್ಮು ಕಾಶ್ಮೀರ. 1957ರ ಜನವರಿ 26ರಂದು ಅಲ್ಲಿನ ವಿಧಾನಸಭೆ ಪ್ರತ್ಯೇಕ ಸಂವಿಧಾನವನ್ನು ಅಂಗೀಕರಿಸಿತು.

ಕಾಶ್ಮೀರಕ್ಕೆ ತುರ್ತು ಪರಿಸ್ಥಿತಿಯೂ ಅನ್ವಯವಾಗುವುದಿಲ್ಲ…

ಸಂವಿಧಾನದ ವಿಧಿ 360ರ ಪ್ರಕಾರ ಕೇಂದ್ರ ಸರಕಾರ ದೇಶಾದ್ಯಂತ ಆರ್ಥಿಕ ತುರ್ತುಸ್ಥಿತಿ ಘೋಷಿಸುವ ವಿಶೇಷ ಅಧಿಕಾರ ಹೊಂದಿರುತ್ತದೆ. ಆದರೆ, ಆರ್ಥಿಕ ತುರ್ತುಸ್ಥಿತಿಯನ್ನು ಈ ರಾಜ್ಯದಲ್ಲಿ ಘೋಷಿಸುವಂತಿಲ್ಲ. ಹೊರ ದೇಶಗಳು ಅತಿಕ್ರಮಣ ನಡೆಸಿದಾಗ ಇಲ್ಲವೇ ಯುದ್ಧದ ಸಮಯದಲ್ಲಿ ಮಾತ್ರ ತುರ್ತುಸ್ಥಿತಿ ಘೊಷಿಸಬಹುದು.

ದೇಶದಲ್ಲಿ ಆಂತರಿಕ ಸಮಸ್ಯೆಗಳು ತಲೆದೋರಿದ ಸಮಯದಲ್ಲಿ ಜಮ್ಮು ಕಾಶ್ಮೀರ ತುರ್ತುಸ್ಥಿತಿಯಂತಹ ಸನ್ನಿವೇಶದಿಂದ ಮುಕ್ತವಾಗಿರುತ್ತದೆ. ಹಾಗೊಂದು ವೇಳೆ ಈ ರಾಜ್ಯದಲ್ಲಿ ತುರ್ತುಸ್ಥಿತಿ ಘೋಷಣೆಯಾಗಲೇಬೇಕೆಂದರೆ ಅದಕ್ಕೆ ಅಲ್ಲಿನ ರಾಜ್ಯ ಸರಕಾರದ ಅನುಮತಿ ಬೇಕು. ರಾಷ್ಟ್ರಪತಿಯಾದವರು ಆ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಿಸಬೇಕೆಂದು ಅಲ್ಲಿನ ಸರಕಾರಕ್ಕೆ ಕೋರಿಕೆ ಸಲ್ಲಿಸಬೇಕು.

ಇಲ್ಲಿನ ನಿಯಮಗಳಿಂದ ಈ ರಾಜ್ಯದವರು ಅನುಭವಿಸುತ್ತಿರುವ ಸಮಸ್ಯಗಳೇನು?

ಬೇರೆ ರಾಜ್ಯದಿಂದ ಬಂದವರು ಈ ರಾಜ್ಯದಲ್ಲಿ ಆಸ್ತಿ ಖರೀದಿಸುವಂತಿಲ್ಲ. ಆದರೆ, ಈ ರಾಜ್ಯದವರು ಭಾರತದ ಬೇರೆ ರಾಜ್ಯಗಳಲ್ಲಿ ಆಸ್ತಿ ಖರೀದಿಸಬಹುದು.ಈ ನಿಯಮವೇ ಜಮ್ಮು ಕಾಶ್ಮೀರವು ಭಾರತದಿಂದ ಬೇರೆ ಎಂಬ ಭಾವನೆ ಬೆಳೆಯಲು ಕಾರಣವಾಗಿದೆ. ಅಲ್ಲಿನವರಿಗೆ ಕೂಡ ತಾವು ಸಂಪೂರ್ಣ ಭಾರತೀಯರು ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ರಾಜ್ಯದ ಹೊರತಾಗಿ ಬೇರೆಯವರು ಬಂಡವಾಳ ತೊಡಗಿಸಲು ಅವಕಾಶವಿಲ್ಲದ ಕಾರಣ ಇಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಇದಕ್ಕಾಗಿಯೇ ಸ್ಥಳೀಯರು ಶಸ್ತ್ರ ಕೈಗೆತ್ತಿಕೊಂಡು ಉಗ್ರರಾಗುತ್ತಿದ್ದಾರೆಂದು ವರದಿ ಹೇಳುತ್ತದೆ.

ಸ್ವಾತಂತ್ರ್ಯ ಬಂದಾಗಿನಿಂದ ಶಿಕ್ಷಣದ ಹಕ್ಕನ್ನು ಬಿಟ್ಟರೆ ಇನ್ಯಾವ ಹಕ್ಕೂ ಈ ರಾಜ್ಯದಲ್ಲಿ ಜಾರಿಯಾಗಿಲ್ಲ. ಮತ್ತೊಂದು ವಿಚಾರವೆಂದರೆ ಈ ರಾಜ್ಯದ ನಾಗರಿಕನಾದವನು ತೆರಿಗೆ ಕಟ್ಟಬೇಕಾಗಿಲ್ಲ. ದೇಶದ ಎಲ್ಲಾ ಹೈಕೋರ್ಟುಗಳು ಸಂವಿಧಾನದ ವಿಧಿ 226ರ ಪ್ರಕಾರ ಕಾನೂನು ತಿದ್ದುಪಡಿ ಮಾಡುವ ಅಧಿಕಾರವನ್ನು ಹೊಂದಿವೆ. ಆದರೆ, ಜಮ್ಮು ಕಾಶ್ಮೀರ ಹೈಕೋರ್ಟ್ ಮಾತ್ರ ಇದರಿಂದ ಮುಕ್ತ.

ಯಾವ ಕಾನೂನುಗಳನ್ನೂ ಅಸಾಂವಿಧಾನಿಕ ಎಂದು ಘೋಷಿಸುವ ಹಕ್ಕೇ ಇಲ್ಲಿನ ಕೋರ್ಟ್‌ಗೆ ಇಲ್ಲ. ಈ ರಾಜ್ಯದ ಶಾಶ್ವತ ನಾಗರಿಕರು ಮಾತ್ರ ರಾಜ್ಯ ಸರಕಾರದ ಸೇವೆಗಳಿಗೆ ಅರ್ಹರು. ಶಾಶ್ವತ ನಾಗರಿಕರಿಗೆ ಮಾತ್ರ ಆಸ್ತಿ ಖರೀದಿಸುವ ಹಕ್ಕಿದೆ. ವಿದ್ಯಾರ್ಥಿವೇತನ, ಹಿಂದುಳಿದ ವರ್ಗದವರಿಗೆ ಮೀಸಲಾತಿ ಈ ಎಲ್ಲ ವಿಚಾರದಲ್ಲಿ ಜಮ್ಮು ಕಾಶ್ಮೀರ ವಿಧಾನಸಭೆ ನಿರ್ಣಯವೇ ಅಂತಿಮ. ಒಂದು ವೇಳೆ ರಾಷ್ಟ್ರಪತಿ ಆಡಳಿತ ಹೇರಬೇಕೆಂದರೂ, ರಾಷ್ಟ್ರಪತಿ ಜಮ್ಮು ಕಾಶ್ಮೀರದ ಗವರ್ನರ್ ಅನುಮತಿ ಪಡೆಯಬೇಕು.

ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ, ವಿಸ್ಮಯ ಜಗತ್ತು

    ಮಾನವನ ಅಂಗಾಂಗಳನ್ನು ಇಲ್ಲಿ ಹೀಗೆ ತಿಂತಾರೆ..!ಶಾಕ್ ಆಗ್ಬೇಡಿ ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ  ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…

  • inspirational

    ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್

    ಕೆ. ಎಲ್. ರಾಹುಲ್ – ಪೂರ್ಣ ಪರಿಚಯ: ಪೂರ್ಣ ಹೆಸರು: ಕಣ್ಣೂರು ಲೋಕೇಶ್ ರಾಹುಲ್ಜನನ: ಏಪ್ರಿಲ್ 18, 1992ಜನ್ಮಸ್ಥಳ: Bengaluruಬೆಳೆದದ್ದು: Mangaluru ಬಾಲ್ಯ ಮತ್ತು ಶಿಕ್ಷಣ ಕೆ.ಎಲ್. ರಾಹುಲ್ ಅವರ ತಂದೆ ಲೋಕೇಶ್ ಅವರು ಪ್ರಾಧ್ಯಾಪಕರು, ತಾಯಿ ರಾಜೇಶ್ವರಿ ಅವರು ಶಿಕ್ಷಕಿ. ಅವರು ವಿದ್ಯಾಭ್ಯಾಸವನ್ನು ಮಂಗಳೂರಿನ NITK English Medium School ನಲ್ಲಿ ಪ್ರಾರಂಭಿಸಿ ನಂತರ St. Aloysius College ನಲ್ಲಿ ಮುಂದುವರಿಸಿದರು. ಬಾಲ್ಯದಿಂದಲೇ ಕ್ರಿಕೆಟ್ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದರು. ಕ್ರಿಕೆಟ್ ಜೀವನದ ಆರಂಭ ರಾಹುಲ್…

  • ಸುದ್ದಿ

    ತಾಮ್ರ ಬಳಸುವುದರಿಂದ ಆಗುವ ಉಪಯೋಗಗಳೇನು ಗೊತ್ತಾ? ತಾಮ್ರದಲ್ಲಿದೆ ರೋಗಮುಕ್ತ ಗುಣಗಳು..!

    ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…

  • ಸುದ್ದಿ

    ಬಿಡುಗಡೆಯಾಯ್ತು BJP ಪಕ್ಷದ ಪ್ರಣಾಳಿಕೆ..ರೈತರಿಗೆ ಪಿಂಚಣಿ ಸೇರಿದಂತೆ ಪ್ರಣಾಳಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ.?

    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…

  • ಸುದ್ದಿ

    ಮನೆಯಲ್ಲಿ ಶನಿದೇವನ ಸ್ಥಾಪನೆ ಯಾವ ಕಾರಣಕ್ಕೆ ಮಾಡಬಾರದು ಗೊತ್ತ..!

    ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….

  • Sports

    Multiple Layout Options

    A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…