News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ರಾಜಕೀಯ

ಈ ಸಮೀಕ್ಷೆಯ ಪ್ರಕಾರ ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಯಾರು ಗೊತ್ತಾ? ಯಾರಿಗೆ ಎಷ್ಟು ಮತ?ತಿಳಿಯಲು ಈ ಲೇಖನ ಓದಿ…

1055

ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.

ಸಮೀಕ್ಷೆ ಏನು ಹೇಳುತ್ತೆ…


ಸಮೀಕ್ಷೆ ವರದಿಗಳ ಪ್ರಕಾರ ರಾಜ್ಯದಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷವು ಅಧಿಕಾರ ಸ್ಥಾಪಿಸಲಿದೆ. ಭರ್ಜರಿ ಬಹುಮತ ಪಡೆಯಲಿದ್ದು, ಸ್ವಂತ ಬಲದಿಂದ ಪೀಠಕ್ಕೇರಲಿದೆ.

ಇದರ ಜತೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಯೋಜನೆಗಳು, ನೂನ್ಯತೆಗಳ ಬಗ್ಗೆ ಕೂಡಾ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆ ವರದಿಗಳ ಪ್ರಕಾರ  2018ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ 150 ಸ್ಥಾನ ದೊರೆಯಲಿದೆ.

ಅಲ್ಲದೆ, ಇತ್ತೀಚಿನ ಸರ್ಕಾರಗಳ ಪೈಕಿ ಕರ್ನಾಟಕದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಯಾರು? ಮುಂದೆ ಯಾರನ್ನು ಸಿಎಂ ಆಗಿ ಕಾಣಲು ಬಯಸಿದ್ದೀರಿ? ಕಾಂಗ್ರೆಸ್ ಸರ್ಕಾರ ತೃಪ್ತಿ ತಂದಿದೆಯೇ? ಎಂಬ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲಾಗಿದೆ.

ಸಿ ಫೋರ್ ನಡೆಸಿದ ಸಮೀಕ್ಷೆ ಎಲ್ಲ ಜಿಲ್ಲೆಗಳಿಂದ ಆಯ್ದ 165 ವಿಧಾನಸಭಾ ಕ್ಷೇತ್ರಗಳ 24,679 ಮತದಾರರನ್ನು ಸಂದರ್ಶಿಸಿ ಈ ಸಮೀಕ್ಷೆ ನಡೆಸಲಾಗಿದೆ. ರಾಜ್ಯಾದ್ಯಂತ 340 ನಗರ ಹಾಗೂ 550 ಗ್ರಾಮೀಣ ಪ್ರದೇಶಗಳನ್ನು ಹಾಗೂ ವಿವಿಧ ಧರ್ಮ, ಜಾತಿಯ ಜನರನ್ನು ಒಳಗೊಂಡು ಈ ಸಮೀಕ್ಷೆ ನಡೆಸಲಾಗಿದೆ ಎಂದು ಸಿ ಫೋರ್ ತಿಳಿಸಿದೆ.

2008 ಹಾಗೂ 2013ರ ಕರ್ನಾಟಕ ವಿಧಾನಸಭಾ ಚುನಾವಣೆಗಳಲ್ಲಿ ಸಿ ಫೋರ್ ನಡೆಸಿದ ಸಮೀಕ್ಷೆ 99 ಶೇ. ನಿಜವಾಗಿತ್ತು.

ಯಾರನ್ನು ಸಿಎಂ ಆಗಬೇಕು?ಯಾರಿಗೆ ಎಷ್ಟು ಮತ?

ಸಿದ್ದರಾಮಯ್ಯನವರು:-     ಇವರಿಗೆ ಮತ್ತೊಮ್ಮೆ ಮುಖ್ಯಮಂತ್ರಿ     ಆಗಬೇಕೆಂದು ಶೇ 46ರಷ್ಟು ಮಂದಿ ಮತ ಹಾಕಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ:-  ಶೇ 17 ರಷ್ಟು ಮತದಾರರು ಮಾತ್ರ ಮತ ಹಾಕಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ :-   ಶೇ 27 ಮತದಾರರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಮತ ಹಾಕಿದ್ದಾರೆ.

ಶೇ 4ರಷ್ಟು ಮಂದಿ ಮಾತ್ರ  ಇವರಲ್ಲದೆ ಬೇರೆಯವರು ಸಿಎಂ ಆಗಲಿ ಎಂದಿದ್ದಾರೆ.

ಇತ್ತೀಚಿನ ಮುಖ್ಯಮಂತ್ರಿಗಳಲ್ಲಿ ಯಾರು ಹೆಚ್ಚು ಜನಪ್ರಿಯ ಮುಖ್ಯಮಂತ್ರಿ :-


ಸಿದ್ದರಾಮಯ್ಯ: ಶೇ 46ರಷ್ಟು ಮತ ಸಿಕ್ಕಿದೆ.

ಬಿಎಸ್ ಯಡಿಯೂರಪ್ಪ: ಶೇ 27

ಎಚ್. ಡಿ ಕುಮಾರಸ್ವಾಮಿ : ಶೇ 18

ನಮಗೆ ಗೊತ್ತಿಲ್ಲ : ಶೇ 6

ಇತರೆ : ಶೇ 3 ರಷ್ಟು ಮತಗಳು ಬಂದಿವೆ.

ಯಾವ ಸರ್ಕಾರ ಚೆನ್ನಾಗಿ ಆಡಳಿತ ನಡೆಸಿತ್ತು:-

ಹಾಲಿ ಕಾಂಗ್ರೆಸ್ ಸರ್ಕಾರ: ಶೇ 44ರಷ್ಟು ಮತಗಳು

ಈ ಹಿಂದಿನ ಬಿಜೆಪಿ ಸರ್ಕಾರ : ಶೇ 28

ಕುಮಾರ ಸ್ವಾಮಿ  ಅವರ ಸರ್ಕಾರ : ಶೇ 18

ಗೊತ್ತಿಲ್ಲ/ ಏನನ್ನೂ ಹೇಳಲಾರೆ : ಶೇ 10

ಕಾಂಗ್ರೆಸ್ ಸರ್ಕಾರದ ಆಡಳಿತ ತೃಪ್ತಿದಾಯಕವಾಗಿದೆಯೇ ?

ಸಂಫೂರ್ಣ ತೃಪಿದಾಯಕ : ಶೇ 18

ಪರ್ವಾಗಿಲ್ಲ, ತಕ್ಕಮಟ್ಟಿಗೆ ತೃಪ್ತಿ: ಶೇ 53

ತೃಪ್ತಿದಾಯಕವಾಗಿಲ್ಲ: ಶೇ 29.
ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹುಷಾರ್…..!ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯ ಸೆರೆ…!

    ಕಂಪ್ಯೂಟರ್‌ಗಳು, ಕಂಪನಿಯ ಸರ್ವರ್‌ಗಳನ್ನು ಹ್ಯಾಕ್‌ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್‌ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್‌ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್‌ಲೋಡ್‌ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್‌ಲೈನ್‌ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್‌ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…

  • ರಾಜಕೀಯ

    ಅಬ್ಬಾ! ಬೃಹತ್ ಸೇಬಿನ ಹಾರ ಹಾಕಿ ಹೆಚ್.ಡಿ.ಕೆ ಅವರಿಗೆ ಸ್ವಾಗತ…ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ…ನೀವೂ ನೋಡಿ…

    ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ  ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು  ಅದ್ಧೂರಿ ಬೈಕ್ ರ‍್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…

  • ಆರೋಗ್ಯ

    ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತೀರಾ! ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ.

    ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ. ಪಪ್ಪಾಯಿ ಬೀಜಗಳ ಉಪಯೋಗವೇನು? 1. ಕ್ಯಾನ್ಸರ್ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ. 2. ಹೊಟ್ಟೆನೋವು ಕಡಿಮೆ ಮಾಡುತ್ತದೆಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ…

  • ಸುದ್ದಿ

    ಬ್ರಾಹ್ಮಣ ರೂಪದಲ್ಲಿರುವ ಪಾಲಿಯ ಗಣೇಶ, ಬಲ್ಲಾಲೇಶ್ವರನನ್ನು ನೋಡಿದ್ದೀರಾ?ಇದರ ಇತಿಹಾಸವೇನು ಗೊತ್ತ.?

    ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್‌ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್‌ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…

  • ಉಪಯುಕ್ತ ಮಾಹಿತಿ

    ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ

    ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…

  • ದೇಗುಲ ದರ್ಶನ

    ತಲಕಾವೇರಿ ತೀರ್ಥೋದ್ಭವ ಸಂಭ್ರಮ: ಬ್ರಹ್ಮ ಕುಂಡಲದಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕೊಡವರ ಕುಲದೇವತೆ..!

    ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ  ಅರ್ಚಕರ ಮಂತ್ರಘೋಷ ,ಮಂಗಳವಾದ್ಯ  ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…