ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಗೃಹ ಉಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.

1.ಏರ್ ಫ್ರೆಶ್ನೆರ್:-
ಈ ಏರ್ ಫ್ರೆಶ್ನೆರ್ ಸ್ಪ್ರೇ, ಜೆಲ್ ಹೀಗೆ ಬೇರೆ ಬೇರೆ ರೂಪದಲ್ಲಿ ಸಿಗುತ್ತೆ. ಮನೆ ಒಳಗೆ, ಕಾರ್ ಒಳಗೆ ಘಮ ಘಮ ಅನ್ಲಿ ಅಂತ ಸಾಮಾನ್ಯವಾಗಿ ಇದನ್ನ ಬಳಸ್ತಾರೆ. ಇದ್ರಲ್ಲಿ ನಮ್ಮ ದೇಹಕ್ಕೆ ಹಾನಿ ಮಾಡೋ ವಿಷಾದ ಅಂಶ ಇರುತ್ತೆ.

ಅದ್ರಲ್ಲಿರೋ ಪಾಥಲಾಟ್ಸ್ ಅನ್ನೋ ಪದಾರ್ಥದಿಂದ ನಮ್ಮ ಸಂತಾನೋತ್ಪತ್ತಿ ಶಕ್ತಿಯನ್ನ ಹಾಳುಮಾಡೊದಲ್ದೆ ಅಸ್ತಮಾದಂತಹ ಕಾಯಿಲೆ ಗಂಭೀರ ರೂಪ ಪಡೆಯೋಹಾಗೆ ಮಾಡುತ್ತೆ.
2.ಸುವಾಸನೆಭರಿತ ಮೇಣದ ಬತ್ತಿ:-
ಈ ಸುವಾಸನೆಭರಿತ ಮೇಣದ ಬತ್ತಿ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ, ಹುಟ್ಟು ಹಬ್ಬ, ಮದುವೆ ವಾರ್ಷಿಕೋತ್ಸವ, ಹಬ್ಬದಲ್ಲಿ ಹೀಗೆ ಹಲವಾರು ಸಲ ಇದನ್ನ ಉಪಯೋಗಿಸ್ತೀವಿ. ಕೆಲವೊಬ್ರು ಬೇರೆ ಫ್ರೆಶ್ನೆರ್ಗೆ ನೋಡಿದ್ರೆ ಇದು ಸ್ವಲ್ಪ ಕಡಿಮೆ ಬೆಲೆಗೆ ಸಿಗೋದ್ರಿಂದ ಇದನ್ನ ಬಚ್ಚಲಮನೇಲೇ ಇತ್ತು ಅಲ್ಲಿನ ವಾಸನೆ ಹೋಗಿಸೋದಕ್ಕೆ ಉಪಯೋಗಿಸ್ತಾರೆ.

ಇದ್ರಲ್ಲೂ ಕೂಡ ವಿಷಪದಾರ್ಥ ಇರಬಹುದು, ಯಾಕೆ ಅಂದ್ರೆ ಬಹಳಷ್ಟು ಜನ ಇದರ ಬತ್ತಿಯನ್ನ ಸೀಸದಿಂದ ಮಾಡಿರ್ತಾರೆ., ಒಂದುಸಲ ನೋಡ್ಕೊಳೋದು ಒಳ್ಳೇದು. ಹೇಗೆ ಪರೀಕ್ಷೆ ಮಾಡೋದು ಅಂದ್ರ ? ಒಂದು ಬಿಳಿ ಪೇಪರ್ ತೊಗೊಂಡು ಆ ಕ್ಯಾಂಡೆಲ್ನ ಬತ್ತಿ ತುದಿಯಿಂದ ಒಂದು ಲೈನ್ ಬರೆದಹಾಗೆ ಮಾಡಿ, ನಿಮಗೆ ಯಾವುದೇ ಲೈನ್ ಕಾಣಿಸಲಿಲ್ಲ ಅಂದ್ರೆ ಸೀಸ ಇಲ್ಲ ಅಂತ. ಅಕಸ್ಮಾತ್ ಲೈನ್ ಕಾಣಿಸಿದ್ರೇ ಇದ್ರಲ್ಲಿ ವಿಷಪದಾರ್ಥಗಳು ಇರೋದು ಗ್ಯಾರಂಟಿ.
3.ಬಚ್ಚಲುಮನೆಯ ಕರ್ಟನ್:-
ಇತ್ತೀಚಿನ ದಿನಗಳಲ್ಲಿ ಬಚ್ಚುಲು ಮನೇಲಿ ಶವರ್ ಇದ್ದೆ ಇರುತ್ತೆ. ತುಂಬಾ ಮನೆಗಳಲ್ಲಿ ಈ ಶವರ್ನಲ್ಲಿ ಸ್ನಾನ ಮಾಡೋವಾಗ ನೀರು ಹಾರದೆ ಇರೋ ಹಾಗೆ ಕರ್ಟನ್ ಹಾಕ್ತಾರೆ. ಈ ಕರ್ಟನ್ ನಲ್ಲಿ ಪ್ಲಾಸ್ಟಿಕ್ ಹಾಗೂ PVC ಇರುತ್ತೆ. ಈ ಕಾರ್ಸಿನೋಜೆನಿಕ್ ಅನ್ನೋ ವಿಷಕಾರಿ ಪದಾರ್ಥನ ಹೊರ ಹಾಕುತ್ತೆ.

ಇದು ಪರಿಸರಕ್ಕೂ ತುಂಬಾ ಹಾನಿಮಾಡುತ್ತೆ. ಬಿಸಿ ನೀರಿನ ಶಾಖಕ್ಕೆ ಈ ವಿಷಾದ ಪದಾರ್ಥ ಹೊರಬರುತ್ತಲ್ಲ ಅದು ನಮ್ಮ ಉಸಿರಾಟ ಹಾಗೆ ಸಂತಾನೋತ್ಪತ್ತಿ ಕ್ರಿಯೆಗೆ ಹಾನಿ ಮಾಡುತ್ತೆ. ಇದರ ಬದಲು ಕಾಟನ್ ಕರ್ಟನ್ ಬಳಸೋದು ಒಳ್ಳೇದು.
4.ಕಾರ್ಪೆಟ್ ಕ್ಲೀನರ್:-
ಕಾರ್ಪೆಟ್ ಗೆ ಅಂಟಿಕೊಂಡಿರು ಕಲೆ ಹೋಗ್ಬೇಕು ಅಂತ ಈ ವಸ್ತು ತಾಯಾರಿಸೋದಕ್ಕೆ ಅತ್ಯಂತ ಹೆಚ್ಚು ಹಾನಿಕಾರಿಕ ಕೆಮಿಕಲ್ ಉಪಯೋಗಿಸಿರ್ತಾರೆ. ಪರ್ಕ್ಲೋರೆಥೈಲಿನ್ ಮತ್ತು ನಾಫ್ಥಲೀನ್ ಅನ್ನೋ ಕೆಮಿಕಲ್ ಇದ್ರಲ್ಲಿ ಇರೋದ್ರಿಂದ ಇದನ್ನ ಉಸಿರಾಡಿದಾಗ ಶ್ವಾಸಕೋಶದ ಕ್ಯಾನ್ಸರ್ ಬಾರೋ ಸಾಧ್ಯತೆ ಹೆಚ್ಚು. ಈ ನುಸಿ ಗುಳಿಗೇಲೂ ಈ ಪದಾರ್ಥ ಇರುತ್ತೆ.

ಈ ಕಾರ್ಪೆಟ್ ಕ್ಲೀನ್ ಮಾಡಕ್ಕೆ ಅಡುಗೆ ಸೋಡಾ ಹಾಗೂ ವಿನೆಗರ್ ಮಿಶ್ರಣ ಉಪಯೋಗಿಸಿ ನೋಡಿ. ಇದ್ರಿಂದ ಯಾವುದೇ ತೊಂದರೆ ಇರಲ್ಲ.
5.ಡ್ರೈ ಕ್ಲೀನ್ ಮಾಡಕ್ಕೆ ಉಪಯೋಗಿಸೋ ವಸ್ತುಗಳು:-
ಡ್ರೈ ಕ್ಲೀನ್ ಮಾಡಕ್ಕೆ ಉಪಯೋಗಿಸೋ ವಸ್ತುಗಳಲ್ಲಿ ಎಟ್ರಾಕ್ಲೋರೆಥೈಲಿನ್ ಅಥವಾ ಪರ್ಚ್ಲೋರೆಥೈಲಿನ್ ಅನ್ನೋ ಕೆಮಿಕಲ್ ಇರುತ್ತೆ. ಇದನ್ನ ಬಳಸಿ ಕ್ಲೀನ್ ಮಾಡಿರೋ ಬಟ್ಟೆ ಹಾಕ್ಕೊಂಡ್ರೆ ಹಾನಿಕಾರಕ ಕಾರ್ಸಿನೋಜೆನ್ಸ್ ನಮ್ಮ ದೇಹಕ್ಕೆ ಸುಲಭವಾಗಿ ಹೋಗುತ್ತೆ.

ಇದ್ರಿಂದ ಹಲವಾರು ರೀತಿಯ ಕ್ಯಾನ್ಸರ್ ಆಗೋ ಸಾಧ್ಯತೆ ಇರೋದ್ರಿಂದ ಡ್ರೈ ಕ್ಲೀನ್ ಮಾಡಕ್ಕೆ ಕೊಡೋದಕ್ಕೆ ಮುಂಚೆ ಈ ವಿಷಕಾರಿ ಅಂಶ ಇರೋ ವಸ್ತು ಬಳಸಬೇಡಿ ಅಂತ ಹೇಳೋದು ಒಳ್ಳೇದು.
6.ಕೀಟನಾಶಕಗಳು.
ಎಲ್ಲರೂ ಒಂದಲ್ಲ ಒಂದುಸಲ ರೈತರು ಕ್ರಿಮಿ, ಕೀಟನಾಶಕ ಸಿಂಪಡಿಸೋವಾಗ ತೊಂದರೆ ಆಗಿ ಸತ್ರು, ಯಾವುದೊ ಸಮಸ್ಯೆಗೆ ಸಿಲುಕಿ ಇದನ್ನ ಕುಡಿದು ಆತ್ಮ ಹತ್ಯೆ ಮಾಡ್ಕೊಂಡ್ರು ಅಂತ ಓದಿರ್ತೀವಿ, ಕೇಳಿರ್ತೀವಿ. ಇದು ಬರಿ ಕ್ರಿಮಿ, ಕೀಟಗಳಿಗೆ ಅಷ್ಟೆ ಅಲ್ಲ ನಮಗೂ ಹಾಗೆ ನಮ್ಮ ಮುದ್ದಿನ ಸಾಕು ಪ್ರಾಣಿಗಳಿಗೂ ಹಾನಿ ಮಾಡುತ್ವೆ.

ಇದ್ರಲ್ಲಿ ಆರ್ಗನೋಫಾಸ್ಫೇಟ್ ಕೀಟನಾಶಕಗಳು, ಪೆರೆಥೆರಿನ್ ಮತ್ತು ಕಾರ್ಬಮೆಟ್ಗಳು ಇರುತ್ತೆ , ಇವುಗಳು ತುಂಬಾನೇ ಅಪಾಯಕಾರಿ ಮತ್ತು ಮನುಷ್ಯರಿಗೆ ಕ್ಯಾನ್ಸರ್ ತರೋ ಸಾಧ್ಯತೆ ಹೆಚ್ಚು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ
ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…
ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…