ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.
ಭಗವಾನ್ ಶಿವನಿಗೆ ದೇವತಗಳಾಗಲಿ, ಮನುಷ್ಯರಾಗಲಿ, ರಾಕ್ಷಸರಾಗಲಿ ಎಲ್ಲರೂ ಒಂದೇ ಎಂಬ ಭಾವವಿದ್ದು,ಯಾರಿಗೂ ಭೇದ ಭಾವ ಮಾಡುವುದಿಲ್ಲ. ಆದ್ದರಿಂದ ಶಿವನು ಅತ್ಯಂತ ಕರುಣಾಮುರ್ತಿಯಾಗಿದ್ದು, ನಿಜವಾದ ಭಕ್ತಿಗೆ ಬೇಗ ಒಲಿಯುತ್ತಾನೆ. ನಾವು ಶಿವನನ್ನು ಶಿವಲಿಂಗದ ರೂಪದಲ್ಲಿ ಪೂಜಿಸುತ್ತೇವೆ.ಮತ್ತು ಶಿವನನ್ನು ಪೂಜಿಸಲು ಅನೇಕ ವಿಧಾನಗಳಿವೆ. ಆದ್ರೆ ಶಿವನನ್ನು ಪೋಜಿಸುವಾಗ ಜನರು ತಮ್ಮ ಭಕ್ತಿಯ ಪರಾಕಾಷ್ಟೆಯಲ್ಲಿ ಕೆಲವು ತಪ್ಪುಗಳನ್ನು ಮಾಡುತ್ತಾರೆ.
ಹಿಂದೂ ಪುರಾಣಗಳ ಪ್ರಕಾರ ದಂಭ ಎಂಬ ರಕ್ಕಸನಿದ್ದು, ಅವನಿಗೆ ಮಕ್ಕಳಿಲ್ಲದ ಕಾರಣ, ಭಗವಾನ್ ನಾರಾಯಣನನ್ನು ಪ್ರಾರ್ಥಿಸಲಾಗಿ, ಅವನಿಗೆ ಜಲಂಧರ್ ಎಂಬ ಪುತ್ರನು ಜನಿಸಿದನು. ಈ ಜಲಂಧರ್’ನು ತ್ರಿಲೋಕಾದಿಪತಿಯಾಗಬೇಕೆಂಬ ಆಸೆಯಿಂದ, ಬ್ರಹ್ಮದೇವರನ್ನು ಕುರಿತು ತಪಸ್ಸು ಮಾಡಿದನು. ತಪಸ್ಸಿಗೆ ಒಲಿದ ಬ್ರಹ್ಮದೇವರು ಪ್ರತ್ಯಕ್ಷನಾಗಲು, ಯಾವ ದೇವತೆಗಳು ನನ್ನನ್ನು ಸೋಲಿಸಬಾರದೆಂಬ ವರವನ್ನು ಬೇಡಿದನು. ವರವನ್ನು ಕೊಟ್ಟ ಬ್ರಹ್ಮದೇವರು, ಈ ವರವು ಕೃಷ್ಣ ಕವಚವನ್ನು ಭೋದಿಸಿ, ಧರ್ಮಧ್ವಜನ ಮಗಳಾದ ತುಳಸಿಯನ್ನು ಮದುವೆಯಾಗಲು ತಿಳಿಸಿದನು. ನಿನ್ನ ಅಮರತ್ವವು ಶ್ರೀ ಕೃಷ್ಣ ಕವಚ ಮತ್ತು ತುಳಸಿ ಮೇಲೆ ಅವಲಂಬಿತವಾಗಿದೆ ಎಂದು ತಿಳಿಸಿದನು.
ಜಲಂಧರ್ ಯಾವುದೇ ದೇವತೆಗಳಿಂದ ಸೋಲಿಸಬಾರದು ಎಂಬ ವರವನ್ನು ಹೊಂದಿದ್ದರಿಂದ, ವಿಷ್ಣು ಜಲಂಧರ್ ಅವರ ಹೆಂಡತಿ ತುಳಸಿಯ ಪವಿತ್ರತೆಯನ್ನು ಉಲ್ಲಂಘಿಸಬೇಕಾಯಿತು. ಆಕೆಯ ಪತಿಯ ಮರಣದ ನಂತರ,ಈ ದ್ರೋಹದಿಂದ ಕೋಪಗೊಂಡ ತುಳಸಿಯು, ತನ್ನ ದೈವಿಕ ಎಲೆಗಳಿಂದ ಶಿವನನ್ನು ಆರಾಧಿಸದಂತೆ ಬಹಿಷ್ಕರಿಸಿದಳು.
ಒಮ್ಮೆ ಬ್ರಹ್ಮ ಮತ್ತು ವಿಷ್ಣು ದೇವತೆಗಳ ನಡುವೆ ಯಾರೂ ಸವ್ರೋತ್ತಮರೆಂದು ವಾದ ಏರ್ಪಡುತ್ತದೆ. ಇಬ್ಬರ ನಡುವೆ ಅತಿ ಘೋರವಾದ ವಾದ ಉಂಟಾಗಲು, ಆಗ ಇವರ ಮಧ್ಯ ಆದಿ ಅನ್ತ್ಯಗಳಲ್ಲಿದ ಬೃಹದಾಕಾರವಾದ ಅಗ್ನಿ ಸ್ಥಂಭ ಲಿಂಗವು ಏರ್ಪಡುತ್ತದೆ. ಭಗವಾನ್ ಶಿವನು ಲಿಂಗದ ರೂಪದಲ್ಲಿ ಕಾಣಿಸಿಕೊಂಡು, ಈ ಲಿಂಗದ ಆದಿ, ಅಂತ್ಯ ಕಂಡುಹಿಡಿದವರು ಸವ್ರೋತ್ತಮರೆಂದು ಘೋಷಿಸುತ್ತಾರೆ. ಆಗ ಬ್ರಹ್ಮ ಮತ್ತು ನಾರಾಯಣರು ಲಿಂಗದ ಆದಿ ಮತ್ತು ಅಂತ್ಯ ಹುಡುಕಲು ಹೊರಡುತ್ತಾರೆ. ನಾರಾಯಣನು ಲಿಂಗದ ತುದಿಯ ಕಡೆ, ಮತ್ತು ಬ್ರಹ್ಮನು ಲಿಂಗದ ಶಿರದ ಕಡೆ ಹುಡುಕಲು ಹೊರದುತ್ತಾರೆ. ಆದ್ರೆ ಭಗವಾನ್ ನಾರಾಯಣನಿಗೆ ಅಂತ್ಯ ಸಿಗದೇ, ಈ ಶಿವ ಲಿಂಗಕ್ಕೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ ಎಂದು ನಿರ್ಧರಿಸಿ, ವಾಪಸ್ ಆಗುತ್ತಾರೆ.
ಸುಲಭವಾಗಿ ತನ್ನ ಸೋಲನ್ನು ಒಪ್ಪದ ಬ್ರಹ್ಮದೇವರು, ಆದಿಯನ್ನು ಕಂಡುಹಿಡಿಯಲು ಹೋಗುತ್ತಿರುವಾಗ ಲಿಂಗದಿಂದ ಜಾರುತ್ತಿದ್ದ ಕೇದಗೆ ಪುಷ್ಪವನ್ನು ಕಂಡ ಬ್ರಹ್ಮದೇವರು, ಕೆದಗೆಯೊಡನೆ ಸಂಧಾನ ಮಾಡಿಕೊಂಡು, ನಾನು ಲಿಂಗದ ಆಡಿಯನ್ನು ಕಂಡೆ ಎಂಬ ಸುಳ್ಳನ್ನು ಹೇಳಬೇಕೆಂದು, ಕೇದಗೆ ಪುಷ್ಪವನ್ನು ಸಾಕ್ಷಿಯಾಗಿ ಕರೆತಂದನು. ಶಿವನಿಗೆ ನಾನು ಈ ಲಿಂಗದ ಆದಿಯನ್ನು ಕಂಡೆ ಎಂದು, ಸಾಕ್ಷಿಯಾಗಿ ಕೇದಗೆ ಪುಷ್ಪವನ್ನು ಕೇಳಲಾಗಿ, ಕೇದಗೆ ಪುಷ್ಪವು ಕೂಡ ಬ್ರಹ್ಮನ ಮಾತಿಗೆ ಸಹಕರಿಸಿತು. ಆಗ ಬ್ರಹ್ಮದೇವರ ಸುಳ್ಳಿನಿಂದ ಕ್ರುದ್ದನಾದ ಶಿವನು, ಇನ್ನುಮುಂದೆ ಮೂರು ಜಗತ್ತುಗಳಲ್ಲಿ ಯಾರೊಬ್ಬರೂ ನಿನ್ನನ್ನು ಪೂಜಿಸದಂತೆ ಇರಲಿ ಎಂಬ ಶಾಪವನ್ನು ಕೊಟ್ಟನು. ಹೀಗಾಗಿ ಕೇದಗೆಯ ಸುಳ್ಳು ಸಾಕ್ಷಿಯನ್ನು ಹೇಳಿದ್ದರಿಂದ ಕೇದಗೆಯ ಭಗವಾನ್ ಶಿವನ ಪೂಜೆಗೆ ಅರ್ಹವಲ್ಲದ ಹೂವಾಗಿದೆ.
ಎಲ್ಲಾ ಪೂಜೆಗಳಲ್ಲೂ ಹರಿಶಿಣವನ್ನು ಹೆಚ್ಚಾಗಿ ಬಳಸಲಾಗುತ್ತದೆ.ಶಿವಲಿಂಗಕ್ಕೆ ಎರಡು ಭಾಗಗಳಿವೆ, ಒಂದು ಶಿವನೊಂದಿಗೆ ಸಂಬಂಧ ಹೊಂದಿದ್ದರೆ ಮತ್ತೊಂದು ದೇವಿ ಪಾರ್ವತಿಯೊಂದಿಗೆ ಸಂಭಂದ ಹೊಂದಿದೆ.ಹಾಗೂ ಸ್ತ್ರೀತ್ವವನ್ನು ಪ್ರತಿನಿಧಿಸುತ್ತದೆ. ಹರಿಶಿಣವನ್ನು ಸೌಂದರ್ಯವರ್ಧಕವಾಗಿ, ಮಹಿಳೆಯರು ಬಳಸುವುದರಿಂದ, ಇದನ್ನು ಶಿವಲಿಂಗದಲ್ಲಿ ಬಳಸಲಾಗುವುದಿಲ್ಲ ಆದರೆ ನೀವು ಜಲಧಾರಿಯ ಮೇಲೆ ಬಳಸಬಹುದು.
ವಿವಾಹಿತ ಮಹಿಳೆಯರಿಗೆ ಕುಂಕುಮ್ ಪವಿತ್ರವೆಂದು ಪರಿಗಣಿಸಲಾಗಿದೆ ಮತ್ತು ಮಹಿಳೆಯರು ತಮ್ಮ ಪತಿಯ ದೀರ್ಘಾವಧಿಯ ಆಶೀರ್ವಾದವನ್ನು ಪಡೆಯುತ್ತಾರೆ.
ಆದರೆ ಭಗವಾನ್ ಶಿವನು ಲಯಕರ್ತನಾಗಿರುವುದರಿಂದ, ಕುಂಕುಮದೊಂದಿಗೆ ಪೂಜಿಸುವುದು ಮಂಗಳಕರವಲ್ಲ.
ತೆಂಗಿನಕಾಯಿ ಕೂಡ ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶಿಷ್ಟ ಸ್ಥಾನವನ್ನು ಹೊಂದಿದೆ. ಪ್ರತಿ ಹಿಂದೂ ಪೂಜಾದಲ್ಲಿ ತೆಂಗಿನಕಾಯಿಯನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ. ನಾವು ಅನೇಕ ಮಂಗಳಕರ ಕಾರ್ಯಕ್ರಮಗಳಲ್ಲಿ ದೇವರಿಗೆ ತೆಂಗಿನಕಾಯಿಯನ್ನು ಹೊಡೆಯುತ್ತೇವೆ. ಒಬ್ಬನು ಶಿವನಿಗೆ ತೆಂಗಿನಕಾಯಿ ನೀಡಬಹುದು, ಆದರೆ ಶಿವಲಿಂಗವನ್ನು ತೆಂಗಿನ ನೀರಿನೊಂದಿಗೆ ಪೂಜಿಸಬಾರದು.
ಶಿವಲಿಂಗಕ್ಕೆ ನೀಡುವ ಎಲ್ಲವನ್ನೂ ನಿರ್ಮಲಯಾ ಎಂದು ಪರಿಗಣಿಸಲಾಗುತ್ತದೆ, ಆದ್ದರಿಂದ ನದಿಗಳು, ಸರೋವರಗಳು ಮತ್ತು ಸಮುದ್ರದಲ್ಲಿ ಹೊರತುಪಡಿಸಿ ಎಲ್ಲಿ ಬೇಕಾದರೂ ಸೇವಿಸದಂತೆ ನಿಷೇಧಿಸಲಾಗಿದೆ. ಮತ್ತು ದೇವತೆಗಳ ಮೇಲೆ ಅರ್ಪಿಸಿದ ನಂತರ ತೆಂಗಿನ ನೀರು ಸೇವಿಸುವುದರಿಂದ ಅದನ್ನು ಕುಡಿಯಲು ಕಡ್ಡಾಯವಾಗಿ ಪರಿಗಣಿಸಲಾಗುತ್ತದೆ, ಹಾಗಾಗಿ ಅದನ್ನು ಶಿವಲಿಂಗ ಪೂಜೆಯಲ್ಲಿ ಬಳಸಲಾಗುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…
ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…
ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….
ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…
ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.