ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.

ರಿಯಲ್ಟಿ, ಬ್ಯಾಂಕಿಂಗ್, ಹಣಕಾಸು, ಕ್ಯಾಪಿಟಲ್ ಗೂಡ್ಸ್ ರಂಗದ ಶೇರುಗಳು ತೀವ್ರ ಮಾರಾಟದ ಒತ್ತಕ್ಕೆ ಗುರಿಯಾದವು. ಪರಿಣಾಮವಾಗಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,000ಕ್ಕಿಂತ ಕೆಳ ಮಟ್ಟಕ್ಕೆ ಜಾರಿ 9,977.10 ಅಂಕಗಳ ಮಟ್ಟಕ್ಕೆ ಕುಸಿಯಿತು.

‘ಉತ್ತರ ಕೊರಿಯವನ್ನುನಿರ್ನಾಮ ಮಾಡುವುದು ನಮಗೆ ಕಷ್ಟದ ಕೆಲಸವೇನೂ ಅಲ್ಲ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಬೆನ್ನಿಗೇ ಉತ್ತರ ಕೊರಿಯ, ತಾನು ಶಾಂತ ಸಾಗರದಲ್ಲಿ ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆಯನ್ನು ಕೈಗೊಳ್ಳುವುದಾಗಿ ಬೆದರಿಕೆ ಹಾಕಿತು.

ಈ ನಡುವೆ ಡಾಲರ್ ಎದುರು ಕುಸಿದ ರೂಪಾಯಿ ದರ 4 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದು ಶೇರು ಮಾರುಕಟ್ಟೆಗೆ ಆಘಾತ ಒಡ್ಡಿತು.
ವಾರದ ಕೊನೇ ದಿನವಾದ ಇಂದು ಶುಕ್ರವಾರದ ವಹಿವಾಟನ್ನು ಸೆನ್ಸೆಕ್ಸ್ 457.99 ಅಂಕಗಳ ನಷ್ಟದೊಂದಿಗೆ 31,912.05 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತಾದರೆ, ನಿಫ್ಟಿ 161.05 ಅಂಕಗಳ ನಷ್ಟದೊಂದಿಗೆ 9,960.85 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ನಿರಾಶಾದಾಯಕವಾಗಿ ಮುಗಿಸಿತು.

ಬ್ಯಾಂಕ್ ನಿಫ್ಟಿ 441.75 ಅಂಕಗಳ ನಷ್ಟವನ್ನು ಅನುಭವಿಸಿದರೆ, ಐಟಿ ನಿಫ್ಟಿ 31.50 ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಇಂದಿನ ಟಾಪ್ ಗೇನರ್ಗಳು : ಎಚ್ ಸಿ ಎಲ್ ಟೆಕ್, ವಿಪ್ರೋ, ಭಾರ್ತಿ ಇನ್ಫ್ರಾಟೆಲ್;
ಟಾಪ್ ಲೂಸರ್ಗಳು : ಟಾಟಾ ಸ್ಟೀಲ್, ಹಿಂಡಾಲ್ಕೋ, ಎಸ್ ಬ್ಯಾಂಕ್, ಅಲ್ಟ್ರಾ ಟೆಕ್ ಸಿಮೆಂಟ್, ವೇದಾಂತ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ
ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…
ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…
ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…