News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

‘ಉಪ್ಪಿನ ಕಾಯಿ’ ಪ್ರಿಯರೇ ಜಾಸ್ತಿ ಉಪ್ಪಿನ ಕಾಯಿ ತಿಂದ್ರೆ, ಏನಾಗುತ್ತೆ ಗೊತ್ತಾ..?

1322

ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ  ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ  ಔತಣಕೂಟದ ಎಲೆಯಲ್ಲಿ ಊಟಕ್ಕೆ  ಉಪ್ಪಿನ ಕಾಯಿ ಇಲ್ಲ ಅಂದ್ರೆ  ಅ ಭೋಜನ ಅಸಂಪೂರ್ಣ  ಎನ್ನಿಸುತ್ತದೆ.

ಉಪ್ಪಿನಕಾಯಿಯಲ್ಲಿ ಹಲವು ಬಗೆಗಳಿವೆ:-  

ಮಾವಿನಕಾಯಿ, ಶುಂಠಿ, ನೆಲ್ಲಿಕಾಯಿ, ನಿಂಬೆಕಾಯಿ, ಎರಳಿಕಾಯಿ, ಬೆಳ್ಳುಳ್ಳಿ, ಹಾಗಲಕಾಯಿ, ಟೊಮೊಟೊ, ಮುಂತಾದವುಗಳಿಂದ ತಯಾರಿಸುವ ಉಪ್ಪಿನಕಾಯಿ ರುಚಿ ಅನುಭವಿಸಿದವರಿಗಷ್ಟೆ ತಿಳಿಯುತ್ತದೆ. ಯಾವುದೇ ಉಪ್ಪಿನಕಾಯಿ ತಿಂದರೂ ಪರವಾಗಿಲ್ಲ. ಆದರೆ ಹಿತಮಿತವಾಗಿರಬೇಕು. ಅತಿಯಾಗಿ ತಿಂದ್ರೆ  ಆರೋಗ್ಯಕ್ಕೆ ಹಾನಿಯುಂಟಾಗಲಿದೆ.

ಭಾರತೀಯರು ಉಪ್ಪಿನಕಾಯಿ ಪ್ರಿಯರು:-

ದೇಶದ ಎಲ್ಲಾ ಭಾಗಗಳಲ್ಲೂ ಬಗೆಬಗೆಯ ಉಪ್ಪಿನಕಾಯಿಗಳು ಬಳಕೆಯಲ್ಲಿವೆ. ಅವರವರ ರುಚಿಗೆ ತಕ್ಕಂತೆ ತಯಾರಾಗುತ್ತವೆ. ಊಟಕ್ಕೆ ಮಾತ್ರ ಉಪ್ಪಿನಕಾಯಿ ಬಳಸುವುದಷ್ಟೆ ಅಲ್ಲ. ಯಾವುದೇ ತಿಂಡಿ ಜತೆಯಲ್ಲೂ ಬಳಸಬಹುದಾಗಿದೆ. ಇಡ್ಲಿ, ರೊಟ್ಟಿ, ದೋಸೆ, ಮುಂತಾದ ತಿಂಡಿಗಳ ಜತೆಯಲ್ಲೂ ತಿನ್ನಬಹುದು. ಎಷ್ಟೋ ಬಾರಿ ಚಟ್ನಿ ಬದಲಿಗೆ ಉಪ್ಪಿನಕಾಯಿ ತಿಂದರೆ ಒಳ್ಳೆಯದು. ಅದಕ್ಕಿಂತ ಹೆಚ್ಚು ತಿಂದರೆ ಅನಾಹುತಗಳಿಗೆ ಆಹ್ವಾನ ನೀಡಿದಂತೆಯೇ.

 

ಉಪ್ಪಿನಕಾಯಿಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ, ಉಪ್ಪು, ಮಸಾಲೆಗಳಿರುತ್ತವೆ. ಉಪ್ಪಿನಕಾಯಿ ತಯಾರಿಸುವಾಗ ಅದು ಬಹಳ ದಿನ ಕೆಡದಂತಿರಲು ಹೆಚ್ಚಿನ ಪ್ರಮಣದಲ್ಲಿ ಎಣ್ಣೆ ಬಳಸುವುದುಂಟು. ಉಪ್ಪಿನಕಾಯಿ ಹೋಳುಗಳು ಎಣ್ಣೆಯನ್ನು ಹೀರಿಕೊಳ್ಳುತ್ತವೆ.  ಪರಿಸ್ಥಿತಿ ಹೀಗಿರುವಾಗ ನಾವೇನಾದರೂ ಅತಿಯಾಗಿ ಉಪ್ಪಿನಕಾಯಿ ಸೇವಿಸಿದರೆ,  ಎಣ್ಣೆಯಲ್ಲಿರುವ ಕೊಲೆಸ್ಟ್ರಾಲ್ ಅಂಶಗಳು ದೇಹವನ್ನು ಸೇರಿ ಹೃದಯ ಮತ್ತು ರಕ್ತನಾಳಗಳ ಮೇಲಿನ ಒತ್ತಡ ಹೆಚ್ಚಾಗಲು ಕಾರಣವಾಗುತ್ತವೆ. ಉಪ್ಪಿನಕಾಯಿಯಲ್ಲಿ ಉಪ್ಪಿನಾಂಶವೂ ಅಧಿಕವಾಗಿರುತ್ತದೆ. ಇದೂ ಕೂಡ ಹೃದಯದೊತ್ತಡಕ್ಕೆ ಕಾರಣವಾಗುತ್ತದೆ.

ಹೆಚ್ಚು ಉಪ್ಪು ದೇಹಕ್ಕೆ ಸೇರಿದಲ್ಲಿ ಉರಿಯೂತ ಮತ್ತು ನೀರನ್ನು ಹಿಡಿದಿಟ್ಟುಕೊಳ್ಳಲು ಆಸ್ಪದವಾಗಿ ಹಲವು ತೊಂದರೆಗಳಿಗೀಡು ಮಾಡುತ್ತದೆ. ಹೃದಯ ಸಂಬಂಧಿ ಖಾಯಿಲೆ ಗಳಿದ್ದವರು,  ಉಪ್ಪಿನಕಾಯಿ ಸೇವನೆ ಕುರಿತು ಎಚ್ಚರದಿಂದಿರಬೇಕು. ಹೃದಯದ ಒತ್ತಡದ ಸಮಸ್ಯೆಗಳಿರುವವರು ಇದರ ಬಳಕೆಯಿಂದ ದೂರ ಉಳಿದರೂ ಒಳ್ಳೆಯ ದಾಗುತ್ತದೆ. ಉಪ್ಪಿನಕಾಯಿಯಲ್ಲಿರುವ ಸೋಡಿಯಂ ಲವಣ, ಹೊಟ್ಟೆಯುಬ್ಬರಿಕೆಗೂ ದಾರಿ ಮಾಡಿಕೊಡುತ್ತದೆ. ಈ ಲವಣಾಂಶದಿಂದ ಹೊಟ್ಟೆಯಲ್ಲಿ ನೀರು ಉಳಿದು ಕೊಳ್ಳಲು ಸಾಧ್ಯವಾಗಿ ಕೆಲವು ಆಮ್ಲೀಯ ವಾಯುಗಳು ಉತ್ಪತ್ತಿಯಾಗುತ್ತವೆ.

ಉಪ್ಪಿನಕಾಯಿಯನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಮೂತ್ರಪಿಂಡಗಳ ಕಾರ್ಯದ ಮೇಲೂ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಉಪ್ಪಿನ ಕಾಯಿಯಲ್ಲಿರುವ ಕೆಲವು ಲವಣಗಳು ಮೂತ್ರಪಿಂಡಗಳ ಕೆಲಸ ಹೆಚ್ಚುವಂತೆ ಮಾಡುವುದರಿಂದ ಅಡ್ಡ ಪರಿಣಾಮಗಳಾಗುತ್ತವೆ.  ಆದ್ದರಿಂದ ಉಪ್ಪಿನಕಾಯಿಯನ್ನು ಮಿತವಾಗಿ ಸೇವಿಸಿ, ಆರೋಗ್ಯದ ಸುಧಾರಣೆಗೆ ಗಮನ ಹರಿಸಿ. ಊಟಕ್ಕೆ ತಕ್ಕ ಉಪ್ಪಿನಕಾಯಿಯಷ್ಟೆ ಇರಲಿ.ಹಾಗಿದ್ದಾಗ ಊಟದ ರುಚಿ, ದೈಹಿಕ ಆರೋಗ್ಯವೂ ಚೆಂದವಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ರೋಗಗಳನ್ನು ನಿವಾರಿಸುವ ಜೊತೆಗೆ, ದೇಹಕ್ಕೆ ತಂಪು ನೀಡುವ ಕರಬೂಜ ಹಣ್ಣಿನ ಉಪಯೋಗ ತಿಳಿಯಿರಿ .

    ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…

  • ಜೀವನಶೈಲಿ

    ಉಗರು ಕಚ್ಚೋ ಅಭ್ಯಾಸದಿಂದ ಆಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…

  • ಸುದ್ದಿ

    ಬಿಗ್ ಶಾಕಿಂಗ್!ತರಗತಿಯಲ್ಲೇ ಕುಡಿದು ರಂಪಾಟ ಮಾಡಿ ಸಿಕ್ಕಿ ಬಿದ್ದ ವಿದ್ಯಾರ್ಥಿನಿಯರು…

    ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ. ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು…

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡ್ ನಿಮ್ಮಲ್ಲಿ ಇದ್ರೆ, ನಿಮ್ಗೆ ಸಿಗಲಿದೆ ಕಾರ್ ಭಾಗ್ಯ..!ಹೇಗೆಂದು ತಿಳಿಯಲು ಮುಂದೆ ನೋಡಿ…

    ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು,ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…

  • ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…