ರಾಜಕೀಯ

ಉಪ್ಪಿ ತಮ್ಮ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ..!ತಿಳಿಯಲು ಇದನ್ನು ಓದಿ ..

172

ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ. ಇದೆಲ್ಲದರ ನಡುವೆ ಉಪ್ಪಿ ರಾಜಕೀಯ ಪ್ರವೇಶದ ಬಗ್ಗೆ ಕೆಲ ಸಿನಿಮಾ ಮತ್ತು ರಾಜಕೀಯದ ಗಣ್ಯರು ಮಾತನಾಡಿದ್ದಾರೆ.

ರಾಜಕೀಯಕ್ಕೆ ಬರೋದಾಗಿ ಘೋಷಿಸಿ ತೀವ್ರ ಸಂಚಲನ ಮೂಡಿಸಿದ್ದ ರಿಯಲ್ ಸ್ಟಾರ್ ಉಪೇಂದ್ರ ಅವರು ಇವತ್ತು ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದಾರೆ.

ಇವತ್ತು ರಾಜಕೀಯ ಪಕ್ಷದ ಹೆಸರು, ಸ್ವರೂಪ, ಪ್ರಣಾಳಿಕೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಶಿವಾನಂದ ಸರ್ಕಲ್ ಬಳಿಯ ಗಾಂಧಿಭವನದಲ್ಲಿ ಪಕ್ಷದ ಹೆಸರು ಘೋಷಣೆ ಮಾಡಿದ್ದಾರೆದೆ. ಜೊತೆಗೆ ಮುಂದಿನ ಚುನಾವಣೆಯಲ್ಲಿ ಪಕ್ಷದ ಪಾತ್ರ, ಕಾರ್ಯಕಾರಿ ಸಮಿತಿ ಮತ್ತು ಪಕ್ಷದ ಪ್ರಣಾಳಿಕೆಯನ್ನೂ ಉಪೇಂದ್ರ ಘೋಷಿಸಲಿದ್ದಾರೆ.

ಪಕ್ಷದ ಹೆಸರು:-

ಇತ್ತೀಚೆಗಷ್ಟೇ ಉಪೇಂದ್ರ ಅವರ ಪಕ್ಷದ ಹೆಸರು ಫೊಷಣೆಯಾಗಿದ್ದು, ಅವರ ಪಕ್ಷದ ಹೆಸರು ಪ್ರಜಾಕಾರಣ ಅಲ್ಲ, ಪ್ರಜಾಕೀಯವೂ ಅಲ್ಲ. ಬದಲಾಗಿ `ಉತ್ತಮ ಪ್ರಜಾ ಪಾರ್ಟಿ’ ಎಂದು ತಿಳಿಸಿದ್ದರು. ಸದಸ್ಯತ್ವ ನೋಂದಣಿ ಅರ್ಜಿಯಲ್ಲೂ ಉಪ್ಪಿ ಪಕ್ಷದ ಹೆಸರು ಬಹಿರಂಗವಾಗಿತ್ತು.

ಪ್ರಜಾಕೀಯ ಆಂದೋಲನದಿಂದ ಸುದ್ದಿ ಮಾಡುತ್ತಿರುವ ಉಪ್ಪಿಯ ಹೊಸ ರಾಜಕೀಯ ಪಕ್ಷದ ಹೆಸರು ತೀವ್ರ ಕುತೂಹಲವನ್ನು ಕೆರಳಿಸಿದೆ. ಈಗಾಗಲೇ ಸಿನಿಮಾ ರಂಗದಲ್ಲಿ ನಟರಾಗಿ, ನಿರ್ದೇಶಕರಾಗಿ ಮತ್ತು ಬರಹಗಾರರಾಗಿ ಉಪ್ಪಿ ಸೇವೆ ಸಲ್ಲಿದ್ದಾರೆ. ಈಗ ಪ್ರಜಾ ಸೇವೆ ಮಾಡಲು ರಾಜಕೀಯಕ್ಕೆ ಬರುತ್ತಿದ್ದಾರೆ.

ಸಭೆ ನಡೆಸುತ್ತಿರುವ ಉಪೇಂದ್ರ:-

ಈಗಾಗಲೇ ತಮ್ಮ ಆಪ್ತರ ಜೊತೆ ಸರಣಿ ಸಭೆ ನಡೆಸುತ್ತಿರುವ ಉಪೇಂದ್ರ, ತಮ್ಮ ಹೊಸ ಪಕ್ಷದ ಸದಸ್ಯತ್ವ ಪಡೆಯಲು ಬಯಸುವವರಿಗೆ ಅರ್ಜಿ ರೆಡಿ ಮಾಡಿದ್ದಾರೆ. ಶೀಘ್ರವೇ ರಾಜ್ಯದ ವಿವಿಧೆಡೆ ಸುತ್ತಾಡಿ ಜನರ ಅಭಿಪ್ರಾಯ ಸಂಗ್ರಹಿಸಲು ಉಪೇಂದ್ರ ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.


ಉಪ್ಪಿ ಹೊಸ ಪಕ್ಷಕ್ಕೆ ಸೇರುವವರಿಗೆ ಅರ್ಜಿಗಳನ್ನೂ ಈಗಾಗಲೆ ಸಿದ್ಧಪಡಿಸಿಕೊಳ್ಳಲಾಗಿದೆ. ಉಪ್ಪಿ ತಮ್ಮ ರಾಜಕೀಯ ಪ್ರವೇಶ ಬಗ್ಗೆ ಪ್ರಕಟಿಸುತ್ತಿದ್ದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯೂ ನಡೆದಿತ್ತು. ಉಪ್ಪಿ ರಾಜಕೀಯ ಪ್ರವೇಶದ ಬಗ್ಗೆ ಅದ್ಭುತ ಪ್ರತಿಕ್ರಿಯೆಯೂ ವ್ಯಕ್ತವಾಗಿತ್ತು.

ಬದಲಾವಣೆ ತರಲು ಉಪ್ಪಿ:-
ರಾಜಕೀಯದಲ್ಲಿ ಬದಲಾವಣೆ ತರಲು ಜನರ, ಅಭಿಮಾನಿಗಳ ಸಲಹೆ ಸೂಚನೆಗಳನ್ನು ಪಡೆಯಲು ಉಪೇಂದ್ರ ಇ-ಮೇಲ್ ವಿಳಾಸಗಳನ್ನೂ ಕೊಟ್ಟಿದ್ದರು. ಅದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಇ-ಮೇಲ್‌ಗಳು ಹರಿದುಬಂದಿದ್ದವು.


ನಾವು ಕಟ್ಟುವ ತೆರಿಗೆ ಹಣವನ್ನು ಪ್ರಜಾಪ್ರತಿನಿಧಿಗಳು ಸಮರ್ಥವಾಗಿ ಬಳಕೆ ಮಾಡಬೇಕು. ಅಂತಹವನ್ನು ನಾವು ಆಯ್ಕೆ ಮಾಡಬೇಕಾಗಿದೆ ಎಂದಿದ್ದರು ಉಪ್ಪಿ. ಸ್ವಚ್ಛಭಾರತದ ತರಹ ತಳಮಟ್ಟದಿಂದ ಈ ಕಾರ್ಯ ಆರಂಭವಾಗಬೇಕು ಎಂದಿರುವ ಉಪೇಂದ್ರ ತಮ್ಮ ಪಕ್ಷಕ್ಕೆ ಸೇರುವ ಎಲ್ಲರಿಗೂ ಮುಕ್ತ ಆಹ್ವಾನ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಡಿತರ ಚೀಟಿ ಇಲ್ಲದವರಿಗೂ ‘ಶುಭ ಸುದ್ದಿ’ ನೀಡಿದ ಸಿಎಂ ಯಡಿಯೂರಪ್ಪ…!

    ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.ಮನೆ ಹಾನಿಗೊಳಗಾದ ಸಂತ್ರಸ್ಥರಿಗೆ 5 ಲಕ್ಷ ರೂ. ನೀಡಲಿದ್ದು, ಮೊದಲ ಕಂತಿನಲ್ಲಿ ಪಡಿತರ ಚೀಟಿ ಹೊಂದಿದವರಿಗೆ  1 ಲಕ್ಷ ರೂ. ನೀಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಮನೆಯಲ್ಲಿ ಇಬ್ಬರು ಮೂವರು ಅಣ್ಣತಮ್ಮಂದಿರು ಇದ್ದ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಮನೆ ನಿರ್ಮಾಣಕ್ಕೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದ್ದು, ಇದಕ್ಕೆ ಸಿಎಂ…

  • ಸುದ್ದಿ

    ವಿಟಮಿನ್ ‘ಡಿ’ ಮಹಿಳೆಯರಿಗೆ ಯಾಕೆ ಮುಖ್ಯ ಗೊತ್ತ…?

    ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….

  • ವ್ಯಕ್ತಿ ವಿಶೇಷಣ

    ‘ಗೂಗಲ್’ ಕಂಪನಿಯ ಸಿಇಒ ಭಾರತೀಯರಾದ ‘ಸುಂದರ್ ಪಿಚೈ ‘..!ಬಗ್ಗೆ ತಿಳಿಯಲು ಈ ಲೇಖನ ಓದಿ …

    ಸುಂದರ್‌ ಪಿಚೈ ಅವರು ಮೊದಲು ಕಂಪನಿಯ ಇಂಟರ್‌ ನೆಟ್‌ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್‌ ಮತ್ತು ಇಂಜಿನಿಯರಿಂಗ್‌ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.

  • ಸಿನಿಮಾ

    ದರ್ಶನ್ ಯಶ್ ಸಹ ನನ್ನ ಎರಡು ಮಕ್ಕಳು ಆದ್ರೂ ನಾನು ಅವರನ್ನು ಕರೆಸಿಕೊಳ್ಳುವುದಿಲ್ಲ ಅಂತ ಸುಮಲತಾ ಹೇಳಿದ್ದೇಕೆ ಗೊತ್ತಾ..?

    ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನು ಏನು ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ದರ್ಶನ್ ಬೆಂಬಲ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ ಅವರು, “ದರ್ಶನ್ ಹಾಗೂ ಯಶ್ ನನ್ನ ಮನೆ ಮಕ್ಕಳು. ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನೇನೇ ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ. ಅಭಿಷೇಕ್ ನಿಂದ ನಿರೀಕ್ಷೆ ಮಾಡುವ ಎರಡರಷ್ಟು ನನ್ನಿಂದ ನಿರೀಕ್ಷೆ ಮಾಡಿ ಎಂದು ದರ್ಶನ್ ಹೇಳುತ್ತಾರೆ….

  • ಸುದ್ದಿ

    ಈ ವಿಲನ್ ತನ್ನ ಹೆಂಡತಿಯನ್ನು ಹೇಗೆ ಕಳೆದುಕೊಂಡರು ಗೊತ್ತಾ, ಕಣ್ಣಲ್ಲಿ ನೀರು ಬರುತ್ತೆ.

    ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….

  • inspirational

    ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..

    ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ‌. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…