ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ. ಇದೆಲ್ಲದರ ನಡುವೆ ಉಪ್ಪಿ ರಾಜಕೀಯ ಪ್ರವೇಶದ ಬಗ್ಗೆ ಕೆಲ ಸಿನಿಮಾ ಮತ್ತು ರಾಜಕೀಯದ ಗಣ್ಯರು ಮಾತನಾಡಿದ್ದಾರೆ.
ರಾಜಕೀಯಕ್ಕೆ ಬರೋದಾಗಿ ಘೋಷಿಸಿ ತೀವ್ರ ಸಂಚಲನ ಮೂಡಿಸಿದ್ದ ರಿಯಲ್ ಸ್ಟಾರ್ ಉಪೇಂದ್ರ ಅವರು ಇವತ್ತು ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದಾರೆ.
ಇವತ್ತು ರಾಜಕೀಯ ಪಕ್ಷದ ಹೆಸರು, ಸ್ವರೂಪ, ಪ್ರಣಾಳಿಕೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಶಿವಾನಂದ ಸರ್ಕಲ್ ಬಳಿಯ ಗಾಂಧಿಭವನದಲ್ಲಿ ಪಕ್ಷದ ಹೆಸರು ಘೋಷಣೆ ಮಾಡಿದ್ದಾರೆದೆ. ಜೊತೆಗೆ ಮುಂದಿನ ಚುನಾವಣೆಯಲ್ಲಿ ಪಕ್ಷದ ಪಾತ್ರ, ಕಾರ್ಯಕಾರಿ ಸಮಿತಿ ಮತ್ತು ಪಕ್ಷದ ಪ್ರಣಾಳಿಕೆಯನ್ನೂ ಉಪೇಂದ್ರ ಘೋಷಿಸಲಿದ್ದಾರೆ.
ಪಕ್ಷದ ಹೆಸರು:-
ಇತ್ತೀಚೆಗಷ್ಟೇ ಉಪೇಂದ್ರ ಅವರ ಪಕ್ಷದ ಹೆಸರು ಫೊಷಣೆಯಾಗಿದ್ದು, ಅವರ ಪಕ್ಷದ ಹೆಸರು ಪ್ರಜಾಕಾರಣ ಅಲ್ಲ, ಪ್ರಜಾಕೀಯವೂ ಅಲ್ಲ. ಬದಲಾಗಿ `ಉತ್ತಮ ಪ್ರಜಾ ಪಾರ್ಟಿ’ ಎಂದು ತಿಳಿಸಿದ್ದರು. ಸದಸ್ಯತ್ವ ನೋಂದಣಿ ಅರ್ಜಿಯಲ್ಲೂ ಉಪ್ಪಿ ಪಕ್ಷದ ಹೆಸರು ಬಹಿರಂಗವಾಗಿತ್ತು.
ಪ್ರಜಾಕೀಯ ಆಂದೋಲನದಿಂದ ಸುದ್ದಿ ಮಾಡುತ್ತಿರುವ ಉಪ್ಪಿಯ ಹೊಸ ರಾಜಕೀಯ ಪಕ್ಷದ ಹೆಸರು ತೀವ್ರ ಕುತೂಹಲವನ್ನು ಕೆರಳಿಸಿದೆ. ಈಗಾಗಲೇ ಸಿನಿಮಾ ರಂಗದಲ್ಲಿ ನಟರಾಗಿ, ನಿರ್ದೇಶಕರಾಗಿ ಮತ್ತು ಬರಹಗಾರರಾಗಿ ಉಪ್ಪಿ ಸೇವೆ ಸಲ್ಲಿದ್ದಾರೆ. ಈಗ ಪ್ರಜಾ ಸೇವೆ ಮಾಡಲು ರಾಜಕೀಯಕ್ಕೆ ಬರುತ್ತಿದ್ದಾರೆ.
ಸಭೆ ನಡೆಸುತ್ತಿರುವ ಉಪೇಂದ್ರ:-
ಈಗಾಗಲೇ ತಮ್ಮ ಆಪ್ತರ ಜೊತೆ ಸರಣಿ ಸಭೆ ನಡೆಸುತ್ತಿರುವ ಉಪೇಂದ್ರ, ತಮ್ಮ ಹೊಸ ಪಕ್ಷದ ಸದಸ್ಯತ್ವ ಪಡೆಯಲು ಬಯಸುವವರಿಗೆ ಅರ್ಜಿ ರೆಡಿ ಮಾಡಿದ್ದಾರೆ. ಶೀಘ್ರವೇ ರಾಜ್ಯದ ವಿವಿಧೆಡೆ ಸುತ್ತಾಡಿ ಜನರ ಅಭಿಪ್ರಾಯ ಸಂಗ್ರಹಿಸಲು ಉಪೇಂದ್ರ ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಉಪ್ಪಿ ಹೊಸ ಪಕ್ಷಕ್ಕೆ ಸೇರುವವರಿಗೆ ಅರ್ಜಿಗಳನ್ನೂ ಈಗಾಗಲೆ ಸಿದ್ಧಪಡಿಸಿಕೊಳ್ಳಲಾಗಿದೆ. ಉಪ್ಪಿ ತಮ್ಮ ರಾಜಕೀಯ ಪ್ರವೇಶ ಬಗ್ಗೆ ಪ್ರಕಟಿಸುತ್ತಿದ್ದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯೂ ನಡೆದಿತ್ತು. ಉಪ್ಪಿ ರಾಜಕೀಯ ಪ್ರವೇಶದ ಬಗ್ಗೆ ಅದ್ಭುತ ಪ್ರತಿಕ್ರಿಯೆಯೂ ವ್ಯಕ್ತವಾಗಿತ್ತು.
ಬದಲಾವಣೆ ತರಲು ಉಪ್ಪಿ:-
ರಾಜಕೀಯದಲ್ಲಿ ಬದಲಾವಣೆ ತರಲು ಜನರ, ಅಭಿಮಾನಿಗಳ ಸಲಹೆ ಸೂಚನೆಗಳನ್ನು ಪಡೆಯಲು ಉಪೇಂದ್ರ ಇ-ಮೇಲ್ ವಿಳಾಸಗಳನ್ನೂ ಕೊಟ್ಟಿದ್ದರು. ಅದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಇ-ಮೇಲ್ಗಳು ಹರಿದುಬಂದಿದ್ದವು.
ನಾವು ಕಟ್ಟುವ ತೆರಿಗೆ ಹಣವನ್ನು ಪ್ರಜಾಪ್ರತಿನಿಧಿಗಳು ಸಮರ್ಥವಾಗಿ ಬಳಕೆ ಮಾಡಬೇಕು. ಅಂತಹವನ್ನು ನಾವು ಆಯ್ಕೆ ಮಾಡಬೇಕಾಗಿದೆ ಎಂದಿದ್ದರು ಉಪ್ಪಿ. ಸ್ವಚ್ಛಭಾರತದ ತರಹ ತಳಮಟ್ಟದಿಂದ ಈ ಕಾರ್ಯ ಆರಂಭವಾಗಬೇಕು ಎಂದಿರುವ ಉಪೇಂದ್ರ ತಮ್ಮ ಪಕ್ಷಕ್ಕೆ ಸೇರುವ ಎಲ್ಲರಿಗೂ ಮುಕ್ತ ಆಹ್ವಾನ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.
ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.