ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.
ಸಂಸ್ಕೃತದಲ್ಲಿ ನಾಗವಲ್ಲಿ ಎಂದು ಕರೆಯಲ್ಪಡುವ ಇದು ರುಚಿಯಲ್ಲಿ ಕಟು (ಖಾರ), ತಿಕ್ತ (ಕಹಿ), ಮಧುರ (ಸಿಹಿ) ರಸಗಳಿಂದ ಕೂಡಿದ್ದ ಉಷ್ಣ, ತೀಕ್ಷ್ಣ ಹಾಗೂ ಕ್ಷಾರ ಗುಣವುಳ್ಳದ್ದಾಗಿದೆ.
ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ನಾಗವಲ್ಲಿ ವೃಷ್ಯ ಎಂದರೆ ಕಾಮೋತ್ತೇಜಕವಾಗಿದ್ದು, ಬಸ್ತಿರೋಧಕ, ಮೂತ್ರಪಿಂಡ ಹಾಗೂ ಹೃದಯ ರೋಗಗಳಲ್ಲಿ ಹೆಚ್ಚು ಉಪಯುಕ್ತವಾಗುತ್ತದೆ.ತಾಂಬೂಲ ಸೇವಿಸುತ್ತಿದ್ದರು.
ಹಳ್ಳಿಗಳಲ್ಲಿ ಊಟದ ನಂತರ ತಾಂಬೂಲ ಸೇವನಾ ಸಾಮಾನ್ಯ, ಹಳ್ಳಿಗರಿಗೆ ಅದರ ಲಾಭವೂ ಗೊತ್ತಿದೆ, ಊಟದ ನಂತರ ತಾಂಬೂಲ ಸೇವನೆಯಿಂದ ಜೀರ್ಣಕ್ರೀಯೆ ಸುಲಭವಾದರೆ, ಹಲ್ಲುಗಳು ಗಟ್ಟಿಯಾಗುತ್ತವೆ ಎನ್ನುವುದು ಹಳ್ಳಿಗಳಲ್ಲಿ ಪ್ರತಿಯೊಬ್ಬರಿಗೂ ತಿಳಿದಿರುವ ಸಾಮಾನ್ಯ ಸಂಗತಿ.
ಇಷ್ಟೆ ಅಲ್ಲ ತಾಂಬೂಲ ಸೇವನೆಯಿಂದ ನಿಮಗೆ ಗೊತ್ತಿದರ ಅನೇಕ ಲಾಭಗಳೂ ಇವೆ. ಮಧುಮೇಹ ರೋಗವುಳ್ಳವರಿಗೆ ತಾಂಬೂಲ ಸೇವನೆ ಒಂದು ಪಥ್ಯ ಅಭ್ಯಾಸ. ದಿನದಲ್ಲಿ ಎರಡು ಅಥವಾ ಮೂರು ಸಲ, ಊಟವಾದ ನಂತರ ತಾಂಬೂಲ ಸೇವಿಸುವುದು ಹಿತಕರ ಹಾಗೂ ಆರೋಗ್ಯದಾಯಕ.
ಪ್ರತಿದಿನ ತಾಂಬೂಲ ಸೇವನೆ ಮಾಡುವುದರಿಂದ ಶರೀರದ ಉಷ್ಣತೆ ಸಮತೋಲನದಲ್ಲಿದ್ದು, ಮುಖ ಮತ್ತು ಚರ್ಮದ ಕಾಂತಿ ಹೆಚ್ಚಾಗುತ್ತದೆ. ಮನಸ್ಸು ಪ್ರಸನ್ನಗೊಳ್ಳುತ್ತದೆ, ಬುದ್ಧಿ ಚುರುಕಾಗುತ್ತದೆ. ಮುಪ್ಪು ಮುಂದೂಡಲ್ಪಟ್ಟು ಯೌವನ ದೀರ್ಘಕಾಲ ರಕ್ಷಿಸಲ್ಪಡುತ್ತದೆ.
ಇವೆಲ್ಲಕ್ಕಿಂತ ಮೇಲಾಗಿಸ್ತ್ರೀ-ಪುರುಷರಿಬ್ಬರಿಗೂ ತಾಂಬೂಲ ಉತ್ತಮ ಕಾಮೋತ್ತೇಜಕವಾಗಿದ್ದು, ಮುದ ನೀಡುತ್ತದೆ. ವೀಳ್ಯದ ಎಳೆಯಲ್ಲಿ ಕಾಮವನ್ನು ಉತ್ತೇಜಿಸುವ ಅಂಶಗಳಿದ್ದು, ಹಿಂದಿನ ಕಾಲದಲ್ಲಿ ಪತಿ – ಪತ್ನಿಯರು ಮಲಗುವ ಮುನ್ನ ಸಾಮಾನ್ಯವಾಗಿ ತಾಂಬೂಲ ಸೇವಿಸುತ್ತಿದ್ದರು.
ಮಧುಮೇಹದಲ್ಲಿ ಬಾಯಾರಿಕೆ ಹಾಗೂ ಬಾಯಿಂದ ದುರ್ಗಂಧ, ವಾಸನೆ ಇವು ಸಾಮಾನ್ಯ.
ಈ ತೊಂದರೆಗಳ ನಿವಾರಣೆಗೆ ತಾಂಬೂಲ ಸೇವನೆ ಉತ್ತಮ ಉಪಚಾರ ಎನ್ನಲಾಗಿದೆ. ತಾಂಬೂಲ ಸೇವನೆಯನ್ನು ಯಾವಾಗಲೂ ಊಟದ ನಂತರ ಮಾಡಬೇಕು. ಎಲೆ, ಅಡಿಕೆ, ಸುಣ್ಣಗಳನ್ನು ಚೆನ್ನಾಗಿ ಅಗಿದ ಮೇಲೆ ಸುಗಂಧ ದ್ರವ್ಯಗಳಾದ ಲವಂಗ, ಜಕಾಯಿ, ಗಂಧ ಮೆಣಸು, ಏಲಕ್ಕಿ, ನಾಗಕೇಸರಿ ಮುಂತಾದ ದ್ರವಗಳನ್ನು ಜತೆಗೆ ಸೇರಿಸಿಕೊಂಡು, ತಾಂಬೂಲವನ್ನು ಚೆನ್ನಾಗಿ ಅಗಿಯಬೇಕು. ಇದು ಬಾಯಿಯ ರುಚಿಯನ್ನು
ಹೆಚ್ಚು ಮಾಡುವುದೇ ಅಲ್ಲದೆ ಮನಸ್ಸಿಗೆ ಆಹ್ಲಾದವನ್ನು ನೀಡುತ್ತದೆ. ಸಮೋತ್ತೇಜಕವಾಗಿದ್ದು, ಯೌವನವನ್ನು ಕಾಪಾಡುತ್ತದೆ.
ತಾಂಬೂಲ ಸೇವನೆಯಿಂದ ಆರೋಗ್ಯ ವೃದ್ಧಿಗೊಳ್ಳುತ್ತದೆ. ತಾಂಬೂಲವು ಬಾಯಿಗೆ ನಿರ್ಮಲತೆ ಮತ್ತು ಪರಿಮಳ ಕೊಟ್ಟು ಮುಖದಲ್ಲಿ ಕಾಂತಿ ಮತ್ತು ಪ್ರಸನ್ನತೆಯನ್ನುಂಟುಮಾಡುತ್ತದೆ. ದವಡೆ ಹಲ್ಲು, ವಸಡುಗಳಿಗೆ ಬಲ, ನಾಲಿಗೆಗೆ ರುಚಿ ಕೊಡುತ್ತದೆ. ಸ್ವರವನ್ನು ಸ್ವಚ್ಛಗೊಳಿಸಿ, ಮಲಬದ್ಧತೆ ನಿವಾರಿಸುತ್ತದೆ. ಬಾಯಿ ಮತ್ತು
ಗಂಟಲುಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿ ನೆಗಡಿ, ಗಂಟಲು ನೋವು ಮುಂತಾದ ರೋಗಗಳು ಉಂಟಾಗದಂತೆ ತಡೆಯುತ್ತದೆ.
ಜೀರ್ಣಾಂಗಗಳನ್ನು ಉದ್ದೀಪನಗೊಳಿಸಿ ಅಗ್ನಿಮಾಂದ್ಯ, ಅಜೀರ್ಣ ರೋಗಗಳನ್ನು ನಿವಾರಿಸುತ್ತದೆ.
ಗರದಿಕ್ಷ ಗುಲ್ಮ ಮುಂತಾದ ರೋಗಗಳಿಗೆ ಒಳ್ಳೆಯದು.
ತಾಂಬೂಲದ ಮೂರನೆ ಮುಖ್ಯ ಘಟಕವೇ ಸುಣ್ಣ. ಸುಧಾ, ಕ್ಷಾರ ಎಂದು ಕರೆಯಲ್ಪಡುವ ಇದು ತೀಕ್ಷ್ಣ ಉಷ್ಣ, ಕ್ಷಾರ ಗುಣಗಳಿಂದ ಕೂಡಿದ್ದು, ವಾತ ಕಫಾ ದೋಷಗಳನ್ನು
ನಾಶಮಾಡುತ್ತದೆ.
ದೇಹದಲ್ಲಿ ಕೊಬ್ಬಿನ ಅಂಶವನ್ನು ಕಡಿಮೆ ಮಾಡುವ ಗುಣವುಳ್ಳ ಸುಣ್ಣ ಒಳ್ಳೆಯ ಜೀರ್ಣಕಾರಕ ಹಾಗೂ ಕ್ರಿಮಿನಾಶಕವಾಗಿದೆ. ಮೂಳೆ ಮತ್ತು ದಂತಗಳ
ಬೆಳವಣಿಗೆ ಮತ್ತು ಪೋಷಣೆಗೆ ಸಹಾಯ ಮಾಡುತ್ತವೆ. ತಾಂಬೂಲದ ಜತೆ ಉಪಯೋಗಿಸುವ ಲವಂಗ, ಏಲಕ್ಕಿ, ಜಾಕಾಯಿ, ಜಾಪತ್ರೆ, ಪಚ್ಚ ಕರ್ಪೂರ ಮುಂತಾದ ಸುಗಂಧ
ದ್ರವ್ಯಗಳು ತಾಂಬೂಲಕ್ಕೆ ಪರಿಮಳ ಮತ್ತು ರುಚಿಯನ್ನು ಕೊಡುವುದೇ ಅಲ್ಲದೆ ಅನೇಕ ಉತ್ತಮ ಔಷದ ಗುಣಗಳನ್ನು ಹೊಂದಿದ್ದು, ಆರೋಗ್ಯ ಸುಧಾರಣೆಗೆ ಪೂರಕವಾಗುತ್ತವೆ.
ನಿಮ್ಮ ಆರೋಗ್ಯಕ್ಕೆ
ಇಂತಹ ಅಮೂಲ್ಯ ಔಷದ ಗುಣಗಳಿಂದ ಕೂಡಿರುವ ತಾಂಬೂಲ ಸೇವನೆಗೆ ನಮ್ಮ ಪ್ರಾಚೀನ ಆಯುರ್ವೇದ ವೈದ್ಯಶಾಸ್ತ್ರ ಬಹಳ ಮಹತ್ವ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವರಿಗೆ ಭವಿಷ್ಯ ಏನೆಂದು ಖಚಿತವಾಗಿಲ್ಲ ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ರಾಷ್ಟ್ರೀಯ ತಂಡದಲ್ಲಿ ಮತ್ತು ಅವರ ಐಪಿಎಲ್ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭವಿಷ್ಯದ ಸೆಟ್ಅಪ್ನಲ್ಲಿ ಆಡಲು ಪಾತ್ರವನ್ನು ಹೊಂದಿರುತ್ತಾರೆ ಎಂದು ವಿಶ್ವಾಸ ಹೊಂದಿದ್ದಾರೆ. ಸಮಕಾಲೀನ ಕ್ರಿಕೆಟ್ನ ಶ್ರೇಷ್ಠ ಬ್ಯಾಟರ್ಗಳಲ್ಲಿ ಒಬ್ಬರಾದ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್ನಲ್ಲಿ ಎಲ್ಲಾ ರೀತಿಯ ಆಟದಿಂದ ನಿವೃತ್ತರಾಗಿದ್ದರು. “ಎಸ್ಎ ಕ್ರಿಕೆಟ್ನಲ್ಲಿ ಮತ್ತು ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ನಾನು ಇನ್ನೂ ಒಂದು ಪಾತ್ರವನ್ನು ವಹಿಸುತ್ತೇನೆ…
ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ
ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…