ಜೀವನಶೈಲಿ

ಊಟದ ನಂತರ ತಾಂಬೂಲ ಸೇವನೆಯು ನಿಮ್ಮ ಆರೋಗ್ಯಕ್ಕೆ ಒಳೆಯದಾ.?. ಕೆಟ್ಟದಾ..? ತಿಳಿಯಲು ಈ ಲೇಖನ ಓದಿ …

2030

ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.

ಸಂಸ್ಕೃತದಲ್ಲಿ ನಾಗವಲ್ಲಿ ಎಂದು ಕರೆಯಲ್ಪಡುವ ಇದು ರುಚಿಯಲ್ಲಿ ಕಟು (ಖಾರ), ತಿಕ್ತ (ಕಹಿ), ಮಧುರ (ಸಿಹಿ) ರಸಗಳಿಂದ ಕೂಡಿದ್ದ ಉಷ್ಣ, ತೀಕ್ಷ್ಣ ಹಾಗೂ ಕ್ಷಾರ ಗುಣವುಳ್ಳದ್ದಾಗಿದೆ.

ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ನಾಗವಲ್ಲಿ ವೃಷ್ಯ ಎಂದರೆ ಕಾಮೋತ್ತೇಜಕವಾಗಿದ್ದು, ಬಸ್ತಿರೋಧಕ, ಮೂತ್ರಪಿಂಡ ಹಾಗೂ ಹೃದಯ ರೋಗಗಳಲ್ಲಿ ಹೆಚ್ಚು ಉಪಯುಕ್ತವಾಗುತ್ತದೆ.ತಾಂಬೂಲ ಸೇವಿಸುತ್ತಿದ್ದರು.

ಹಳ್ಳಿಗಳಲ್ಲಿ ಊಟದ ನಂತರ ತಾಂಬೂಲ ಸೇವನಾ ಸಾಮಾನ್ಯ, ಹಳ್ಳಿಗರಿಗೆ ಅದರ ಲಾಭವೂ ಗೊತ್ತಿದೆ, ಊಟದ ನಂತರ ತಾಂಬೂಲ ಸೇವನೆಯಿಂದ ಜೀರ್ಣಕ್ರೀಯೆ ಸುಲಭವಾದರೆ, ಹಲ್ಲುಗಳು ಗಟ್ಟಿಯಾಗುತ್ತವೆ ಎನ್ನುವುದು  ಹಳ್ಳಿಗಳಲ್ಲಿ ಪ್ರತಿಯೊಬ್ಬರಿಗೂ ತಿಳಿದಿರುವ ಸಾಮಾನ್ಯ ಸಂಗತಿ.

ಇಷ್ಟೆ ಅಲ್ಲ ತಾಂಬೂಲ ಸೇವನೆಯಿಂದ ನಿಮಗೆ ಗೊತ್ತಿದರ ಅನೇಕ ಲಾಭಗಳೂ ಇವೆ. ಮಧುಮೇಹ ರೋಗವುಳ್ಳವರಿಗೆ ತಾಂಬೂಲ ಸೇವನೆ ಒಂದು ಪಥ್ಯ ಅಭ್ಯಾಸ. ದಿನದಲ್ಲಿ ಎರಡು ಅಥವಾ ಮೂರು ಸಲ, ಊಟವಾದ ನಂತರ ತಾಂಬೂಲ ಸೇವಿಸುವುದು ಹಿತಕರ ಹಾಗೂ ಆರೋಗ್ಯದಾಯಕ.

ಪ್ರತಿದಿನ ತಾಂಬೂಲ ಸೇವನೆ ಮಾಡುವುದರಿಂದ ಶರೀರದ ಉಷ್ಣತೆ ಸಮತೋಲನದಲ್ಲಿದ್ದು, ಮುಖ ಮತ್ತು ಚರ್ಮದ ಕಾಂತಿ ಹೆಚ್ಚಾಗುತ್ತದೆ. ಮನಸ್ಸು ಪ್ರಸನ್ನಗೊಳ್ಳುತ್ತದೆ, ಬುದ್ಧಿ ಚುರುಕಾಗುತ್ತದೆ. ಮುಪ್ಪು ಮುಂದೂಡಲ್ಪಟ್ಟು ಯೌವನ ದೀರ್ಘಕಾಲ ರಕ್ಷಿಸಲ್ಪಡುತ್ತದೆ.

ಇವೆಲ್ಲಕ್ಕಿಂತ ಮೇಲಾಗಿಸ್ತ್ರೀ-ಪುರುಷರಿಬ್ಬರಿಗೂ ತಾಂಬೂಲ ಉತ್ತಮ ಕಾಮೋತ್ತೇಜಕವಾಗಿದ್ದು, ಮುದ ನೀಡುತ್ತದೆ. ವೀಳ್ಯದ ಎಳೆಯಲ್ಲಿ ಕಾಮವನ್ನು ಉತ್ತೇಜಿಸುವ ಅಂಶಗಳಿದ್ದು, ಹಿಂದಿನ ಕಾಲದಲ್ಲಿ ಪತಿ – ಪತ್ನಿಯರು ಮಲಗುವ ಮುನ್ನ ಸಾಮಾನ್ಯವಾಗಿ ತಾಂಬೂಲ ಸೇವಿಸುತ್ತಿದ್ದರು.

ಮಧುಮೇಹದಲ್ಲಿ ಬಾಯಾರಿಕೆ ಹಾಗೂ ಬಾಯಿಂದ ದುರ್ಗಂಧ, ವಾಸನೆ ಇವು ಸಾಮಾನ್ಯ.

ಈ ತೊಂದರೆಗಳ ನಿವಾರಣೆಗೆ ತಾಂಬೂಲ ಸೇವನೆ ಉತ್ತಮ ಉಪಚಾರ ಎನ್ನಲಾಗಿದೆ. ತಾಂಬೂಲ ಸೇವನೆಯನ್ನು ಯಾವಾಗಲೂ ಊಟದ ನಂತರ ಮಾಡಬೇಕು. ಎಲೆ, ಅಡಿಕೆ, ಸುಣ್ಣಗಳನ್ನು ಚೆನ್ನಾಗಿ ಅಗಿದ ಮೇಲೆ ಸುಗಂಧ ದ್ರವ್ಯಗಳಾದ ಲವಂಗ, ಜಕಾಯಿ, ಗಂಧ ಮೆಣಸು, ಏಲಕ್ಕಿ, ನಾಗಕೇಸರಿ ಮುಂತಾದ ದ್ರವಗಳನ್ನು ಜತೆಗೆ ಸೇರಿಸಿಕೊಂಡು, ತಾಂಬೂಲವನ್ನು ಚೆನ್ನಾಗಿ ಅಗಿಯಬೇಕು. ಇದು ಬಾಯಿಯ ರುಚಿಯನ್ನು

ಹೆಚ್ಚು ಮಾಡುವುದೇ ಅಲ್ಲದೆ ಮನಸ್ಸಿಗೆ ಆಹ್ಲಾದವನ್ನು ನೀಡುತ್ತದೆ. ಸಮೋತ್ತೇಜಕವಾಗಿದ್ದು, ಯೌವನವನ್ನು ಕಾಪಾಡುತ್ತದೆ.

ತಾಂಬೂಲ ಸೇವನೆಯಿಂದ ಆರೋಗ್ಯ ವೃದ್ಧಿಗೊಳ್ಳುತ್ತದೆ. ತಾಂಬೂಲವು ಬಾಯಿಗೆ ನಿರ್ಮಲತೆ ಮತ್ತು ಪರಿಮಳ ಕೊಟ್ಟು ಮುಖದಲ್ಲಿ ಕಾಂತಿ ಮತ್ತು ಪ್ರಸನ್ನತೆಯನ್ನುಂಟುಮಾಡುತ್ತದೆ. ದವಡೆ ಹಲ್ಲು, ವಸಡುಗಳಿಗೆ ಬಲ, ನಾಲಿಗೆಗೆ ರುಚಿ ಕೊಡುತ್ತದೆ. ಸ್ವರವನ್ನು ಸ್ವಚ್ಛಗೊಳಿಸಿ, ಮಲಬದ್ಧತೆ ನಿವಾರಿಸುತ್ತದೆ. ಬಾಯಿ ಮತ್ತು
ಗಂಟಲುಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿ ನೆಗಡಿ, ಗಂಟಲು ನೋವು ಮುಂತಾದ ರೋಗಗಳು ಉಂಟಾಗದಂತೆ ತಡೆಯುತ್ತದೆ.

ಜೀರ್ಣಾಂಗಗಳನ್ನು ಉದ್ದೀಪನಗೊಳಿಸಿ ಅಗ್ನಿಮಾಂದ್ಯ, ಅಜೀರ್ಣ ರೋಗಗಳನ್ನು ನಿವಾರಿಸುತ್ತದೆ.

ಗರದಿಕ್ಷ ಗುಲ್ಮ ಮುಂತಾದ ರೋಗಗಳಿಗೆ ಒಳ್ಳೆಯದು.

ತಾಂಬೂಲದ ಮೂರನೆ ಮುಖ್ಯ ಘಟಕವೇ ಸುಣ್ಣ. ಸುಧಾ, ಕ್ಷಾರ ಎಂದು ಕರೆಯಲ್ಪಡುವ ಇದು ತೀಕ್ಷ್ಣ  ಉಷ್ಣ, ಕ್ಷಾರ ಗುಣಗಳಿಂದ ಕೂಡಿದ್ದು, ವಾತ ಕಫಾ ದೋಷಗಳನ್ನು
ನಾಶಮಾಡುತ್ತದೆ.

ದೇಹದಲ್ಲಿ ಕೊಬ್ಬಿನ ಅಂಶವನ್ನು ಕಡಿಮೆ ಮಾಡುವ ಗುಣವುಳ್ಳ ಸುಣ್ಣ ಒಳ್ಳೆಯ ಜೀರ್ಣಕಾರಕ ಹಾಗೂ ಕ್ರಿಮಿನಾಶಕವಾಗಿದೆ. ಮೂಳೆ ಮತ್ತು ದಂತಗಳ
ಬೆಳವಣಿಗೆ ಮತ್ತು ಪೋಷಣೆಗೆ ಸಹಾಯ ಮಾಡುತ್ತವೆ. ತಾಂಬೂಲದ ಜತೆ ಉಪಯೋಗಿಸುವ ಲವಂಗ, ಏಲಕ್ಕಿ, ಜಾಕಾಯಿ, ಜಾಪತ್ರೆ, ಪಚ್ಚ ಕರ್ಪೂರ ಮುಂತಾದ ಸುಗಂಧ
ದ್ರವ್ಯಗಳು ತಾಂಬೂಲಕ್ಕೆ ಪರಿಮಳ ಮತ್ತು ರುಚಿಯನ್ನು ಕೊಡುವುದೇ ಅಲ್ಲದೆ ಅನೇಕ ಉತ್ತಮ ಔಷದ ಗುಣಗಳನ್ನು ಹೊಂದಿದ್ದು, ಆರೋಗ್ಯ ಸುಧಾರಣೆಗೆ ಪೂರಕವಾಗುತ್ತವೆ.

ನಿಮ್ಮ ಆರೋಗ್ಯಕ್ಕೆ

ಇಂತಹ ಅಮೂಲ್ಯ ಔಷದ ಗುಣಗಳಿಂದ ಕೂಡಿರುವ ತಾಂಬೂಲ ಸೇವನೆಗೆ ನಮ್ಮ ಪ್ರಾಚೀನ ಆಯುರ್ವೇದ ವೈದ್ಯಶಾಸ್ತ್ರ ಬಹಳ ಮಹತ್ವ ನೀಡಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    132 ಕೋಟಿಮೌಲ್ಯ ಬೆಲೆ ಬಾಳುವ ಈ ನಂಬರ್ ಪ್ಲೇಟನ್ನು ಮಾರಟಕ್ಕೆ ಇಟ್ಟಿದ್ದಾರೆ, ಇಷ್ಟಕ್ಕೂ ಇದರ ವಿಶೇಷತೆಯಾದರು ಏನು?

    ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್‌ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್‌ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್‌ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್‌ಗಳು…

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ತುಂಬಾನೆ ಬಿಳಿಯಾಗಿದೆ ಎಂದು ನಿಮ್ಗೆ ಅನಿಸುತ್ತಿದೆಯಾ..?ಏನು ಮಾಡಬೇಕು ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.

  • ಸುದ್ದಿ

    ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ ಸುಮಲತಾ ರವರು ಮಾಡಿರುವ ಈ ಗಂಭೀರ ಆರೋಪ..!

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…

  • ಸುದ್ದಿ

    ದೀಪಾವಳಿಯ ಹಬ್ಬಕ್ಕೆ-ಮನೆಯ ಮುಂಭಾಗ ಎಷ್ಟು ದೀಪಗಳಿರಬೇಕು ಗೊತ್ತಾ?

    ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…

  • ದೇಶ-ವಿದೇಶ, ವಿಸ್ಮಯ ಜಗತ್ತು

    ಮಹಿಳೆಯರಿಗೆ ವಾಸಿಸಲು ಅತ್ಯಂತ ಕಷ್ಟಕರವಾದ ದೇಶಗಳು ಯಾವುದು ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.

  • ಸುದ್ದಿ

    ಸರ್ಕಾರಿ ಬಸ್‌ಗಳಲ್ಲಿ ಇಂದಿನಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸ್ಟಾರ್ಟ್ …!

    ‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್‌(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…