ಸುದ್ದಿ

ಈ ಸಮ್ಮಿಶ್ರ ಸರ್ಕಾರಕ್ಕಿಂತ ಕುಮಾರಸ್ವಾಮಿ ಸರ್ಕಾರ ಸಾವಿರ ಪಟ್ಟು ಒಳ್ಳೆಯದು – ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ ಎಂ.ಬಿ ಪಾಟೀಲ್- ಇದಕ್ಕೆ ನಿಮ್ಮ ಉತ್ತರ.!

53

ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್​ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು. ಆಗ ಹೇಳಿದರೆ ಒಂದು ಬೆಲೆ ಇರ್ತಿತ್ತು. ಆದರೆ, ಅವರು ಈಗ ಹೇಳುವುದನ್ನು ಬಿಡಬೇಕು. ನಮ್ಮ ಬೆಂಬಲದಿಂದ ಸರ್ಕಾರ ರಚಿಸಿದ್ದಾರೆ ಎಂದು ಕಾಂಗ್ರೆಸ್​ ಮುಖಂಡ ಎಂಬಿ ಪಾಟೀಲ್​ ಅವರು ಕುಮಾರಸ್ವಾಮಿಗೆ ಟಾಂಗ್ ನೀಡಿದರು.

ಇನ್ನು ಬಿಜೆಪಿ ಸರ್ಕಾರ ನೆರೆ ಪರಿಹಾರಕ್ಕೆ ಒಂದೇ ಒಂದು ರೂಪಾಯಿ ಹಣ ಇಲ್ಲಿತನಕ ಬಿಡುಗಡೆ ಮಾಡಿಲ್ಲ, ಈ ಸರ್ಕಾರ ನೋಡಿದ್ರೆ ಕುಮಾರಸ್ವಾಮಿ ಸರ್ಕಾರ ಸಾವಿರ ಪಟ್ಟು ಒಳ್ಳೆಯದು ಎಂದ ಅವರು, ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ಏಜೆಂಟ್ ಆಗಿ ಕಾರ್ಯ ನಿರ್ವಸುತ್ತಿರುವುದು ನಿಶ್ಚಿತವಾಗಿದೆ ಜೊತೆಗೆ ಇಡಿ, ಐಟಿ ಕೂಡ ಕೇಂದ್ರದ ಕೈಗೊಂಬೆಯಾಗಿದೆ ಎಂದರು.

ಅಂತೆಯೇ ಇತ್ತೀಚಿಗೆ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರದ ಅನುದಾನ ಬೇಡ ಎನ್ನುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ತೇಜಸ್ವಿ ಸೂರ್ಯ ಒಬ್ಬ ಮೂರ್ಖ ಮನುಷ್ಯ. ಸೋಸಿಯಲ್ ಮೀಡಿಯಾದಲ್ಲಿ ಹೇಳಿಕೊಂಡು ಹೋಗುತ್ತಾರೆ ಎಂದು ಎಂಬಿ ಪಾಟೀಲ್​ ಅವರು ತೇಜಸ್ವಿ ಸೂರ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಅಷ್ಟೇ ಅಲ್ಲದೇ, ಕೇಂದ್ರ ಸರ್ಕಾರ, ವಿಪತ್ತು ಪರಿಹಾರ ಎಂದರೆ ಏನು ಗೊತ್ತಿದೆಯಾ(?) ಪ್ರಬದ್ಧತೆ ಇಲ್ಲದವರು. ರಾಜ್ಯದ ಸಂಸದರಾಗಿ ಹೆಚ್ಚಿನ ಅನುದಾನ ತರುತ್ತೇನೆ ಎಂದು ಹೇಳಬೇಕು. ಅದು ಬೆಳಗಾವಿಯಲ್ಲಿ ಈ ರೀತಿ ಹೇಳಿಕೆ ನೀಡಿರುವುದು ಸರಿಯಲ್ಲ, ಆದಷ್ಟು ಬೇಗನೆ ಸಂತ್ರಸ್ಥರಿಗೆ ಅವರು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಇದು ಕಪ್ಪು ಚುಕ್ಕೆಯಾಗುತ್ತದೆ ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಆಗ್ರಹಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…

  • ಸಿನಿಮಾ, ಸುದ್ದಿ

    ರೈತರ ಸಾಲ ಮನ್ನಾ ವಿಚಾರದಲ್ಲಿ ಕುಮಾರಸ್ವಾಮಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ದರ್ಶನ್…

    ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(10 ನವೆಂಬರ್, 2019) : ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಸಣ್ಣ ಮಕ್ಕಳು ನಿಮ್ಮನ್ನು ವ್ಯಸ್ತವಾಗಿರಿಸುತ್ತಾರೆ ಮತ್ತು ನಿಮಗೆ ಸಂತೋಷ ತರುತ್ತಾರೆ. ಇಂದು ನೀವು…

  • ದಿನಕ್ಕೊಂದು ನೀತಿ ಕಥೆ

    ಭೂಮಿ ಮೇಲೆ ಯಾರು ಹೆಚ್ಚು ಸುಖೀ?ರಾಜನಿಗೆ ಕಾಡಿದ ಈ ಪ್ರಶ್ನೆಗೆ ಉತ್ತರ ಕೊಟ್ಟವರು ಯಾರು ಗೊತ್ತಾ..?ತಿಳಿಯಲು ಈ ಕಥೆ ಓದಿ…

    ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.

  • ಸುದ್ದಿ

    ಯಶ್ ತುಂಬಿಸಿದ್ರು ಕೆರೆ, ಆಫಿಸರ್ಸ್ ತುಂಬಿಕೊಂಡ್ರು ಜೇಬು..!

    ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…

  • ಸುದ್ದಿ

    ಮದ್ವೆ ಆಗಲು ಏಳು ಸಮುದ್ರ ದಾಟಿ ಬಂದಳು!ಯಾವ ಲವ್ ಸ್ಟೋರಿಗೂ ಕಡಿಮೆಯಿಲ್ಲ ಇವರ ಪ್ರೀತಿ…

    ಪ್ರೀತಿ ಕುರುಡು. ಅದಕ್ಕೆ ವಯಸ್ಸು, ಜಾತಿ, ಊರಿನ ನಿರ್ಬಂಧವಿಲ್ಲ. ಏಳು ಸಮುದ್ರಗಳನ್ನು ದಾಟಿ ಬರುವ ತಾಕತ್ತು ಪ್ರೀತಿಗಿದೆ ಎನ್ನಲಾಗುತ್ತದೆ. ಈ ಮಾತು ಮಧ್ಯಪ್ರದೇಶದ ಹೋಷಂಗಾಬಾದ್ ಯುವಕನ ಪ್ರೀತಿ ವಿಚಾರದಲ್ಲಿ ನಿಜವಾಗಿದೆ. ದೀಪಕ್ ರಜಪೂತ್ ಎಂಬಾತನನ್ನು ಅಮೆರಿಕಾ ಪ್ರೇಯಸಿ ಮದುವೆಯಾಗಿದ್ದಾಳೆ. 36 ವರ್ಷದ ದೀಪಕ್ ಹಾಗೂ ಅಮೆರಿಕಾದ 40 ವರ್ಷದ ಜೂಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂಲಿ, ಯುಎಸ್ಎಯ ಮಾನವ ಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡ್ತಿದ್ದಾಳೆ. ಫೇಸ್ಬುಕ್ ನಲ್ಲಿ ಶುರುವಾದ ಸ್ನೇಹ, ವಾಟ್ಸಾಪ್, ಕರೆ ಮೂಲಕ ಪ್ರೀತಿಗೆ ತಿರುಗಿತ್ತು….