News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಶಿಕ್ಷಣ

ಎಸೆಸೆಲ್ಸಿ ಮುಗಿಯಿತು. ಮುಂದೇನು ಎನ್ನುವ ಯೋಚನೆಯೇ ???

902

ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ.  ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.

ಶೈಕ್ಷಣಿಕ ಕ್ಷೇತ್ರ ಎನ್ನವುದು ದಿನೇ ದಿನೇ ಬೆಳೆಯುತ್ತಿದೆ. ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್‌ಗಳಿಗೆ ವಿಪುಲ ಆಯ್ಕೆಗಳಿದ್ದು, ಔದ್ಯೋಗಿಕ ಅವಕಾಶಗಳಿಗೂ ಕೊರತೆ ಇಲ್ಲ. ಆದರೆ ಕೆಲವೊಂದು ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯಲ್ಲಿ ಎಡವುತ್ತಿದ್ದಾರೆ. ಕೋರ್ಸ್‌ ಮುಗಿದ ಬಳಿಕ ಉದ್ಯೋಗವಿಲ್ಲ ಎಂದು ಕೊರಗುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ಎಂದಿಗೂ ಕ್ರೇಝ್ನ ಹಿಂದೆ ಹೋಗದೆ ಅವಕಾಶಗಳ ಕುಳಿತು ತಿಳಿದುಕೊಳ್ಳುವುದು ಅಗತ್ಯ .

 

ಪಿಯುಸಿ :- 
ಹಿಂದೆ ಒಂದು ಕಾಲವಿತ್ತು. ಎಸೆಸೆಲ್ಸಿ ಬಳಿಕ ನೇರವಾಗಿ ಪಿಯುಸಿಗೆ ಹೋಗುತ್ತಿದ್ದರು. ಆಗ ಆಯ್ಕೆಗಳು ಕಡಿಮೆ ಇತ್ತು. ಯಾವುದಾದರೊಂದು ಕೋರ್ಸ್‌ ಮುಗಿಸಿ ಶಿಕ್ಷಣ ಮುಂದುವರಿಸುತ್ತಿದ್ದರು. ಆದರೆ ಇಂದು ಹಾಗಿಲ್ಲ. ಪಿಯುಸಿಯಲ್ಲಿ ಲಭ್ಯವಿರುವ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗಗಳಲ್ಲೇ ಹಲವು ಆಯ್ಕೆಗಳಿವೆ. ಇವುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ಅಗತ್ಯ.

ವಿದ್ಯಾರ್ಥಿಗಳಿಗೆ ಪಿಯುಸಿಯ ಆಯ್ಕೆ ಎನ್ನುವುದು ಕ್ರೇಝ್ ಆಗಿಬಿಟ್ಟಿದೆ. ಪಿಯುಸಿ ಸೈನ್ಸ್‌ ಎಂದು ಹೆಮ್ಮೆಯಿಂದ ತಿರುಗುತ್ತಿದ್ದಾರೆ. ಆದರೆ ಸೈನ್ಸ್‌ ತೆಗೆದುಕೊಂಡವರಿಗೆ ಎಲ್ಲರಿಗೂ ಉದ್ಯೋಗ ದೊರಕುತ್ತದೆ ಎಂದು ಹೇಳುವಂತಿಲ್ಲ. ಕೆಲವೊಂದು ಸಂದರ್ಭದಲ್ಲಿ ನಮ್ಮ ಆರ್ಥಿಕ ಸ್ಥಿತಿಯೂ ನಮ್ಮ ಓದನ್ನು ಮುಂದುವರಿಸಲು ಬಿಡುವುದಿಲ್ಲ. ಈ ಎಲ್ಲ ಬೆಳವಣಿಗೆಗಳ ಕುರಿತು ಆಲೋಚನೆ ಮಾಡಿಯೇ ನಮ್ಮ ಮುಂದಿನ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಅಧ್ಯಾಪಕ ವೃತ್ತಿಗೆ ತೆರಳುವವರಿಗೆ ಪಿಯುಸಿ ಉತ್ತಮ ಆಯ್ಕೆಯಾಗುತ್ತದೆ. ಜತೆಗೆ ವೈದ್ಯಕೀಯ, ಎಂಜಿನಿಯರಿಂಗ್‌ ಕ್ಷೇತ್ರಕ್ಕೂ ಅದು ಬೇಕಾಗುತ್ತದೆ. ಪಿಯುಸಿಯಲ್ಲಿ  ವಾಣಿಜ್ಯವನ್ನು ಆಯ್ಕೆ ಮಾಡಿಕೊಂಡರೆ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶವಿದೆ. ಈ ರೀತಿಯ ಆಲೋಚನೆ ಅಗತ್ಯವಾಗಿದೆ.

ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ :-
ಇಂದು ತಾಂತ್ರಿಕ ಶಿಕ್ಷಣ ಎನ್ನುವುದು ವಿಪುಲ ಉದ್ಯೋಗಾವಕಾಶವನ್ನು ಸೃಷ್ಟಿಸುತ್ತಿದೆ. ಹೀಗಾಗಿ ಐಟಿಐ ಹಾಗೂ ಡಿಪ್ಲೊಮಾ ಕೋರ್ಸ್‌ಗಳ ಕುರಿತು ಹೆಚ್ಚಿನ ಒಲವು ತೋರಬೇಕಿದೆ. ಈ ಕೋರ್ಸ್‌ಗಳಿಗೆ ಎಂಜಿನಿಯರಿಂಗ್‌ ಕೋರ್ಸ್‌ನಷ್ಟೇ ಮಹತ್ವವಿದೆ. ಜತೆಗೆ ಉದ್ಯೋಗವೂ ಅಷ್ಟೇ ಶೀಘ್ರದಲ್ಲಿ ಸಿಗುತ್ತದೆ. ಡಿಪ್ಲೊಮಾದಲ್ಲಿ ಸಿವಿಲ್‌, ಮೆಕ್ಯಾನಿಕಲ್‌, ಪ್ಲಂಬಿಂಗ್‌, ಇಲೆಕ್ಟ್ರಿಕಲ್‌ ಹೀಗೆ ಅನೇಕ ಆಯ್ಕೆಗಳಿವೆ. ಜತೆಗೆ ಅತಿ ಕಡಿಮೆ ವೆಚ್ಚದಲ್ಲಿ ಈ ಕೋರ್ಸ್‌ಗಳನ್ನು ಪೂರ್ತಿಗೊಳಿಸಬಹುದಾಗಿದೆ. ಸರಕಾರಿ ಕಾಲೇಜುಗಳಲ್ಲಿ ಈ ಕೋರ್ಸ್‌ಗಳು ಉಚಿತವಾಗಿಯೂ ಸಿಗುತ್ತವೆ. ಹೀಗಾಗಿ ಯಾವ್ಯಾವ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಳು ಮಾಡುವುದಕ್ಕಿಂತ ಇಂತಹ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳುವುದೇ ಉತ್ತಮ.

ಔದ್ಯೋಗಿಕ ಕೋರ್ಸ್‌ಗಳು :-

ಇದರ ಜತೆಗೆ ಹಲವಾರು ಔದ್ಯೋಗಿಕ ಕೋರ್ಸ್‌ಗಳಿವೆ. ಅವರ ಬೇಡಿಕೆಗಳಿಗ ನುಗುಣವಾಗಿ ಅವುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ನರ್ಸಿಂಗ್‌ ಕೋರ್ಸ್‌ಗಳು, ಪ್ಲಂಬಿಂಗ್‌, ಟೈಲರಿಂಗ್‌, ಹೊಟೇಲ್‌ ಮ್ಯಾನೇಜ್‌ಮೆಂಟ್‌, ಟೆಲಿಕಮ್ಯೂನಿಕೇಶನ್‌, ಹೀಗೆ ವಿವಿಧ ಕೋರ್ಸ್‌ಗಳನ್ನು ಆಯ್ಕೆಮಾಡಿಕೊಳ್ಳಬಹುದಾಗಿದೆ.

ಕಂಪ್ಯೂಟರ್‌ ಶಿಕ್ಷಣ :-
ಇಂದು ಪ್ರತಿಯೊಂದು ಕ್ಷೇತ್ರಕ್ಕೂ ಕಂಪ್ಯೂಟರ್‌ ಶಿಕ್ಷಣ ಅಗತ್ಯವಾಗಿದೆ. ಕಂಪ್ಯೂಟರ್‌ನ ಕುರಿತು ಕನಿಷ್ಠ ಜ್ಞಾನವಾದರೂ ಅತಿ ಅಗತ್ಯವಾಗಿದೆ. ಹೀಗಾಗಿ ಕಂಪ್ಯೂಟರನ್ನು ಪೂರ್ಣಾವಧಿ ಕಲಿಯುವುದು ಅಸಾಧ್ಯವಾದರೂ ರಜೆಯ ವೇಳೆ ಬೇಸಿಕ್‌ ಕಂಪ್ಯೂಟರ್‌ ಶಿಕ್ಷಣ ಪಡೆಯಬಹುದಾಗಿದೆ. ನಮ್ಮ ಎಲ್ಲ ಕೋರ್ಸ್‌ಗಳಿಗೂ ಕಂಪ್ಯೂಟರ್‌ ನಿಕಟ ಸಂಪರ್ಕವನ್ನು ಹೊಂದಿದೆ. ಹೀಗಾಗಿ ಕಂಪ್ಯೂಟರ್‌ ಶಿಕ್ಷಣವನ್ನು ಆದ್ಯತೆಯ ಮೇಲೆ ಕಲಿತರೆ ಉತ್ತಮ. ಪೂರ್ಣಾವಧಿಯ ಕಂಪ್ಯೂಟರ್‌ ಶಿಕ್ಷಣಕ್ಕೂ ಉತ್ತಮ ಬೇಡಿಕೆ ಇದೆ. ಕಂಪ್ಯೂಟರ್‌ ಸೈನ್ಸ್‌, ಕಂಪ್ಯೂಟರ್‌ ಅಪ್ಲಿಕೇಶನ್‌ ಬಹುಬೇಡಿಕೆಯ ಕೋರ್ಸ್‌ಗಳಾಗಿವೆ.

ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ
ವಿದ್ಯಾರ್ಥಿಗಳು ಯಾವುದೋ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಗೂ ದುಡ್ಡನ್ನು ಹಾಳು ಮಾಡುವುದಕ್ಕಿಂತಲೂ ಕೋರ್ಸ್‌ನ ಕುರಿತು ತಿಳಿದುಕೊಂಡು ಮುಂದುವರಿದರೆ ಉತ್ತಮ. ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿದರೆ ಉದ್ಯೋಗಕ್ಕೆ ಉತ್ತಮ ಅವಕಾಶಗಳಿವೆ. ಒಮ್ಮೆ ಕೆಲಸ ಸಿಕ್ಕರೆ ಮುಂದೆ ಕೆಲಸ ಮಾಡಿಕೊಂಡು ಓದುವುದಕ್ಕೂ ಅವಕಾಶಗಳಿವೆ. ಹೀಗಾಗಿ ನಿಮ್ಮ ಭವಿಷ್ಯ ರೂಪಿಸಲು ಈಗಿನಿಂದಲೇ ತಯಾರಿ ನಡೆಸಬೇಕಿರುವುದು ಅತಿ ಅಗತ್ಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ, ಸುದ್ದಿ, ಸ್ಪೂರ್ತಿ

    500 ರೂ ಸಾಲ ಪಡೆದು ಬಿಸಿನೆಸ್ ಆರಂಭಿಸಿದ ಈಕೆ ಈಗ ಕೋಟಿ ಕೋಟಿ ಒಡತಿ, ಕಣ್ಣೀರಿನ ಕಥೆ.

    ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…

  • ಉಪಯುಕ್ತ ಮಾಹಿತಿ

    ನಿಮ್ಮ ಮುಖದ ಮೇಲಿನ ಅನಾವಶ್ಯಕ ಕೂದಲನ್ನು ತೆಗೆಯಲು ಹೀಗೆ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…

  • Top News

    ಈ ಹುಡುಗಿ ತಯಾರಿಸಿದ 1800 ರೂಪಾಯಿಯ AC ಗಾಗಿ ವಿದೇಶಿ ಕಂಪನಿಗಳು ಪೈಪೋಟಿ, ಈಕೆ ಮಾಡಿದ ಟೆಕ್ನಿಕ್ ಏನು ಗೊತ್ತಾ!

    ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…

  • ಆರೋಗ್ಯ

    ರಾತ್ರಿ ಮಲಗುವ ಮೊದಲು ಬೆಲ್ಲ ತಿಂದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….

  • ವ್ಯಕ್ತಿ ವಿಶೇಷಣ

    10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

    ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?