ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಶೈಕ್ಷಣಿಕ ಕ್ಷೇತ್ರ ಎನ್ನವುದು ದಿನೇ ದಿನೇ ಬೆಳೆಯುತ್ತಿದೆ. ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್ಗಳಿಗೆ ವಿಪುಲ ಆಯ್ಕೆಗಳಿದ್ದು, ಔದ್ಯೋಗಿಕ ಅವಕಾಶಗಳಿಗೂ ಕೊರತೆ ಇಲ್ಲ. ಆದರೆ ಕೆಲವೊಂದು ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯಲ್ಲಿ ಎಡವುತ್ತಿದ್ದಾರೆ. ಕೋರ್ಸ್ ಮುಗಿದ ಬಳಿಕ ಉದ್ಯೋಗವಿಲ್ಲ ಎಂದು ಕೊರಗುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ಎಂದಿಗೂ ಕ್ರೇಝ್ನ ಹಿಂದೆ ಹೋಗದೆ ಅವಕಾಶಗಳ ಕುಳಿತು ತಿಳಿದುಕೊಳ್ಳುವುದು ಅಗತ್ಯ .
ಪಿಯುಸಿ :-
ಹಿಂದೆ ಒಂದು ಕಾಲವಿತ್ತು. ಎಸೆಸೆಲ್ಸಿ ಬಳಿಕ ನೇರವಾಗಿ ಪಿಯುಸಿಗೆ ಹೋಗುತ್ತಿದ್ದರು. ಆಗ ಆಯ್ಕೆಗಳು ಕಡಿಮೆ ಇತ್ತು. ಯಾವುದಾದರೊಂದು ಕೋರ್ಸ್ ಮುಗಿಸಿ ಶಿಕ್ಷಣ ಮುಂದುವರಿಸುತ್ತಿದ್ದರು. ಆದರೆ ಇಂದು ಹಾಗಿಲ್ಲ. ಪಿಯುಸಿಯಲ್ಲಿ ಲಭ್ಯವಿರುವ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗಗಳಲ್ಲೇ ಹಲವು ಆಯ್ಕೆಗಳಿವೆ. ಇವುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ಅಗತ್ಯ.
ವಿದ್ಯಾರ್ಥಿಗಳಿಗೆ ಪಿಯುಸಿಯ ಆಯ್ಕೆ ಎನ್ನುವುದು ಕ್ರೇಝ್ ಆಗಿಬಿಟ್ಟಿದೆ. ಪಿಯುಸಿ ಸೈನ್ಸ್ ಎಂದು ಹೆಮ್ಮೆಯಿಂದ ತಿರುಗುತ್ತಿದ್ದಾರೆ. ಆದರೆ ಸೈನ್ಸ್ ತೆಗೆದುಕೊಂಡವರಿಗೆ ಎಲ್ಲರಿಗೂ ಉದ್ಯೋಗ ದೊರಕುತ್ತದೆ ಎಂದು ಹೇಳುವಂತಿಲ್ಲ. ಕೆಲವೊಂದು ಸಂದರ್ಭದಲ್ಲಿ ನಮ್ಮ ಆರ್ಥಿಕ ಸ್ಥಿತಿಯೂ ನಮ್ಮ ಓದನ್ನು ಮುಂದುವರಿಸಲು ಬಿಡುವುದಿಲ್ಲ. ಈ ಎಲ್ಲ ಬೆಳವಣಿಗೆಗಳ ಕುರಿತು ಆಲೋಚನೆ ಮಾಡಿಯೇ ನಮ್ಮ ಮುಂದಿನ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಅಧ್ಯಾಪಕ ವೃತ್ತಿಗೆ ತೆರಳುವವರಿಗೆ ಪಿಯುಸಿ ಉತ್ತಮ ಆಯ್ಕೆಯಾಗುತ್ತದೆ. ಜತೆಗೆ ವೈದ್ಯಕೀಯ, ಎಂಜಿನಿಯರಿಂಗ್ ಕ್ಷೇತ್ರಕ್ಕೂ ಅದು ಬೇಕಾಗುತ್ತದೆ. ಪಿಯುಸಿಯಲ್ಲಿ ವಾಣಿಜ್ಯವನ್ನು ಆಯ್ಕೆ ಮಾಡಿಕೊಂಡರೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶವಿದೆ. ಈ ರೀತಿಯ ಆಲೋಚನೆ ಅಗತ್ಯವಾಗಿದೆ.
ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ :-
ಇಂದು ತಾಂತ್ರಿಕ ಶಿಕ್ಷಣ ಎನ್ನುವುದು ವಿಪುಲ ಉದ್ಯೋಗಾವಕಾಶವನ್ನು ಸೃಷ್ಟಿಸುತ್ತಿದೆ. ಹೀಗಾಗಿ ಐಟಿಐ ಹಾಗೂ ಡಿಪ್ಲೊಮಾ ಕೋರ್ಸ್ಗಳ ಕುರಿತು ಹೆಚ್ಚಿನ ಒಲವು ತೋರಬೇಕಿದೆ. ಈ ಕೋರ್ಸ್ಗಳಿಗೆ ಎಂಜಿನಿಯರಿಂಗ್ ಕೋರ್ಸ್ನಷ್ಟೇ ಮಹತ್ವವಿದೆ. ಜತೆಗೆ ಉದ್ಯೋಗವೂ ಅಷ್ಟೇ ಶೀಘ್ರದಲ್ಲಿ ಸಿಗುತ್ತದೆ. ಡಿಪ್ಲೊಮಾದಲ್ಲಿ ಸಿವಿಲ್, ಮೆಕ್ಯಾನಿಕಲ್, ಪ್ಲಂಬಿಂಗ್, ಇಲೆಕ್ಟ್ರಿಕಲ್ ಹೀಗೆ ಅನೇಕ ಆಯ್ಕೆಗಳಿವೆ. ಜತೆಗೆ ಅತಿ ಕಡಿಮೆ ವೆಚ್ಚದಲ್ಲಿ ಈ ಕೋರ್ಸ್ಗಳನ್ನು ಪೂರ್ತಿಗೊಳಿಸಬಹುದಾಗಿದೆ. ಸರಕಾರಿ ಕಾಲೇಜುಗಳಲ್ಲಿ ಈ ಕೋರ್ಸ್ಗಳು ಉಚಿತವಾಗಿಯೂ ಸಿಗುತ್ತವೆ. ಹೀಗಾಗಿ ಯಾವ್ಯಾವ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಳು ಮಾಡುವುದಕ್ಕಿಂತ ಇಂತಹ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳುವುದೇ ಉತ್ತಮ.
ಔದ್ಯೋಗಿಕ ಕೋರ್ಸ್ಗಳು :-
ಇದರ ಜತೆಗೆ ಹಲವಾರು ಔದ್ಯೋಗಿಕ ಕೋರ್ಸ್ಗಳಿವೆ. ಅವರ ಬೇಡಿಕೆಗಳಿಗ ನುಗುಣವಾಗಿ ಅವುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ನರ್ಸಿಂಗ್ ಕೋರ್ಸ್ಗಳು, ಪ್ಲಂಬಿಂಗ್, ಟೈಲರಿಂಗ್, ಹೊಟೇಲ್ ಮ್ಯಾನೇಜ್ಮೆಂಟ್, ಟೆಲಿಕಮ್ಯೂನಿಕೇಶನ್, ಹೀಗೆ ವಿವಿಧ ಕೋರ್ಸ್ಗಳನ್ನು ಆಯ್ಕೆಮಾಡಿಕೊಳ್ಳಬಹುದಾಗಿದೆ.
ಕಂಪ್ಯೂಟರ್ ಶಿಕ್ಷಣ :-
ಇಂದು ಪ್ರತಿಯೊಂದು ಕ್ಷೇತ್ರಕ್ಕೂ ಕಂಪ್ಯೂಟರ್ ಶಿಕ್ಷಣ ಅಗತ್ಯವಾಗಿದೆ. ಕಂಪ್ಯೂಟರ್ನ ಕುರಿತು ಕನಿಷ್ಠ ಜ್ಞಾನವಾದರೂ ಅತಿ ಅಗತ್ಯವಾಗಿದೆ. ಹೀಗಾಗಿ ಕಂಪ್ಯೂಟರನ್ನು ಪೂರ್ಣಾವಧಿ ಕಲಿಯುವುದು ಅಸಾಧ್ಯವಾದರೂ ರಜೆಯ ವೇಳೆ ಬೇಸಿಕ್ ಕಂಪ್ಯೂಟರ್ ಶಿಕ್ಷಣ ಪಡೆಯಬಹುದಾಗಿದೆ. ನಮ್ಮ ಎಲ್ಲ ಕೋರ್ಸ್ಗಳಿಗೂ ಕಂಪ್ಯೂಟರ್ ನಿಕಟ ಸಂಪರ್ಕವನ್ನು ಹೊಂದಿದೆ. ಹೀಗಾಗಿ ಕಂಪ್ಯೂಟರ್ ಶಿಕ್ಷಣವನ್ನು ಆದ್ಯತೆಯ ಮೇಲೆ ಕಲಿತರೆ ಉತ್ತಮ. ಪೂರ್ಣಾವಧಿಯ ಕಂಪ್ಯೂಟರ್ ಶಿಕ್ಷಣಕ್ಕೂ ಉತ್ತಮ ಬೇಡಿಕೆ ಇದೆ. ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಅಪ್ಲಿಕೇಶನ್ ಬಹುಬೇಡಿಕೆಯ ಕೋರ್ಸ್ಗಳಾಗಿವೆ.
ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ
ವಿದ್ಯಾರ್ಥಿಗಳು ಯಾವುದೋ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಗೂ ದುಡ್ಡನ್ನು ಹಾಳು ಮಾಡುವುದಕ್ಕಿಂತಲೂ ಕೋರ್ಸ್ನ ಕುರಿತು ತಿಳಿದುಕೊಂಡು ಮುಂದುವರಿದರೆ ಉತ್ತಮ. ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿದರೆ ಉದ್ಯೋಗಕ್ಕೆ ಉತ್ತಮ ಅವಕಾಶಗಳಿವೆ. ಒಮ್ಮೆ ಕೆಲಸ ಸಿಕ್ಕರೆ ಮುಂದೆ ಕೆಲಸ ಮಾಡಿಕೊಂಡು ಓದುವುದಕ್ಕೂ ಅವಕಾಶಗಳಿವೆ. ಹೀಗಾಗಿ ನಿಮ್ಮ ಭವಿಷ್ಯ ರೂಪಿಸಲು ಈಗಿನಿಂದಲೇ ತಯಾರಿ ನಡೆಸಬೇಕಿರುವುದು ಅತಿ ಅಗತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಬ್ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…
ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್ ಈಗಾಗಲೇ ಸಾಕಷ್ಟು ಫೇಮಸ್ ಆಗಿದ್ದು, ಟಿಕ್ಟಾಕ್ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…
ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…
ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..
ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…