ಶಿಕ್ಷಣ

ಎಸೆಸೆಲ್ಸಿ ಮುಗಿಯಿತು. ಮುಂದೇನು ಎನ್ನುವ ಯೋಚನೆಯೇ ???

898

ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ.  ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.

ಶೈಕ್ಷಣಿಕ ಕ್ಷೇತ್ರ ಎನ್ನವುದು ದಿನೇ ದಿನೇ ಬೆಳೆಯುತ್ತಿದೆ. ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್‌ಗಳಿಗೆ ವಿಪುಲ ಆಯ್ಕೆಗಳಿದ್ದು, ಔದ್ಯೋಗಿಕ ಅವಕಾಶಗಳಿಗೂ ಕೊರತೆ ಇಲ್ಲ. ಆದರೆ ಕೆಲವೊಂದು ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯಲ್ಲಿ ಎಡವುತ್ತಿದ್ದಾರೆ. ಕೋರ್ಸ್‌ ಮುಗಿದ ಬಳಿಕ ಉದ್ಯೋಗವಿಲ್ಲ ಎಂದು ಕೊರಗುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ಎಂದಿಗೂ ಕ್ರೇಝ್ನ ಹಿಂದೆ ಹೋಗದೆ ಅವಕಾಶಗಳ ಕುಳಿತು ತಿಳಿದುಕೊಳ್ಳುವುದು ಅಗತ್ಯ .

 

ಪಿಯುಸಿ :- 
ಹಿಂದೆ ಒಂದು ಕಾಲವಿತ್ತು. ಎಸೆಸೆಲ್ಸಿ ಬಳಿಕ ನೇರವಾಗಿ ಪಿಯುಸಿಗೆ ಹೋಗುತ್ತಿದ್ದರು. ಆಗ ಆಯ್ಕೆಗಳು ಕಡಿಮೆ ಇತ್ತು. ಯಾವುದಾದರೊಂದು ಕೋರ್ಸ್‌ ಮುಗಿಸಿ ಶಿಕ್ಷಣ ಮುಂದುವರಿಸುತ್ತಿದ್ದರು. ಆದರೆ ಇಂದು ಹಾಗಿಲ್ಲ. ಪಿಯುಸಿಯಲ್ಲಿ ಲಭ್ಯವಿರುವ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗಗಳಲ್ಲೇ ಹಲವು ಆಯ್ಕೆಗಳಿವೆ. ಇವುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ಅಗತ್ಯ.

ವಿದ್ಯಾರ್ಥಿಗಳಿಗೆ ಪಿಯುಸಿಯ ಆಯ್ಕೆ ಎನ್ನುವುದು ಕ್ರೇಝ್ ಆಗಿಬಿಟ್ಟಿದೆ. ಪಿಯುಸಿ ಸೈನ್ಸ್‌ ಎಂದು ಹೆಮ್ಮೆಯಿಂದ ತಿರುಗುತ್ತಿದ್ದಾರೆ. ಆದರೆ ಸೈನ್ಸ್‌ ತೆಗೆದುಕೊಂಡವರಿಗೆ ಎಲ್ಲರಿಗೂ ಉದ್ಯೋಗ ದೊರಕುತ್ತದೆ ಎಂದು ಹೇಳುವಂತಿಲ್ಲ. ಕೆಲವೊಂದು ಸಂದರ್ಭದಲ್ಲಿ ನಮ್ಮ ಆರ್ಥಿಕ ಸ್ಥಿತಿಯೂ ನಮ್ಮ ಓದನ್ನು ಮುಂದುವರಿಸಲು ಬಿಡುವುದಿಲ್ಲ. ಈ ಎಲ್ಲ ಬೆಳವಣಿಗೆಗಳ ಕುರಿತು ಆಲೋಚನೆ ಮಾಡಿಯೇ ನಮ್ಮ ಮುಂದಿನ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಅಧ್ಯಾಪಕ ವೃತ್ತಿಗೆ ತೆರಳುವವರಿಗೆ ಪಿಯುಸಿ ಉತ್ತಮ ಆಯ್ಕೆಯಾಗುತ್ತದೆ. ಜತೆಗೆ ವೈದ್ಯಕೀಯ, ಎಂಜಿನಿಯರಿಂಗ್‌ ಕ್ಷೇತ್ರಕ್ಕೂ ಅದು ಬೇಕಾಗುತ್ತದೆ. ಪಿಯುಸಿಯಲ್ಲಿ  ವಾಣಿಜ್ಯವನ್ನು ಆಯ್ಕೆ ಮಾಡಿಕೊಂಡರೆ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶವಿದೆ. ಈ ರೀತಿಯ ಆಲೋಚನೆ ಅಗತ್ಯವಾಗಿದೆ.

ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ :-
ಇಂದು ತಾಂತ್ರಿಕ ಶಿಕ್ಷಣ ಎನ್ನುವುದು ವಿಪುಲ ಉದ್ಯೋಗಾವಕಾಶವನ್ನು ಸೃಷ್ಟಿಸುತ್ತಿದೆ. ಹೀಗಾಗಿ ಐಟಿಐ ಹಾಗೂ ಡಿಪ್ಲೊಮಾ ಕೋರ್ಸ್‌ಗಳ ಕುರಿತು ಹೆಚ್ಚಿನ ಒಲವು ತೋರಬೇಕಿದೆ. ಈ ಕೋರ್ಸ್‌ಗಳಿಗೆ ಎಂಜಿನಿಯರಿಂಗ್‌ ಕೋರ್ಸ್‌ನಷ್ಟೇ ಮಹತ್ವವಿದೆ. ಜತೆಗೆ ಉದ್ಯೋಗವೂ ಅಷ್ಟೇ ಶೀಘ್ರದಲ್ಲಿ ಸಿಗುತ್ತದೆ. ಡಿಪ್ಲೊಮಾದಲ್ಲಿ ಸಿವಿಲ್‌, ಮೆಕ್ಯಾನಿಕಲ್‌, ಪ್ಲಂಬಿಂಗ್‌, ಇಲೆಕ್ಟ್ರಿಕಲ್‌ ಹೀಗೆ ಅನೇಕ ಆಯ್ಕೆಗಳಿವೆ. ಜತೆಗೆ ಅತಿ ಕಡಿಮೆ ವೆಚ್ಚದಲ್ಲಿ ಈ ಕೋರ್ಸ್‌ಗಳನ್ನು ಪೂರ್ತಿಗೊಳಿಸಬಹುದಾಗಿದೆ. ಸರಕಾರಿ ಕಾಲೇಜುಗಳಲ್ಲಿ ಈ ಕೋರ್ಸ್‌ಗಳು ಉಚಿತವಾಗಿಯೂ ಸಿಗುತ್ತವೆ. ಹೀಗಾಗಿ ಯಾವ್ಯಾವ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಳು ಮಾಡುವುದಕ್ಕಿಂತ ಇಂತಹ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳುವುದೇ ಉತ್ತಮ.

ಔದ್ಯೋಗಿಕ ಕೋರ್ಸ್‌ಗಳು :-

ಇದರ ಜತೆಗೆ ಹಲವಾರು ಔದ್ಯೋಗಿಕ ಕೋರ್ಸ್‌ಗಳಿವೆ. ಅವರ ಬೇಡಿಕೆಗಳಿಗ ನುಗುಣವಾಗಿ ಅವುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ನರ್ಸಿಂಗ್‌ ಕೋರ್ಸ್‌ಗಳು, ಪ್ಲಂಬಿಂಗ್‌, ಟೈಲರಿಂಗ್‌, ಹೊಟೇಲ್‌ ಮ್ಯಾನೇಜ್‌ಮೆಂಟ್‌, ಟೆಲಿಕಮ್ಯೂನಿಕೇಶನ್‌, ಹೀಗೆ ವಿವಿಧ ಕೋರ್ಸ್‌ಗಳನ್ನು ಆಯ್ಕೆಮಾಡಿಕೊಳ್ಳಬಹುದಾಗಿದೆ.

ಕಂಪ್ಯೂಟರ್‌ ಶಿಕ್ಷಣ :-
ಇಂದು ಪ್ರತಿಯೊಂದು ಕ್ಷೇತ್ರಕ್ಕೂ ಕಂಪ್ಯೂಟರ್‌ ಶಿಕ್ಷಣ ಅಗತ್ಯವಾಗಿದೆ. ಕಂಪ್ಯೂಟರ್‌ನ ಕುರಿತು ಕನಿಷ್ಠ ಜ್ಞಾನವಾದರೂ ಅತಿ ಅಗತ್ಯವಾಗಿದೆ. ಹೀಗಾಗಿ ಕಂಪ್ಯೂಟರನ್ನು ಪೂರ್ಣಾವಧಿ ಕಲಿಯುವುದು ಅಸಾಧ್ಯವಾದರೂ ರಜೆಯ ವೇಳೆ ಬೇಸಿಕ್‌ ಕಂಪ್ಯೂಟರ್‌ ಶಿಕ್ಷಣ ಪಡೆಯಬಹುದಾಗಿದೆ. ನಮ್ಮ ಎಲ್ಲ ಕೋರ್ಸ್‌ಗಳಿಗೂ ಕಂಪ್ಯೂಟರ್‌ ನಿಕಟ ಸಂಪರ್ಕವನ್ನು ಹೊಂದಿದೆ. ಹೀಗಾಗಿ ಕಂಪ್ಯೂಟರ್‌ ಶಿಕ್ಷಣವನ್ನು ಆದ್ಯತೆಯ ಮೇಲೆ ಕಲಿತರೆ ಉತ್ತಮ. ಪೂರ್ಣಾವಧಿಯ ಕಂಪ್ಯೂಟರ್‌ ಶಿಕ್ಷಣಕ್ಕೂ ಉತ್ತಮ ಬೇಡಿಕೆ ಇದೆ. ಕಂಪ್ಯೂಟರ್‌ ಸೈನ್ಸ್‌, ಕಂಪ್ಯೂಟರ್‌ ಅಪ್ಲಿಕೇಶನ್‌ ಬಹುಬೇಡಿಕೆಯ ಕೋರ್ಸ್‌ಗಳಾಗಿವೆ.

ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ
ವಿದ್ಯಾರ್ಥಿಗಳು ಯಾವುದೋ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಗೂ ದುಡ್ಡನ್ನು ಹಾಳು ಮಾಡುವುದಕ್ಕಿಂತಲೂ ಕೋರ್ಸ್‌ನ ಕುರಿತು ತಿಳಿದುಕೊಂಡು ಮುಂದುವರಿದರೆ ಉತ್ತಮ. ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿದರೆ ಉದ್ಯೋಗಕ್ಕೆ ಉತ್ತಮ ಅವಕಾಶಗಳಿವೆ. ಒಮ್ಮೆ ಕೆಲಸ ಸಿಕ್ಕರೆ ಮುಂದೆ ಕೆಲಸ ಮಾಡಿಕೊಂಡು ಓದುವುದಕ್ಕೂ ಅವಕಾಶಗಳಿವೆ. ಹೀಗಾಗಿ ನಿಮ್ಮ ಭವಿಷ್ಯ ರೂಪಿಸಲು ಈಗಿನಿಂದಲೇ ತಯಾರಿ ನಡೆಸಬೇಕಿರುವುದು ಅತಿ ಅಗತ್ಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹುತಾತ್ಮ ಯೋಧನ ಪತ್ನಿಗೆ ರಕ್ಷಾಬಂಧನ ಹಬ್ಬಕ್ಕೆ ಗ್ರಾಮಸ್ಥರಿಂದ 11 ಲಕ್ಷದ ಮನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ…!

    ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…

  • ಸುದ್ದಿ

    ಅಂಬೇಡ್ಕರ್ ಸಂಘಗಳಿಂದ ಚೈತ್ರ ಕೋಟೂರು ವಿರುದ್ಧ ಹೋರಾಟ..!ಯಾಕೆ ಗೊತ್ತಾ?

    ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…

  • ಉಪಯುಕ್ತ ಮಾಹಿತಿ

    ವರ ವಧುವಿನ ಕೊರಳಿಗೆ ತಾಳಿ ಕಟ್ಟುವಾಗ ಮೂರು ಗಂಟುಗಳನ್ನು ಮಾತ್ರ ಹಾಕುತ್ತಾನೆ ಏಕೆ ಗೊತ್ತಾ.? ತಿಳಿಯಲು ಇದನ್ನು ಓದಿ..?

    ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.

  • ಆರೋಗ್ಯ

    ATM ನಿಂದ ಬರಲಿದೆ ಕರೋನ ವೈರಸ್, ಹೇಗೆ ಮತ್ತು WHO ಹೇಳಿದ್ದೇನು ನೋಡಿ.

    ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…

  • ಸಿನಿಮಾ

    ದರ್ಶನ್ ಅಭಿಮಾನಿಗಳಿಗೆ ಸಖತ್ ಸಿಹಿ ಸುದ್ದಿ!ಫಿಕ್ಸ್ ಆಯ್ತು ಕುರುಕ್ಷೇತ್ರ ಚಿತ್ರದ ರಿಲೀಜ್ ಡೇಟ್…ಯಾವಾಗ ಗೊತ್ತಾ?

    ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….

  • ಸುದ್ದಿ

    ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಒಂದೇ ವರ್ಷದೊಳಗೆ ಕಳೆದುಕೊಂಡ ದೆಹಲಿ……!

    ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್‌ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು.  ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್‌ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…