ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಶೈಕ್ಷಣಿಕ ಕ್ಷೇತ್ರ ಎನ್ನವುದು ದಿನೇ ದಿನೇ ಬೆಳೆಯುತ್ತಿದೆ. ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್ಗಳಿಗೆ ವಿಪುಲ ಆಯ್ಕೆಗಳಿದ್ದು, ಔದ್ಯೋಗಿಕ ಅವಕಾಶಗಳಿಗೂ ಕೊರತೆ ಇಲ್ಲ. ಆದರೆ ಕೆಲವೊಂದು ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯಲ್ಲಿ ಎಡವುತ್ತಿದ್ದಾರೆ. ಕೋರ್ಸ್ ಮುಗಿದ ಬಳಿಕ ಉದ್ಯೋಗವಿಲ್ಲ ಎಂದು ಕೊರಗುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ಎಂದಿಗೂ ಕ್ರೇಝ್ನ ಹಿಂದೆ ಹೋಗದೆ ಅವಕಾಶಗಳ ಕುಳಿತು ತಿಳಿದುಕೊಳ್ಳುವುದು ಅಗತ್ಯ .
ಪಿಯುಸಿ :-
ಹಿಂದೆ ಒಂದು ಕಾಲವಿತ್ತು. ಎಸೆಸೆಲ್ಸಿ ಬಳಿಕ ನೇರವಾಗಿ ಪಿಯುಸಿಗೆ ಹೋಗುತ್ತಿದ್ದರು. ಆಗ ಆಯ್ಕೆಗಳು ಕಡಿಮೆ ಇತ್ತು. ಯಾವುದಾದರೊಂದು ಕೋರ್ಸ್ ಮುಗಿಸಿ ಶಿಕ್ಷಣ ಮುಂದುವರಿಸುತ್ತಿದ್ದರು. ಆದರೆ ಇಂದು ಹಾಗಿಲ್ಲ. ಪಿಯುಸಿಯಲ್ಲಿ ಲಭ್ಯವಿರುವ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗಗಳಲ್ಲೇ ಹಲವು ಆಯ್ಕೆಗಳಿವೆ. ಇವುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ಅಗತ್ಯ.
ವಿದ್ಯಾರ್ಥಿಗಳಿಗೆ ಪಿಯುಸಿಯ ಆಯ್ಕೆ ಎನ್ನುವುದು ಕ್ರೇಝ್ ಆಗಿಬಿಟ್ಟಿದೆ. ಪಿಯುಸಿ ಸೈನ್ಸ್ ಎಂದು ಹೆಮ್ಮೆಯಿಂದ ತಿರುಗುತ್ತಿದ್ದಾರೆ. ಆದರೆ ಸೈನ್ಸ್ ತೆಗೆದುಕೊಂಡವರಿಗೆ ಎಲ್ಲರಿಗೂ ಉದ್ಯೋಗ ದೊರಕುತ್ತದೆ ಎಂದು ಹೇಳುವಂತಿಲ್ಲ. ಕೆಲವೊಂದು ಸಂದರ್ಭದಲ್ಲಿ ನಮ್ಮ ಆರ್ಥಿಕ ಸ್ಥಿತಿಯೂ ನಮ್ಮ ಓದನ್ನು ಮುಂದುವರಿಸಲು ಬಿಡುವುದಿಲ್ಲ. ಈ ಎಲ್ಲ ಬೆಳವಣಿಗೆಗಳ ಕುರಿತು ಆಲೋಚನೆ ಮಾಡಿಯೇ ನಮ್ಮ ಮುಂದಿನ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಅಧ್ಯಾಪಕ ವೃತ್ತಿಗೆ ತೆರಳುವವರಿಗೆ ಪಿಯುಸಿ ಉತ್ತಮ ಆಯ್ಕೆಯಾಗುತ್ತದೆ. ಜತೆಗೆ ವೈದ್ಯಕೀಯ, ಎಂಜಿನಿಯರಿಂಗ್ ಕ್ಷೇತ್ರಕ್ಕೂ ಅದು ಬೇಕಾಗುತ್ತದೆ. ಪಿಯುಸಿಯಲ್ಲಿ ವಾಣಿಜ್ಯವನ್ನು ಆಯ್ಕೆ ಮಾಡಿಕೊಂಡರೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶವಿದೆ. ಈ ರೀತಿಯ ಆಲೋಚನೆ ಅಗತ್ಯವಾಗಿದೆ.
ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ :-
ಇಂದು ತಾಂತ್ರಿಕ ಶಿಕ್ಷಣ ಎನ್ನುವುದು ವಿಪುಲ ಉದ್ಯೋಗಾವಕಾಶವನ್ನು ಸೃಷ್ಟಿಸುತ್ತಿದೆ. ಹೀಗಾಗಿ ಐಟಿಐ ಹಾಗೂ ಡಿಪ್ಲೊಮಾ ಕೋರ್ಸ್ಗಳ ಕುರಿತು ಹೆಚ್ಚಿನ ಒಲವು ತೋರಬೇಕಿದೆ. ಈ ಕೋರ್ಸ್ಗಳಿಗೆ ಎಂಜಿನಿಯರಿಂಗ್ ಕೋರ್ಸ್ನಷ್ಟೇ ಮಹತ್ವವಿದೆ. ಜತೆಗೆ ಉದ್ಯೋಗವೂ ಅಷ್ಟೇ ಶೀಘ್ರದಲ್ಲಿ ಸಿಗುತ್ತದೆ. ಡಿಪ್ಲೊಮಾದಲ್ಲಿ ಸಿವಿಲ್, ಮೆಕ್ಯಾನಿಕಲ್, ಪ್ಲಂಬಿಂಗ್, ಇಲೆಕ್ಟ್ರಿಕಲ್ ಹೀಗೆ ಅನೇಕ ಆಯ್ಕೆಗಳಿವೆ. ಜತೆಗೆ ಅತಿ ಕಡಿಮೆ ವೆಚ್ಚದಲ್ಲಿ ಈ ಕೋರ್ಸ್ಗಳನ್ನು ಪೂರ್ತಿಗೊಳಿಸಬಹುದಾಗಿದೆ. ಸರಕಾರಿ ಕಾಲೇಜುಗಳಲ್ಲಿ ಈ ಕೋರ್ಸ್ಗಳು ಉಚಿತವಾಗಿಯೂ ಸಿಗುತ್ತವೆ. ಹೀಗಾಗಿ ಯಾವ್ಯಾವ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಳು ಮಾಡುವುದಕ್ಕಿಂತ ಇಂತಹ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳುವುದೇ ಉತ್ತಮ.
ಔದ್ಯೋಗಿಕ ಕೋರ್ಸ್ಗಳು :-
ಇದರ ಜತೆಗೆ ಹಲವಾರು ಔದ್ಯೋಗಿಕ ಕೋರ್ಸ್ಗಳಿವೆ. ಅವರ ಬೇಡಿಕೆಗಳಿಗ ನುಗುಣವಾಗಿ ಅವುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ನರ್ಸಿಂಗ್ ಕೋರ್ಸ್ಗಳು, ಪ್ಲಂಬಿಂಗ್, ಟೈಲರಿಂಗ್, ಹೊಟೇಲ್ ಮ್ಯಾನೇಜ್ಮೆಂಟ್, ಟೆಲಿಕಮ್ಯೂನಿಕೇಶನ್, ಹೀಗೆ ವಿವಿಧ ಕೋರ್ಸ್ಗಳನ್ನು ಆಯ್ಕೆಮಾಡಿಕೊಳ್ಳಬಹುದಾಗಿದೆ.
ಕಂಪ್ಯೂಟರ್ ಶಿಕ್ಷಣ :-
ಇಂದು ಪ್ರತಿಯೊಂದು ಕ್ಷೇತ್ರಕ್ಕೂ ಕಂಪ್ಯೂಟರ್ ಶಿಕ್ಷಣ ಅಗತ್ಯವಾಗಿದೆ. ಕಂಪ್ಯೂಟರ್ನ ಕುರಿತು ಕನಿಷ್ಠ ಜ್ಞಾನವಾದರೂ ಅತಿ ಅಗತ್ಯವಾಗಿದೆ. ಹೀಗಾಗಿ ಕಂಪ್ಯೂಟರನ್ನು ಪೂರ್ಣಾವಧಿ ಕಲಿಯುವುದು ಅಸಾಧ್ಯವಾದರೂ ರಜೆಯ ವೇಳೆ ಬೇಸಿಕ್ ಕಂಪ್ಯೂಟರ್ ಶಿಕ್ಷಣ ಪಡೆಯಬಹುದಾಗಿದೆ. ನಮ್ಮ ಎಲ್ಲ ಕೋರ್ಸ್ಗಳಿಗೂ ಕಂಪ್ಯೂಟರ್ ನಿಕಟ ಸಂಪರ್ಕವನ್ನು ಹೊಂದಿದೆ. ಹೀಗಾಗಿ ಕಂಪ್ಯೂಟರ್ ಶಿಕ್ಷಣವನ್ನು ಆದ್ಯತೆಯ ಮೇಲೆ ಕಲಿತರೆ ಉತ್ತಮ. ಪೂರ್ಣಾವಧಿಯ ಕಂಪ್ಯೂಟರ್ ಶಿಕ್ಷಣಕ್ಕೂ ಉತ್ತಮ ಬೇಡಿಕೆ ಇದೆ. ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಅಪ್ಲಿಕೇಶನ್ ಬಹುಬೇಡಿಕೆಯ ಕೋರ್ಸ್ಗಳಾಗಿವೆ.
ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ
ವಿದ್ಯಾರ್ಥಿಗಳು ಯಾವುದೋ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಗೂ ದುಡ್ಡನ್ನು ಹಾಳು ಮಾಡುವುದಕ್ಕಿಂತಲೂ ಕೋರ್ಸ್ನ ಕುರಿತು ತಿಳಿದುಕೊಂಡು ಮುಂದುವರಿದರೆ ಉತ್ತಮ. ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿದರೆ ಉದ್ಯೋಗಕ್ಕೆ ಉತ್ತಮ ಅವಕಾಶಗಳಿವೆ. ಒಮ್ಮೆ ಕೆಲಸ ಸಿಕ್ಕರೆ ಮುಂದೆ ಕೆಲಸ ಮಾಡಿಕೊಂಡು ಓದುವುದಕ್ಕೂ ಅವಕಾಶಗಳಿವೆ. ಹೀಗಾಗಿ ನಿಮ್ಮ ಭವಿಷ್ಯ ರೂಪಿಸಲು ಈಗಿನಿಂದಲೇ ತಯಾರಿ ನಡೆಸಬೇಕಿರುವುದು ಅತಿ ಅಗತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್,…
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್ಇಡಿ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…
ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ. ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್. ಹಾಗೆಯೇ ಪತ್ನಿಗೂ ಬೇರೆ…
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.