ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಶೈಕ್ಷಣಿಕ ಕ್ಷೇತ್ರ ಎನ್ನವುದು ದಿನೇ ದಿನೇ ಬೆಳೆಯುತ್ತಿದೆ. ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್ಗಳಿಗೆ ವಿಪುಲ ಆಯ್ಕೆಗಳಿದ್ದು, ಔದ್ಯೋಗಿಕ ಅವಕಾಶಗಳಿಗೂ ಕೊರತೆ ಇಲ್ಲ. ಆದರೆ ಕೆಲವೊಂದು ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯಲ್ಲಿ ಎಡವುತ್ತಿದ್ದಾರೆ. ಕೋರ್ಸ್ ಮುಗಿದ ಬಳಿಕ ಉದ್ಯೋಗವಿಲ್ಲ ಎಂದು ಕೊರಗುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ಎಂದಿಗೂ ಕ್ರೇಝ್ನ ಹಿಂದೆ ಹೋಗದೆ ಅವಕಾಶಗಳ ಕುಳಿತು ತಿಳಿದುಕೊಳ್ಳುವುದು ಅಗತ್ಯ .
ಪಿಯುಸಿ :-
ಹಿಂದೆ ಒಂದು ಕಾಲವಿತ್ತು. ಎಸೆಸೆಲ್ಸಿ ಬಳಿಕ ನೇರವಾಗಿ ಪಿಯುಸಿಗೆ ಹೋಗುತ್ತಿದ್ದರು. ಆಗ ಆಯ್ಕೆಗಳು ಕಡಿಮೆ ಇತ್ತು. ಯಾವುದಾದರೊಂದು ಕೋರ್ಸ್ ಮುಗಿಸಿ ಶಿಕ್ಷಣ ಮುಂದುವರಿಸುತ್ತಿದ್ದರು. ಆದರೆ ಇಂದು ಹಾಗಿಲ್ಲ. ಪಿಯುಸಿಯಲ್ಲಿ ಲಭ್ಯವಿರುವ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗಗಳಲ್ಲೇ ಹಲವು ಆಯ್ಕೆಗಳಿವೆ. ಇವುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ಅಗತ್ಯ.
ವಿದ್ಯಾರ್ಥಿಗಳಿಗೆ ಪಿಯುಸಿಯ ಆಯ್ಕೆ ಎನ್ನುವುದು ಕ್ರೇಝ್ ಆಗಿಬಿಟ್ಟಿದೆ. ಪಿಯುಸಿ ಸೈನ್ಸ್ ಎಂದು ಹೆಮ್ಮೆಯಿಂದ ತಿರುಗುತ್ತಿದ್ದಾರೆ. ಆದರೆ ಸೈನ್ಸ್ ತೆಗೆದುಕೊಂಡವರಿಗೆ ಎಲ್ಲರಿಗೂ ಉದ್ಯೋಗ ದೊರಕುತ್ತದೆ ಎಂದು ಹೇಳುವಂತಿಲ್ಲ. ಕೆಲವೊಂದು ಸಂದರ್ಭದಲ್ಲಿ ನಮ್ಮ ಆರ್ಥಿಕ ಸ್ಥಿತಿಯೂ ನಮ್ಮ ಓದನ್ನು ಮುಂದುವರಿಸಲು ಬಿಡುವುದಿಲ್ಲ. ಈ ಎಲ್ಲ ಬೆಳವಣಿಗೆಗಳ ಕುರಿತು ಆಲೋಚನೆ ಮಾಡಿಯೇ ನಮ್ಮ ಮುಂದಿನ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಅಧ್ಯಾಪಕ ವೃತ್ತಿಗೆ ತೆರಳುವವರಿಗೆ ಪಿಯುಸಿ ಉತ್ತಮ ಆಯ್ಕೆಯಾಗುತ್ತದೆ. ಜತೆಗೆ ವೈದ್ಯಕೀಯ, ಎಂಜಿನಿಯರಿಂಗ್ ಕ್ಷೇತ್ರಕ್ಕೂ ಅದು ಬೇಕಾಗುತ್ತದೆ. ಪಿಯುಸಿಯಲ್ಲಿ ವಾಣಿಜ್ಯವನ್ನು ಆಯ್ಕೆ ಮಾಡಿಕೊಂಡರೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶವಿದೆ. ಈ ರೀತಿಯ ಆಲೋಚನೆ ಅಗತ್ಯವಾಗಿದೆ.
ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ :-
ಇಂದು ತಾಂತ್ರಿಕ ಶಿಕ್ಷಣ ಎನ್ನುವುದು ವಿಪುಲ ಉದ್ಯೋಗಾವಕಾಶವನ್ನು ಸೃಷ್ಟಿಸುತ್ತಿದೆ. ಹೀಗಾಗಿ ಐಟಿಐ ಹಾಗೂ ಡಿಪ್ಲೊಮಾ ಕೋರ್ಸ್ಗಳ ಕುರಿತು ಹೆಚ್ಚಿನ ಒಲವು ತೋರಬೇಕಿದೆ. ಈ ಕೋರ್ಸ್ಗಳಿಗೆ ಎಂಜಿನಿಯರಿಂಗ್ ಕೋರ್ಸ್ನಷ್ಟೇ ಮಹತ್ವವಿದೆ. ಜತೆಗೆ ಉದ್ಯೋಗವೂ ಅಷ್ಟೇ ಶೀಘ್ರದಲ್ಲಿ ಸಿಗುತ್ತದೆ. ಡಿಪ್ಲೊಮಾದಲ್ಲಿ ಸಿವಿಲ್, ಮೆಕ್ಯಾನಿಕಲ್, ಪ್ಲಂಬಿಂಗ್, ಇಲೆಕ್ಟ್ರಿಕಲ್ ಹೀಗೆ ಅನೇಕ ಆಯ್ಕೆಗಳಿವೆ. ಜತೆಗೆ ಅತಿ ಕಡಿಮೆ ವೆಚ್ಚದಲ್ಲಿ ಈ ಕೋರ್ಸ್ಗಳನ್ನು ಪೂರ್ತಿಗೊಳಿಸಬಹುದಾಗಿದೆ. ಸರಕಾರಿ ಕಾಲೇಜುಗಳಲ್ಲಿ ಈ ಕೋರ್ಸ್ಗಳು ಉಚಿತವಾಗಿಯೂ ಸಿಗುತ್ತವೆ. ಹೀಗಾಗಿ ಯಾವ್ಯಾವ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಳು ಮಾಡುವುದಕ್ಕಿಂತ ಇಂತಹ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳುವುದೇ ಉತ್ತಮ.
ಔದ್ಯೋಗಿಕ ಕೋರ್ಸ್ಗಳು :-
ಇದರ ಜತೆಗೆ ಹಲವಾರು ಔದ್ಯೋಗಿಕ ಕೋರ್ಸ್ಗಳಿವೆ. ಅವರ ಬೇಡಿಕೆಗಳಿಗ ನುಗುಣವಾಗಿ ಅವುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ನರ್ಸಿಂಗ್ ಕೋರ್ಸ್ಗಳು, ಪ್ಲಂಬಿಂಗ್, ಟೈಲರಿಂಗ್, ಹೊಟೇಲ್ ಮ್ಯಾನೇಜ್ಮೆಂಟ್, ಟೆಲಿಕಮ್ಯೂನಿಕೇಶನ್, ಹೀಗೆ ವಿವಿಧ ಕೋರ್ಸ್ಗಳನ್ನು ಆಯ್ಕೆಮಾಡಿಕೊಳ್ಳಬಹುದಾಗಿದೆ.
ಕಂಪ್ಯೂಟರ್ ಶಿಕ್ಷಣ :-
ಇಂದು ಪ್ರತಿಯೊಂದು ಕ್ಷೇತ್ರಕ್ಕೂ ಕಂಪ್ಯೂಟರ್ ಶಿಕ್ಷಣ ಅಗತ್ಯವಾಗಿದೆ. ಕಂಪ್ಯೂಟರ್ನ ಕುರಿತು ಕನಿಷ್ಠ ಜ್ಞಾನವಾದರೂ ಅತಿ ಅಗತ್ಯವಾಗಿದೆ. ಹೀಗಾಗಿ ಕಂಪ್ಯೂಟರನ್ನು ಪೂರ್ಣಾವಧಿ ಕಲಿಯುವುದು ಅಸಾಧ್ಯವಾದರೂ ರಜೆಯ ವೇಳೆ ಬೇಸಿಕ್ ಕಂಪ್ಯೂಟರ್ ಶಿಕ್ಷಣ ಪಡೆಯಬಹುದಾಗಿದೆ. ನಮ್ಮ ಎಲ್ಲ ಕೋರ್ಸ್ಗಳಿಗೂ ಕಂಪ್ಯೂಟರ್ ನಿಕಟ ಸಂಪರ್ಕವನ್ನು ಹೊಂದಿದೆ. ಹೀಗಾಗಿ ಕಂಪ್ಯೂಟರ್ ಶಿಕ್ಷಣವನ್ನು ಆದ್ಯತೆಯ ಮೇಲೆ ಕಲಿತರೆ ಉತ್ತಮ. ಪೂರ್ಣಾವಧಿಯ ಕಂಪ್ಯೂಟರ್ ಶಿಕ್ಷಣಕ್ಕೂ ಉತ್ತಮ ಬೇಡಿಕೆ ಇದೆ. ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಅಪ್ಲಿಕೇಶನ್ ಬಹುಬೇಡಿಕೆಯ ಕೋರ್ಸ್ಗಳಾಗಿವೆ.
ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ
ವಿದ್ಯಾರ್ಥಿಗಳು ಯಾವುದೋ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಗೂ ದುಡ್ಡನ್ನು ಹಾಳು ಮಾಡುವುದಕ್ಕಿಂತಲೂ ಕೋರ್ಸ್ನ ಕುರಿತು ತಿಳಿದುಕೊಂಡು ಮುಂದುವರಿದರೆ ಉತ್ತಮ. ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿದರೆ ಉದ್ಯೋಗಕ್ಕೆ ಉತ್ತಮ ಅವಕಾಶಗಳಿವೆ. ಒಮ್ಮೆ ಕೆಲಸ ಸಿಕ್ಕರೆ ಮುಂದೆ ಕೆಲಸ ಮಾಡಿಕೊಂಡು ಓದುವುದಕ್ಕೂ ಅವಕಾಶಗಳಿವೆ. ಹೀಗಾಗಿ ನಿಮ್ಮ ಭವಿಷ್ಯ ರೂಪಿಸಲು ಈಗಿನಿಂದಲೇ ತಯಾರಿ ನಡೆಸಬೇಕಿರುವುದು ಅತಿ ಅಗತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…
ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…
50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…
ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….
ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….