ಶಿಕ್ಷಣ

ಎಸೆಸೆಲ್ಸಿ ಮುಗಿಯಿತು. ಮುಂದೇನು ಎನ್ನುವ ಯೋಚನೆಯೇ ???

898

ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ.  ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.

ಶೈಕ್ಷಣಿಕ ಕ್ಷೇತ್ರ ಎನ್ನವುದು ದಿನೇ ದಿನೇ ಬೆಳೆಯುತ್ತಿದೆ. ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್‌ಗಳಿಗೆ ವಿಪುಲ ಆಯ್ಕೆಗಳಿದ್ದು, ಔದ್ಯೋಗಿಕ ಅವಕಾಶಗಳಿಗೂ ಕೊರತೆ ಇಲ್ಲ. ಆದರೆ ಕೆಲವೊಂದು ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯಲ್ಲಿ ಎಡವುತ್ತಿದ್ದಾರೆ. ಕೋರ್ಸ್‌ ಮುಗಿದ ಬಳಿಕ ಉದ್ಯೋಗವಿಲ್ಲ ಎಂದು ಕೊರಗುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ಎಂದಿಗೂ ಕ್ರೇಝ್ನ ಹಿಂದೆ ಹೋಗದೆ ಅವಕಾಶಗಳ ಕುಳಿತು ತಿಳಿದುಕೊಳ್ಳುವುದು ಅಗತ್ಯ .

 

ಪಿಯುಸಿ :- 
ಹಿಂದೆ ಒಂದು ಕಾಲವಿತ್ತು. ಎಸೆಸೆಲ್ಸಿ ಬಳಿಕ ನೇರವಾಗಿ ಪಿಯುಸಿಗೆ ಹೋಗುತ್ತಿದ್ದರು. ಆಗ ಆಯ್ಕೆಗಳು ಕಡಿಮೆ ಇತ್ತು. ಯಾವುದಾದರೊಂದು ಕೋರ್ಸ್‌ ಮುಗಿಸಿ ಶಿಕ್ಷಣ ಮುಂದುವರಿಸುತ್ತಿದ್ದರು. ಆದರೆ ಇಂದು ಹಾಗಿಲ್ಲ. ಪಿಯುಸಿಯಲ್ಲಿ ಲಭ್ಯವಿರುವ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗಗಳಲ್ಲೇ ಹಲವು ಆಯ್ಕೆಗಳಿವೆ. ಇವುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ಅಗತ್ಯ.

ವಿದ್ಯಾರ್ಥಿಗಳಿಗೆ ಪಿಯುಸಿಯ ಆಯ್ಕೆ ಎನ್ನುವುದು ಕ್ರೇಝ್ ಆಗಿಬಿಟ್ಟಿದೆ. ಪಿಯುಸಿ ಸೈನ್ಸ್‌ ಎಂದು ಹೆಮ್ಮೆಯಿಂದ ತಿರುಗುತ್ತಿದ್ದಾರೆ. ಆದರೆ ಸೈನ್ಸ್‌ ತೆಗೆದುಕೊಂಡವರಿಗೆ ಎಲ್ಲರಿಗೂ ಉದ್ಯೋಗ ದೊರಕುತ್ತದೆ ಎಂದು ಹೇಳುವಂತಿಲ್ಲ. ಕೆಲವೊಂದು ಸಂದರ್ಭದಲ್ಲಿ ನಮ್ಮ ಆರ್ಥಿಕ ಸ್ಥಿತಿಯೂ ನಮ್ಮ ಓದನ್ನು ಮುಂದುವರಿಸಲು ಬಿಡುವುದಿಲ್ಲ. ಈ ಎಲ್ಲ ಬೆಳವಣಿಗೆಗಳ ಕುರಿತು ಆಲೋಚನೆ ಮಾಡಿಯೇ ನಮ್ಮ ಮುಂದಿನ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಅಧ್ಯಾಪಕ ವೃತ್ತಿಗೆ ತೆರಳುವವರಿಗೆ ಪಿಯುಸಿ ಉತ್ತಮ ಆಯ್ಕೆಯಾಗುತ್ತದೆ. ಜತೆಗೆ ವೈದ್ಯಕೀಯ, ಎಂಜಿನಿಯರಿಂಗ್‌ ಕ್ಷೇತ್ರಕ್ಕೂ ಅದು ಬೇಕಾಗುತ್ತದೆ. ಪಿಯುಸಿಯಲ್ಲಿ  ವಾಣಿಜ್ಯವನ್ನು ಆಯ್ಕೆ ಮಾಡಿಕೊಂಡರೆ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶವಿದೆ. ಈ ರೀತಿಯ ಆಲೋಚನೆ ಅಗತ್ಯವಾಗಿದೆ.

ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ :-
ಇಂದು ತಾಂತ್ರಿಕ ಶಿಕ್ಷಣ ಎನ್ನುವುದು ವಿಪುಲ ಉದ್ಯೋಗಾವಕಾಶವನ್ನು ಸೃಷ್ಟಿಸುತ್ತಿದೆ. ಹೀಗಾಗಿ ಐಟಿಐ ಹಾಗೂ ಡಿಪ್ಲೊಮಾ ಕೋರ್ಸ್‌ಗಳ ಕುರಿತು ಹೆಚ್ಚಿನ ಒಲವು ತೋರಬೇಕಿದೆ. ಈ ಕೋರ್ಸ್‌ಗಳಿಗೆ ಎಂಜಿನಿಯರಿಂಗ್‌ ಕೋರ್ಸ್‌ನಷ್ಟೇ ಮಹತ್ವವಿದೆ. ಜತೆಗೆ ಉದ್ಯೋಗವೂ ಅಷ್ಟೇ ಶೀಘ್ರದಲ್ಲಿ ಸಿಗುತ್ತದೆ. ಡಿಪ್ಲೊಮಾದಲ್ಲಿ ಸಿವಿಲ್‌, ಮೆಕ್ಯಾನಿಕಲ್‌, ಪ್ಲಂಬಿಂಗ್‌, ಇಲೆಕ್ಟ್ರಿಕಲ್‌ ಹೀಗೆ ಅನೇಕ ಆಯ್ಕೆಗಳಿವೆ. ಜತೆಗೆ ಅತಿ ಕಡಿಮೆ ವೆಚ್ಚದಲ್ಲಿ ಈ ಕೋರ್ಸ್‌ಗಳನ್ನು ಪೂರ್ತಿಗೊಳಿಸಬಹುದಾಗಿದೆ. ಸರಕಾರಿ ಕಾಲೇಜುಗಳಲ್ಲಿ ಈ ಕೋರ್ಸ್‌ಗಳು ಉಚಿತವಾಗಿಯೂ ಸಿಗುತ್ತವೆ. ಹೀಗಾಗಿ ಯಾವ್ಯಾವ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಳು ಮಾಡುವುದಕ್ಕಿಂತ ಇಂತಹ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳುವುದೇ ಉತ್ತಮ.

ಔದ್ಯೋಗಿಕ ಕೋರ್ಸ್‌ಗಳು :-

ಇದರ ಜತೆಗೆ ಹಲವಾರು ಔದ್ಯೋಗಿಕ ಕೋರ್ಸ್‌ಗಳಿವೆ. ಅವರ ಬೇಡಿಕೆಗಳಿಗ ನುಗುಣವಾಗಿ ಅವುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ನರ್ಸಿಂಗ್‌ ಕೋರ್ಸ್‌ಗಳು, ಪ್ಲಂಬಿಂಗ್‌, ಟೈಲರಿಂಗ್‌, ಹೊಟೇಲ್‌ ಮ್ಯಾನೇಜ್‌ಮೆಂಟ್‌, ಟೆಲಿಕಮ್ಯೂನಿಕೇಶನ್‌, ಹೀಗೆ ವಿವಿಧ ಕೋರ್ಸ್‌ಗಳನ್ನು ಆಯ್ಕೆಮಾಡಿಕೊಳ್ಳಬಹುದಾಗಿದೆ.

ಕಂಪ್ಯೂಟರ್‌ ಶಿಕ್ಷಣ :-
ಇಂದು ಪ್ರತಿಯೊಂದು ಕ್ಷೇತ್ರಕ್ಕೂ ಕಂಪ್ಯೂಟರ್‌ ಶಿಕ್ಷಣ ಅಗತ್ಯವಾಗಿದೆ. ಕಂಪ್ಯೂಟರ್‌ನ ಕುರಿತು ಕನಿಷ್ಠ ಜ್ಞಾನವಾದರೂ ಅತಿ ಅಗತ್ಯವಾಗಿದೆ. ಹೀಗಾಗಿ ಕಂಪ್ಯೂಟರನ್ನು ಪೂರ್ಣಾವಧಿ ಕಲಿಯುವುದು ಅಸಾಧ್ಯವಾದರೂ ರಜೆಯ ವೇಳೆ ಬೇಸಿಕ್‌ ಕಂಪ್ಯೂಟರ್‌ ಶಿಕ್ಷಣ ಪಡೆಯಬಹುದಾಗಿದೆ. ನಮ್ಮ ಎಲ್ಲ ಕೋರ್ಸ್‌ಗಳಿಗೂ ಕಂಪ್ಯೂಟರ್‌ ನಿಕಟ ಸಂಪರ್ಕವನ್ನು ಹೊಂದಿದೆ. ಹೀಗಾಗಿ ಕಂಪ್ಯೂಟರ್‌ ಶಿಕ್ಷಣವನ್ನು ಆದ್ಯತೆಯ ಮೇಲೆ ಕಲಿತರೆ ಉತ್ತಮ. ಪೂರ್ಣಾವಧಿಯ ಕಂಪ್ಯೂಟರ್‌ ಶಿಕ್ಷಣಕ್ಕೂ ಉತ್ತಮ ಬೇಡಿಕೆ ಇದೆ. ಕಂಪ್ಯೂಟರ್‌ ಸೈನ್ಸ್‌, ಕಂಪ್ಯೂಟರ್‌ ಅಪ್ಲಿಕೇಶನ್‌ ಬಹುಬೇಡಿಕೆಯ ಕೋರ್ಸ್‌ಗಳಾಗಿವೆ.

ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ
ವಿದ್ಯಾರ್ಥಿಗಳು ಯಾವುದೋ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಗೂ ದುಡ್ಡನ್ನು ಹಾಳು ಮಾಡುವುದಕ್ಕಿಂತಲೂ ಕೋರ್ಸ್‌ನ ಕುರಿತು ತಿಳಿದುಕೊಂಡು ಮುಂದುವರಿದರೆ ಉತ್ತಮ. ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿದರೆ ಉದ್ಯೋಗಕ್ಕೆ ಉತ್ತಮ ಅವಕಾಶಗಳಿವೆ. ಒಮ್ಮೆ ಕೆಲಸ ಸಿಕ್ಕರೆ ಮುಂದೆ ಕೆಲಸ ಮಾಡಿಕೊಂಡು ಓದುವುದಕ್ಕೂ ಅವಕಾಶಗಳಿವೆ. ಹೀಗಾಗಿ ನಿಮ್ಮ ಭವಿಷ್ಯ ರೂಪಿಸಲು ಈಗಿನಿಂದಲೇ ತಯಾರಿ ನಡೆಸಬೇಕಿರುವುದು ಅತಿ ಅಗತ್ಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

    ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…

  • ಸುದ್ದಿ

    ಜಿಯೋ ಗ್ರಾಹಕರಿಗೆ ಶಾಕಿಂಗ್ ಸುದ್ದಿಯನ್ನು ಕೊಟ್ಟ ಜಿಯೋ ಕಂಪನಿ,..!!ಇಲ್ಲಿದೆ ನೋಡಿ ಮಾಹಿತಿ,.!

    ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್​ವರ್ಕ್​ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ  ಜಾರಿಗೆ ಬರಲಿದೆ ಎಂದು  ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್​ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್​ವರ್ಕ್​ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…

  • ಸುದ್ದಿ

    12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್‍ನಲ್ಲಿ 400 ಮೀಟರ್ ಸ್ಕೇಟಿಂಗ್..ಗಿನ್ನಿಸ್ ದಾಖಲೆಯಲ್ಲಿ ಮಿಂಚುತ್ತಿರುವ ಹುಬ್ಬಳ್ಳಿ ಬಾಲೆ..!

    ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್‍ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್‌ಎಲ್‌ ಕಂಪನಿಯ ಸಿಎಫ್‍ಒ…

  • ತಂತ್ರಜ್ಞಾನ

    ಸಮುದ್ರದಲ್ಲಿ ದುಬೈಯಿಂದ ಭಾರತಕ್ಕೆ ನಿರ್ಮಿಸುತ್ತಿರುವ ರೈಲುಮಾರ್ಗ! ಎಲ್ಲಿಂದ ಎಲ್ಲಿಗೆ ಗೊತ್ತಾ?

    ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್  ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…

  • ಸುದ್ದಿ

    ಜನರ ಆರೋಗ್ಯ ರಕ್ಷಣೆ, ಪ್ರವಾಸೋದ್ಯಮಕ್ಕೆ ಒತ್ತು ಮತ್ತು ಕೆಫೀನ್​ ಪೇಯಗಳ ತೆರಿಗೆ ಹೆಚ್ಚಿಸಿದಂತಹ ಜಿಎಸ್​ಟಿ ಮಂಡಳಿ,.!

    ಪಣಜಿ,  ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್​ಟಿ ಮಂಡಳಿ ಕೆಫೀನ್​ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್​ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್​ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್​ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…

  • ಸುದ್ದಿ

    ಒಳ ಉಡುಪಿಗೆ ಕೈ ಹಾಕಿ ಲೈಂಗಿಕ ದೌರ್ಜನ್ಯ: ಮಹಿಳೆ ಒಬ್ಬಳು ಟ್ರಂಪ್ ವಿರುದ್ಧ ಆರೋಪ ಮಾಡಿದ್ದಾಳೆ…

    ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್‍ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್‍ಹಟನ್‍ನ ಬರ್ಗ್‍ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ. ಆಗ ಟ್ರಂಪ್‍ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ…