ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

ಪ್ರಶಾಂತ 1985ರಿಂದ 1996ರವರೆಗೆ ಮುದ್ದೇಬಿ ಹಾಳದ ಎಂಜಿಎಂಕೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪೂರೈಸಿ ಮೈಸೂರಿನ ಎನ್ಟಿಟಿಎಫ್ನಲ್ಲಿ ಪಿಯುಸಿಗೆ ಪ್ರವೇಶ ಪಡೆದು 3ನೇ ಸೆಮ್ನಲ್ಲಿದ್ದಾಗ ಭಾರತೀಯ ನೌಕಾ ಸೇನೆಯ ಟೆಕ್ನಿಕಲ್ ವಿಭಾಗಕ್ಕೆ 1999ರಲ್ಲಿ ಸೇರಿದರು. 15 ವರ್ಷ ಕಾಲ ನೌಕಾ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರಿಂದ ಸೇನೆಯು ಅವರಿಗೆ ಬಿಎ ಆನರ್ಸ್ ಗೌರವ ಪದವಿ ದಯಪಾಲಿಸಿತು.

ಪಿಎಸ್ಐ ಹುದ್ದೆಗೆ ನಿಗದಿಪಡಿಸಿದ್ದ ಪದವಿ ದೊರಕಿದ್ದರಿಂದ 2014ರಲ್ಲಿ ನಿವೃತ್ತಿ ನಂತರ ಒಂದು ವರ್ಷ ನಿರಂತರ ಅಧ್ಯಯನ ನಡೆಸಿ, ಸಿಂಡಿ ಕೇಟ್ ಬ್ಯಾಂಕ್, ಗ್ರಾಮೀಣ ಬ್ಯಾಂಕ್, ಇಸ್ರೋ, ಜೀವವಿಮಾ ಅಧಿಕಾರಿ, ಪಿಎಸ್ಐ ನೌಕರಿಗೆ ಅರ್ಹತೆ ಗಳಿಸಿದರು. ಕೊನೆಗೆ ತಮ್ಮ ಬಾಲ್ಯದ ಕನಸಿನಂತೆ ಪಿಎಸ್ಐ ಹುದ್ದೆಯನ್ನು ಆಯ್ಕೆ ಮಾಡಿಕೊಂಡರು.

ಬಾಲ್ಯದಿಂದಲೂ ಪೊಲೀಸ್ ಅಧಿಕಾರಿ ಯಾಗುವ ಆಸೆ ಇತ್ತು. ಶಾಲೆಯಲ್ಲಿ ಫ್ಯಾನ್ಸಿ ಡ್ರೆಸ್ ಸ್ಪರ್ಧೆಯಲ್ಲಿ ಪೊಲೀಸ್ ಅಧಿಕಾರಿ ಪಾತ್ರವನ್ನೇ ಮಾಡುತ್ತಿದ್ದೆ. 2015ರಲ್ಲಿ 7 ಪರೀಕ್ಷೆ ಎದುರಿಸಿ ಎಲ್ಲದರಲ್ಲೂ ಅರ್ಹತೆ ಗಳಿಸಿದೆ. ಆದರೆ ಕಠಿಣ ಎನ್ನಿಸಿದರೂ ಪಿಎಸ್ಐ ಹುದ್ದೆಯನ್ನೇ ಆಯ್ಕೆ ಮಾಡಿಕೊಂಡೆ. ಇದು ಹುದ್ದೆ ಅಥವಾ ನೌಕರಿ ಅಲ್ಲ, ಸೇವೆ. ಶೋಷಣೆಗೊಳಗಾದ ಬಡವರಿಗೆ ನ್ಯಾಯ ಒದಗಿಸಲು ಪಿಎಸ್ಐ ಆದೆ ಎಂದು ಹೇಳುತ್ತಾರೆ ಪ್ರಶಾಂತ ಪಾಟೀಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…
ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2 ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…
ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…
ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…