News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸ್ಪೂರ್ತಿ

ಎಸ್ಸೆಸ್ಸೆಲ್ಸಿ ಓದಿದ್ದ ಭೂಪ… 7 ಸರಕಾರಿ ಹುದ್ದೆಗಳ ಕೆಲಸಕ್ಕೆ ಸೇರಿದ್ದು ಹೇಗೆ ಗೊತ್ತಾ…?ತಿಳಿಯಲು ಈ ಲೇಖನ ಓದಿ….

557

ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್‌ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಎಸ್‌ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

ಪ್ರಶಾಂತ 1985ರಿಂದ 1996ರವರೆಗೆ ಮುದ್ದೇಬಿ ಹಾಳದ ಎಂಜಿಎಂಕೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪೂರೈಸಿ ಮೈಸೂರಿನ ಎನ್‌ಟಿಟಿಎಫ್‌ನಲ್ಲಿ ಪಿಯುಸಿಗೆ ಪ್ರವೇಶ ಪಡೆದು 3ನೇ ಸೆಮ್‌ನಲ್ಲಿದ್ದಾಗ ಭಾರತೀಯ ನೌಕಾ ಸೇನೆಯ ಟೆಕ್ನಿಕಲ್ ವಿಭಾಗಕ್ಕೆ 1999ರಲ್ಲಿ ಸೇರಿದರು. 15 ವರ್ಷ ಕಾಲ ನೌಕಾ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರಿಂದ ಸೇನೆಯು ಅವರಿಗೆ  ಬಿಎ ಆನರ್ಸ್ ಗೌರವ ಪದವಿ ದಯಪಾಲಿಸಿತು.

ಪಿಎಸ್‌ಐ ಹುದ್ದೆಗೆ ನಿಗದಿಪಡಿಸಿದ್ದ ಪದವಿ ದೊರಕಿದ್ದರಿಂದ 2014ರಲ್ಲಿ ನಿವೃತ್ತಿ ನಂತರ ಒಂದು ವರ್ಷ ನಿರಂತರ ಅಧ್ಯಯನ ನಡೆಸಿ, ಸಿಂಡಿ ಕೇಟ್ ಬ್ಯಾಂಕ್, ಗ್ರಾಮೀಣ ಬ್ಯಾಂಕ್, ಇಸ್ರೋ, ಜೀವವಿಮಾ ಅಧಿಕಾರಿ, ಪಿಎಸ್‌ಐ ನೌಕರಿಗೆ ಅರ್ಹತೆ ಗಳಿಸಿದರು. ಕೊನೆಗೆ ತಮ್ಮ ಬಾಲ್ಯದ ಕನಸಿನಂತೆ ಪಿಎಸ್‌ಐ ಹುದ್ದೆಯನ್ನು ಆಯ್ಕೆ ಮಾಡಿಕೊಂಡರು.

ಬಾಲ್ಯದಿಂದಲೂ ಪೊಲೀಸ್ ಅಧಿಕಾರಿ ಯಾಗುವ ಆಸೆ ಇತ್ತು. ಶಾಲೆಯಲ್ಲಿ ಫ್ಯಾನ್ಸಿ ಡ್ರೆಸ್ ಸ್ಪರ್ಧೆಯಲ್ಲಿ ಪೊಲೀಸ್ ಅಧಿಕಾರಿ ಪಾತ್ರವನ್ನೇ ಮಾಡುತ್ತಿದ್ದೆ. 2015ರಲ್ಲಿ 7 ಪರೀಕ್ಷೆ ಎದುರಿಸಿ ಎಲ್ಲದರಲ್ಲೂ ಅರ್ಹತೆ ಗಳಿಸಿದೆ. ಆದರೆ ಕಠಿಣ ಎನ್ನಿಸಿದರೂ ಪಿಎಸ್‌ಐ ಹುದ್ದೆಯನ್ನೇ ಆಯ್ಕೆ ಮಾಡಿಕೊಂಡೆ. ಇದು ಹುದ್ದೆ ಅಥವಾ ನೌಕರಿ ಅಲ್ಲ, ಸೇವೆ. ಶೋಷಣೆಗೊಳಗಾದ ಬಡವರಿಗೆ ನ್ಯಾಯ ಒದಗಿಸಲು ಪಿಎಸ್‌ಐ ಆದೆ ಎಂದು ಹೇಳುತ್ತಾರೆ ಪ್ರಶಾಂತ ಪಾಟೀಲ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಸಿನಿಮಾ

    ತನ್ನ ನೆಚ್ಚಿನ ನಟಿಯ ಮೇಲಿನ ಆಭಿಮಾನದಿಂದ,ಹೇಗಿದ್ದವಳು ,ಹೇಗಾಗಿದ್ದಾಳೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.

  • inspirational

    ಕೊರೊನಾ 3ನೇ ಅಲೆ ಎದುರಿಸುವುದಕ್ಕೆ ರಾಜ್ಯ ಸರ್ಕಾರ ಸಿದ್ಧತೆ; ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಚರ್ಚೆ

    ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…

  • ಸುದ್ದಿ

    ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿ, ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತ ಶ್ವಾನ.

    ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…

  • ಸುದ್ದಿ

    ವಾಸನೆ ಗ್ರಹಿಸುತ್ತಿದ್ದ ಕುದುರೆ ಎಚ್ಚೆತ್ತ ಮಹಿಳೆ ವೈದ್ಯರ ಬಳಿ ತೆರಳಿದಾಗ ಕಾದಿತ್ತು ಶಾಕ್​.

    ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್​ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್​ ಲ್ಯಾಂಚ್​ಶೈರ್​ನ ಬ್ಲ್ಯಾಕ್​ಬರ್ನ್​ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್​(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…

  • ಸುದ್ದಿ

    ಇಲ್ಲಿದೆ ನೋಡಿ ಮದ್ಯ ಪ್ರಿಯರಿಗೊಂದು ಸಿಹಿಸುದ್ದಿ…!

    ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ.  ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು.  ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…

  • ಜ್ಯೋತಿಷ್ಯ

    ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್ – ಕರ್ನಾಟಕ 8ನೇ ಸ್ಥಾನದಲ್ಲಿ……

    ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…