ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

ಪ್ರಶಾಂತ 1985ರಿಂದ 1996ರವರೆಗೆ ಮುದ್ದೇಬಿ ಹಾಳದ ಎಂಜಿಎಂಕೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪೂರೈಸಿ ಮೈಸೂರಿನ ಎನ್ಟಿಟಿಎಫ್ನಲ್ಲಿ ಪಿಯುಸಿಗೆ ಪ್ರವೇಶ ಪಡೆದು 3ನೇ ಸೆಮ್ನಲ್ಲಿದ್ದಾಗ ಭಾರತೀಯ ನೌಕಾ ಸೇನೆಯ ಟೆಕ್ನಿಕಲ್ ವಿಭಾಗಕ್ಕೆ 1999ರಲ್ಲಿ ಸೇರಿದರು. 15 ವರ್ಷ ಕಾಲ ನೌಕಾ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರಿಂದ ಸೇನೆಯು ಅವರಿಗೆ ಬಿಎ ಆನರ್ಸ್ ಗೌರವ ಪದವಿ ದಯಪಾಲಿಸಿತು.

ಪಿಎಸ್ಐ ಹುದ್ದೆಗೆ ನಿಗದಿಪಡಿಸಿದ್ದ ಪದವಿ ದೊರಕಿದ್ದರಿಂದ 2014ರಲ್ಲಿ ನಿವೃತ್ತಿ ನಂತರ ಒಂದು ವರ್ಷ ನಿರಂತರ ಅಧ್ಯಯನ ನಡೆಸಿ, ಸಿಂಡಿ ಕೇಟ್ ಬ್ಯಾಂಕ್, ಗ್ರಾಮೀಣ ಬ್ಯಾಂಕ್, ಇಸ್ರೋ, ಜೀವವಿಮಾ ಅಧಿಕಾರಿ, ಪಿಎಸ್ಐ ನೌಕರಿಗೆ ಅರ್ಹತೆ ಗಳಿಸಿದರು. ಕೊನೆಗೆ ತಮ್ಮ ಬಾಲ್ಯದ ಕನಸಿನಂತೆ ಪಿಎಸ್ಐ ಹುದ್ದೆಯನ್ನು ಆಯ್ಕೆ ಮಾಡಿಕೊಂಡರು.

ಬಾಲ್ಯದಿಂದಲೂ ಪೊಲೀಸ್ ಅಧಿಕಾರಿ ಯಾಗುವ ಆಸೆ ಇತ್ತು. ಶಾಲೆಯಲ್ಲಿ ಫ್ಯಾನ್ಸಿ ಡ್ರೆಸ್ ಸ್ಪರ್ಧೆಯಲ್ಲಿ ಪೊಲೀಸ್ ಅಧಿಕಾರಿ ಪಾತ್ರವನ್ನೇ ಮಾಡುತ್ತಿದ್ದೆ. 2015ರಲ್ಲಿ 7 ಪರೀಕ್ಷೆ ಎದುರಿಸಿ ಎಲ್ಲದರಲ್ಲೂ ಅರ್ಹತೆ ಗಳಿಸಿದೆ. ಆದರೆ ಕಠಿಣ ಎನ್ನಿಸಿದರೂ ಪಿಎಸ್ಐ ಹುದ್ದೆಯನ್ನೇ ಆಯ್ಕೆ ಮಾಡಿಕೊಂಡೆ. ಇದು ಹುದ್ದೆ ಅಥವಾ ನೌಕರಿ ಅಲ್ಲ, ಸೇವೆ. ಶೋಷಣೆಗೊಳಗಾದ ಬಡವರಿಗೆ ನ್ಯಾಯ ಒದಗಿಸಲು ಪಿಎಸ್ಐ ಆದೆ ಎಂದು ಹೇಳುತ್ತಾರೆ ಪ್ರಶಾಂತ ಪಾಟೀಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ
ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…
ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…
ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…