ರಾಜಕೀಯ

ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ಬಂಪರ್ ಆಫರ್ ……

128

ಪರಿಶಿಷ್ಟ  ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಒದಗಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದಲ್ಲಿ ನಡೆದ ಅನುಸೂಚಿತ ಜಾತಿ ಉಪ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯ ರಾಜ್ಯ ಪರಿಷತ್‌ ಸಭೆಯಲ್ಲಿ ಮಾತನಾಡಿದ ಅವರು, ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದರು.

ಇದಕ್ಕಾಗಿ, ಎಸ್‌ಸಿಪಿ ಮತ್ತು ಟಿಎಸ್‌ಪಿ ಹಣದಲ್ಲಿ 105 ಕೋಟಿ ರೂ. ಮೀಸಲಿಡಲು ಸಭೆಯಲ್ಲಿ  ನಿರ್ಧರಿಸಲಾಯಿತು.

ಈ ಮುನ್ನ  ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್‌ ಪಾಸ್‌ ನೀಡಲಾಗುತ್ತಿತ್ತು. ರಾಜ್ಯ ಸರ್ಕಾರ ಶೇ.50 ರಷ್ಟು, ಅಂಬೇಡ್ಕರ್‌ ಹಾಗೂ ವಾಲ್ಮೀಕಿ ನಿಗಮದಿಂದ ಶೇ.25 ಹಾಗೂ ವಿದ್ಯಾರ್ಥಿಗಳು ಶೇ.25 ರಷ್ಟು ಭರಿಸುತ್ತಿದ್ದರು.

ಆದರೆ, ಪ್ರಸಕ್ತ ಸಾಲಿನಿಂದ ಸಂಪೂರ್ಣವಾಗಿ ಉಚಿತವಾಗಿ ಬಸ್‌ ಪಾಸ್‌ ನೀಡಬೇಕು. ಎಸ್‌ಸಿಪಿ, ಟಿಎಸ್‌ಪಿ ಹಣದಲ್ಲಿ ವೆಚ್ಚ ಭರಿಸಬೇಕು ಎಂದು ಸಭೆಯಲ್ಲಿ ಸೂಚನೆ ನೀಡಲಾಗಿದೆ.

ವಿಶೇಷ ಘಟಕ ಯೋಜನೆಯಡಿ ಅನುಮೋದನೆಗೊಂಡಿರುವ ಕ್ರಿಯಾ ಯೋಜನೆಗಳನ್ನು ಸಕಾಲದಲ್ಲಿ ಜಾರಿಗೊಳಿಸಿ. ಕಾರ್ಯಕ್ರಮಗಳ ಅನುಷ್ಠಾನದಲ್ಲಿ ವಿಳಂಬ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ತಾಕೀತು ಮಾಡಿದರು.

2015-16 ನೇ ಸಾಲಿನ ಉಳಿಕೆ 751 ಕೋಟಿ ರೂ. ಸೇರಿದಂತೆ ಪ್ರಸಕ್ತ ಸಾಲಿನಲ್ಲಿ 27,703 ಕೋಟಿ ರೂ. ಅನುದಾನ ಲಭ್ಯವಿದೆ. ಅದೇ ರೀತಿ 2016-17 ನೇ ಸಾಲಿನಲ್ಲಿ 1,782 ಕೋಟಿ ರೂ. ವೆಚ್ಚವಾಗಿಲ್ಲ.

ಈಗಾಗಲೇ ಕ್ರಿಯಾ ಯೋಜನೆ ಸಿದ್ಧಗೊಂಡಿರುವ ಎಲ್ಲ ಯೋಜನೆಗಳನ್ನು ಮುಂದಿನ ವರ್ಷದ ಮಾರ್ಚ್‌ ಒಳಗೆ ಕಡ್ಡಾಯವಾಗಿ ಅನುಷ್ಠಾನಗೊಳಿಸಿ ಶೇ.100ಕ್ಕೆ 100 ರಷ್ಟು ಸಾಧನೆ ಮಾಡಲೇಬೇಕು ಎಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 19 ಜನವರಿ, 2019 ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮಗೆ ಗೊತ್ತಿದ್ದ…

  • ಸ್ಪೂರ್ತಿ

    ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ ಜಾರಿ….!

    ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…

  • ಸುದ್ದಿ

    ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

    ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…

  • ದೇಶ-ವಿದೇಶ

    ಭಾರತದಲ್ಲಿ ಪತ್ನಿಯನ್ನು ಬಿಟ್ಟು ವಿದೇಶಗಳಿಗೆ ಹೋಗುವ ಪತಿಯರಿಗೆ ದೊಡ್ಡ ಶಾಕ್..!ತಿಳಿಯಲು ಈ ಲೇಖನ ಓದಿ…

    ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್‌ಆರ್‌ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್‌ಆರ್‌ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.

  • ಸುದ್ದಿ

    ಮಹಿಳಾಮಣಿಗಳಿಗೆ ಬಂಪರ್ ಆಫರ್!ಹತ್ತು ಸಾವಿರ ಹಣದ ಜೊತೆಗೆ ಸಿಗಲಿದೆ ಒಂದು ಸ್ಮಾರ್ಟ್ ಮೊಬೈಲ್..!

    ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…

  • ಸುದ್ದಿ

    ಬೆಲ್ಲ ತಿನ್ನುವುದರಿಂದ ಋತುಸ್ರಾವದ ವೇಳೆ ಏನಾಗುತ್ತೆ ಗೊತ್ತ…?

    ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‍ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್‍ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…