ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ಐಟಿ ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಕೆಲ ಉದ್ಯೋಗಿಗಳನ್ನು ಕಿತ್ತು ಹಾಕಲು ಮುಂದಾಗುತ್ತಿದ್ದು, ಈಗ ಸಹೋದ್ಯೋಗಿಗಳ ನಡುವೆ ವೈಮನಸ್ಸು ತರುವ ಕೆಲಸಕ್ಕೆ ಹೈ ಹಾಕಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಅಸಮರ್ಥ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಒಂದೊಂದೆ ತಂತ್ರವನ್ನು ಅನುಸರಿಸಲು ಆರಂಭಿಸಿದೆ. ಈಗ ಉದ್ಯೋಗಿಯೊಬ್ಬ ತನ್ನ ಉದ್ಯೋಗವನ್ನು ಉಳಿಸಿಕೊಳ್ಳಲು ಬೇರೆ ಒಬ್ಬ ಉದ್ಯೋಗಿಯನ್ನು ಮನೆಗೆ ಕಳುಹಿಸಬೇಕಾದ ಸಂದರ್ಭ ಒದಗಿ ಬಂದಿದೆ, ಎಂದು ಉದ್ಯೋಗಿಗಳ ಹೇಳಿಕೆಯನ್ನು ಆಧರಿಸಿ ವರದಿಯಾಗಿದೆ.
ಕಂಪೆನಿಗೆ ವೆಚ್ಚದಾಯಕವಾಗಿರುವ ಉದ್ಯೋಗಿಗಳನ್ನು ಗುರುತಿಸಿ ಅವರನ್ನು ಕೆಲಸದಿಂದ ಕಿತ್ತು ಹಾಕುವಂತೆ ಕಂಪೆನಿಯ ಹಿರಿಯ ಅಧಿಕಾರಿಗಳು ಎಚ್ಆರ್ಗೆ ಆದೇಶಿಸಿದ್ದಾರೆ.
ಇದರಂತೆ ಕೆಲ ಕಂಪೆನಿಗಳ ಎಚ್ಆರ್ಗಳು ಕೆಲ ಉದ್ಯೋಗಿಗಳಿಗೆ ಕರೆ ಮಾಡಿ, ಕಡಿಮೆ ವೇತನ ಪಡೆದು ಕೆಲಸವನ್ನು ತೊರೆಯುವಂತೆ ಹೇಳಿದ್ದಾರೆ. ಇನ್ನು ಕೆಲ ಕಂಪೆನಿಗಳು, ನಿಮಗೆ ಇಷ್ಟೊಂದು ವೇತನ ನೀಡಲು ಕಷ್ಟವಾಗುತ್ತದೆ. ಹೀಗಾಗಿ ಒಂದೋ ನೀವು ಕಂಪೆನಿ ತೊರೆಯಿರಿ, ಇಲ್ಲವೇ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೆಂದು ರೆಫರ್ ಮಾಡಿ ಎಂದು ಹೇಳಿದ್ದಾರೆ.
ಎಚ್ಆರ್ಗಳ ಮೂಲಕ ಈ ಆಟವನ್ನು ಆಡಿ ಕಂಪೆನಿಗಳು ಮನರಂಜನೆಯನ್ನು ತೆಗೆದುಕೊಳ್ಳುತ್ತಿದ್ದರೆ, ಉದ್ಯೋಗಿಗಳು ತಮ್ಮ ನೋವಿನ ವಿಚಾರವನ್ನು ಮಾಧ್ಯಮಗಳಲ್ಲಿ ತೋಡಿಕೊಂಡಿದ್ದಾರೆ.
ಐಟಿ ಉದ್ಯೋಗಿಯೊಬ್ಬರು ಹೇಳಿರುವ ಪ್ರಕಾರ ಕಂಪೆನಿಗಳ ಆಟ ಹೇಗಿರುತ್ತೆ ಗೊತ್ತಾ?
ಬೆಂಗಳೂರಿನ ನೊಂದ ಐಟಿ ಉದ್ಯೋಗಿಯೊಬ್ಬರು ಕಂಪೆನಿ ಹೇಗೆ ಉದ್ಯೋಗಿಗಳ ಜೊತೆ ನಡೆದುಕೊಳ್ಳುತ್ತಿದೆ ಎನ್ನುವುದನ್ನು ವಿವರಿಸುತ್ತಾ, ಕಳೆದ ತಿಂಗಳ 23ರಂದು ಎಚ್ಆರ್ ಮ್ಯಾನೇಜರ್ ಅವರನ್ನು ಭೇಟಿಯಾಗುವಂತೆ ನನಗೆ ಕರೆ ಬಂತು. ಹೀಗಾಗಿ ನಾನು ಹೈದರಾಬಾದ್ನಲ್ಲಿರುವ ಎಚ್ಆರ್ ಮುಖ್ಯಸ್ಥರ ಜೊತೆ ವಿಡಿಯೋ ಚಾಟ್ ಮಾಡುತ್ತಿರುವಾಗ, “ನೀನು ಉದ್ಯೋಗವನ್ನು ತೊರೆಯಬೇಕು. ನಿನಗೆ 2 ವಾರ ಸಮಯವಕಾಶ ಮತ್ತು 2 ತಿಂಗಳ ಮೂಲ ವೇತನ ನೀಡುತ್ತೇವೆ” ಎಂದರು.
ಇದಾದ ಬಳಿಕ 29ರಂದು ಕರೆ ಮಾಡಿ “ಇನ್ನು ಯಾಕೆ ರಾಜೀನಾಮೆ ನೀಡಿಲ್ಲ” ಎಂದು ಪ್ರಶ್ನಿಸಿದರು. ನಾನು “ರಾಜೀನಾಮೆ ನೀಡುವುದಿಲ್ಲ” ಎಂದೆ. ಇದಕ್ಕೆ ಅವರು “ನಿಮ್ಮ ಕಾಂಟ್ರಾಕ್ಟ್ ಟರ್ಮಿನೇಟ್ ಮಾಡುತ್ತೇವೆ. ಈ ರೀತಿ ಮಾಡಿದರೆ ಮುಂದೆ ಬೇರೆ ಯಾವ ಕಂಪೆನಿಯಲ್ಲೂ ಕೆಲಸ ಸಿಗುವುದಿಲ್ಲ” ಎಂದು ಬೆದರಿಸಿದರು. 31 ರಂದು ಕರೆ ಮಾಡಿ, “ನಿನ್ನ ಬದಲಿಗೆ ಬೇರೊಬ್ಬ ಉದ್ಯೋಗಿಯನ್ನು ರೆಫರ್ ಮಾಡು, ಆತನನ್ನು ಕೆಲಸದಿಂದ ತೆಗೆದು ಹಾಕಲಾಗುವುದು” ಎನ್ನುವ ವಿಚಿತ್ರ ಆಫರ್ ನೀಡಿದರು.
ಅದೇ ದಿನ ನನಗೆ ಆಟೋಮೇಟೆಡ್ ಇಮೇಲ್ ಬಂತು. ಅದರಲ್ಲಿ “ಕಂಪನಿಯಲ್ಲಿ ಇದು ನಿನ್ನ ಕೊನೆಯ ದಿನ. ಇಂದಿನಿಂದ ನಿನಗೆ ನೀಡಿರುವ ಕಂಪನಿ ಇಮೇಲ್ ಐಡಿ ಹಾಗೂ ಇತರ ಸೇವೆಗಳನ್ನು ರದ್ದು ಮಾಡಲಾಗುತ್ತಿದೆ” ಎಂದು ತಿಳಿಸಲಾಗಿತ್ತು. ಆದರೆ ಈ ಮೇಲ್ ಬಗ್ಗೆ ಎಚ್.ಆರ್. ಕಡೆಯಿಂದ ಯಾವುದೇ ಅಧಿಕೃತ ಕರೆ ಬರಲಿಲ್ಲ ಎಂದು ಅವರು ತಮ್ಮ ನೋವನ್ನು ತೊಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಧನ್ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.
ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…
ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ
ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು. ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್ಗೆ ಈ ಪ್ರಕರಣ ಹೋಗಬಹುದು ಕೋರ್ಟ್ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ…
ಹಾರ ಹಾಕುವ ವಧುವಿಗೆ ಸಹಾಯ ಮಾಡಲು ಹೋಗಿ ವಧುವಿನ ಕೈಯಿಂದ ಕಪಾಳಕ್ಕೆ ಮೋಕ್ಷ ಮಾಡಿಸಿಕೊಂಡ ಬಾವ..!
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ