ಸಂಬಂಧ

ಒಂದು ಫೋಟೋಗಾಗಿ ಮದುವೆಮನೆಯಲ್ಲೇ ಕಿತ್ತಾಡಿಕೊಂಡ ವಧು ವರರು!ಆಮೇಲೆ ಏನಾಯ್ತು ಗೊತ್ತಾ???

2616

ಕೆಲವಾರು ಮದುವೆ ಸಮಾರಂಭಗಳಲ್ಲಿ  ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು  ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.

ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಗಳನ್ವಯ ಭಂವರ್’ಲಾಲ್ ಬಂಗ್ ಎಂಬಾತನ ಮಗಳ ಮದುವೆ ದಿನೇಶ್ ಎಂಬಾತನ ಮಗ ವಿವೇಕ್’ನೊಂದಿಗೆ ನಿಶ್ಚಯವಾಗಿತ್ತು. ವರ ಯುವಕ ವೃತ್ತಿಯಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗಿದ್ದರೆ, ಮಧುಮಗಳೂ ಎಲ್’ಎಲ್’ಬಿ ಮುಗಿಸಿದ್ದಳು. ಹೀಗಿರುವಾಗ ಇವರಿಬ್ಬರ ಮದುವೆ ದಿನದಂದು ಮದುಮಗಳ ಮನೆಗೆ ವರ ಹಾಗೂ ದಿಬ್ಬಣವನ್ನು ಅದ್ಧೂರಿಯಾಗಿಯೇ ಸ್ವಾಗತಿಸಲಾಯಿತು.

ಮದುವೆಯ ಸಂಪ್ರದಾಯಗಳನ್ನು ಒಂದಾದ ಬಳಿಕ ಒಂದರಂತೆ ನಡೆಯುತ್ತಿದ್ದವು ಹೀಗಿರುವಾಗ ಮದುವೆಯ ಪ್ರಮುಖ ಭಾಗವೆಂದೇ ಪರಿಗಣಿಸುವ ಸಪ್ತಪದಿಯೂ ನಡೆದಿತ್ತು. ಆದರೆ ಅಷ್ಟರಲ್ಲೇ ವರ ಮಧುಮಗಳ ಕಿವಿಯಲ್ಲಿ ತನ್ನದೊಂದು ಬೇಡಿಕೆ ಇದೆ ಎಂದು ಹೇಳಿಕೊಂಡಿದ್ದಾರೆ. ಈತನ ಆ ಬೇಡಿಕೆ ಕೇಳಿ ಕೆರಳಿದ ವಧು ಬೇಡಿಕೆ ಪೂರೈಸಲು ಸಾಧ್ಯವೇ ಇಲ್ಲ ಎಂದಿದ್ದಾಳೆ. ವಾಸ್ತವವಾಗಿ ವರ ತನಗೆ ಇಷ್ಟವಾಗುವಂತೆ ಫೋಟೋಗೆ ಫೋಸ್ ನೀಡಬೇಕೆಂದು ಕೇಳಿಕೊಂಡಿದ್ದಾನೆ. ಈ ವೇಳೆ ವಧು ಎಲ್ಲರೆದುರು ಅಂತಹ ಭಂಗಿಯಲ್ಲಿ ಫೋಟೋ ತೆಗೆಸುವುದು ಸರಿಯಲ್ಲ ಎಂದು ನಿರಾಕರಿಸಿದ್ದಾಳೆ.

ಮದುಮಗಳ ಈ ಪ್ರತಿಕ್ರಿಯೆ ಕೇಳಿ ಯುವಕ ಕೋಪಗೊಂಡಿದ್ದಾನೆ. ವಧು ಕೂಡಾ ತಾನೂ ಕಮ್ಮಿ ಇಲ್ಲ ಎನ್ನುವಂತೆ ತನ್ನ ನಿರ್ಧಾರದಿಂದ ಅವರು ಕೂಡ ಹಿಂದೆ ಸರಿದಿಲ್ಲ. ನಿಧಾನವಾಗಿ ಈ ವಿವಾದ ಹೆಚ್ಚಾಗಿದ್ದು, ಎರಡೂ ಕಡೆಯ ಸಂಬಂಧಿಕರ ನಡುವೆ ಜಗಳವೇರ್ಪಟ್ಟಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಈ ವೇಳೆ ವರ ವಧು ಕೂಡಾ ಹೊಡೆದಾಡಿಕೊಂಡಿದ್ದಾರೆ. ಮದುವೆ ಮಂಟಪದಲ್ಲಿ ನಡೆದ ಈ ಜಗಳದಲ್ಲಿ ವರನ ಸಹೋದರನ ತಲೆಗೆ ಗಂಭೀರ ಗಾಯವೂ ಆಗಿದೆ ಎಂದು ವರದಿಯಾಗಿದೆ. ಆದರೆ ಈ ಜಗಳ ನೋಡಿದ ವ್ಯಕ್ತಿಯೊಬ್ಬ ಆ ಕೂಡಲೇ ಪೊಲೀಸರಿಗೆ ಕರೆ ಮಾಡಿ ಸೂಚನೆ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಈ ಜಗಳವನ್ನು ಮಾತುಕತೆಯಲ್ಲೇ ಕೊನೆಗೊಳಿಸಲು ಯತ್ನಿಸಿದ್ದಾರೆ.

ಆದರೆ ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ಹೀಗಗಿ ಬೇರೆ ವಿಧಿ ಇಲ್ಲದೇ ವರ ಹಾಗೂ ಕೆಲ ಸಂಬಂಧಿಗಳನ್ನು ಬಂಧಿಸಿದ ಪೊಲೀಸರು ಠಾಣೆಗೊಯ್ದಿದ್ದು, ಅಲ್ಲಿ ಅವರನ್ನು ಸಮಾಧಾನಗೊಳಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ ಅಷ್ಟರಲ್ಲೇ ವಧುವಿನ ತಂದೆಯೂ ಇಂತಹ ಜಗಳಕಾಯುವ ಕುಟುಂಬಕ್ಕೆ ನನ್ನ ಮಗಳನ್ನು ಮದುವೆ ಮಾಡಿಕೊಡುವುದಿಲ್ಲ ಎಂದು ಈ ಸಂಬಂಧವನ್ನೇ ಮುರಿದಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಂಗಳೂರು ಅಲ್ಲ ರಾಜ್ಯವ್ಯಾಪಿ ಐ ಎಂ ಎ ಇಂದ ಮೋಸ ಹೋದಂತಹ ಪ್ರಜೆಗಳು…!

    ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…

  • ಸುದ್ದಿ

    ಕೊಳವೆಬಾವಿಗೆ ಬಿದ್ದಿದ್ದ ಮಗುವನ್ನು 109 ಗಂಟೆಗಳ ನಂತರ ರಕ್ಷಣೆ…!

    ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…

  • ಉಪಯುಕ್ತ ಮಾಹಿತಿ, ಸುದ್ದಿ

    ಹಾವೇರಿ ರೈತನ ಈ ಟೆಕ್ನಿಕ್ ನೋಡಲು ಓಡೋಡಿ ಬರುತ್ತಿರುವ ಜನರು, ಅಷ್ಟಕ್ಕೂ ಆತ ಮಾಡಿದ್ದೇನು ನೋಡಿ.

    ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…

  • ಸುದ್ದಿ

    ಏರ್ಟೆಲ್ ಬಂಪರ್ ಆಫರ್! ಪ್ರಿಪೇಡ್ ಪ್ಲಾನ್ ಜೊತೆಗೆ 4 ಲಕ್ಷ ವಿಮೆ ಸೌಲಭ್ಯ ಪಡೆಯಬಹುದು…!

    ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್‌ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…

  • ಸಿನಿಮಾ

    ಈ ನಟಿಯ ಮದುವೆಗೆ ಬೆತ್ತಲೆಯಾಗಿ ಹೋದ್ರೆ ಮಾತ್ರ ಪ್ರವೇಶವಂತೆ..!

    ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…

  • ಸುದ್ದಿ

    ಚಿತ್ರಮಂದಿರಗಳಲ್ಲಿ ಹಾಕುವ ರಾಷ್ಟ್ರಗೀತೆಗೆ ಎದ್ದುನಿಲ್ಲುವುದು ಇಷ್ಟವಿಲ್ಲ ಎಂದ ಪವನ್ ಕಲ್ಯಾಣ್!ಕಾರಣವೇನು ಗೊತ್ತಾ?

    ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್‍ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…