ನೀತಿ ಕಥೆ

ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

1537

ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ. ನಮಗಿರುವ ಸೌಲಭ್ಯಗಳನ್ನು ಬಳಸುತ್ತಾ ಅವುಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಇನ್ನಷ್ಟು ಉತ್ತಮ ಪ್ರಯತ್ನ ಮಾಡಬೇಕೆ ಹೊರತು ಇತರರ ಜತೆಗೆ ಹೋಲಿಸಿಕೊಂಡು ನರಳಬಾರದು. ಕೆಲವು ಪಕ್ಷಿಗಳ ಮೂಲಕ ನಮ್ಮ ಆಲೋಚನೆ ವಿಷಯವನ್ನು ಸರಳವಾಗಿ ಹೇಳಿದ್ದಾರೆ.

ಒಂದು ಕಾಡಿನಲ್ಲಿ ಒಂದು ಕಾಗೆ ವಾಸವಾಗಿತ್ತು. ಅದರ ಜೀವನ ಸೊಗಸಾಗಿ ಸಾಗುತ್ತಿತ್ತು. ಆದರೆ ಪಕ್ಕದಲ್ಲೇ ಇದ್ದ ಕೊಳದಲ್ಲಿನ ಹಂಸವನ್ನು ನೋಡಿ ‘ಅದು ತುಂಬಾ ಬೆಳ್ಳಗೆ, ಸುಂದರವಾಗಿ ಇದೆ. ನಾನು ಕಪ್ಪಗಿದ್ದೇನೆ’ ಎಂದು ನೋವನುಭವಿಸುವುದನ್ನು ಆರಂಭಿಸಿತು. ಒಂದು ದಿನ ಹಂಸದ ಬಳಿ ಹೋಗಿ ‘ನೀನು ತುಂಬಾ ಸುಂದರವಾಗಿ ಇರುತ್ತೀಯ.

ಆನಂದವಾಗಿಯೂ ಇರುತ್ತೀಯ ಅಲ್ಲವೇ’ ಎಂದಿತು. ಕಾಗೆ ಮಾತಿಗೆ ಹಂಸ ಉತ್ತರ ಕೊಡುತ್ತಾ, ‘ನಿಜ ನಾನು ಸುಂದರವಾಗಿರುತ್ತೇನೆ. ಆದರೆ ಗಿಳಿರಾಮ ನನಗಿಂತಲೂ ಎರಡು ಬಣ್ಣಗಳಲ್ಲಿ ಸುಂದರವಾಗಿರುತ್ತದೆ. ಅದರ ಜತೆ ಹೋಲಿಸಿದರೆ ನಾನೇನು ಅಲ್ಲ’ ಎಂದು ಬೇಸರಿಸಿಕೊಂಡಿತು. ಇದನ್ನು ಕೇಳಿದ ಕಾಗೆ ಗಿಳಿ ಬಳಿಗೆ ಹೋಗಿ, ‘ಹಂಸಕ್ಕಿಂತಲೂ ಸುಂದರವಾಗಿ ನೀನಿದ್ದೀಯ’ ಎಂದಿತು. ಈ ಮಾತಿಗೆ ಗಿಳಿ, ‘ನನ್ನದೇನಿದೆ ಕೇವಲ ಎರಡು ಬಣ್ಣಗಳು. ನವಿಲು ಬಣ್ಣಬಣ್ಣದ ಗರಿಗಳಿಂದ ತುಂಬಾ ಸುಂದರವಾಗಿರುತ್ತದೆ. ಅದನ್ನು ನೋಡಲು ಜನ ಪೈಪೋಟಿ ಬೀಳುತ್ತಿರುತ್ತಾರೆ. ‘ ಎಂದಿತು.

ನವಿಲನ್ನು ನೋಡಲು ಕಾಗೆ ಜೂಗೆ ಹೋಯಿತು. ಅಲ್ಲಿ ಅದನ್ನು ನೋಡಲು ಜನ ಗುಂಪು ಗುಂಪಾಗಿದ್ದಾರೆ. ಅವರೆಲ್ಲಾ ಹೊರಟು ಹೋದ ಮೇಲೆ ನವಿಲಿನೊಂದಿಗೆ ಕಾಗೆ, ‘ನೀನು ಹಂಸ, ಗಿಳಿಗಿಂತಲೂ ತುಂಬಾ ಸುಂದರವಾಗಿದ್ದೀಯ. ನೀನು ಅದೃಷ್ಟವಂತೆ. ನಿನ್ನ ನೋಡಲು ಜನರೆಲ್ಲಾ ಬರುತ್ತಿದಾರೆ.’ ಇದರಿಂದ ನವಿಲು ಭಯದಿಂದ ‘ಹಾಂ ಏನು ಅದೃಷ್ಟ ಬಿಡಮ್ಮ…ಸುಂದರವಾಗಿದ್ದೀನಿ ಎಂದು ಈ ಜೂನಲ್ಲಿ ನನ್ನನ್ನು ತಂದು ಹಾಕಿದ್ದಾರೆ. ಇಲ್ಲಿ ಒಂದೇ ಒಂದು ಕಾಗೆ ಸಹ ಇಲ್ಲ. ಅವೆಲ್ಲಾ ಹಾಯಾಗಿ ಹೊರಗಿನ ಪ್ರಪಂಚದಲ್ಲಿ ಓಡಾಡಿಕೊಂಡಿವೆ. ನಾನು ಕಾಗೆಯಾಗಿ ಯಾಕೆ ಹುಟ್ಟಲಿಲ್ಲ ಎಂದು ಎಷ್ಟೋ ಸಲ ವ್ಯಥೆ ಪಟ್ಟಿದ್ದೇನೆ. ‘ ಎಂದು ನವಿಲು ಹೇಳಿದ ಬಳಿಕ ಕಾಗೆಗೆ ಜ್ಞಾನೋದಯವಾಯಿತು.

ಮನುಷ್ಯರಲ್ಲೂ ಇತರರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುವವರಿಗೇನು ಬರವಿಲ್ಲ. ಈ ರೀತಿ ಮಾಡುತ್ತಾ ತಮ್ಮಲ್ಲಿನ ಜ್ಞಾನವನ್ನು, ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಅವರವರ ವಿಶೇಷತೆ ಅವರಿಗೆ ಇದ್ದೇ ಇರುತ್ತದೆ. ಅವರವರ ಸಮಸ್ಯೆಗಳೂ ಅವರವರಿಗೆ ಇರುತ್ತವೆ. ನಮಗೆ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಸದ್ಭಳಕೆ ಮಾಡಿಕೊಂಡರೆ ಸಂತೃಪ್ತಿಯಾಗಿ ಜೀವಿಸಬಹುದು ಎಂಬುದನ್ನು  ನಮಗೆ ನೆನಪಿಸುತ್ತದೆ. ಒಮ್ಮೆ ನೋಡಿ ಬದಲಾಗಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಸಮೀಕ್ಷೆ ಪ್ರಖಾರ ಭಾರತೀಯರು ಮೊಬೈಲ್’ನಲ್ಲಿ ಮಾಡೋದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..ಶೇರ್ ಮಾಡಿ..

    ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….

  • ಸುದ್ದಿ

    ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ 9 ನಕಲಿ ವಿದ್ಯಾರ್ಥಿಗಳು ಅರೆಸ್ಟ್……!

    ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…

  • ಸುದ್ದಿ

    ನರೇಂದ್ರ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ರಮ್ಯಾ.!ಆ ದೂರಿನಲ್ಲಿ ಏನಿದೆ ಗೊತ್ತಾ..?

    ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…

  • ಜ್ಯೋತಿಷ್ಯ

    ಶಿವ ಪರಮಾತ್ಮನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whatpp ಮೆಸೇಜ್ ಮಾಡಿ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…