ಸ್ಪೂರ್ತಿ

ಓ ದೇವ್ರೇ ಇವರೇನಪ್ಪಾ ಭಾರತದಲ್ಲಿರೋ ಯಾವ ಡಿಗ್ರಿಯನ್ನು ಬಿಟ್ಟಿಲ್ಲಾ..!ಇವ್ರು ಮಾಡಿರೋ ಪದವಿಗಳ ಬಗ್ಗೆ ಕೇಳ್ತಾ ಹೋದ್ರೆ ನೀವ್ ಶಾಕ್ ಆಗೋದು ಗ್ಯಾರಂಟಿ…

1874

ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.

ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ :-

ಹೌದು, ಶ್ರೀಕಾಂತ್ ಜಿಕ್ಖರ್ರವರು ಭಾರತದ ಅತಿ ಹೆಚ್ಚಿನ ವಿದ್ಯಾರ್ಹತೆಯುಳ್ಳ ವ್ಯಕ್ತಿಯಾಗಿ ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಅನ್ನು ಹೊಂದಿದ್ದಾರೆ. ಎಮ್. ಬಿ. ಬಿ. ಎಸ್  ಮತ್ತು ಎಮ್. ಡಿ. ಇಂದ ಶುರು ಮಾಡಿದ ಇವರು ಎಲ್. ಎಲ್. ಬಿ ಮಾಡಿ ಕಾನೂನನ್ನು ಕೂಡ ಓದಿದ್ದಾರೆ. ನಂತರ ಅಂತಾರಾಷ್ಟ್ರೀಯ ಕಾನೂನಿನಲ್ಲಿ ಸ್ನಾತಕೋತ್ತರ ಪದವಿ(ಎಲ್. ಎಲ್. ಎಮ್) ಯನ್ನು ಪಡೆಯುತ್ತಾರೆ. ಹಾಗೂ ಇವರು ಬಿಸ್ನೆಸ್  ಆಡಳಿತ ಮತ್ತು ಪತ್ರಿಕೋದ್ಯಮದಲ್ಲಿಯು ಮಾಸ್ಟರ್ಸ್ ಅನ್ನು ಹೊಂದಿದ್ದಾರೆ .

ಅಷ್ಟೇ ಅಲ್ಲದೆ ಇವರು ಇನ್ನೂ ಬರೋಬ್ಬರಿ ಹತ್ತು ವಿಷಯಾಗಳ್ಲಲ್ಲಿ ಮಾಸ್ಟರ್ಸ್ ಪದವಿ ಯನ್ನು ಹೊಂದಿದ್ದಾರೆ…

ಎಂ. ಎ. ಸಾರ್ವಜನಿಕ ಆಡಳಿತ ,

ಎಂ. ಎ.ಸಮಾಜ ಶಾಸ್ತ್ರ ,

ಎಂ. ಎ. ಅರ್ಥ ಶಾಸ್ತ್ರ ,

ಎಂ. ಎ. ಸಂಸ್ಕೃತ,

ಎಂ. ಎ. ಇತಿಹಾಸ,

ಎಂ. ಎ. ಆಂಗ್ಲ ಸಾಹಿತ್ಯ ,

ಎಂ. ಎ. ತತ್ವ ಶಾಸ್ತ್ರ ,

ಎಂ. ಎ.ರಾಜ್ಯ ಶಾಸ್ತ್ರ ,

ಎಂ. ಎ.ಪ್ರಾಚೀನ ಭಾರತೀಯ ಇತಿಹಾಸ ,

ಸಂಸ್ಕೃತಿ ಮತ್ತು ಪುರಾತನ ಶಾಸ್ತ್ರ ,

ಎಂ. ಎ.ಮನೋವಿಜ್ಞಾನ . ಮತ್ತು ಇವರು ಯಾವುದೇ ಪದವಿಗಿಂತ ಉನ್ನತ ಪದವಿಯಾದ ಡಿ.ಲಿಟ್ (ಡಾಕ್ಟರ್ ಆಫ್ ಲೆಟರ್ಸ್) ಅನ್ನು ಗಳಿಸಿದ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ. ಸಾಕಷ್ಟು ಪದವಿಗಳಲ್ಲಿ ಚಿನ್ನದ ಪದಕಗಳನ್ನು ಗಳಿಸಿದ ಇವರು ಹಲವಾರು ಪದವಿಗಳಲ್ಲಿ ಪ್ರಥಮ ಶ್ರೇಣಿ /ಪ್ರಥಮ ದರ್ಜೆಯನ್ನು ಗಳಿಸಿದ ಹೆಮ್ಮೆ ಇವರದಾಗಿದೆ.

ಐಎಎಸ್ ಮತ್ತು ಐಪಿಎಸ್ :-

1978 ರಲ್ಲಿ ಅವರು ಇಂಡಿಯನ್ ಸಿವಿಲ್ ಸರ್ವಿಸ್ ಪರೀಕ್ಷೆ (IPS)ಯನ್ನು ಬರೆದು,ಇಂಡಿಯನ್ ಸಿವಿಲ್ ಸರ್ವಿಸ್ (ಐಪಿಎಸ್) ನಲ್ಲಿ ಆಯ್ಕೆಯಾದರು. ನಂತರ ಐಪಿಎಸ್ ಹುದ್ದೆಗೆ ರಾಜಿನಾಮೆ ನೀಡಿ,ಮತ್ತೆ 1980ರಲ್ಲಿ ಭಾರತೀಯ ಸಿವಿಲ್ ಸರ್ವೀಸ್ ಪರೀಕ್ಷೆ (IAS) ಪರೀಕ್ಷೆಯನ್ನು ಬರೆದ್ರು.ಅದರಲ್ಲೂ ಕೂಡ  ಐಎಎಸ್ ಆಫಿಸರ್ ಆಗಿ ಆಯ್ಕೆ ಆದ್ರು.ಆದರೆ ನಾಲ್ಕು ತಿಂಗಳ ನಂತರ ತಮ್ಮ ಐಎಎಸ್ ಹುದ್ದೆಗೂ ರಾಜೀನಾಮೆ ನೀಡಿದ್ರು.

ಕಿರಿಯ ವಯಸ್ಸಿನ ಎಂಎಲ್ಎ :-

1980ರಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ,ತಮ್ಮ ಮೊದಲ ಸಾರ್ವತ್ರಿಕ ಚುನಾವಣೆಯಲ್ಲೇ ಗೆದ್ದು, ತಮ್ಮ 26ನೇ ವಯಸ್ಸಿನಲ್ಲೇ,ಎಂಎಲ್ಎ ಆಗಿ  ಆಯ್ಕೆ ಆದ್ರು.ಹಾಗೂ ಭಾರತದಲ್ಲೇ ಅತೀ ಕಿರಿಯ ವಯಸ್ಸಿನ ಎಂಎಲ್ಎ ಎಂಬ ಹೆಸರಿಗೆ ಪಾತ್ರರಾದ್ರು ಕೂಡ. ತರುವಾಯ ಆ ಸಮಯದಲ್ಲಿ  14 ಶಾಸಕಾಂಗಗಳನ್ನು ಹೊಂದಿರುವ ಸರ್ಕಾರದ, ಅತ್ಯಂತ ಶಕ್ತಿಶಾಲಿ ಸರ್ಕಾರಿ ಮಂತ್ರಿಯಾದರು.

ಭಾರತದಲ್ಲಿ 52,000 ಕ್ಕಿಂತ ಹೆಚ್ಚು ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯಗಳಲ್ಲಿ ಇವರದು ಒಂದು ವೈಯುಕ್ತಿಕ ಗ್ರಂಥಾಲಯ ಸೇರಿದೆ.ಶ್ರೀಕಾಂತ್ ಜಿಕ್ಖರ್ರವರು ಒಬ್ಬ ಶಿಕ್ಷಣತಜ್ಞ, ವರ್ಣಚಿತ್ರಕಾರ, ವೃತ್ತಿಪರ ಛಾಯಾಗ್ರಾಹಕ, ಮತ್ತು ನಟರು ಕೂಡ ಆಗಿದ್ದರುಇವರು 1992-98ರವರೆಗೆ ಭಾರತ ರಾಜ್ಯಾಂಗದ ಸದಸ್ಯರಾಗಿದ್ದರು. ಅವರು 1992 ರಲ್ಲಿ ನಾಗಪುರದಲ್ಲಿ ಸಂದಿಪಾನಿ ಎಂಬ ಶಾಲೆ ಸ್ಥಾಪಿಸಿದರು.ದುರದೃಷ್ಟಕರ ಎಂದರೆ ತಮ್ಮ 49ನೇ ವಯಸ್ಸಿನಲ್ಲಿ ಕಾರ್ ಅಪಘಾತವೊಂದರಲ್ಲಿ ತೀರಿಕೊಂಡ್ರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ one plus 7t…!

    ಒನ್‌ಪ್ಲಸ್‌ನ ಜನಪ್ರಿಯ  ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್‌ಪ್ಲಸ್ 7 ಸರಣಿಯ ಬಳಿಕ ಒನ್‌ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.  ಹೊಸ ಸ್ನ್ಯಾಪ್‌ಡ್ರ್ಯಾಗನ್ 855 Plus ಚಿಪ್‌ಸಹಿತ ನೂತನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ.  ಈಗಾಗಲೇ ಒನ್‌ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…

  • inspirational, ಸುದ್ದಿ

    ಇಲ್ಲಿದೆ ನೋಡಿ ರಾಜ್ಯದ ಎಲ್ಲಾ ರೈತರಿಗೆ ಸುಪ್ರೀಂಕೋರ್ಟ್ ಗುಡ್ ನ್ಯೂಸ್ ನೀಡಿದೆ. ಇದನ್ನೊಮ್ಮೆ ಓದಿ…!

    ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್‌ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್‌ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್‌ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ. ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ…

  • ಆರೋಗ್ಯ

    ಈ ಅದ್ಭುತವಾದ ಗಿಡದಲ್ಲಿರುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.

  • ಜ್ಯೋತಿಷ್ಯ

    ಪರಾಶಕ್ತಿ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…

  • ಸುದ್ದಿ

    ಮಾರಕ ಕಾಯಿಲೆಯಾದ ಏಡ್ಸ್ ಮತ್ತು ಕ್ಯಾನ್ಸರ್‌ಗೆ ಔಷಧಿಯನ್ನು ಕಂಡುಹಿಡಿದು ಎಲ್ಲರ ಮೆಚ್ಚುಗೆ ಪಡೆದ ರೈತ…!

    ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್‌ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…

  • ಸುದ್ದಿ

    ರಾತ್ರಿ ವೇಳೆ ತಾಜ್ ಮಹಲ್ ನಲ್ಲಿ ಲೈಟ್ ಯಾಕೆ ಹಾಕುವುದಿಲ್ಲ ಗೊತ್ತಾ..!

    ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.  ಬೆಳಗ್ಗಿನ ಸಮಯದಲ್ಲಿ…