ಆರೋಗ್ಯ

ಕಂಕುಳ ದುರ್ವಾಸನೆಯಿಂದ ಮುಕ್ತರಾಗಲು ಈ ವಿಧಾನಗಳನ್ನು ಅನುಸರಿಸಿ…….

554

ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.

ಅದರಲ್ಲೂ ದೇಹದಿಂದ ಹೊರಸೂಸುವ ವಾಸನೆ ಕಚೇರಿಯಲ್ಲಿ, ಬಸ್ಸಿನಲ್ಲಿ ಮದುವೆ ಸಮಾರಂಭಗಳಲ್ಲಿ ಹಿಂಸೆ ನೀಡಿದರೆ, ಕಂಕುಳ ದುರ್ವಾಸನೆಯಿಂದ ಬಹಳಷ್ಟು ಮಂದಿ ಮುಜುಗರಪಡುವುದು ಸಾಮಾನ್ಯವೇ ಆಗಿದೆ.

ಆದರೆ ಇವುಗಳಿಗೆಲ್ಲ ಸುಲಭ ಪರಿಹಾರ ಕಂಡುಕೊಳ್ಳುವ ಬದಲು. ರಸಾಯನಿಕಗಳಿಂದ ತಯಾರಿಸಿದ ವಸ್ತುಗಳ ಮೇಲೆ ಮಾರು ಹೋಗಿ ಹಣ ವ್ಯರ್ಥ ಮಾಡುವುದರ ಜೊತೆಗೆ ಚರ್ಮದ ಕಾಂತಿಯನ್ನು ಕಳೆದುಕೊಳ್ಳುವ ಅಪಾಯಗಳಿಗೂ ಸಿಲುಕುವ ಬದಲು ಸುಲಭ ಪರಿಹಾರಗಳನ್ನು ಹುಡುಕುವುದು ಉತ್ತಮ.

ಕಂಕುಳ ದುರ್ವಾಸನೆಯಿಂದ ಮುಕ್ತರಾಗಲು ನೀವು ಈ ಕೆಳಗೆ ನೀಡಿರುವ ಸುಲಭ ಪರಿಹಾರೋಪಾಯಗಳನ್ನು ಅನುಸರಿಸಿದರೆ ನೀವು ಸುಲಭವಾಗಿ ಪರಿಹಾರ ಕಂಡುಕೊಳ್ಳ ಬಹುದಾಗಿದೆ.

  • ಶುಚಿತ್ವ ಹಾಗೂ ನೈರ್ಮಲ್ಯತೆ:-

ಬೇಸಿಗೆ ಕಾಲದಲ್ಲಿ ದೇಹವಿಡೀ ಬೆವರುವುದು ಸಾಮಾನ್ಯವಾಗಿದೆ. ಇಂತಹ ಸಂದರ್ಭದಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಸಾಬೂನಿನಿಂದ ಹಾಗೂ ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡಿ, ಮುಖ್ಯವಾಗಿ ಕಂಕುಳಗಳನ್ನು ಚೆನ್ನಾಗಿ ತೊಳೆಯಿರಿ. ಸಾಧ್ಯವಾದರೆ ದಿನಕ್ಕೆರಡು ಬಾರಿ ಸ್ನಾನ ಮಾಡುವುದರಿಂದ ಬ್ಯಾಕ್ಟೀರಿಯಾಗಳಿಂದ ದೂರವಿದ್ದು, ಶುಚಿತ್ವ ಹಾಗೂ ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಿ. ರೇಷ್ಮೆಯಂತಹ ನೈಸರ್ಗಿಕ ನಾರುಗಳಿಂದ ತಯಾರಿಸಲ್ಪಟ್ಟ ವಸ್ತ್ರಗಳು ತೇವಾಂಶವನ್ನು ಹೀರಿ ಚರ್ಮವನ್ನು ತೇವರಹಿತವಾಗಿಡುತ್ತದೆ.

  • ಆಹಾರ ನಿರ್ಬಂಧಗಳು:-

ನಮ್ಮ ದೈನಂದಿನ ಆಹಾರಗಳಲ್ಲಿಯೂ ಸಾಧ್ಯವಾದಷ್ಟು ಮಟ್ಟಿಗೆ ಗಮನಹರಿಸಬೇಕಾಗಿದೆ. ಕಾಫೀ, ಖಾರದ ತಿನಿಸುಗಳು, ಕೊಬ್ಬಿನಾಂಶವಿರುವ ಆಹಾರಗಳು ಹಾಗೂ ಧೂಮಪಾನದಿಂದ ದೂರವಿದ್ದು, ಕಂಕುಳದ ವಾಸನೆಯಿಂದ ದೂರವಿರಬಹುದು.

  • ದ್ರವಣಗಳು:-

ಡಿಯೋಡ್ರಂಟ್ ಬದಲು ಹತ್ತಿಯನ್ನು ಆ್ಯಪಲ್ ಸೈಡರ್ ವಿನೆಗರ್ ನಿಂದ ಒದ್ದೆ ಮಾಡಿ ಕಂಕುಳಕ್ಕೆ ಹಚ್ಚಿರಿ.

 

  • ನಿಂಬೆ ಹಣ್ಣು :-

ಬ್ಯಾಕ್ಟೀರಿಯಾಗಳನ್ನು ಹೊಡೆದೋಡಿಸುವಲ್ಲಿ ನಿಂಬೆ ಹಣ್ಣು ಕೂಡಾ ಪ್ರಭಾವಶಾಲಿಯಾಗಿದೆ. ನಿಂಬೆ ಹಣ್ಣು ನ್ನು ಎರಡು ಭಾಗ ಮಾಡಿ, ಒಂದು ಭಾಗವನ್ನು ಕಂಕುಳಕ್ಕೆ ಉಜ್ಜಿ ಅದರ ರಸವು ಕಂಕುಳದಲ್ಲಿಯೇ ಒಣಗಲು ಬಿಡಿ. ಸಂಪೂರ್ಣವಾಗಿ ಒಣಗಿದ ನಂತರ ಸ್ನಾನ ಮಾಡಿ. ಕಂಕುಳದ ವಾಸನೆ ಸಂಪೂರ್ಣವಾಗಿ ಮಾಯವಾಗುವ ತನಕ ಪ್ರತಿದಿನಕ್ಕೊಂದು ಬಾರಿ ಮಾಡಿರಿ.

 

  • ತುಳಸಿ ಮತ್ತು ಬೇವು:-

ಬ್ಯಾಕ್ಟೀರಿಯಾಗಳನ್ನು ಶಮನ ಮಾಡುವುದರಲ್ಲಿ ನಮ್ಮ ಪರಿಸರದಲ್ಲಿ ಸಾಮಾನ್ಯವಾಗಿ ಲಭ್ಯವಿರುವ ತುಳಸಿ ಮತ್ತು ಬೇವು ಬಹಳ ಪರಿಣಾಮಕಾರಿಯಾಗಿದೆ. ಸ್ವಲ್ಪ ತುಳಸಿ ಹಾಗೂ ಬೇವಿನ ಸೊಪ್ಪನ್ನು ಅರೆದು ಪೇಸ್ಟ್ ತರ ಮಾಡಿ ಕಂಕುಳಗಳಿಗೆ ಹಚ್ಚಿರಿ. ಸ್ವಲ್ಪ ಸಮಯದ ನಂತರ ಸ್ನಾನ ಮಾಡಿ. ಇದನ್ನು ವಾರಕ್ಕೆ ಮೂರು ಸಲ ಮಾಡಿದಲ್ಲಿ ಪರಿಣಾಮ ಕಾಣಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಸುಸ್ತು ಅಂತ ಮಲಗುತ್ತಿದಿರಾ..!ಹಾಗಾದ್ರೆ ಈ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ..

    ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

  • Law

    ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ 10 ವರ್ಷ ಜೈಲು ಶಿಕ್ಷೆ..!

    ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.

  • ವಿಸ್ಮಯ ಜಗತ್ತು

    ಇದು ಮನುಕುಲದ ಅಚ್ಚರಿ.!ನಂಬ್ಲೆಬೇಕು!ಮೊಟ್ಟೆಗಳನ್ನು ಹಾಕಿದ 14 ವರ್ಷದ ಬಾಲಕ..!ಆ ಮೊಟ್ಟೆಗಳು ಹೇಗಿವೆ ಗೊತ್ತಾ.?ಈ ಲೇಖನ ಓದಿ ಶಾಕ್ ಹಾಗ್ತೀರಾ…

    ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…

  • Archive

    ಏಷ್ಯಾ ಬುಕ್ ಆಫ್ ರೆಕಾರ್ಡ್

    ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್‌ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…

  • ಸುದ್ದಿ

    ಯಶ್ ತುಂಬಿಸಿದ್ರು ಕೆರೆ, ಆಫಿಸರ್ಸ್ ತುಂಬಿಕೊಂಡ್ರು ಜೇಬು..!

    ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…