KSRTC

ಕಂಡಕ್ಟರಿಲ್ಲದ KSRTC BUS – ಎಲ್ಲಿ ಹೋದ ಕಂಡಕ್ಟರ್

254

ಕಂಡಕ್ಟರಿಲ್ಲದ ಕೆಎಸ್ಆರ್ಟಿಸಿ bus

ವಿರಾಜಪೇಟೆಯಿಂದ ಮೈಸೂರಿಗೆ ಪ್ರಯಾಣ ಹೊರಟೆ. ಸುಖಕರ ಹಾಗು ಸುರಕ್ಷಿತ ಪ್ರಯಾಣಕ್ಕೆ KSRTC ಬೆಸ್ಟ್. ಅಂದ ಮಾತ್ರಕ್ಕೆ ಬಸ್ ಹತ್ತಿ ಕಿಟಕಿಯ ಆಸನವನ್ನೇ ಆರಿಸಿ ಕುಳಿತುಕೊಂಡೆ. ನಾಲ್ಕೈದು ನಿಮಿಷದ ನಿಲುಗಡೆಯ ನಂತರ ಚಾಲಕ ಬಸ್ ಚಲಾಯಿಸಿದ. ಸಾಮಾನ್ಯವಾಗಿ ಬಸ್ ತಲುಪಿಸುವುದು ಚಾಲಕನಾದರೂ ಪ್ರಯಾಣಿಕರನ್ನು ನಿಭಾಯಿಸುವುದು ನಿರ್ವಾಹಕರು ತಾನೆ? ಅದೆ ನಮ್ಮ ಕಂಡಕ್ಟರ್.

ಬಸ್ 500 ಮೀಟರ್ ಮುಂದೆ ತಲುಪಿತು. ಪ್ರಯಾಣಿಕರೆಲ್ಲರೂ ಮೊಬೈಲ್, ಮಾತುಕತೆಗಳಲ್ಲಿ ನಿರತರಾಗಿದ್ದಾರೆ. ಆಸನಗಳು ಭರ್ತಿಯಾದ ಬಸ್ಸಿನಲ್ಲಿ ಕಂಡಕ್ಟರ್ ಇಲ್ಲವೆಂದು ಯಾರಿಗೂ ಭಾಸವಾಗಲಿಲ್ಲ.
ಸಾರ್ ಕಂಡಕ್ಟರ್ ಇಲ್ಲ ಎಂದು ಯುವಕನೊಬ್ಬ ಕೇಕೆ ಹಾಕಿದ. ಕೇಕೆ ಚಾಲಕನ ಕಿವಿಗೆ ಕೇಳದಿದ್ದರೂ ಕೇಳಿದ ಪ್ರಯಾಣಿಕರೆಲ್ಲರೂ ದಬ್ಬಿಬ್ಬಾಗಿ ಪರಸ್ಪರ ಮುಖ ನೋಡಿ ನಗು ಶುರುಮಾಡಿದರು. ಚಾಲಕನಿಗೆ ವಿಷಯದ ಪರಿವೇ ಇಲ್ಲ. ಪಟ್ಟಣದಲ್ಲಿ ವಾಹನಗಳ‌ ದಟ್ಟಣೆ ಇರುವುದರಿಂದ ನಿಧಾನವಾಗಿ ಚಲಾಯುಸುತ್ತಿದ್ದಾನೆ. ಎಲ್ಲಿಯಾದರೂ ಸ್ಟೋಪ್ ಮಾಡಬೇಕಾದರೆ ಕಂಡಕ್ಟರ್ ನ ಪೀಪಿಯ ಪೀ….. ಶಬ್ಧ ಕೇಳಬೇಕಲ್ಲವೇ..!?

ಹಿಂದಿನಿಂದ ಬಂದ ಯುವಕನೊಬ್ಬ ಚಾಲಕನ ಬಳಿ ತೆರಳಿ ಕಂಡಕ್ಟರ್ ಇಲ್ಲ ಎಂದು ಜೋರಾಗಿ ಕೂಗಿದ. ತಟ್ಟನೆ ಹಿಂದೆ ತಿರುಗಿದೆ ಚಾಲಕ ನಗುತ್ತಾ ಬಸ್ ಬದಿಗೆ ನಿಲ್ಲಿಸಿದ. ಕತ್ತು ತಿರುಗಿಸಿ ಪ್ರಯಾಣಿಕರೊಂದಿಗೆ
ಎಲ್ಲಿ ಹೋದ ಇವ ? ಎಂದು ಕೇಳಿದ. ಹ್ನೇ…. ಕಾಲ್ ಮಾಡಿ ನೋಡು ಎಂದರು ಪ್ರಯಾಣಿಕರು. ನನ್ನತ್ರ ನಂಬರ್ ಇಲ್ಲ ಎಂದ. ಕೇಳಿದ ಪ್ರಯಾಣಿಕರಿಗೆ ಇದೇನೋ ಹಾಸ್ಯ ನಾಟಕದಂತೆ. ಹಾಗಾದ್ರೆ ಸ್ವಲ್ಪ ವೈಟ್ ಮಾಡಿ ಕಂಡಕ್ಟರ್ ಈಕಡೆ ಕಾಲ್ ಮಾಡ್ತಾನೆ ಎಂದರು ಪ್ರಯಾಣಿಕರು. ಇಲ್ಲ ಅವನತ್ರ ನನ್ನ ನಂಬರೂ ಇಲ್ಲಾರೀ ಎಂದನು ಚಾಲಕ.
ನಾವಿಬ್ಬರೂ ಈ ಬಸ್ಸಲ್ಲಿ ಹೊಸಬರು, ಇವತ್ತು ಬೆಳಿಗ್ಗೆ ನೇಮಕವಾಗಿದ್ದಷ್ಟೆ. ಪರಿಚಯವಾಗಲು ಬಿಡುವು ಸಿಗಲಿಲ್ಲ. ಪ್ರಯಾಣಿಕರಿಗೆ ಟಿಕೆಟ್ ಇಲ್ಲದೆ ಮೈಸೂರು ತಲುಪಬಹುದೆಂಬ ಆಸೆಯೇನೋ ಎಲ್ಲರೂ ಫುಲ್ ಖುಷಿಯಲ್ಲಿ.

ತಕ್ಷಣ ಹಿಂದಿನಿಂದ ಜೋರು ಹಾರ್ನ್ ಶಬ್ದ. ತಿರುಗಿ ನೋಡಿದಾಗ ಅತಿವೇಗದಿಂದ ಬಂದ ಆಟೋದಿಂದ ನಗುತ್ತಾ ಇಳಿದು ಬಸ್ಸತ್ತಿದ ಕಂಡಕ್ಟರ್ ಮಾಮ. ಏನಿದ್ದರೂ ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.

Shafi Anvaari
Kodagarahalli

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಅತಿಯಾದರೆ ಅಮೃತವೂ ವಿಷ, ಹೆಚ್ಚು ನಿಂಬೆರಸ ಸೇವನೆ ಆರೋಗ್ಯಕ್ಕೆ ಹಾನಿಕರ.

    ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…

  • ಸುದ್ದಿ

    ಪತ್ನಿಯನ್ನು ಮತ್ತು ತನ್ನ ಮೂರೂ ಮಕ್ಕಳನ್ನು ಕೊಂದು ತಾನು ನೇಣಿಗೆ ಶರಣಾದ,.. ಕಾರಣ ಇಲ್ಲಿದೆ ನೋಡಿ…!

    ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…

  • ಸುದ್ದಿ

    ತಾಯಿಯ ಮೇಲಿನ ಪ್ರೀತಿಗಾಗಿ ಸ್ವಂತ ಅಣ್ಣನನ್ನು ಕೊಂದ ತಮ್ಮ..ಕಾರಣ?

    ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…

  • ಸಿನಿಮಾ

    ಇವನ ಒಂದು ಸೆಲ್ಪಿ ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ತಾರೆ!ಈ ಪುಣ್ಯಾತ್ಮ ಯಾರೂ ಗೊತ್ತಾ?

    ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.

  • ಭವಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…

  • ಸುದ್ದಿ

    ಪರಿಸರ ದಿನಾಚರಣೆಗೆಂದು 20 ಲಕ್ಷ ವೆಚ್ಚ…..!

    ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ…