ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ.

ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು.

ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ ಇದರಿಂದ ಚಿತ್ರರಂಗದ ಮೇಲೂ, ಕಲಾವಿದರ ಮೇಲೂ ಹಾಗೆಯೇ ತಾಂತ್ರಿಕ ವರ್ಗದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬ ಭಯ ಮತ್ತು ಇದರಿಂದ ನಮ್ಮ ಪ್ರಾದೇಶಿಕತೆಗೆ ದಕ್ಕೆ ಬರುತ್ತದೆ ಎಂಬುದು.

ಮುಂಚೆಯಲ್ಲ ಅಭಿಮಾನಿಗಳು ಹಾಗೂ ಎಲ್ಲಾ ಚಿತ್ರ ಪ್ರಿಯರು ಕನ್ನಡಕ್ಕೆ ಪರಭಾಷಾ ಚಿತ್ರಗಳ ಡಬ್ ಮಾಡುವಿಕೆಯನ್ನು ವಿರೋಧಿಸಿದ್ದರು. ಆದರೆ ಈಗ ಕಾಲ ಬದಲಾಗಿದೆ. ಎಲ್ಲರೂ ತಾವು ಬೇರೆ ಭಾಷೆಯ ಸಿನಿಮಾ ಗಳನ್ನು ಕನ್ನಡದಲ್ಲೇ ನೋಡಬೇಕೆಂದು ಬಯಸಿದ್ದಾರೆ. ನಮಗೆ ಡಬ್ಬಿಂಗ್ ಬೇಕೇ ಬೇಕೆಂದು ಹಠವಿಡಿದು ಕುಳಿತಿದ್ದಾರೆ.

ಮೊದಲು ಕೆಲ ಚಿತ್ರಗಳು ವಿರೋಧದ ನಡುವೆಯೂ ತೆರೆ ಕಂಡು ಸೋಲನ್ನು ಅನುಭವಿಸಿದ್ದವು. ಕನ್ನಡಕ್ಕೆ ಡಬ್ ಆದ ಕೆಲವೇ ಚಿತ್ರಗಳು ಯಶಸ್ಸು ಕಾಣಲಿಲ್ಲ. ಆದರೆ ಈಗ ಕೆಜಿಎಫ್ ಚಿತ್ರ ಬೇರೆ ಭಾಷೆಯ ನೆಲದಲ್ಲಿ ತಮ್ಮದೇ ಭಾಷೆಯಲ್ಲಿ ಯಶಸ್ಸು ಕಂಡದ್ದೇ ತಡ ಈಗ ಕನ್ನಡದಲ್ಲೂ ಆ ನೆಲದ ಚಿತ್ರಗಳು ಡಬ್ ಆಗಲು ತಯಾರಾಗಿವೆ.

ತೆಲುಗಿನ ವಿನಯ ವಿಧೇಯ ರಾಮ ಸೇರಿದಂತೆ, ಜೂನಿಯರ್ ಎನ್ ಟಿಆರ್ ಆರ್ ಚಿತ್ರಗಳು ಕನ್ನಡದಲ್ಲಿ ತೆರೆಕಾಣಲು ಸಿದ್ಧವಾಗಿವೆ.

ಪ್ರಿಯ ವಾರಿಯರ್ ಅಭಿನಯದ ಒಂದು ಮಲೆಯಾಳಂ ಚಿತ್ರ ಕನ್ನಡಕ್ಕೆ ಬರಲಿದೆ. ತಮಿಳಿನ ಎರಡು ಚಿತ್ರಗಳು ಕನ್ನಡಕ್ಕೆ ಬರಲು ಭಾರಿ ತಯಾರಿ ನಡೆಯುತ್ತಿದೆ. ಅಲ್ಲದೆ ಇನ್ನೂ ಕೆಲವು ಭಾಷೆಯ ಚಿತ್ರಗಳು ಕನ್ನಡಕ್ಕೆ ಬರಬಹುದು ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ…
ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್ ಲಿಂಕ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್ ಕ್ಲಿಕ್ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ. https://drive.google.com/file/d/1-14JW0nJ2hfXT-TAHsIykVdha9D9_eZC/view ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ…
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ…
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…
ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…