ಕರ್ನಾಟಕ

ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ?ಈ ಲೇಖನಿ ಓದಿ…

4789

ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.

ಕನ್ನಡ ಭಾಷೆಯು ಪ್ರಾಚೀನ ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು ಇದಕ್ಕೆ ಸುಮಾರು ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದೆ. ದೇಶದ ಭಾಷೆಗಳಲ್ಲಿ ಕನ್ನಡ ಭಾಷೆಯೂ ಪ್ರಮುಖವಾಗಿದ್ದು ಇತ್ತೀಚೆಗೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಂತಹ ಭಾಷೆ ನಮ್ಮ ಕನ್ನಡ.

ಆದರೆ ಪ್ರಸ್ತುತ ಕನ್ನಡ ಭಾಷೆಯ ಸ್ಥಿತಿಗತಿಯನ್ನು ಗಮನಿಸುತ್ತಿದ್ದರೆ ಎಲ್ಲೋ ಒಂದು ಕಡೆ ನಮ್ಮ ಪರಭಾಷೆಯ ಮೇಲಿರುವ ವ್ಯಾಮೋಹದಿಂದ ನಮ್ಮ ತಾಯಿಯ ಸಮಾನದ ಕನ್ನಡ ಭಾಷೆಯು ಅಪಾಯದಂಚಿನಲ್ಲಿ ಸಿಕ್ಕಿ ಕೊಂಡಿದೆ. ಇಂದು ಯಾವುದೇ ಕ್ಷೇತ್ರದಲ್ಲಿ ನೋಡಿದರೂ ಅಲ್ಲಿ ಇಂಗ್ಲಿಷಿಗೆ ದೊರೆಯುವ ಪ್ರಾಮುಖ್ಯತೆ ಕನ್ನಡಕ್ಕೆ ದೊರೆತಿಲ್ಲ.

ಅನ್ಯ ರಾಜ್ಯಗಳಲ್ಲಿ ಅವರು ತಮ್ಮ ಮಾತೃಭಾಷೆಗೆ ಕೊಡುವ ಪ್ರಾಮುಖ್ಯತೆ ನಮ್ಮ ಕನ್ನಡಿಗರಿಗೆ ಇಲ್ಲ. ಹೊರ ರಾಜ್ಯದಿಂದ ಬಂದ ಕೆಲವರು ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುವಂತಹ ಅನೇಕ ಕಹಿ ಪ್ರಸಂಗಗಳು ದಿನ ಬೆಳಗಾದರೆ ನಮ್ಮ ಕಣ್ಣೆದುರು ನಡೆಯುತ್ತಲೇ ಇವೆ.

 

ಕನ್ನಡಿಗರು ಎಷ್ಟರ ಮಟ್ಟಿಗೆ ಭಾಷೆಯನ್ನು ದೂರ ಸರಿಸುತ್ತಿದ್ದಾರೆ, ಬೇರೆ ರಾಜ್ಯದವರು ಇಲ್ಲಿ ಬಂದು ನೆಲಸಿಯೂ ಕನ್ನಡ ಕಲಿಯುವ ಶ್ರಮ ನಿಮಗೆ ಬೇಡವೆಂದು ಕನ್ನಡಿಗರೇ ಅವರ ಭಾಷೆಯನ್ನು ಕಲಿತು ಅವರಿಗೆ ಸಹಕಾರ ಮಾಡುವಷ್ಟು ಪರ ಭಾಷಾಭಿಮಾನವುಳ್ಳವರು.

ಇಂದು ಕರ್ನಾಟಕದಲ್ಲಿ ಇತರೆ ಭಾಷೆಗಳಾದ ತಮಿಳು, ತೆಲುಗು, ಹಿಂದಿ, ಇಂಗ್ಲಿಷ್ ಭಾಷೆಗೆ ದೊರೆಯುತ್ತಿರುವ ಮಹತ್ವ ಕನ್ನಡಕ್ಕಿಲ್ಲ. ದಾರಿಯಲ್ಲಿ ಯಾರಾದರೂ ಅನ್ಯ ಭಾಷೆಯಲ್ಲಿ ಕೇಳಿದರೆ ಅವರಿಗೆ ಭಾಷೆ ತಿಳಿದಿದ್ದರೂ ಅವರು ತಮ್ಮ ಭಾಷೆಯಲ್ಲೇ ಉತ್ತರಿಸುವ ಭಾಷಾಭಿಮಾನಿಗಳು.

ಭಾರತದಲ್ಲಿ ಜಾತ್ಯತೀತ, ಭಾಷಾತೀತ, ರಾಷ್ಟ್ರದಂತೆ ಬದುಕಬೇಕು ನಿಜ. ಆದರೆ ಎಲ್ಲರಿಗೂ ಭಾಷಾಭಿಮಾನ ಮುಖ್ಯವಾಗಿ ಇರಬೇಕು. ಅನೇಕ ವರ್ಷಗಳ ಹಿಂದೆ ಸಾಮನ್ಯ ಭಾಷೆಗಳಲ್ಲಿ ಒಂದಾಗಿದ್ದ ಇಂಗ್ಲಿಷ್ ಇಂದು ಪ್ರಪಂಚದ ಪ್ರಮುಖ ಭಾಷೆಯಾಗಲು ಸಾಧ್ಯವಾಗುತ್ತಿರಲಿಲ್ಲ.

 

ಅಲ್ಲಿನ ದಾರ್ಶನಿಕರು ಸಾಹಿತಿಗಳು ಮತ್ತು ಇತರರ ಶ್ರಮದಿಂದ ಮಾತ್ರ ಇದು ಇಂದು ಪ್ರಮುಖ ಭಾಷೆಯಾಗಿದೆ. ಚೀನಾದಂತಹ ಶ್ರೀಮಂತ ದೇಶದಲ್ಲಿ ಇಂಗ್ಲಿಷ್ ತಿಳಿಯದವರೇ ಹೆಚ್ಚು. ಅಲ್ಲಿನ ಅನೇಕರಿಗೆ ಇಂಗ್ಲಿಷ್ ಭಾಷೆಯ ಗಂಧವೇ ತಿಳಿದಿಲ್ಲ. ಆದರೂ ಅದು ಅಭಿವೃದ್ಧಿ ಹೊಂದಿದ ರಾಷ್ಟ್ರ. ಇಂಗ್ಲಿಷ್ ಬೇಕು ಆದರೆ, ಅಗತ್ಯವಿದ್ದಲ್ಲಿ ಮಾತ್ರ.

 

ಅನಾವಶ್ಯಕವಾಗಿ ಇಂಗ್ಲಿಷ್ ಮಾತನಾಡುವುದರಿಂದ ಕೀರ್ತಿ ಹಚ್ಚುತ್ತದೆಂದು ಭಾವನೆಯಿಂದ ಇಂದು ಕನ್ನಡವನ್ನು ಕೀಳರಿಮೆಯ ದೃಷ್ಟಿಯಿಂದ ನೋಡುತ್ತಿರುವವರೆ ಹೆಚ್ಚು. ಇದರ ಉದ್ದೇಶ ಅನ್ಯ ಭಾಷೆಯಭಾಷೆಯನ್ನು ಸಹ ಪ್ರೀತಿಸಿ, ಗೌರವಿಸಿ, ಆದರೆ ಕನ್ನಡವನ್ನು ಬೆಳೆಸಬೇಕೆಂಬುದು.

ಕುವೆಂಪು ಅವರ ನುಡಿಯಂತೆ ‘ಎಲ್ಲಾದರು ಇರು ನೀ ಕನ್ನಡವಾಗಿರು’ ಎಂಬಂತೆ ಕನ್ನಡವನ್ನು ಪ್ರೀತಿಸೊಣ….ಕನ್ನಡವನ್ನು ಬೆಳೆಸೋಣ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    36 ಗಂಟೆಯಲ್ಲಿ ದುಬೈ ತೋರಿಸುವ ಹೊಸ ಸ್ಟಾಪ್‍ಓವರ್ ಪಾಸ್…!

    ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್‍ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್‍ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…

  • ಸುದ್ದಿ

    ಕೊನೆಗೂ ಬಯಲಾಯ್ತು ಪ್ರಸಾದದಲ್ಲಿ ವಿಷ ಬೇರೆಸಿದ್ದ ಪಾಪಿಗಳ ಬೆಚ್ಚಿ ಬೀಳಿಸುವ ಸತ್ಯ..!

    ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಈ ಒಂದು ಡ್ರಾಗನ್ ಪ್ರುಟ್. ಈ ಅರೋಗ್ಯ ಮಾಹಿತಿ ನೋಡಿ.

    ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್‌ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್.  ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….

  • ಸುದ್ದಿ

    ಶಿಕ್ಷಣ ಸಚಿವರಿಂದ ರ್ಸರ್ಕಾರಿ ಶಾಲಾ ಶಿಕ್ಷಕರಿಗೊಂದು ಸಂತಸದ ಸುದ್ದಿ….!

    ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…

  • ಆರೋಗ್ಯ

    ರಾತ್ರಿ ಮಲಗುವ ಮುಂಚೆ ಏಲಕ್ಕಿ ತಿಂದು ಬಿಸಿ ನೀರು ಕುಡಿದರೆ ಆಗುವ ಪ್ರಯೋಜನೆಗಳು. ತಿಳಿದರೆ ಶಾಕ್!

    ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…

  • ಸುದ್ದಿ

    ಇನ್ಪೋಸಿಸ್ ಸುಧಾಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಮಿತಾಬ್ ಬಚ್ಚನ್, ಕಾರಣ ಗೊತ್ತಾ,.!

    ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…