ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.

ರಾಷ್ಟ್ರಪತಿಗಳ ಈ ಹೇಳಿಕೆಗೆ ಪೂರಕ ಎನ್ನುವಂತೆ ತಾವು ನ್ಯಾಯಾಧೀಶರಾಗಿದ್ದ 28 ವರ್ಷಗಳಲ್ಲಿ 2000ಕ್ಕೂ ಅಧಿಕ ಪ್ರಕರಣಗಳ
ತೀರ್ಪುಗಳನ್ನು ಕನ್ನಡ ಭಾಷೆಯಲ್ಲೇ ನೀಡಿ, ನ್ಯಾಯಾಂಗ ಕ್ಷೇತ್ರದಲ್ಲೂ ತಮ್ಮ ಕನ್ನಡ ಪ್ರೀತಿ ಮೆರೆದಿ ದ್ದಾರೆ ನಿವೃತ್ತ ನ್ಯಾ.ಎಸ್.ಎಚ್. ಮಿಟ್ಟಲಕೋಡ ಅವರು… ಮೂಲತಃ ಧಾರವಾಡದವರೇ ಆದ ನ್ಯಾ.ಮಿಟ್ಟಲಕೋಡ ಅವರು ಪ್ರಾಥಮಿಕ ಶಾಲೆಯಲ್ಲಿದ್ದಾಗಿನಿಂದಲೂ ತಮ್ಮ ಕನ್ನಡ ಪ್ರೀತಿಯನ್ನು ಆಯ್ಕೆ ಮಾಡಿಕೊಂಡ ವಕೀಲ ವೃತ್ತಿ, ನಂತರ ನ್ಯಾಯಾಧೀಶರಾಗಿ ನೀಡುವ ತೀರ್ಪುಗಳಲ್ಲೂ ತುಂಬಿ “ಕನ್ನಡ ಕಾನೂನು ಸಾಹಿತ್ಯ’ ಎನ್ನುವ ಹೊಸ ಪ್ರಕಾರವೊಂದರ ಹುಟ್ಟಿಗೂ ಕಾರಣರಾಗಿದ್ದಾರೆ.
ದಾವಣಗೆರೆಯಲ್ಲಿ ಸಾವಿರ:-
ಶಿವಮೊಗ್ಗ, ಕಾರವಾರ, ಚಿತ್ರದುರ್ಗ, ಕೊಪ್ಪಳ ಸೇರಿದಂತೆ ಅನೇಕ ಕಡೆ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುವ ಸಂದರ್ಭದಲ್ಲೂ ಕನ್ನಡ ತೀರ್ಪು ನೀಡುತ್ತಿದ್ದ ಅವರಿಗೆ ನ್ಯಾಯಾಲಯಗಳಲ್ಲಿನ ಶೀಘ್ರ ಲಿಪಿಕಾರರು ಮತ್ತು ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸುತ್ತಿದ್ದ ನೌಕರರ ಕೊರತೆ ಇತ್ತು. ಹೀಗಾಗಿ ಕನ್ನಡದಲ್ಲಿ ತೀರ್ಪು ಪ್ರಕಟಿಸಲು ತಡಕಾಡಬೇಕಿತ್ತು.

ಕೊನೆಗೆ ಒಂದೊಂದು ತೀರ್ಪುಗಳನ್ನು ಸುದೀರ್ಘವಾಗಿ ಬರೆಯಬೇಕಿದ್ದರಿಂದ ಕಚೇರಿ ಅವಧಿ ಮುಗಿಸಿ ಟೈಪ್ವೈಟರ್ನ್ನು ತಮ್ಮ ಮನೆಗೆ ತರಿಸಿಕೊಂಡು ತಡರಾತ್ರಿವರೆಗೂ ಕುಳಿತು ಕಷ್ಟವಾದರೂ ತೀರ್ಪಿನ ಪ್ರತಿ ಕನ್ನಡದಲ್ಲೇ ಪೂರ್ಣಗೊಳಿಸುತ್ತಿದ್ದರು.
ಹೈಕೋರ್ಟ್ನಲ್ಲೂ ಬರಲಿ:-
ಜೆಎಂಎಫ್ಸಿ ಮತ್ತು ಜಿಲ್ಲಾ ಕೋರ್ಟ್ಗಳಲ್ಲಿ ಕರ್ನಾಟಕ ಏಕೀಕರಣದ ನಂತರ ಕನ್ನಡ ಭಾಷೆಯಲ್ಲಿ ತೀರ್ಪು ನೀಡಲು ಸರ್ಕಾರ ಅನುಮತಿ ನೀಡಿತು.

ಆದರೆ ಇಂದಿಗೂ ಪರಿಪೂರ್ಣವಾಗಿ ಇದು ಜಾರಿಯಾಗಿಲ್ಲ. ಇನ್ನು ಹೈಕೋರ್ಟ್ನಲ್ಲಿ ಸದ್ಯಕ್ಕೆ ಕನ್ನಡದಲ್ಲಿ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸಲು ಅವಕಾಶವಿಲ್ಲ. ಆದರೆ ಇಂಗ್ಲಿಷ್ ಮೂಲ ದಾಖಲೆ ಜೊತೆಗೆ ಕನ್ನಡದ ದಾಖಲೆ ಪ್ರತಿಯೊಂದನ್ನು ಸಲ್ಲಿಸಬಹುದು ಅಷ್ಟೇ. ಹೈಕೋರ್ಟ್ ನ್ಯಾಯಾಧೀಶರು ಹೊರ ರಾಜ್ಯಗಳಿಂದ ಬಂದವರಾಗಿರುವುದರಿಂದ ಇದು ಇಂಗ್ಲಿಷ್ನಲ್ಲೇ ಇರಬೇಕು ಎನ್ನುವ ನಿಯಮವಿದೆ.
ಕನ್ನಡದಲ್ಲೇ ಮೊದಲ ತೀರ್ಪು:-
1977ರಲ್ಲಿ ಧಾರವಾಡದ ಸರ್ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಪದವಿ ಮುಗಿಸಿ ವಕೀಲಿ ವೃತ್ತಿ ಆರಂಭಿಸಿದ ಅವರು, 1985ರಲ್ಲಿ ಚಿಕ್ಕನಾಯಕನಹಳ್ಳಿ ಮುನ್ಸಿಫ್-ಮ್ಯಾಜಿಸ್ಟ್ರೇಟ್ ಆದರು. ನ್ಯಾಯಾಧೀಶರಾಗಿ ತಮ್ಮ ಎದುರಿಗೆ ಬಂದ ಮೊದಲ ಪ್ರಕರಣದ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದರು. ನಂತರ ಅಥಣಿ, ಸೊರಬ, ಬಂಟ್ವಾಳ, ಸಾಗರದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗಲೂ ಕನ್ನಡ ಪ್ರೀತಿ ಮುಂದುವರಿಯಿತು.

ಕ್ರಿಮಿನಲ್, ಕಂದಾಯ, ಸಿವಿಲ್, ತೆರಿಗೆ ಇಲಾಖೆ, ಸಹಕಾರ ಇಲಾಖೆಗೆ ಸಂಬಂಧಿಸಿದ ಎಲ್ಲಾ ಬಗೆಯ ಪ್ರಕರಣಗಳ ತೀರ್ಪು ಕನ್ನಡದಲ್ಲಿ ನೀಡಿದ್ದು ಇವರ ಕನ್ನಡ ಪ್ರೀತಿಗೆ ಸಾಕ್ಷಿ ಕಾನೂನು ಕ್ಷೇತ್ರದ ತೀರ್ಪು ಗಳು ಸ್ಥಳೀಯ ಭಾಷೆಯಲ್ಲೇ ಬಂದರೆ ನ್ಯಾಯ ಕೇಳಲು ಬಂದ ವರಿಗೂ ತಮ್ಮ ಪ್ರಕರಣದ ಸಮಗ್ರ ಮಾಹಿತಿ ಲಭಿಸುತ್ತದೆ. ಜೊತೆಗೆ ಕನ್ನಡ ಕಾನೂನು ಸಾಹಿತ್ಯವೂ ವೃದ್ಧಿಯಾಗುತ್ತದೆ.
ನ್ಯಾ.ಎಸ್.ಎಚ್. ಮಿಟ್ಟಲಕೋಡ ನಿವೃತ್ತ ನ್ಯಾಯಾಧೀಶರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…
ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್ಡಿಆರ್ಎಫ್) ಒಟ್ಟು1813.75 ಕೋಟಿ…
ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…
ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?
ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…