ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.

ರಾಷ್ಟ್ರಪತಿಗಳ ಈ ಹೇಳಿಕೆಗೆ ಪೂರಕ ಎನ್ನುವಂತೆ ತಾವು ನ್ಯಾಯಾಧೀಶರಾಗಿದ್ದ 28 ವರ್ಷಗಳಲ್ಲಿ 2000ಕ್ಕೂ ಅಧಿಕ ಪ್ರಕರಣಗಳ
ತೀರ್ಪುಗಳನ್ನು ಕನ್ನಡ ಭಾಷೆಯಲ್ಲೇ ನೀಡಿ, ನ್ಯಾಯಾಂಗ ಕ್ಷೇತ್ರದಲ್ಲೂ ತಮ್ಮ ಕನ್ನಡ ಪ್ರೀತಿ ಮೆರೆದಿ ದ್ದಾರೆ ನಿವೃತ್ತ ನ್ಯಾ.ಎಸ್.ಎಚ್. ಮಿಟ್ಟಲಕೋಡ ಅವರು… ಮೂಲತಃ ಧಾರವಾಡದವರೇ ಆದ ನ್ಯಾ.ಮಿಟ್ಟಲಕೋಡ ಅವರು ಪ್ರಾಥಮಿಕ ಶಾಲೆಯಲ್ಲಿದ್ದಾಗಿನಿಂದಲೂ ತಮ್ಮ ಕನ್ನಡ ಪ್ರೀತಿಯನ್ನು ಆಯ್ಕೆ ಮಾಡಿಕೊಂಡ ವಕೀಲ ವೃತ್ತಿ, ನಂತರ ನ್ಯಾಯಾಧೀಶರಾಗಿ ನೀಡುವ ತೀರ್ಪುಗಳಲ್ಲೂ ತುಂಬಿ “ಕನ್ನಡ ಕಾನೂನು ಸಾಹಿತ್ಯ’ ಎನ್ನುವ ಹೊಸ ಪ್ರಕಾರವೊಂದರ ಹುಟ್ಟಿಗೂ ಕಾರಣರಾಗಿದ್ದಾರೆ.
ದಾವಣಗೆರೆಯಲ್ಲಿ ಸಾವಿರ:-
ಶಿವಮೊಗ್ಗ, ಕಾರವಾರ, ಚಿತ್ರದುರ್ಗ, ಕೊಪ್ಪಳ ಸೇರಿದಂತೆ ಅನೇಕ ಕಡೆ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುವ ಸಂದರ್ಭದಲ್ಲೂ ಕನ್ನಡ ತೀರ್ಪು ನೀಡುತ್ತಿದ್ದ ಅವರಿಗೆ ನ್ಯಾಯಾಲಯಗಳಲ್ಲಿನ ಶೀಘ್ರ ಲಿಪಿಕಾರರು ಮತ್ತು ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸುತ್ತಿದ್ದ ನೌಕರರ ಕೊರತೆ ಇತ್ತು. ಹೀಗಾಗಿ ಕನ್ನಡದಲ್ಲಿ ತೀರ್ಪು ಪ್ರಕಟಿಸಲು ತಡಕಾಡಬೇಕಿತ್ತು.

ಕೊನೆಗೆ ಒಂದೊಂದು ತೀರ್ಪುಗಳನ್ನು ಸುದೀರ್ಘವಾಗಿ ಬರೆಯಬೇಕಿದ್ದರಿಂದ ಕಚೇರಿ ಅವಧಿ ಮುಗಿಸಿ ಟೈಪ್ವೈಟರ್ನ್ನು ತಮ್ಮ ಮನೆಗೆ ತರಿಸಿಕೊಂಡು ತಡರಾತ್ರಿವರೆಗೂ ಕುಳಿತು ಕಷ್ಟವಾದರೂ ತೀರ್ಪಿನ ಪ್ರತಿ ಕನ್ನಡದಲ್ಲೇ ಪೂರ್ಣಗೊಳಿಸುತ್ತಿದ್ದರು.
ಹೈಕೋರ್ಟ್ನಲ್ಲೂ ಬರಲಿ:-
ಜೆಎಂಎಫ್ಸಿ ಮತ್ತು ಜಿಲ್ಲಾ ಕೋರ್ಟ್ಗಳಲ್ಲಿ ಕರ್ನಾಟಕ ಏಕೀಕರಣದ ನಂತರ ಕನ್ನಡ ಭಾಷೆಯಲ್ಲಿ ತೀರ್ಪು ನೀಡಲು ಸರ್ಕಾರ ಅನುಮತಿ ನೀಡಿತು.

ಆದರೆ ಇಂದಿಗೂ ಪರಿಪೂರ್ಣವಾಗಿ ಇದು ಜಾರಿಯಾಗಿಲ್ಲ. ಇನ್ನು ಹೈಕೋರ್ಟ್ನಲ್ಲಿ ಸದ್ಯಕ್ಕೆ ಕನ್ನಡದಲ್ಲಿ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸಲು ಅವಕಾಶವಿಲ್ಲ. ಆದರೆ ಇಂಗ್ಲಿಷ್ ಮೂಲ ದಾಖಲೆ ಜೊತೆಗೆ ಕನ್ನಡದ ದಾಖಲೆ ಪ್ರತಿಯೊಂದನ್ನು ಸಲ್ಲಿಸಬಹುದು ಅಷ್ಟೇ. ಹೈಕೋರ್ಟ್ ನ್ಯಾಯಾಧೀಶರು ಹೊರ ರಾಜ್ಯಗಳಿಂದ ಬಂದವರಾಗಿರುವುದರಿಂದ ಇದು ಇಂಗ್ಲಿಷ್ನಲ್ಲೇ ಇರಬೇಕು ಎನ್ನುವ ನಿಯಮವಿದೆ.
ಕನ್ನಡದಲ್ಲೇ ಮೊದಲ ತೀರ್ಪು:-
1977ರಲ್ಲಿ ಧಾರವಾಡದ ಸರ್ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಪದವಿ ಮುಗಿಸಿ ವಕೀಲಿ ವೃತ್ತಿ ಆರಂಭಿಸಿದ ಅವರು, 1985ರಲ್ಲಿ ಚಿಕ್ಕನಾಯಕನಹಳ್ಳಿ ಮುನ್ಸಿಫ್-ಮ್ಯಾಜಿಸ್ಟ್ರೇಟ್ ಆದರು. ನ್ಯಾಯಾಧೀಶರಾಗಿ ತಮ್ಮ ಎದುರಿಗೆ ಬಂದ ಮೊದಲ ಪ್ರಕರಣದ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದರು. ನಂತರ ಅಥಣಿ, ಸೊರಬ, ಬಂಟ್ವಾಳ, ಸಾಗರದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗಲೂ ಕನ್ನಡ ಪ್ರೀತಿ ಮುಂದುವರಿಯಿತು.

ಕ್ರಿಮಿನಲ್, ಕಂದಾಯ, ಸಿವಿಲ್, ತೆರಿಗೆ ಇಲಾಖೆ, ಸಹಕಾರ ಇಲಾಖೆಗೆ ಸಂಬಂಧಿಸಿದ ಎಲ್ಲಾ ಬಗೆಯ ಪ್ರಕರಣಗಳ ತೀರ್ಪು ಕನ್ನಡದಲ್ಲಿ ನೀಡಿದ್ದು ಇವರ ಕನ್ನಡ ಪ್ರೀತಿಗೆ ಸಾಕ್ಷಿ ಕಾನೂನು ಕ್ಷೇತ್ರದ ತೀರ್ಪು ಗಳು ಸ್ಥಳೀಯ ಭಾಷೆಯಲ್ಲೇ ಬಂದರೆ ನ್ಯಾಯ ಕೇಳಲು ಬಂದ ವರಿಗೂ ತಮ್ಮ ಪ್ರಕರಣದ ಸಮಗ್ರ ಮಾಹಿತಿ ಲಭಿಸುತ್ತದೆ. ಜೊತೆಗೆ ಕನ್ನಡ ಕಾನೂನು ಸಾಹಿತ್ಯವೂ ವೃದ್ಧಿಯಾಗುತ್ತದೆ.
ನ್ಯಾ.ಎಸ್.ಎಚ್. ಮಿಟ್ಟಲಕೋಡ ನಿವೃತ್ತ ನ್ಯಾಯಾಧೀಶರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….
ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…
ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…
ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…
ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…
ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು. ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು…