ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.
ರಾಷ್ಟ್ರಪತಿಗಳ ಈ ಹೇಳಿಕೆಗೆ ಪೂರಕ ಎನ್ನುವಂತೆ ತಾವು ನ್ಯಾಯಾಧೀಶರಾಗಿದ್ದ 28 ವರ್ಷಗಳಲ್ಲಿ 2000ಕ್ಕೂ ಅಧಿಕ ಪ್ರಕರಣಗಳ
ತೀರ್ಪುಗಳನ್ನು ಕನ್ನಡ ಭಾಷೆಯಲ್ಲೇ ನೀಡಿ, ನ್ಯಾಯಾಂಗ ಕ್ಷೇತ್ರದಲ್ಲೂ ತಮ್ಮ ಕನ್ನಡ ಪ್ರೀತಿ ಮೆರೆದಿ ದ್ದಾರೆ ನಿವೃತ್ತ ನ್ಯಾ.ಎಸ್.ಎಚ್. ಮಿಟ್ಟಲಕೋಡ ಅವರು… ಮೂಲತಃ ಧಾರವಾಡದವರೇ ಆದ ನ್ಯಾ.ಮಿಟ್ಟಲಕೋಡ ಅವರು ಪ್ರಾಥಮಿಕ ಶಾಲೆಯಲ್ಲಿದ್ದಾಗಿನಿಂದಲೂ ತಮ್ಮ ಕನ್ನಡ ಪ್ರೀತಿಯನ್ನು ಆಯ್ಕೆ ಮಾಡಿಕೊಂಡ ವಕೀಲ ವೃತ್ತಿ, ನಂತರ ನ್ಯಾಯಾಧೀಶರಾಗಿ ನೀಡುವ ತೀರ್ಪುಗಳಲ್ಲೂ ತುಂಬಿ “ಕನ್ನಡ ಕಾನೂನು ಸಾಹಿತ್ಯ’ ಎನ್ನುವ ಹೊಸ ಪ್ರಕಾರವೊಂದರ ಹುಟ್ಟಿಗೂ ಕಾರಣರಾಗಿದ್ದಾರೆ.
ದಾವಣಗೆರೆಯಲ್ಲಿ ಸಾವಿರ:-
ಶಿವಮೊಗ್ಗ, ಕಾರವಾರ, ಚಿತ್ರದುರ್ಗ, ಕೊಪ್ಪಳ ಸೇರಿದಂತೆ ಅನೇಕ ಕಡೆ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುವ ಸಂದರ್ಭದಲ್ಲೂ ಕನ್ನಡ ತೀರ್ಪು ನೀಡುತ್ತಿದ್ದ ಅವರಿಗೆ ನ್ಯಾಯಾಲಯಗಳಲ್ಲಿನ ಶೀಘ್ರ ಲಿಪಿಕಾರರು ಮತ್ತು ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸುತ್ತಿದ್ದ ನೌಕರರ ಕೊರತೆ ಇತ್ತು. ಹೀಗಾಗಿ ಕನ್ನಡದಲ್ಲಿ ತೀರ್ಪು ಪ್ರಕಟಿಸಲು ತಡಕಾಡಬೇಕಿತ್ತು.
ಕೊನೆಗೆ ಒಂದೊಂದು ತೀರ್ಪುಗಳನ್ನು ಸುದೀರ್ಘವಾಗಿ ಬರೆಯಬೇಕಿದ್ದರಿಂದ ಕಚೇರಿ ಅವಧಿ ಮುಗಿಸಿ ಟೈಪ್ವೈಟರ್ನ್ನು ತಮ್ಮ ಮನೆಗೆ ತರಿಸಿಕೊಂಡು ತಡರಾತ್ರಿವರೆಗೂ ಕುಳಿತು ಕಷ್ಟವಾದರೂ ತೀರ್ಪಿನ ಪ್ರತಿ ಕನ್ನಡದಲ್ಲೇ ಪೂರ್ಣಗೊಳಿಸುತ್ತಿದ್ದರು.
ಹೈಕೋರ್ಟ್ನಲ್ಲೂ ಬರಲಿ:-
ಜೆಎಂಎಫ್ಸಿ ಮತ್ತು ಜಿಲ್ಲಾ ಕೋರ್ಟ್ಗಳಲ್ಲಿ ಕರ್ನಾಟಕ ಏಕೀಕರಣದ ನಂತರ ಕನ್ನಡ ಭಾಷೆಯಲ್ಲಿ ತೀರ್ಪು ನೀಡಲು ಸರ್ಕಾರ ಅನುಮತಿ ನೀಡಿತು.
ಆದರೆ ಇಂದಿಗೂ ಪರಿಪೂರ್ಣವಾಗಿ ಇದು ಜಾರಿಯಾಗಿಲ್ಲ. ಇನ್ನು ಹೈಕೋರ್ಟ್ನಲ್ಲಿ ಸದ್ಯಕ್ಕೆ ಕನ್ನಡದಲ್ಲಿ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸಲು ಅವಕಾಶವಿಲ್ಲ. ಆದರೆ ಇಂಗ್ಲಿಷ್ ಮೂಲ ದಾಖಲೆ ಜೊತೆಗೆ ಕನ್ನಡದ ದಾಖಲೆ ಪ್ರತಿಯೊಂದನ್ನು ಸಲ್ಲಿಸಬಹುದು ಅಷ್ಟೇ. ಹೈಕೋರ್ಟ್ ನ್ಯಾಯಾಧೀಶರು ಹೊರ ರಾಜ್ಯಗಳಿಂದ ಬಂದವರಾಗಿರುವುದರಿಂದ ಇದು ಇಂಗ್ಲಿಷ್ನಲ್ಲೇ ಇರಬೇಕು ಎನ್ನುವ ನಿಯಮವಿದೆ.
ಕನ್ನಡದಲ್ಲೇ ಮೊದಲ ತೀರ್ಪು:-
1977ರಲ್ಲಿ ಧಾರವಾಡದ ಸರ್ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಪದವಿ ಮುಗಿಸಿ ವಕೀಲಿ ವೃತ್ತಿ ಆರಂಭಿಸಿದ ಅವರು, 1985ರಲ್ಲಿ ಚಿಕ್ಕನಾಯಕನಹಳ್ಳಿ ಮುನ್ಸಿಫ್-ಮ್ಯಾಜಿಸ್ಟ್ರೇಟ್ ಆದರು. ನ್ಯಾಯಾಧೀಶರಾಗಿ ತಮ್ಮ ಎದುರಿಗೆ ಬಂದ ಮೊದಲ ಪ್ರಕರಣದ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದರು. ನಂತರ ಅಥಣಿ, ಸೊರಬ, ಬಂಟ್ವಾಳ, ಸಾಗರದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗಲೂ ಕನ್ನಡ ಪ್ರೀತಿ ಮುಂದುವರಿಯಿತು.
ಕ್ರಿಮಿನಲ್, ಕಂದಾಯ, ಸಿವಿಲ್, ತೆರಿಗೆ ಇಲಾಖೆ, ಸಹಕಾರ ಇಲಾಖೆಗೆ ಸಂಬಂಧಿಸಿದ ಎಲ್ಲಾ ಬಗೆಯ ಪ್ರಕರಣಗಳ ತೀರ್ಪು ಕನ್ನಡದಲ್ಲಿ ನೀಡಿದ್ದು ಇವರ ಕನ್ನಡ ಪ್ರೀತಿಗೆ ಸಾಕ್ಷಿ ಕಾನೂನು ಕ್ಷೇತ್ರದ ತೀರ್ಪು ಗಳು ಸ್ಥಳೀಯ ಭಾಷೆಯಲ್ಲೇ ಬಂದರೆ ನ್ಯಾಯ ಕೇಳಲು ಬಂದ ವರಿಗೂ ತಮ್ಮ ಪ್ರಕರಣದ ಸಮಗ್ರ ಮಾಹಿತಿ ಲಭಿಸುತ್ತದೆ. ಜೊತೆಗೆ ಕನ್ನಡ ಕಾನೂನು ಸಾಹಿತ್ಯವೂ ವೃದ್ಧಿಯಾಗುತ್ತದೆ.
ನ್ಯಾ.ಎಸ್.ಎಚ್. ಮಿಟ್ಟಲಕೋಡ ನಿವೃತ್ತ ನ್ಯಾಯಾಧೀಶರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…
ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.
ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…