ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ.

ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು ಕ್ರೀಮುಗಳು ಲಭ್ಯವಿವೆ. ಆದರೆ ಇವು ತಾತ್ಕಾಲಿಕವಾಗಿ ಕಪ್ಪು ವರ್ತುಲವನ್ನು ಹೋಗಲಾಡಿಸಿಯಾವೇ ಹೊರತು ಇದಕ್ಕೊಂದು ಶಾಶ್ವತ ಪರಿಹಾರಬೇಕೆಂದರೆ ನಮ್ಮ ಆಹಾರಕ್ರಮದಲ್ಲಿ ಬದಲಾವಣೆ ಮಾಡಿಕೊಳ್ಳುವುದು ಬಹಳ ಮುಖ್ಯ.
ಸರಿಯಾಗಿ ನಿದ್ದೆ ಮಾಡದಿದ್ದಲ್ಲಿ ಕಣ್ಣಿನ ಮೇಲೆ ಒತ್ತಡ ಉಂಟಾಗಿ ಕಪ್ಪು ವರ್ತುಲಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ದಿನಕ್ಕೆ ಕನಿಷ್ಠ 6 ಗಂಟೆಯಾದರೂ ನಿದ್ದೆ ಮಾಡುವುದರಿಂದ ಕಪ್ಪು ವರ್ತುಲಗಳು ಬರದಂತೆ ತಡೆಯಬಹುದು.

ಕಂಪ್ಯೂಟರ್ ಮುಂದೆ ಕುಳಿತು, ಕಣ್ಣಿಗೆ ವಿಶ್ರಾಂತಿ ನೀಡದೆ ಹೆಚ್ಚು ಹೊತ್ತು ಕೆಲಸ ಮಾಡುವುದರಿಂದ ಕೂಡ ಕಣ್ಣಿನ ಕೆಳಗಡೆ ಕರ್ಪೂ ವರ್ತುಲಗಳು ಏರ್ಪಡುತ್ತವೆ.ಕಂಪ್ಯೂಟರ್ ಮುಂದೆ ಬಹಳ ಸಮಯ ಕುಳಿತು ಕೆಲಸ ಮಾಡುವವರು ಪ್ರತಿ 2–3 ಗಂಟೆಗೊಮ್ಮೆ ಕಣ್ಣನ್ನು ತಣ್ಣನೆಯ ನೀರಿನಿಂದ ತೊಳೆಯುವುದರಿಂದ ಕಣ್ಣಿಗೆ ವಿಶ್ರಾಂತಿ ನೀಡಿದಂತಾಗುತ್ತದೆ. ಇದರಿಂದ ಕಣ್ಣಿನ ಆರೋಗ್ಯ ಕಾಪಾಡುವ ಜೊತೆಗೆ ಕಪ್ಪು ವರ್ತುಲ ಬಾರದಂತೆ ತಡೆಯಬಹುದು.
* ಆದಷ್ಟು ಹೆಚ್ಚು ಹಸಿ ತರಕಾರಿಗಳನ್ನು ಸೇವಿಸಿ.
* ಸೌತೆಕಾಯಿ ರಸವನ್ನು ಪ್ರತಿದಿನ ಕಣ್ಣಿನ ಸುತ್ತ ಹಚ್ಚಿ 25 ನಿಮಿಷ ಬಿಟ್ಟು ಸ್ವಚ್ಛ ನೀರಿನಿಂದ ತೊಳೆಯಿರಿ.

* ಸೊಪ್ಪಿನಿಂದ ತಯಾರಿಸಲಾದ ಪದಾರ್ಥಗಳನ್ನು ಸೇವಿಸುವುದು ಸಹ ಒಳ್ಳೆಯದು.
* ನಿಂಬೆ ರಸವನ್ನು ಕಣ್ಣಿನ ಸುತ್ತ ಹಚ್ಚಿ 15 ನಿಮಿಷ ಬಿಟ್ಟು ಸ್ವಚ್ಛ ನೀರಿನಿಂದ ತೊಳೆದುಕೊಳ್ಳಿ.
* ಪ್ರತಿದಿನವೂ ರಾತ್ರಿ ಮಲಗುವ ಮೊದಲು 2-4 ಬಾದಾಮಿ ಬೀಜವನ್ನು ನೀರಿನಲ್ಲಿ ನೆನೆಸಿಟ್ಟು, ಬೆಳಗ್ಗೆ ಸೇವಿಸಿ. ಬಾದಾಮಿಯಲ್ಲಿ ಹೆಚ್ಚು ಪೋಷಕಾಶವಿರುವುದರಿಂದ ಇದು ಕಪ್ಪು ವರ್ತುಲವನ್ನು ಕಡಿಮೆ ಮಾಡುವುದಷ್ಟೇ ಅಲ್ಲದೆ, ಚರ್ಮಕ್ಕೂ ಹೊಳಪು ನೀಡುತ್ತದೆ.
* ದೇಹದಲ್ಲಿ ಬಿಳಿ ರಕ್ತಕಣವನ್ನು ಹೆಚ್ಚಿಸುವಂಥ ಆಹಾರ ಸೇವಿಸಿ. ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣವೂ ಕಡಿಮೆಯಿದ್ದರೆ ಕಪ್ಪುವರ್ತುಲ ಕಾಣಿಸಿಕೊಳ್ಳುತ್ತದೆ ಇದಕ್ಕಾಗಿ ಯಾವುದೇ ರೀತಿಯ ವೈದ್ಯಕೀಯ ಉಪಚಾರಗಳ ಅಗತ್ಯವಿಲ್ಲ. ಪ್ರತಿದಿನವೂ ತಿನ್ನುವ ಆಹಾರದ ಪ್ರಮಾಣವನ್ನೇ ಹೆಚ್ಚಿಸಿ.
* ನಾಲಿಗೆಗೆ ರುಚಿ ಅನ್ನಿಸುವ ಆರೋಗ್ಯಕ್ಕಿಂತ ಯಾವುದು ದೇಹಕ್ಕೆ ಹಿತವೋ ಅದನ್ನೇ ಸೇವಿಸಿ.

* ಪಪ್ಪಾಯ ಹಣ್ಣಿನ ರಸವನ್ನು ಕಣ್ಣಿನ ಸುತ್ತ ಹಚ್ಚಿಕೊಂಡರೂ ಒಳ್ಳೆಯದು.
* ನಿಮಗೆ ಚರ್ಮದ ಸಮಸ್ಯೆಯಿಂದಲೇ ಕಪ್ಪು ವರ್ತುಲ ಆರಂಭವಾಗಿದೆ ಅನ್ನಿಸಿದರೆ ಹಸಿ ಸೌತೆ ಕಾಯಿ ಅಥವಾ ಆಲೂಗಡ್ಡೆಯನ್ನು ವೃತ್ತಾಕಾರದಲ್ಲಿ ಹೆಚ್ಚಿಕೊಂಡು ಹದಿನೈದು ನಿಮಿಷ ಕಣ್ಣಿನ ಮೇಲೆ ಇಟ್ಟುಕೊಳ್ಳಿ.
* ಕಪ್ಪು ವರ್ತಲ ಹೋಗಲಾಡಿಸುವುದಕ್ಕಾಗಿ ದುಬಾರಿ ಕ್ರೀಮುಗಳನ್ನು ಬಳಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಅದೂ ಅಲ್ಲದೆ, ಇದರಿಂದ ಅಡ್ಡಪರಿಣಾಮ ಉಂಟಾಗಬಹುದು. ಒಣಹಣ್ಣುಗಳಾದ ದ್ರಾಕ್ಷಿ, ಗೋಡಂಬಿ, ಬಾದಾಮಿ, ಪಿಸ್ತಾ ಮುಂತಾದವುಗಳ ಸೇವನೆಯಿಂದ ದೇಹ ಶಕ್ತಿಯುತವಾಗುತ್ತದೆ. ಇವು ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚುವುದಕ್ಕೆ ಸಹಕಾರಿಯಾಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 12/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ ತಿಂಗಳು (ಹುಣ್ಣಿಮಾಂತ್ಯ):ವೈಶಾಖ ಪಕ್ಷ : ಕೃಷ್ಣ ಪಕ್ಷ…
ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
ಬಿಗ್ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…